ಅಥವಾ
(1) (1) (0) (0) (0) (0) (0) (0) (0) (0) (0) (0) (0) (0) ಅಂ (1) ಅಃ (1) (2) (0) (0) (0) (0) (0) (0) (0) (0) (0) (0) (0) (0) (0) (0) (0) (0) (1) (0) (1) (2) (0) (0) (1) (1) (0) (0) (0) (0) (2) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಕ್ರೋಧ ಬಂದಲ್ಲಿ ಕೊಲ್ಲೆಂಬುದು, ದಯೆ ಬಂದಲ್ಲಿ ಬೇಡಾ ಎಂಬುದು, ಅದು ಅರಿವೊ? ಅಜ್ಞಾನವೊ? ಬೇರೊಂದು ಹೊಲಬೊ? ಮಾಡುವ ಕ್ರೀ ಜಡನೆಂಬುದು, ಕ್ರೀ ಹೊರಗಾದುದು ಅರಿವೆಂಬುದು, ಅದನರಿವುದು ಅದೇನು ಹೇಳಾ? ಆತ್ಮನರಿವೊ ಅದೇನು ಮರವೆಯೊ? ತೊಳೆದಡೆ ಮಡಿಯಾಗಿ ಮಾಸಿದಡೆ ಮೈಲಿಗೆಯಾಗಿ ಪುಸಿಯಹುದೊಂದೊ ಎರಡೊ? ಅರಿದಡೆ ತಾನೆಂಬ ಮರೆದಡೆ ಜಗವೆಂಬ ಉಭಯಕ್ಕೊಳಗಾಗದ ಮುನ್ನವೆ ಅರಿ, ಕಾಮಭೀಮ ಜೀವಧನದೊಡೆಯನ.
--------------
ಒಕ್ಕಲಿಗ ಮುದ್ದಣ್ಣ
ಕುಂಭದ ಮಳೆ ಹೊಯ್ಯಿತ್ತು. ಮೂರಂಗದ ನೇಗಿಲ ತರಿಯಬೇಕು. ಆರಂಗದ ಭೂಮಿಯಲ್ಲಿ ಅರಸಲಾಗಿ ಒಂದೆ ಮರ ಹುಟ್ಟಿತ್ತು. ಹುಟ್ಟುವಾಗ ಮರ ಮೂರು ಕವೆ, ಅಲ್ಲಿಂದತ್ತಾರು ಕವೆಯಾಯಿತ್ತು. ಆ ಆರರ ಮಧ್ಯದಲ್ಲಿ ಮೂವತ್ತಾರು ಕವೆಯಾಯಿತ್ತು. ಆ ಮೂವತ್ತಾರರ ಮಧ್ಯದಲ್ಲಿ ನೂರೊಂದು ಕೊಂಬೆ ಶಾಖೆಗೂಡಿತ್ತು. ಆ ಮರನನೇರಿ ಹಿಂದುಮುಂದಣ ಕೊಂಬೆ ಕಳೆದು ಕೊಡಲಿಯಾಡೋದಕ್ಕೆ ತೆರಪಮಾಡಿ, ನಡುವಣ ಕೊಂಬೆ ಕಡೆವುತ್ತಿರಲಾಗಿ, ಒಂದು ಹೊಯಿಲಿಗೆ ಇದರಂಗದ ತೊಪ್ಪೆ ಹರಿದು, ಉಭಯಕ್ಕೆ ದಿಂಡು ಹರಿದು, ತ್ರಿವಿಧಕ್ಕೆ ಗರ್ಭಗೆಚ್ಚು ಖಂಡಿತವಾಯಿತ್ತು. ಮರ ತಟ್ಟಾರಬೇಕೆಂದು ಇರಿಸಿ ಬಂದೆ, ಕಾಮಭೀಮ ಜೀವಧನದೊಡೆಯ ನೀನೆ ಬಲ್ಲೆ.
--------------
ಒಕ್ಕಲಿಗ ಮುದ್ದಣ್ಣ