ಕೈದಕೊಡುವರಲ್ಲದೆ ಕಲಿತನವ ಕೊಡುವರುಂಟೆ ಮಾರಯ್ಯಾ ?
ಹೆಣ್ಣಕೊಡುವರಲ್ಲದೆ ಕೂಟಕ್ಕೊಳಗಾದವರುಂಟೆ ಮಾರಯ್ಯಾ ?
ಕಳುವಚೋರಂಗೆ ಬಡವರೆಂದು ದಯವುಂಟೆ ಮಾರಯ್ಯಾ ?
ಮನವನೊರೆದು ಭಕ್ತಿಯನೋಡಿಹೆನೆಂಬವಂಗೆ
ಎಮ್ಮಲ್ಲಿ ಗುಣವ ಸಂಪಾದಿಸಲಿಲ್ಲ ಮಾರಯ್ಯಾ.
ಶೂಲವನೇರಿ ಸಂದಲ್ಲಿ ಮತ್ತಿನ್ನು ಸಾವಿಂಗೆ ಹಂಗುಪಡಲೇಕೆ ?ಮಾರಯ್ಯಪ್ರಿಯ
ಅಮಲೇಶ್ವರಲಿಂಗಾ ನೀನೆ ಬಲ್ಲೆ.