ಆರುಸ್ಥಲ ವರ್ಣಿಸುವಲ್ಲಿ
ಭಕ್ತಂಗೆ ಮಾಹೇಶ್ವರಂಗೆ ಪ್ರಸಾದಿಗೆ ಪ್ರಾಣಲಿಂಗಿಗೆ ಶರಣಐಕ್ಯಂಗೆ.
ಸ್ಥಲವಾರು ಲಿಂಗವೊಂದೆ; ವರ್ಣವಾರು ಪಟವೊಂದೆ;
ಅಕ್ಷರವಾರು ಬೀಜವೊಂದೆ; ದಳವಾರು ಆತ್ಮವೊಂದೆ.
ಇಂತೀ ಭೇದಂಗಳು ಭಿನ್ನವಾಗಿ; ನಿಚ್ಚಣಿಗೆಯ ಮೆಟ್ಟಿನಂತೆ,
ಮೊದಲು ತುದಿಯಾದಿಯಾಗಿ ತುದಿಕಡೆಯಾದಿಯಾಗಿ
ಎಡೆತಾಕುವ ತೆರದಂತೆ, ಸ್ಥಲವೆರಡು ಆಚರಣೆ ನಾಲ್ಕು.
ಇಂತೀ ಭೇದವಾರರಲ್ಲಿ ಷಡುಸ್ಥಲ ಸಂದು,
ಸಂಗನ ಬಸವಣ್ಣ ಚನ್ನಬಸವಣ್ಣನಿಂದ
ಪ್ರವಾಹವಾಗಿ ಭಕ್ತಿ ರೂಪಾಯಿತ್ತು.
ಶಂಭುವಿನಿಂದಿತ್ತ ಸ್ವಯಂಭವಿನಿಂದತ್ತ ಅತಿಬಳ ನೋಡಾ,
ಮಾತುಳಂಗ ಮಧುಕೇಶ್ವರನು.