ನಾಮ ಘಟ್ಟಿಸಿಯಲ್ಲದೆ ಕರೆದಡೆ ನುಡಿಯಬಾರದು.
ಕ್ರೀ ಶುದ್ಧತೆಯಾಗಿ ನಿಂದಲ್ಲದೆ ಅರಿಯಬಾರದು.
ಅರಿವಿಂಗೆ ಆಶ್ರಯಿಸುವುದಕ್ಕೆ ಒಡಲಿಲ್ಲ.
ಅರಿವು ಕುರುಹಿನಲ್ಲಿ ವಿಶ್ರಮಿಸಿ
ಹಣ್ಣಿನ ಸಿಪ್ಪೆಯ ಮರೆಯಲ್ಲಿ ಭಿನ್ನರುಚಿ ನಿಂದು ಸವಿದಾಗ
ಸಿಪ್ಪೆ ನಿಂದು ರಸವೊಪ್ಪಿತ್ತು.
ಆ ಚಿತ್ತವ ನಿನ್ನ ನೀನರಿ,
ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.