ಪ್ರಮಾಣ ಪ್ರಮೇಯ ಸಂಶಯ ಪ್ರಯೋಜನ ದೃಷ್ಟಾಂತ ಸಿದ್ಧಾಂತ ಅವಯವ ಕರ್ತ ನಿರ್ಣಯ ವಾದ ಜಲ್ಪ ವಿತಂಡ ಹೇತ್ವಾಭಾಸ ತ [ಛಲ] ಜಾತಿ ನಿಗ್ರಹಸ್ಥಾನಂಗಳೆಂಬ ಷೋಡಶಪದಾರ್ಥಮಂಪೇಳುತ್ತವೆ. ಪ್ರಪಂಚಕ್ಕೀಶ್ವರ ಕರ್ತೃತ್ವಮಂ ನಿಶ್ಚೈಸೂದಯ್ಯಾ ಶಾಂತವೀರೇಶ್ವರಾ.
ಪರಾರ್ಥಪೂಜೆಯನಾಯಿತ್ತಾದೊಡೆ, ಅಲ್ಲಿಂದ ಮೇಲೆ ಕೇಳು:`ಗ್ರಾಮಾದೌ ಸ್ಥಾಪಿತೇ ಲಿಂಗೇ ಯದ್ವಾದೈವಾದಿ ನಿರ್ಮಿತೇ ಪರಾರ್ಥಮಿತಿಜ್ಞೇಯಂ ಸರ್ವಪ್ರಾಣಿತಾವಹಿ' ಇಂತೆಂದು ಆವುದಾನೊಂದು ಕಾರಣದಿಂದ ದೇವ ಋಷಿ ದಾನವ ಮಾನವಾದಿಗಳಿಂದ ನಿರ್ಮಿಸಿ, ಗ್ರಾಮಗಿರಿ ಗಂಹರವನ ಮೊದಲಾದವ ರಲ್ಲಿ ಪ್ರತಿಷಿ*ತವಾದ ಶಿವಲಿಂಗಪೂಜೆ ಪರಾರ್ಥ ಪೂಜೆ ಎಂದು ಅರಿಯ ಬೇಕಾದುದು. ಆ ಪೂಜೆಯಲ್ಲಿ ಪ್ರಾಣಿಗಳಿಗೆಯೂ ಹಿತವ ಮಾಡುವಂಥಾದು `ಶಿವದ್ವಿಜೇನ ಕರ್ತನ್ಯಂ ದ್ವಿಧಾ ಪೂಜೇತಿ ಬೋಧಿತಾ' ಎಂದು ಈ ಕ್ರಮದಿಂದ ಹೇಳಲ್ಪಟ್ಟಎರಡು ಪ್ರಕಾರದ ಪೂಜೆ ಶಿವಬ್ರಾಹ್ಮಣನಿಂದವೆ ಮಾಡಲ್ತಕ್ಕಂಥಾದು ಶಾಂತವೀರೇಶ್ವರಾ.