ಸಂಚದ ಸರಾಗದಂತೆ, ಮಿಂಚಿನ ಕುಡಿವೆಳಗಿನ ಸಂಚಾರದಂತೆ,
ಉರಿಯ ನಾಲಗೆಯ ದ್ರವದ ತರಂಗದಂತೆ,
ಪನ್ನಗನ ಜಿಹ್ವೆಯ ನಿಳಿವಳಿಯಂತೆ,
ಚಮತ್ಕಾರದ ಅಸಿಯ
ಗುಣಮೊನೆಯಂತೆ,
ಅಶ್ವಪರ್ಣದ ಅಗ್ರದ ಬಿಂದುವಿನ ಅಂದದಾತ್ಮನ ತಿಳಿದು,
ಸರ್ವೇಂದ್ರಿಯದಲ್ಲಿ ಮುಂಚುವುದಕ್ಕೆ ಮುನ್ನವೆ
ಆತ್ಮನ ಉಚಿತವನರಿದು,
ರಸ ಬೆಂಕಿಯಲ್ಲಿ ಬೆರೆದಂತಾಗಬೇಕು;
ಈ ಗುಣ ಸಾವಧಾನಿಯ ಸಂಬಂಧ.
ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ,
ಮಾತುಳಂಗ ಮಧುಕೇಶ್ವರನು.
|| 91 ||