ಚಿನ್ನ ಲೋಹಾದಿಗಳು ಕರಗಿ ಒಂದುಗೂಡುವುದಲ್ಲದೆ
ಮಣ್ಣು ಬೆಂದು ಹಿಂಗಿ ಓಡಾದುದು ಸರಿಯಿಂದ ಸಂದುಗೂಡುವುದೆ?
ಅರಿಯದ ಮರವೆಯ ಒಡಗೂಡಬಹುದಲ್ಲದೆ
ಅರಿತು ಹೇಳಿ ಕೇಳಿ ಮತ್ತರಿಯೆನೆಂದು
ಅಹಂಕಾರದಲ್ಲಿ ನುಡಿವವನ ಒಡಗೂಡಬಹುದೆ?
ಇಂತೀ ಗುಣವ ಅರಿದು ಒಪ್ಪಿದಡೆ ಪರಕ್ಕೆ ದೂರ,
ಅಲ್ಲ- ಅಹುದೆಂದಡೆ ಶರಣರ ಗೆಲ್ಲ ಸೋಲದ ಹೋರಾಟ.
ಇಂತಿವರೆಲ್ಲರೂ ಕೂಡಿ ನೊಂದಡೆ ನೋಯಲಿ,
ನಾ ಕೊಂಡ ವ್ರತದಲ್ಲಿಗೆ ತಪ್ಪೆನು.
ಇದು ವ್ರತಾಚಾರವ ಬಲ್ಲವರ ಭಾಷೆ.
ಏಲೇಶ್ವರಲಿಂಗವು ಕುಲ್ಲತನವಾದಡೂ ಒಲ್ಲೆನು.