ಎನ್ನ ಲಿಂಗದ ಸೀಮೆಯಲ್ಲಿದ್ದ ಗೋವತ್ಸ ಮೊದಲಾದ ಘಟಕ್ಕೆಲ್ಲಕ್ಕೂ
ಶಿವಲಿಂಗಪೂಜೆ, ಪಂಚಾಚಾರಶುದ್ಧ ನೇಮ.
ಭಾವ ತಪ್ಪದೆ ಪಾದೋದಕ ಪ್ರಸಾದವಿಲ್ಲದೆ
ತೃಣ ಉದಕವ ಮುಟ್ಟಿದಡೆ
ಎನ್ನ ಸೀಮೆಗೆ, ಎನ್ನ ವ್ರತಾಚಾರಕ್ಕೆ, ನಾ ಕೊಂಡ ಗಮನಕ್ಕೆ
ತನುವಿಗೆ ಬಂದಲ್ಲಿ ಭೀತಿ, ಆತ್ಮಕ್ಕೆ ಬಂದಲ್ಲಿ ಸಂದೇಹವ ಮಾಡಿದಡೆ,
ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ದೂರ.