ಅಥವಾ
(3) (3) (0) (0) (0) (0) (0) (0) (0) (0) (1) (1) (0) (0) ಅಂ (1) ಅಃ (1) (3) (0) (1) (0) (0) (0) (0) (0) (0) (0) (0) (0) (0) (0) (0) (0) (0) (0) (0) (0) (3) (0) (3) (2) (3) (0) (0) (0) (0) (0) (0) (0) (2) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಬಸವಣ್ಣ ಚೆನ್ನಬಸವಣ್ಣ ಪ್ರಭುದೇವರು ಮೊದಲಾದ ನೇಮ ನಿತ್ಯ ಕೃತ್ಯ ಸಕಲಸಮೂಹ ನಿತ್ಯನೇಮದ ಜಂಗಮಭಕ್ತರು ಗಣಂಗಳು ಮುಂತಾದ ಸಮೂಹಸಂಪದಕ್ಕೆ ನೈವೇದ್ಯಕ್ಕೆ ವೇಳೆಯೆಂದು ಹೇಳಿ ಬಾರಯ್ಯಾ, ಅಮಲೇಶ್ವರಲಿಂಗದ ಮನೆಯಲ್ಲಿ ಆದಿಹಿತೆಂದು.
--------------
ಆಯ್ದಕ್ಕಿ ಲಕ್ಕಮ್ಮ
ಬಸವಣ್ಣನ ಪ್ರಸಾದವಕೊಂಡು ಎನ್ನ ಕಾಯ ಶುದ್ಧವಾಯಿತ್ತಯ್ಯಾ. ಚೆನ್ನಬಸವಣ್ಣನ ಪ್ರಸಾದವಕೊಂಡು ಎನ್ನ ಜೀವ ಶುದ್ಧವಾಯಿತ್ತಯ್ಯಾ. ಮಡಿವಾಳಯ್ಯನ ಪ್ರಸಾದವಕೊಂಡು ಎನ್ನ ಭಾವ ಶುದ್ಧವಾಯಿತ್ತಯ್ಯಾ. ಶಂಕರದಾಸಿಮಯ್ಯನ ಪ್ರಸಾದವಕೊಂಡು ಎನ್ನ ತನು ಶುದ್ಧವಾಯಿತ್ತಯ್ಯಾ. ಸಿದ್ಧರಾಮಯ್ಯನ ಪ್ರಸಾದವಕೊಂಡು ಎನ್ನ ಮನ ಶುದ್ಧವಾಯಿತ್ತಯ್ಯಾ. ಘಟ್ಟಿವಾಳಯ್ಯನ ಪ್ರಸಾದವಕೊಂಡು ಎನ್ನ ಪ್ರಾಣ ಶುದ್ಧವಾಯಿತ್ತಯ್ಯಾ. ಅಕ್ಕನಾಗಾಯಮ್ಮನ ಪ್ರಸಾದವಕೊಂಡು ಎನ್ನ ಅಂತರಂಗ ಶುದ್ಧವಾಯಿತ್ತಯ್ಯಾ. ಮುಕ್ತಾಯಕ್ಕಗಳ ಪ್ರಸಾದವಕೊಂಡು ಎನ್ನ ಬಹಿರಂಗ ಶುದ್ಧವಾಯಿತ್ತಯ್ಯಾ. ಪ್ರಭುದೇವರ ಪ್ರಸಾದವಕೊಂಡು ಎನ್ನ ಸರ್ವಾಂಗ ಶುದ್ಧವಾಯಿತ್ತಯ್ಯಾ. ಇವರು ಮುಖ್ಯವಾದ ಏಳುನೂರೆಪ್ಪತ್ತು ಅಮರಗಣಂಗಳ ಪ್ರಸಾದವಕೊಂಡು ಬದುಕಿದೆನಯ್ಯಾ ಮಾರೇಶ್ವರಪ್ರಿಯ ಅಮಲೇಶ್ವರಾ, ನಿಮ್ಮ ಶರಣರ ಪಾದಕ್ಕೆ ಅಹೋರಾತ್ರಿಯಲ್ಲಿ ನಮೋ ನಮೋ ಎನುತಿರ್ದೆನು.
--------------
ಆಯ್ದಕ್ಕಿ ಲಕ್ಕಮ್ಮ
ಬಾಹಾಗ ಕೊಂಡುಬಂದ ಪ್ರಾಪ್ತಿಯಲ್ಲದೆ, ಬೇರೊಂದ ಗಳಿಸಲಿಲ್ಲ; ಬೇರೊಂದ ಕೆಡಿಸಲಿಲ್ಲ. ಬಂದುದು ನಿಂದುದು. ಮಾರಯ್ಯಪ್ರಿಯ ಅಮಲೇಶ್ವರಲಿಂಗ ಕೊಟ್ಟಲ್ಲದಿಲ್ಲ.
--------------
ಆಯ್ದಕ್ಕಿ ಲಕ್ಕಮ್ಮ