ಗುರುವಾಗಿ ಬಂದರಯ್ಯಾ ರೇವಣಸಿದ್ಧೇಶ್ವರದೇವರು.
ಲಿಂಗದಲ್ಲಿ ನಿಬ್ಬೆರಗಾದರಯ್ಯಾ ಅನುಮಿಷದೇವರು.
ಜಂಗಮವಾಗಿ ಸುಳಿದರಯ್ಯಾ ಪ್ರಭುದೇವರು.
ಪ್ರಸಾದವ ಕೊಂಡು ಪಥವ ತೋರಿದರಯ್ಯಾ ಬಿಬ್ಬಿಬಾಚಯ್ಯಗಳು.
ಲಿಂಗದಲ್ಲಿ ನಿರ್ವಯಲಾದರಯ್ಯಾ ನೀಲಲೋಚನೆಯಮ್ಮನವರು.
ಸೌರಾಷ್ಟ್ರಮಂಡಲದಲ್ಲಿ ಮೆರೆದರಯ್ಯಾ ಓಹಿಲದೇವರು.
ಇಂತಿವರ ಒಕ್ಕುಮಿಕ್ಕ ಬಯಲಪ್ರಸಾದ
ಕೊಂಡು ಬದುಕಿದೆನಯ್ಯಾ, ವೀರಶೂರ ರಾಮೇಶ್ವರಾ