ಗುರುವಾಗಿ ಬಂದು ತನುವ ಕೊರೆದಡೂ ಕೇಳೆ,
ಲಿಂಗವಾಗಿ ಬಂದು ಮನದಲ್ಲಿ ಕುಳ್ಳಿರ್ದು ನಿಜಾಂಗವ ತೋರಿದಡೂ ಕೇಳೆ,
ಜಂಗಮವಾಗಿ ಬಂದು ಬಯಲ ಬೆಳಗಿನಲ್ಲಿ ಒಳಗಾಗೆಂದಡೂ ಒಲ್ಲೆ.
ಅದೆಂತೆಂದಡೆ ;
ಕುಟಿಲದಲ್ಲಿ ಬಂದು ವ್ರತವ ಕೆಡಿಸಿಹೆನೆಂದಡೆ,
ಕುಟಿಲದ ದೇವರುಂಟೆ
ವ್ರತ ಮೊದಲು ಘಟ ಕಡೆಯಾಗಿ ಘಟಿಸುವೆನಲ್ಲದೆ,
ಮೂರು ಕಿಸುಕುಳಕಾಗಿ ಘಟವ ಹೊರೆದಡೆ ಆಚಾರವೆ ಪ್ರಾಣವಾದ
ರಾಮೇಶ್ವರಲಿಂಗಕ್ಕೆ ದೂರ.