ಅಥವಾ
(36) (23) (40) (2) (5) (2) (0) (0) (13) (3) (0) (14) (1) (1) ಅಂ (7) ಅಃ (7) (46) (1) (18) (0) (0) (2) (0) (3) (0) (0) (0) (0) (0) (0) (0) (8) (0) (8) (0) (23) (50) (0) (14) (13) (50) (1) (4) (0) (13) (11) (31) (0) (26) (37) (0)

ಪದದಿಂದ ಪ್ರಾರಂಭವಾಗುವ ವಚನಗಳು:

ರಂಜನಿಪುರದಲ್ಲಿ ಕಪಿ ಉಡವ ಕಚ್ಚಿ ತಿರುಗಾಡುವದ ಕಂಡೆನಯ್ಯ. ಆ ಉಡುವಿನ ಬಾಯೊಳಗೆ ಮೂರುಲೋಕವೆಲ್ಲ ಏಳುತ್ತ ಬೀಳುತ್ತ ಇರ್ಪುದ ಕಂಡೆ. ಆ ಕೋಡಗದಾಟವ ಕಂಡು ಈರೇಳುಲೋಕದ ಪ್ರಾಣಿಗಳು ಬೆರಗಾದುದ ಕಂಡೆ. ಅದಾರಿಗೂ ಸಾಧ್ಯವಲ್ಲ. ಅಷ್ಟರಲ್ಲಿಯೇ ಅರಸನ ಮನೆಯಲ್ಲಿ ಒಂದು ಎಳೆ ಶಿಶು ಹುಟ್ಟಿ, ಕಸ ನೀರು ಹೊರುವ ಗಾಡಿಯ ಕೊಂದು, ಕೋತಿಯ ತಿಂದು, ಉಡವ ನುಂಗಿ, ತ್ರೈಲೋಕದ ಬಂಧನವ ಬಿಡಿಸಿ, ತಂಗಿಯನೊಡಗೂಡಿ, ಅಕ್ಕನ ಸಂಗವ ಮಾಡಿ, ಅರಸಿನ ಅರಮನೆಯಲ್ಲಿ ಆರು ಕಾಣದೆ ಅಡಗಿಹೋಯಿತ್ತು. ಇದರಂದಚಂದವ ನಿಮ್ಮ ಶರಣ ಬಲ್ಲ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ರಾತ್ರಿಯಲ್ಲಿ ಬಹುಕುಲದಲ್ಲಿ ಪುಟ್ಟಿದೆ. ಹಗಲಿನಲ್ಲಿ ಒಂದು ಕುಲದಲ್ಲಿ ಪುಟ್ಟಿದೆ. ಉಭಯವಿಲ್ಲದಕಾರಣ ಆವಲ್ಲಿ ನಾ ಪುಟ್ಟಿದೆನೆಂಬುದ ನೀ ಬಲ್ಲೆಯಲ್ಲದೆ ಇವರೆತ್ತ ಬಲ್ಲರಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ರಂಜಣಿಗೆಯ ಉದಕವ ಕುಡಿದವರು ಸಾಯಲಿಲ್ಲ. ಕುಳ್ಳಿಯುದಕವ ಕುಡಿದವರು ಸಾಯುವರು ನೋಡೆಂದ. ಕುಳ್ಳಿಯುದಕವ ರಂಜಣಿಗಿಯ ತುಂಬಲು ರಂಜಣಿಗಿ ಒಡೆದು ಕುಳ್ಳಿಯಾಯಿತ್ತು. ಕುಳ್ಳಿಯ ಕೊಂಬವನಾರನು ಕಾಣೆ ನೋಡೆಂದ ದಮ್ಮಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ರಂಡೆಮುಂಡೆಯ ಮಗ ರಾಜಕುಮಾರ ಗಗನದಲ್ಲಿ ಪುಟ್ಟಿ, ಭೂಮಿಯಲ್ಲಿ ಬಂದು, ಆ ಭೂಮಿಯ ರಾಜನಲ್ಲಿ ಯುದ್ಭವ ಮಾಡಿ, ಆನೆಯ ಹಲ್ಲು ಕಿತ್ತು, ಕುಂಭವನೊಡೆದು, ಕುದುರೆಯ ಕಾಲ ಮುರಿದು, ನಾಯಿಯ ನಾಲಿಗೆ ಕಿತ್ತು, ಬೆಕ್ಕಿನ ಕಣ್ಣು ಕಳೆದು ಉಣ್ಣದೆ ಉಪವಾಸ ಮಾಡದೆ ಯುದ್ಧದಿಂ ತ್ರಿಲೋಕದ ರಾಜರ ಗೆದ್ದು, ತ್ರಿಲೋಕದ ರಾಜರಲ್ಲಿ ಸತ್ತು ನಿಂದಿತ್ತು. ಈ ಭೇದವ - ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವಿನ ಶರಣರು ಬಲ್ಲರಲ್ಲದೆ ಮಿಕ್ಕಿನ ಜೀವಾತ್ಮರು ಅರಿಯರು.
--------------
ಕಾಡಸಿದ್ಧೇಶ್ವರ