ಕಾಳಿಕಾದೇವಿ, ಚಾಮುಂಡಿ, ಗಂಗೆ ಗೌರಿ, ಬನಶಂಕರಿ, ಎಲ್ಲಿ,
ಏಕಲಾತಿ, ಹುಲಗಿ, ಹೊಸೂರಿ, ಸತ್ತವರು, ಹೆತ್ತವರು
ಇಂತೀ ಹಲವು ಪಿಶಾಚಿಗಳ ಹೆಸರಿಂದ ಇದಿರಿಟ್ಟು ಆರಾಧಿಸಿ,
ಅದರ ನೈವೇದ್ಯವೆಂದು ಶ್ರೀಗುರುವಿತ್ತ ಲಿಂಗಕ್ಕೆ ತೋರಿ
ಭುಂಜಿಸುವ ಶಿವದ್ರೋಹಿಗೆ ಗುರುವಿಲ್ಲ, ಲಿಂಗವಿಲ್ಲ,
ಜಂಗಮವಿಲ್ಲ, ಪಾದೋದಕವಿಲ್ಲ, ಪ್ರಸಾದವಿಲ್ಲ ಕಾಣಾ
ಸಂಗನಬಸವೇಶ್ವರ.