ನಾನಾ ಜನ್ಮಂಗಳಲ್ಲಿ ಬಂದಡೂ,
ನಾನಾ ಯುಕ್ತಿಯಲ್ಲಿ ನುಡಿದಡೂ,
ನಾನಾ ಲಕ್ಷಣಂಗಳಲ್ಲಿ ಶ್ರುತ ದೃಷ್ಟ ಆನುಮಾನಂಗಳ ಲಕ್ಷಿಸಿ
ನುಡಿವಲ್ಲಿ
ಏನನಹುದು ಏನನಲ್ಲಾಯೆಂಬ ಠಾವನರಿಯಬೇಕು.
ಮಾತ ಬಲ್ಲೆನೆಂದು ನುಡಿಯದೆ,
ನೀತಿವಂತನೆಂದು ಸುಮ್ಮನಿರದೆ,
ಆ ತತ್ಕಾಲದ ನೀತಿಯನರಿದು
ಸಾತ್ವಿಕ ಲಕ್ಷಣದಲ್ಲಿಪ್ಪಾತನ ಲಕ್ಷಣವೇ ನಿರೀಕ್ಷಣ
ಕದಂಬಲಿಂಗಾ.