ವಚನಕಾರ:
ಉರಿಲಿಂಗಪೆದ್ದಿ
ಅಂಕಿತ ನಾಮ:
ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ
ಕಾಲ:
1160
ದೊರಕಿರುವ ವಚನಗಳು:
366 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ:
ಪರಿಚಯ:
ಕಾಲ ಸು. 1160. ಕಳ್ಳತನ ಮಾಡುತಿದ್ದ ಪೆದ್ದಿ ಉರಿಲಿಂಗದೇವನ ಶಿಷ್ಯನಾಗಿ ಅವನ ನಂತರ ಅದೇ ಪೀಠದ ಮುಖ್ಯಸ್ಥನಾದ. ಅಸ್ಪೃಶ್ಯ ಜನಾಂಗದ ಪೆದ್ದಿ ವಿದ್ವಾಂಸನಾಗಿ, ಅನುಭಾವಿಯಾಗಿ, ಮಠದ ಮುಖ್ಯಸ್ಥನೂ ಆದದ್ದು ಆ ಕಾಲದ ಮಹತ್ವದ ಸಂಗತಿ. ಈತನ 366 ವಚನಗಳು ದೊರೆತಿವೆ. ಕರ್ನಾಟಕದಲ್ಲಿರುವ ಅಸ್ಪೃಶ್ಯ ಜನಾಂಗಗಳಿಗೆ ಸೇರಿದ ಮಠಗಳನ್ನು ಉರಿಲಿಂಗಪೆದ್ದಿಗಳ ಮಠವೆಂದೇ ಕರೆಯುವ ರೂಢಿ ಇದೆ.