ಅಥವಾ
(11) (7) (0) (0) (1) (0) (0) (0) (6) (2) (0) (4) (0) (0) ಅಂ (1) ಅಃ (1) (10) (4) (2) (0) (0) (4) (0) (3) (0) (0) (0) (0) (0) (0) (0) (14) (0) (4) (3) (10) (5) (0) (5) (10) (8) (0) (0) (0) (7) (15) (0) (0) (13) (6) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಎನ್ನ ವ್ರತದ ನೇಮ ಅಡಿ ಆಕಾಶದೊಳಗಾದ ವ್ರತಸ್ಥರು ಕೇಳಿರೆ. ನಮ್ಮ ನಿಮ್ಮ ವ್ರತಕ್ಕೆ ಸಂಬಂಧವೇನು ? ಲೆಕ್ಕವಿಲ್ಲದ ವ್ರತ, ಕಟ್ಟಳೆಯಿಲ್ಲದ ನೇಮ, ಇವನೆಷ್ಟು ಮಾಡಿದಡೆ ಏನು ? ತನ್ನ ಮನೆಗೆ ಕಟ್ಟಳೆ ಇರಬೇಕು. ಎನ್ನ ಲಿಂಗವಂತೆಗೆ ಸೂತಕಮಾಸ ತಡೆದಲ್ಲಿ, ಗರ್ಭವೆಂಬುದು ತಲೆದೋರಿದಲ್ಲಿಯೆ ಆತ್ಮ ಚೇತನಿಸುವನ್ನಕ್ಕ ಆಕೆಯ ಉದರದ ಮೇಲೆ ನಿಹಿತ ಲಿಂಗವಿರಬೇಕು. ನವಮಾಸ ತುಂಬಿ ಆಕೆಯ ಗರ್ಭದಿಂದ ಉಭಯಜಾತತ್ವವಾಗಲಾಗಿ ಚೇತನ ಬೇರಾದಲ್ಲಿ ಗುರುಕರಜಾತನಮಾಡಬೇಕು. ಇಂತೀ ಇಷ್ಟರ ಕ್ರೀಯಲ್ಲಿ ಸಂತತ ವ್ರತ ಇರಬೇಕು. ಕಂಥೆಯ ಬಿಡುವನ್ನಕ್ಕ ಶರಣರ ಕೈಯಲ್ಲಿ ಅಂತಿಂತೆಂಬ ಶಂಕೆಯ ಹೊರಲಿಲ್ಲ. ಇಂತೀ ವ್ರತದಲ್ಲಿ ನಿಶ್ಶಂಕನಾಗಬಲ್ಲಡೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ಸಮಶೀಲವಂತನೆಂಬೆ.
--------------
ಅಕ್ಕಮ್ಮ
ಎನ್ನ ಸಮಗ್ರಾಹಕ ಶೀಲಸಂಪಾದಕರನಲ್ಲದೆ ಎನ್ನ ಕಣ್ಣಿನಲ್ಲಿ ನೋಡೆ, ಜಿಹ್ವೆಯಲ್ಲಿ ನೆನೆಯೆ, ಮಿಕ್ಕಾದ ತಟ್ಟುವ ಮುಟ್ಟುವ ತಾಗುವ ಸೋಂಕುವ ನಾನಾ ಗುಣಂಗಳಲ್ಲಿ ಶೋದ್ಥಿಸಿಯಲ್ಲದೆ ಬೆರೆಯೆ. ಕೊಂಬಲ್ಲಿ ಕೊಡುವಲ್ಲಿ ಎನ್ನ ವ್ರತಾಚಾರವ ಅಂಗೀಕರಿಸಿದವರಲ್ಲಿಗಲ್ಲದೆ ಹೋಗೆ. ಇದಕ್ಕೆ ದೃಷ್ಟವ ನೋಡಿಹೆನೆಂದಡೆ ತೋರುವೆ. ಶ್ರುತದಲ್ಲಿ ಕೇಳಿಹೆನೆಂದಡೆ ಹೇಳುವೆ. ಅನುಮಾನದಲ್ಲಿ ಅರಿದಿಹೆನೆಂದಡೆ ಎನ್ನ ಆಚಾರದ ಆತ್ಮನ ಎನ್ನ ಕೈಯಲ್ಲಿ ಹಿಡಿದು ನಿಮ್ಮ ಕೈಯಲ್ಲಿ ಕೊಡುವೆ. ಈ ಭಾಷೆಗೆ ತಪ್ಪೆನೆಂದು ಕಟ್ಟಿದೆ ತೊಡರುವ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಾ, ಎನಗೆ ಸರಿ ಇಲ್ಲ ಎಂದು ಎಲೆದೊಟ್ಟು ನುಂಗಿದೆ.
--------------
ಅಕ್ಕಮ್ಮ
ಎಲ್ಲವ ಮೀರಿ ಶೀಲವಂತನಾದಲ್ಲಿ ರೋಗವೆಲ್ಲಿಂದ ಬಂದಿತು ? ಆ ಗುಣ ತನುವಿನಲ್ಲಿಯ ತೊಡಕು ; ರುಜೆ ಪ್ರಾಣವ ಕೊಳ್ಳಲರಿಯದು. ಅಂಗದ ಡಾವರಕ್ಕೆ ಸೈರಿಸಲಾರದೆ, ಮದ್ದ ತಾ ಲಿಂಗಕ್ಕೆ ತೋರಿ, ಜಂಗಮಕ್ಕೆ ಕೊಟ್ಟು, ಜಂಗಮಪ್ರಸಾದವೆಂದು ಲಿಂಗ ಜಂಗಮವ ಹಿಂಗದೆ ಕೊಳ್ಳೆಂದು ಹೇಳುವ ಅನಂಗಿಗಳಿಗೆ ಗುರು ಲಿಂಗ ಜಂಗಮ ಮೂರರಲ್ಲಿ ಒಂದೂ ಇಲ್ಲ ಎಂದೆ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವಾದಡೂ ತಪ್ಪನೊಪ್ಪಗೊಳ್ಳೆ.
--------------
ಅಕ್ಕಮ್ಮ
ಎನ್ನ ಲಿಂಗದ ಸೀಮೆಯಲ್ಲಿದ್ದ ಗೋವತ್ಸ ಮೊದಲಾದ ಘಟಕ್ಕೆಲ್ಲಕ್ಕೂ ಶಿವಲಿಂಗಪೂಜೆ, ಪಂಚಾಚಾರಶುದ್ಧ ನೇಮ. ಭಾವ ತಪ್ಪದೆ ಪಾದೋದಕ ಪ್ರಸಾದವಿಲ್ಲದೆ ತೃಣ ಉದಕವ ಮುಟ್ಟಿದಡೆ ಎನ್ನ ಸೀಮೆಗೆ, ಎನ್ನ ವ್ರತಾಚಾರಕ್ಕೆ, ನಾ ಕೊಂಡ ಗಮನಕ್ಕೆ ತನುವಿಗೆ ಬಂದಲ್ಲಿ ಭೀತಿ, ಆತ್ಮಕ್ಕೆ ಬಂದಲ್ಲಿ ಸಂದೇಹವ ಮಾಡಿದಡೆ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ದೂರ.
--------------
ಅಕ್ಕಮ್ಮ
ಎಲ್ಲಾ ವ್ರತಕ್ಕೂ ಜಂಗಮದ ಪ್ರಸಾದವೆ ಪ್ರಾಣ. ಎಲ್ಲಾ ನೇಮಕ್ಕೂ ಜಂಗಮದರ್ಶನವೆ ನೇಮ. ಎಲ್ಲಾ ಶೀಲಕ್ಕೂ ಜಂಗಮಮಾಟವೆ ಶೀಲ. ಇಂತೀ ವ್ರತ ನೇಮ ಶೀಲಂಗಳೆಲ್ಲವೂ ಜಂಗಮದ ಮುಂದಿಟ್ಟು ಶುದ್ಧತೆಯಹ ಕಾರಣ ಆ ಜಂಗಮದಲ್ಲಿ ಅರ್ಥ ಪ್ರಾಣ ಅಭಿಮಾನಕ್ಕೆ ಕಟ್ಟುಮಾಡಿದೆನಾದಡೆ ಎನಗದೆ ದ್ರೋಹ. ಆ ಜಂಗಮದ ದರ್ಶನದಿಂದ ಸಕಲದ್ರವ್ಯ ಪವಿತ್ರ. ಆ ಜಂಗಮದ ಪಾದತೀರ್ಥದಿಂದ ಘನಲಿಂಗಕ್ಕೆ ಜೀವಕಳೆ. ಆ ಜಂಗಮದ ಪ್ರಸಾದದಿಂದ ಘನಲಿಂಗಕ್ಕೆ ತೃಪ್ತಿ. ಇಷ್ಟನರಿತಲ್ಲಿ ಜಂಗಮಲಿಂಗಕ್ಕೆ ಸಂದೇಹ ಮಾಡಿದಡೆ ಎನಗೆ ಕುಂಭೀಪಾತಕದಲ್ಲಿ ನಾಯಕನರಕ ತಪ್ಪದು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗ ಸಹಿತಾಗಿ ಮುಳುಗುವೆನು.
--------------
ಅಕ್ಕಮ್ಮ
ಎಂಬತ್ತುನಾಲ್ಕು ಲಕ್ಷ ವ್ರತದೊಳಗಾದ ಶೀಲ ಸಂಭವಿಸಿ ನಿಂದುದು ಅರುವತ್ತುನಾಲ್ಕು. ಅರುವತ್ತುನಾಲ್ಕರಲ್ಲಿ ಸಂಭವಿಸಿ ನಿಂದುದು ಮೂವತ್ತಾರು. ಮೂವತ್ತಾರರಲ್ಲಿ ಸಂಭವಿಸಿ ನಿಂದುದು ಇಪ್ಪತ್ತೈದು. ಇಪ್ಪತ್ತೈದರೊಳಗಾಗಿ ಸಂಭವಿಸಿನಿಂದುದು ಮೂರೆಯಾಯಿತ್ತು. ಮೂರು ವ್ರತಕ್ಕೆ ಮುಕುತವಾಗಿ, ತಬ್ಬಿಬ್ಬುಗೊಳ್ಳುತ್ತಿದ್ದೇನೆ. ನಾ ಹಿಡಿದ ಒಂದು ನೇಮಕ್ಕೆ ಸಂದೇಹವಾಗಿ, ಒಂದನೂ ಕಾಣದಿದ್ದೇನೆ. ಒಂದರ ಸಮಶೀಲಕ್ಕೆ ಸತಿಪುತ್ರರು ಎನ್ನಂಗದೊಳಗಿರರು. ಎನ್ನಂಗದ ಜೀವಧನ ಹೊಂದಿ ಹೋದಾಗ ಎನ್ನಂಗದ ವ್ರತ ಅಲ್ಲಿಯೆ ಬಯಲು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ಶೀಲ ಕಡೆ ನಡು ಮೊದಲಿಲ್ಲ.
--------------
ಅಕ್ಕಮ್ಮ