ಕಾಮಧೇನುವಿನ ನಡುವೆ ಒಂದು ಕೋಣ ಕಟ್ಟಿ ಇದ್ದಿತ್ತು. ಕೋಣನ ಗವಲು ತಾಗಿ ಕಾಮಧೇನು ಕೆಡುತ್ತದೆ. ಕೋಣನ ಡೋಣಿಗೆ ತಳ್ಳಿ ಕಾಮಧೇನುವ ಕಾಣದಂತೆ ಮಾಡು. ಅರಿವು ಅಜ್ಞಾನವ ನಿನ್ನ ನೀನರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
ಕೋಣನ ಕಿವಿಯಲ್ಲಿ ಮೂರು ಹಸು ತೆನೆ ತುಂಬಿ ಕರವೊಂದನೆ ಈಯಿತ್ತು. ಕರು ತಾಯಿ ನೆರೆ ನೋಡಿ ಹಾಲಿಗೆ ಒಡೆಯರಿಲ್ಲಾ ಎಂದು ಪ್ರಾಣವ ಬಿಟ್ಟಿತ್ತು. ಕರುವಿನ ಹರಣವರಿ; ಅರಿತಡೆ ನಿನ್ನ ನೀನೆ ಬ್ಥಿನ್ನಭಾವವಿಲ್ಲ. ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
ಕಣ್ಣಿನೊಳಗಣ ಮತ್ಸ ್ಯಕ್ಕೆ ಬಲೆಯ ಬೀಸಿ, ಹದ್ದಿನ ಬಾಯ ಹಾವಿಂಗೆ ಹೇಳಿಗೆಯ ಮಾಡಿ, ಕಾಣಬಾರದ ಬಯಲಿಂಗೆ ಮನೆಯ ಕಟ್ಟಿ ಬಾಳುತ್ತಿದ್ದವನ ನಿನ್ನ ನೀನರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
ಕಂಡವರಿಗೆ ದೇವರ ಕಟ್ಟುವ ಭಂಡ ಗುರುವಿನ ಇರವು ಜಗಭಂಡೆ ಎದೆಯ ಕೊಟ್ಟು ಕಂಡವರ ಕೈಯಲ್ಲಿ ಎದೆಯ ಹೆಟ್ಟಿಸಿಕೊಂಬಂತೆ. ಅಗಲಿ ಬೀಳುವ ಕಲ್ಲಿಗೆ ಹರಿದು ತಲೆಯನೊಡ್ಡಿಸುವನಂತೆ. ಆ ಬರಿ ಕಾಯನಲ್ಲಿ ಕಟ್ಟಿದ ಇಷ್ಟ ತೊಟ್ಟಿಯ ಹುದುರಿನಲ್ಲಿ ಕಲ್ಲು ಸಿಕ್ಕಿದಂತಾಯಿತ್ತು. ಅದು ಭ್ರಷ್ಟನ ಕೈಯ ಕಟ್ಟುಗೂಳು, ಉತ್ತಮರೊಲ್ಲರು. ಆ ಚಿತ್ತವ ನಿನ್ನ ನೀನರಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.