ದುಷ್ಟರಿಗಂಜಿ ಕಟ್ಟಿಕೊಳ್ಳಬಹುದೆ ಕಡ್ಡಾಯದ ವ್ರತವ !
ಆ ವ್ರತದ ವಿಚಾರವೆಂತೆಂದಡೆ ;
ಅಲಗಿನ ತುಪ್ಪದ ಸವಿಗೆ ಲಲ್ಲೆಯಿಂದ ನೆಕ್ಕಿದಡೆ
ಅಲಗಿನ ಧಾರೆ ನಾಲಗೆಯ ತಾಗಿ, ಆ ಜೀವ ಹಲುಬುವ ತೆರದಂತೆ.
ಒಲವರವಿಲ್ಲದ ಭಕ್ತಿ, ಛಲವಿಲ್ಲದ ನಿಷ್ಠೆ,
ಎಲವದ ಮರನ ಕಾಯ್ದ ವಿಹಂಗನಂತೆ.
ಇಂತೀ ಸಲೆನೆಲೆಯನರಿಯದವನ ವ್ರತಾಚಾರ
ಕೊಲೆ ಹೊಲೆ ಸೂತಕಕ್ಕೊಡಲಾಯಿತ್ತು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗಕ್ಕೆ ಹೊರಗಾದ ನೇಮ