ಅಥವಾ
(11) (7) (0) (0) (1) (0) (0) (0) (6) (2) (0) (4) (0) (0) ಅಂ (1) ಅಃ (1) (10) (4) (2) (0) (0) (4) (0) (3) (0) (0) (0) (0) (0) (0) (0) (14) (0) (4) (3) (10) (5) (0) (5) (10) (8) (0) (0) (0) (7) (15) (0) (0) (13) (6) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಲವಣವ ಕೊಂಬುದೆಲ್ಲವು ಒಂದೆ ಶೀಲ. ಸರ್ವ ಸಪ್ಪೆ ಎಂಬುದು ಒಂದೆ ಶೀಲ. ಇವೆಲ್ಲವ ವಿಚಾರಿಸಿ, ತಟ್ಟುಮುಟ್ಟಿಗೆ ಬಾರದೆ ತೊಟ್ಟುಬಿಟ್ಟ ಹಣ್ಣಿನಂತೆ ನೆಟ್ಟನೆ ವ್ರತವ ಕೂಡುವುದು ಮೂರನೆಯ ಶೀಲ. ಮೂರು ಕೂಡಿ ಒಂದಾಗಿ ನಿಂದುದು, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ಶೀಲ.
--------------
ಅಕ್ಕಮ್ಮ
ಲಕ್ಷವಿಲ್ಲದ ವ್ರತ, ಕಟ್ಟಳೆಯಿಲ್ಲದ ನೇಮ, ಕೃತ್ಯವಿಲ್ಲದ ನಿತ್ಯ ಎಷ್ಟಾದಡುಂಟು, ಕಟ್ಟಳೆಗೊಳಗಾದವು ಅರುವತ್ತಾರು ಶೀಲ, ಅರುವತ್ತುನಾಲ್ಕು ನೇಮ, ಅಯಿವತ್ತುಮೂರು ನೇಮ, ಮೂವತ್ತೆರಡು ನಿತ್ಯ. ಇಂತಿವರ ಗೊತ್ತಿಗೊಳಗಾಗಿ ಕಟ್ಟಳೆಯಾಗಿ ನಡೆವಲ್ಲಿ ಅರ್ಥ ಪ್ರಾಣ ಅಭಿಮಾನಂಗಳಲ್ಲಿ, ತಥ್ಯಮಿಥ್ಯ ರಾಗದ್ವೇಷಂಗಳಲ್ಲಿ, ಭಕ್ತಿ ಜ್ಞಾನ ವೈರಾಗ್ಯಂಗಳಲ್ಲಿ, ಸ್ಥೂಲ ಸೂಕ್ಷ್ಮ ಕಾರಣ ತನುತ್ರಯಂಗಳಲ್ಲಿ, ಜರ ನಿರ್ಜರ ಸಮನ ಸುಮನಂಗಳಲ್ಲಿ, ಸರ್ವೇಂದ್ರಿಯ ಭಾವಭ್ರಮೆಗಳಲ್ಲಿ, ಐದು ತತ್ವದೊಳಗಾದ ಇಪ್ಪತ್ತಾರು ಕೂಟದಲ್ಲಿ, ಆತ್ಮವಾಯು ಒಳಗಾದವನ ವಾಯುವ ಬೆರಸುವಲ್ಲಿ, ಜಿಹ್ವೆದ್ವಾರದೊಳಗಾದ ಅಷ್ಟದ್ವಾರಂಗಳಲ್ಲಿ, ಇಂತೀ ಘಟದೊಳಗಾದ ಸಂಕಲ್ಪವೆಲ್ಲಕ್ಕೂ ಬಾಹ್ಯದಲ್ಲಿ ತೋರುವ ತೋರಿಕೆಗಳೆಲ್ಲಕ್ಕೂ ಹೊರಗೆ ಕ್ರೀ, ಆತ್ಮಂಗೆ ವ್ರತ. ಅವರವರ ತದ್ಭಾವಕ್ಕೆ ವ್ರತಾಚಾರವ ಮಾಡದೆ ಕಾಮಿಸಿ ಕಲ್ಪಿಸಿದೆನಾಯಿತ್ತಾದಡೆ, ಎನ್ನರಿವಿಂಗೆ ಅದೆ ಭಂಗ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗ ಸಹಿತಾಗಿಯೆ ಮಾಡುವೆನು
--------------
ಅಕ್ಕಮ್ಮ
ಲಿಂಗರೂಪ ನೋಡುವಲ್ಲಿ, ಗುರುಲಿಂಗಜಂಗಮವನರಿವಲ್ಲಿ, ಕಂಡ ದೋಷ ಸರಿಸುವದು ವ್ರತಾಂಗಿಗಳಿಗುಂಟೆ ? ಅರ್ಥ ಪ್ರಾಣ ಅಭಿಮಾನವನು ಗುರುಲಿಂಗಜಂಗಮಕ್ಕೆಂದಿತ್ತು. ಮರ್ತ್ಯರು ಕೊಲುವಾಗ ಸತ್ತ ಸಾವ ನೋಡುತ್ತ ಮತ್ತವರಿಗಿನ್ನೆತ್ತಣ ವ್ರತ ಆಚಾರ ಭ್ರಷ್ಟರಿಗೆಲ್ಲಕ್ಕೆ ? ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ನೇಮಕ್ಕೆ ತಪ್ಪಿದಡೆ ಹೊರಗೆಂಬೆ.
--------------
ಅಕ್ಕಮ್ಮ
ಲಿಂಗಕ್ಕೂ ತಮಗೂ ಸಹಭಾಜನ ಸಹಭೋಜನವಾಹಲ್ಲಿ ಇದಿರಿಟ್ಟ ಪದಾರ್ಥಂಗಳ ಲಿಂಗಕ್ಕೆ ತೋರಿ, ತಾ ಕೊಂಬಲ್ಲಿ ದೃಷ್ಟವಾಯಿತ್ತು. ಸ್ವಪ್ನ ಸುಷುಪ್ತಿಗಳಲ್ಲಿ, ಮಿಕ್ಕಾದ ಏಕಾಂತ ಸತಿ ಕೂಟಂಗಳಲ್ಲಿ ಅದಕ್ಕೆ ದೃಷ್ಟವಹ ಸಹಭೋಜನವಾವುದಯ್ಯಾ ? ಯೋನಿ ಸ್ವಪ್ನ ಸುಷುಪ್ತಿ ಮುಂತಾದ ಭಾವದ ಸಹಭೋಜನ ಎಲ್ಲಿ ಇದ್ದಿತ್ತು ? ಆ ಭಾಜನದ ಸಹಭೋಜನದ ಸಂಬಂಧ ಎಲ್ಲಿದ್ದಿತು ? ಅದು ಕಲ್ಲಿನೊಳಗಣ ನೀರು, ನೀರೊಳಗಣ ಶಿಲೆ, ಇದಾರಿಗೂ ಅಸಾಧ್ಯ ನೋಡಾ. ಅದು ಕಾಯದ ಹೊರಗಾದ ಸುಖ, ಸುಖದ ಹೊರಗಾದ ಅರ್ಪಿತ. ಇಂತೀ ಗೊತ್ತಮುಟ್ಟಿ ಸಹಭೋಜನದಲ್ಲಿ ಅರ್ಪಿಸಬಲ್ಲವಂಗೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ಸಹಭಾಜನ ಭೋಜನವಾಗಿಪ್ಪನು.
--------------
ಅಕ್ಕಮ್ಮ
ಲವಣನಿರಶನದ ಆಯತದ ಭೇದವೆಂತೆಂದಡೆ ; ಕಾರಲವಣ ನಿಷೇಧವೆಂದು ಬಿಟ್ಟು, ಮತ್ತೆ ಬಿಳಿಯ ಲವಣಬಳಸುವುದು. ಬಿಳಿಯಲವಣ ನಿಷೇಧವೆಂದು ಬಿಟ್ಟು ಮತ್ತೆ ಸೈಂಧಲವಣ ಬಳಸುವುದು. ಸೈಂಧಲವಣ ನಿಷೇಧವೆಂದು ಬಿಟ್ಟು, ಮತ್ತೆ ಮೃತ್ತಿಕೆಲವಣ ಬಳಸುವುದು. ಮೃತ್ತಿಕೆಲವಣದಲ್ಲಿ ತಟ್ಟುಮುಟ್ಟು ಕಂಡ ಮತ್ತೆ ಉಪ್ಪೆಂಬ ನಾಮವ ಬಿಟ್ಟಿಹುದೇ ಲೇಸು. ಈ ಅನುವ ನಾನೆಂದುದಿಲ್ಲ, ನಿಮ್ಮ ಅನುವ ನೀವೇ ಬಲ್ಲಿರಿ. ಅನುವಿಗೆ ತಕ್ಕ ವ್ರತ, ವ್ರತಕ್ಕೆ ತಕ್ಕ ಆಚಾರ, ಆಚಾರಕ್ಕೆ ತಕ್ಕ ಖಂಡಿತ. ಆವಾವ ನೇಮದಲ್ಲಿಯೂ ಭಾವ ಶುದ್ಧವಾದವಂಗೆ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ತಾನೆ.
--------------
ಅಕ್ಕಮ್ಮ
ಲಿಂಗಸೀಮೆ ಸೀಮೋಲ್ಲಂಘನವಾದಲ್ಲಿ, ಸೀಮೆಯ ಮೀರಿದಲ್ಲಿ ಪ್ರಾಣಯೋಗವಾಗಬೇಕು. ಆ ಗುಣ ತೋರುವುದಕ್ಕೆ ಮುನ್ನವೆ ಸಾವಧಾನಿಯಾಗಿರಬೇಕು. ಲೌಕಿಕ ಮೆಚ್ಚಬೇಕೆಂಬುದಕ್ಕೆ, ಭಕ್ತರೊಪ್ಪಬೇಕೆಂಬುದಕ್ಕೆ, ಉಪಾಧಿಕೆಯ ಮಾಡುವಲ್ಲಿ ವ್ರತ ಉಳಿಯಿತ್ತು, ಆಚಾರ ಸಿಕ್ಕಿತ್ತು. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವು ಆತನ ದೃಕ್ಕಿಂಗೆ ಹೊರಗಾದ.
--------------
ಅಕ್ಕಮ್ಮ
ಲಿಂಗಗೂಡಿ ಭರಿತಾರ್ಪಣವ ಅಂಗೀಕರಿಸುವಲ್ಲಿ, ಭರಿತ ಲಿಂಗಕ್ಕೊ ತನಗೊ ಎಂಬುದನರಿದು, ಲಿಂಗವೆಂತೆ, ತನ್ನಂಗವಂತೆ, ಬಂದಿತ್ತು ಬಾರದೆಂಬ ಆರೈಕೆಯನರಿತು, ಸಂದಿತ್ತು ಸಲ್ಲದೆಂಬ ಸಂದೇಹವ ತಿಳಿದು, ಸ್ವಯವಾಗಿ ನಿಂದುದು ನಿಜಭರಿತಾರ್ಪಣ. ಹೀಗಲ್ಲದೆ ಸಕಲವಿಷಯದಲ್ಲಿ ಹರಿದಾಡುತ್ತ ಆಮಿಷ ತಾಮಸ ರಾಗ ದ್ವೇಷದಲ್ಲಿ ಬೇವುತ್ತ ಇಂತಿವನರಿಯದ ತಮಗೆ ಸಂದುದಲ್ಲದೆ ಮರೆದೊಂದು ಬಂದಡೆ, ಆ ಲಿಂಗಪ್ರಸಾದವ ಇರಿಸಬಹುದೆ ? ನೇಮ ತಪ್ಪಿ ಸೋಂಕಿದಲ್ಲಿ ಕೊಳ್ಳಬಹುದೆ ? ಇಂತೀ ಅರ್ಪಿತದ ಸೋಂಕ, ಭರಿತಾರ್ಪಣದ ಪರಿಭಾವವ ನಿಮ್ಮ ನೀವೆ ನಿಶ್ಚೈಸಿಕೊಳ್ಳಿ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ.
--------------
ಅಕ್ಕಮ್ಮ