ಕಂಗಳು ನುಂಗಿದ ಬಯಲವ, ಕರ್ಣ ಅವಗವಿಸಿದ ನಾದವ,
ನಾಸಿಕದಲ್ಲಿ ನಷ್ಟವಾದ ಸುಗಂಧವ,
ಜಿಹ್ವೆಯ ಕೊನೆಯಲ್ಲಿ ಅಳಿದ ರಸಾನ್ನವ,
ಮುಟ್ಟಿನ ದೆಸೆಯಲ್ಲಿ ನಿಶ್ಚಯವಾದ ಮೃದು ಕಠಿಣಾದಿ,
ಇಂತಿವೆಲ್ಲವೂ ನಿಜನೆಲೆಯಲ್ಲಿ ಅಚ್ಚೊತ್ತಿದಂತೆ ಐಕ್ಯವಾದ ಮತ್ತೆ
ಅರ್ಪಿತವೆಂಬುದು ಹಿಂಚೋ, ಮುಂಚೋ ಎಂಬುದ ತಿಳಿದು,
ಆ ಉಳುಮೆಯಲ್ಲಿ ಕಲೆದೋರದೆ ಅರ್ಪಿತ ನಷ್ಟವಾದುದು.
ಕಮಠೇಶ್ವರಲಿಂಗವ ಕೂಡಿ ಕೂಡಿದೆನೆಂದು
ಎರಡಳಿದ, ಪ್ರಾಣಲಿಂಗ ಲಿಂಗಪ್ರಾಣವೆಂಬ ಸಂದೇಹವಳಿದ ಶರಣ.