ಅಥವಾ
(37) (14) (0) (3) (3) (2) (0) (0) (8) (1) (1) (4) (3) (0) ಅಂ (9) ಅಃ (9) (42) (0) (10) (1) (0) (0) (0) (10) (0) (0) (0) (0) (0) (0) (0) (13) (0) (3) (0) (16) (11) (0) (16) (8) (18) (0) (2) (0) (7) (9) (9) (0) (13) (12) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅರಿವಿನ ಪಥವನರಿಯದಿರ್ದಡೆ, ಮುಂದೆ ಹೆರರಿಗೆ ದೀಕ್ಷೆಯ ಮಾಡಲೇಕೆ? ತೊರೆಯಲದ್ದವನಸೀಲರಿಯದವ ತೆಗೆಯ ಹೋದಂತಾಯಿತ್ತರಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅಂಬಿಗ ಅಂಬಿಗ ಎಂದು ಕುಂದ ನುಡಿಯದಿರು, ನಂಬಿದರೆ ಒಂದೆ ಹುಟ್ಟಲಿ ಕಡೆಯ ಹಾಯಿಸುವನಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅಲ್ಲಲ್ಲಿಗೆ ತಕ್ಕ ಹಾಗೆ ಎಲ್ಲರಿಗೂ ಬೋದ್ಥಿಸಲಾಗದು. ಬಲ್ಲವರಲ್ಲಿ ನುಡಿದು, ಅರಿಯದವರಲ್ಲಿ ಗೆಲ್ಲ ಸೋಲಕ್ಕೆ ನುಡಿದಡೆ, ಅವರು ಕಲ್ಲೆದೆಯವನೆಂಬರು. ಒಳ್ಳಿತು ಹೊಲ್ಲವೆನಬೇಡ ಆರಿಗೂ. ತನ್ನಲ್ಲಿಯೆ ಅರಿಕೆಯೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅರಿದೆಹೆನೆಂಬನ್ನಬರ ಅಸಗೆ ನೀರಡಿಸಿ ಸತ್ತಂತಾಯಿತ್ತು. ಕಟ್ಟೋಗರವ ಹೊತ್ತು ಉಂಡೆಹೆ ಉಂಡೆಹೆನೆಂದು ಆಪ್ಯಾಯನವಡಸಿ ಸತ್ತಂತಾಯಿತ್ತು. ಅರಿದೆಹೆನೆಂದು ಕೇಳಿಹೇಳಿಹೆನೆಂಬನ್ನಬರ ಆತನು ಶಿಲೆಯ ರೇಖೆಯೆ ? ಬಯಲ ಬ್ರಹ್ಮವೆ ? ತಾನಳಿವುದಕ್ಕೆ ಮುನ್ನವೆ ಅರಿದು ಕೂಡಬೇಕೆಂದನಂಬಿಗ Zõ್ಞಡಯ್ಯ.
--------------
ಅಂಬಿಗರ ಚೌಡಯ್ಯ
ಅಯ್ಯಾ ಆಚಾರವುಳ್ಳಕಾಂಚೀಪಟ್ಟಣದಲ್ಲಿ ಒಂದು ಗಂಡುಕತ್ತೆಯು ಸತ್ತುಬಿದ್ದಿರಲು, ಕತ್ತೆಯಂ ಕೈಲಾಸದ ಪಾಲುಮಾಡಬೇಕೆಂದಿದ್ದರಯ್ಯಾ, ಯಾರ್ಯಾರು ಎಂದರೆ: ಶೆಟ್ಟಿಗಾದರಿ, ಪೃಥ್ವಿಶೆಟ್ಟಿ, ಕೋರಿಶೆಟ್ಟಿ, ಬಳೇಶೆಟ್ಟಿ, ನಾಡನಾಲಗೆ, [ಮಿಂಡ]ಗುದ್ದಲಿ, ಬಡವ, ಬೋವಿಯಂತಪ್ಪ ಎಂಟು ಕಟ್ಟೆಯವರು ಕೂಡಿಕೊಂಡು ಆ ಕತ್ತೆಯಂ ಮಂಚದ ಮೇಲೆ ಇಟ್ಟುಕೊಂಡು ಕಮ್ಮೆಣ್ಣೆ, ಕಸ್ತೂರಿ, ಗಂಧ, ಪುನುಗು, ಜವ್ವಾಜಿ, ಬುಕ್ಕಹಿಟ್ಟು, ಊದಿನಕಡ್ಡಿ - ಇಂತಪ್ಪ ಅಷ್ಟಗಂಧದಿಂದ ಮೇಳ ಭಜಂತ್ರಿಯಿಂದ ಒಯ್ದು, ನರಿ ಪಾಲು ಮಾಡಿ ಬಂದರಯ್ಯಾ. ಛೇ, ಛೇ ಎಂದು ಕಣ್ಣಯ್ಯಗಳ ಎಡದ ಪಾದರಕ್ಷೆಯಂ ತೆಗೆದುಕೊಂಡು ಅವರ ಮುದ್ದುಮುಖದ ಮೇಲೆ ಕುಟ್ಟಿದಾತನೆ ನಮ್ಮ ಅಂಬಿಗರ ಚೌಡಯ್ಯನೆಂಬೊ ಶಿವಶರಣನು.
--------------
ಅಂಬಿಗರ ಚೌಡಯ್ಯ
ಅದ್ವೈತವ ನುಡಿದು ಅಬದ್ಧ ಅಂಗಕ್ಕಾಗಿ ಬದ್ಧರ ಬಾಗಿಲಲ್ಲಿ ಹೊದ್ದುಕೊಂಬನರಫಲ್ಲಾ ಎಂದು ಮತ್ತೆ ಅದ್ವೈತಕ್ಕೆ ಕದ್ದೆಹತನವೆ ? ಇಂತೀ ಅಬದ್ಧರ ಕಂಡು ಮುನ್ನವೆ ಹೊದ್ದಬೇಡ, ಎಂದನಂಬಿಗ ಚೌಡಯ್ಯ
--------------
ಅಂಬಿಗರ ಚೌಡಯ್ಯ
ಅಂಬಿನ ಹಿಳಿಕಿನಲ್ಲಿ ಕಟ್ಟಿದ ವಿಹಂಗನ ಗರಿಯಂತೆ, ತಾಗುವ ಮೊನೆಗಾಧಾರವಾಗಿ ದೂರ ಎಯಿದುವುದಕೆ ಸಾಗಿಸುವ ಗುಣ ತಾನಾಗಿ ಕ್ರೀ ಅರಿವಿನ ಭೇದದ ನೆರಿಗೆಯ ಕಾಬನ್ನಕ್ಕ, ಅರಿವು ಕುರುಹು ಎರಡು ಬೇಕೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅಡ್ಡಬಿದ್ದು ಶಿಷ್ಯನ ಮಾಡಿಕೊಂಬ ದಡ್ಡ ಪ್ರಾಣಿಗಳನೇನೆಂಬೆನಯ್ಯ. ಏನೇನೂ ಅರಿಯದ ಎಡ್ಡ ಮಾನವರಿಗೆ ಉಪದೇಶವ ಮಾಡುವ ಗೊಡ್ಡ ಮಾನವನ ಮುಖವ ತೋರದಿರಯ್ಯಾ. ಅದೇನು ಕಾರಣವೆಂದಡೆ: ಆ ಮೂಢಜೀವಿಯ ಪ್ರಪಂಚವ ಕಳೆಯಲಿಲ್ಲ. ಅವನ ಪಂಚೇಂದ್ರಿಯಂಗಳು, ಸಪ್ತವ್ಯಸನಂಗಳು, ಅಷ್ಟಮದಂಗಳೆಂಬ ಖೊಟ್ಟಿ ಗುಣಂಗಳ ಬಿಡಿಸಲಿಲ್ಲ. ಸೂತಕ ಪಾತಕಂಗಳ ಕೆಡಿಸಿ, ಮೂರು ಮಲಂಗಳ ಬಿಡಿಸಿ ಮುಕ್ತಿಪಥವನರುಹಲಿಲ್ಲ. ಮಹಾಶೂನ್ಯ ನಿರಾಳ ನಿರಂಜನಲಿಂಗವ ಕರ-ಮನ-ಭಾವ ಸರ್ವಾಂಗದಲ್ಲಿ ತುಂಬಿ ನಿತ್ಯನೆಂದೆನಿಸಲಿಲ್ಲ. ಇದನರಿಯದ ವ್ಯರ್ಥಕಾಯರುಗಳ ಗುರುವೆಂದಡೆ ಪ್ರಮಥರು ಮೆಚ್ಚುವರೆ ? ಇಂತಪ್ಪ ಗುರು ಶಿಷ್ಯರೀರ್ವರು ಅಜ್ಞಾನಿಗಳು. ಅವರು ಇಹಲೋಕ ಪರಲೋಕಕ್ಕೆ ಹೊರಗೆಂದಾತನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅಯ್ಯ! ಅಚ್ಚಪ್ರಸಾದಿ, ನಿಚ್ಚಪ್ರಸಾದಿ, ಸಮಯಪ್ರಸಾದಿಗಳೆಂದು ಒಪ್ಪವಿಟ್ಟು ನಿಚ್ಚ ನಿಚ್ಚ ನುಡಿವ ಅಣ್ಣಗಳಿರ! ನೀವು ಅಚ್ಚಪ್ರಸಾದ, ನಿಚ್ಚಪ್ರಸಾದ, ಸಮಯಪ್ರಸಾದವಾದ ವಿಚಾರವ ಹೇಳಿರಣ್ಣ! ಅರಿಯದಿರ್ದಡೆ ಕೇಳಿರಣ್ಣ! ಸಮಸ್ತಪದಾರ್ಥವ ಗುರುಲಿಂಗಜಂಗಮದಿಂದ ಪವಿತ್ರವ ಮಾಡಿ ಅವರವರ ಪದಾರ್ಥವ ಅವರವರಿಗೆ ವಂಚಿಸದೆ ನಿರ್ವಂಚಕತ್ವದಿಂದ ಸಮರ್ಪಿಸುವದೆ ತ್ರಿವಿಧಪ್ರಸಾದಸ್ವರೂಪು ನೋಡ! ಕ್ರಿಯಾಮುಖದಲ್ಲಿ ಇಷ್ಟಲಿಂಗಕ್ಕೆ ಸಮರ್ಪಿಸುವ ಪೃಥ್ವಿಸಂಬಂಧವಾದ, ಅಷ್ಟತನುಗಳಿಂದುದಯವಾದ, ಗಂಧರಸರೂಪುಸ್ಪರ್ಶನಶಬ್ದ ಮೊದಲಾದ ಸಮಸ್ತಪದಾರ್ಥಂಗಳ ಆ ಕ್ರಿಯಾಗುರುಲಿಂಗಜಂಗಮಕ್ಕೆ ಸಮರ್ಪಿಸಿ, ಅವರೊಕ್ಕುಮಿಕ್ಕ ರೂಪುರುಚಿತೃಪ್ತಿಪ್ರಸಾದವ ಭೋಗಿಸುವಾತನೆ ತ್ರಿವಿಧಪ್ರಸಾದಿ ನೋಡ! ಜ್ಞಾನಮುಖದಲ್ಲಿ ಪ್ರಾಣಲಿಂಗಕ್ಕೆ ಸಮರ್ಪಿಸುವ ಮನಸಂಬಂಧವಾದ ಸ್ತ್ರೀಯಳೆಂಬ ರೂಪುರುಚಿತೃಪ್ತಿ ಮೊದಲಾದ ಪದಾರ್ಥಂಗಳ ಸತ್ಕ್ರೀಯಾಗುರುಲಿಂಗಜಂಗಮವನೆ ಜ್ಞಾನಗುರುಲಿಂಗಜಂಗಮವೆಂದು ಭಾವಿಸಿ ತನ್ನ ವಿವಾಹಸಮಯದಲ್ಲಿ ಗುರುಲಿಂಗಜಂಗಮಕ್ಕೆ ಭಕ್ತಗಣಸಾಕ್ಷಿಯಾಗಿ ತನ್ನ ಕೂಟದ ಶಕ್ತಿಯ ಗುರುಲಿಂಗಜಂಗಮಕ್ಕೆ ಕೊಡುವ ಭಕ್ತಿ ಮೊದಲಾಗಿ, ಆ ಶಕ್ತಿಯರ ಅಂತರಂಗದಲ್ಲಿ ಬೆಳಗುವ ಪರಂಜ್ಯೋತಿರ್ಲಿಂಗವ ಬಹಿಷ್ಕರಿಸಿ ಸದ್ಗುರುಮುಖದಿಂ ಹಸ್ತಮಸ್ತಕಸಂಯೋಗವ ಮಾಡಿಸಿ, ಆ ಲಿಂಗಾಂಗಕ್ಕೆ ಪಾಣಿಗ್ರಹಣವ ಮಾಡಿಸಿ, ಮಂತ್ರದೀಕ್ಷೆಯ ಬೋದ್ಥಿಸಿ, ಪಾದೋದಕಪ್ರಸಾದವ ಕೊಡಿಸಿ, ಸದಾಚಾರ-ಸದ್ಭಕ್ತಿ-ಸತ್ಕ್ರೀಯಾ-ಸಮ್ಯಜ್ಞಾನವ ಬೋಧಿಸಿ, ಶಕ್ತಿಭಾರವಳಿದು ಕ್ರಿಯಾಶಕ್ತಿಯರೆಂದು ಭಾವಿಸಿ, ಪ್ರಥಮದಲ್ಲಿ ಗುರುಲಿಂಗಜಂಗಮಕ್ಕೆ ಆ ಕ್ರಿಯಾಶಕ್ತಿಯ ಭಕ್ತಗಣಸಾಕ್ಷಿಯಾಗಿ ಪ್ರಮಾಣದಿಂದ ಕಂಕಣವ ಕಟ್ಟಿ, ಶರಣಾರ್ಥಿಯೆಂದು ಒಪ್ಪದಿಂದ ಒಪ್ಪಿಸಿ, ಅದರಿಂ ಮೇಲೆ, ಆ ಗುರುಲಿಂಗಜಂಗಮದ ಕರುಣವ ಹಡೆದು, ಆ ಕ್ರಿಯಾಶಕ್ತಿಯ ಭಕ್ತಗಣಮಧ್ಯದಲ್ಲಿ ಕೂಡಿ, ಸೆರಗ ಹಿಡಿದು ಗಣಪದಕ್ಕೆ ಶರಣೆಂದು ವಂದಿಸಿ ಅವರ ಕರುಣವ ಹಾರೈಸಿ ನಿಜಭಕ್ತಿಜ್ಞಾನವೈರಾಗ್ಯವ ಬೆಸಗೊಂಡು ಸಚ್ಚಿದಾನಂದಲಿಂಗನಿಷ್ಠಾಪರತ್ವದಿಂದ ಗುರುಲಿಂಗಜಂಗಮಶಕ್ತಿ ಮೊದಲಾಗಿ ಗುರುಭಕ್ತಿಯಿಂದ ಆಚರಿಸುವರೆ ತ್ರಿವಿಧಪ್ರಸಾದಿಗಳು ನೋಡ! ಮಹಾಜ್ಞಾನಮುಖದಲ್ಲಿ ಭಾವಲಿಂಗಕ್ಕೆ ಸಮರ್ಪಿಸುವ ಧನಸಂಬಂಧವಾದ ದ್ರವ್ಯವನ್ನು ಆ ಕ್ರಿಯಾಜ್ಞಾನಯುಕ್ತವಾದ ಗುರುಲಿಂಗಜಂಗಮವನೆ ಮಹಾಜ್ಞಾನಗುರುಲಿಂಗಜಂಗಮವೆಂದು ಭಾವಿಸಿ, ತಾ ಧರಿಸುವಂಥ ವಸ್ತ್ರಾಭರಣರಕ್ಷೆ ಮೊದಲಾಗಿ ಪ್ರತಿಪದಾರ್ಥವ ವಿಚಾರಮುಖದಲ್ಲಿ ಪಾತ್ರಾಪಾತ್ರವ ತಿಳಿದು ಸಮರ್ಪಿಸಿ, ನಿಜನೈಷ್ಠೆಯಿಂದ, ಪರದ್ರವ್ಯವ ತಂದು ಗುರುಲಿಂಗಜಂಗಮವ ಒಡಗೂಡಿ ಋಣಭಾರಕ್ಕೊಳಗಾಗದೆ ನಡೆ ನುಡಿ ಒಂದಾಗಿ ಆಚರಿಸುವರೆ ತ್ರಿವಿಧಪ್ರಸಾದಿಗಳು ನೋಡ! ಈ ವಿಚಾರವ ಸದ್ಗುರುಮುಖದಿಂದ ಬೆಸಗೊಂಡು ಆಚರಿಸುವರೆ ಅಚ್ಚಪ್ರಸಾದಿ, ನಿಚ್ಚಪ್ರಸಾದಿ, ಸಮಯಪ್ರಸಾದಿ ನೋಡ! ಈ ವಿಚಾರವನರಿಯದೆ, ಶ್ರುತಿ-ಗುರು-ಸ್ವಾನುಭಾವವ ತಿಳಿಯದೆ, ವಾಚಾಳಕತ್ವದಿಂದ ನುಡಿದು, [ತಾವು] ಗುರುಲಿಂಗಜಂಗಮಪ್ರಸಾದಿಗಳೆಂಬ ಮೂಳರ ಬಾಯ ಮೇಲೆ ಗಣಂಗಳು ಮೆಟ್ಟಿದ ಚಮ್ಮಾವಿಗೆಯ ತೆಗೆದುಕೊಂಡು ಪಟಪಟನೆ ಹೊಡೆಯೆಂದಾತನಂಬಿಗರ ಚೌಡಯ್ಯನು ನೋಡ, ಸಂಗನ ಬಸವೇಶ್ವರ.
--------------
ಅಂಬಿಗರ ಚೌಡಯ್ಯ
ಅಂಗವ ಅಂದ ಮಾಡಿಕೊಂಡು ತಿರುಗುವ ಭಂಗಗೇಡಿಗಳು ನೀವು ಕೇಳಿರೋ. ಅಂಗಕ್ಕೆ ಅಂದವಾವುದೆಂದರೆ: ಗುರುವಿಗೆ ತನುವ ಕೊಟ್ಟಿರುವುದೆ ಚೆಂದ, ಲಿಂಗಕ್ಕೆ ಮನವ ಕೊಟ್ಟಿರುವುದೆ ಚೆಂದ, ಜಂಗಮಕ್ಕೆ ಧನವ ಕೊಟ್ಟಿರುವುದೆ ಚೆಂದ. ಅಷ್ಟಾವರಣದಲ್ಲಿ ನಿಬ್ಬೆರಗಿನಿಂದ ಕೂಡಿ ಭಕ್ತಿಯೆಂಬ ಸಮುದ್ರದಲ್ಲಿ ಈಸಾಡುವುದೆ ಚೆಂದ. ಶಿವನ ಪಾದವ ಹೊಂದುವುದೆ ಚೆಂದ. ಈ ಮಾರ್ಗವ ಬಿಟ್ಟು, ಸಂಸಾರವೇ ಅಧಿಕವೆಂದು ತನ್ನ ಹೆಂಡಿರು ಮಕ್ಕಳು ಸಂಪತ್ತು ಇವು [ತ]ನಗೆ ಶಾಶ್ವತವೆಂದು ತಿಳಿದು, ಒಂದು ಕಾಸನಾದರೂ ಪರರಿಗೆ ಕೊಡದೆ, ತಾನೇ ತಿಂದು, ನೆಲದಲ್ಲಿ ಮಡಗಿ, ಕಡೆಗೆ ಯಮನ ಕೈಯಲಿ ಸಿಲ್ಕಿ ನರಕ ಕೊಂಡದಲ್ಲಿ ಮುಳುಗೇಳುವುದೇ ನಿಶ್ಚಯ. ಇಂತಹ ಅಂದಗೇಡಿಗಳ ಮುಖವ ನೋಡಲಾಗದೆಂದಾತ, ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.
--------------
ಅಂಬಿಗರ ಚೌಡಯ್ಯ
ಅರಳೆಯ ಮರನು ವಿಷ್ಣುಕಾಂತಿ ಬನ್ನಿ ಮುತ್ತಕ ತೊಳಚಿ ಹರಿ ಹರಿಯೆಂದು ಹೊಡ[ವ]ಡುವಿರಿ. ಎಲ್ಲಿ ಭೋ! ಎಲ್ಲಿ ಭೋ! ನಿಮ್ಮ ನಿಮ್ಮ ಹೊಡವಡುವ ದೈವಗಳೆಲ್ಲಾ ಗಿಡುಮರನಾಗಿ ಹೋದವಲ್ಲಾ! ನಿಮ್ಮ ನಡೆಯೆಲ್ಲಾ ಅನಾಚಾರ, ನುಡಿಯೆಲ್ಲಾ ಶಿವದ್ರೋಹ! ಇವದಿರ ಗಡಣ ಬೇಡೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅಡವಿಯ ಹೊಗಿಸಿತ್ತು, ಹುಡುಕುನೀರಲದ್ದಿತ್ತು, ಜಡೆಗಟ್ಟಿ ಭಸ್ಮವ ತೊಡೆಸಿತ್ತು, ಉಡೆವುಚ್ಚುಗೊಳಿಸಿತ್ತು, ಹಿಡಿದೊತ್ತಿ ಕೇಶವ ಕೀಳಿಸಿತ್ತು, ಪಡಿಪುಚ್ಚಗೊಳಿಸಿತ್ತು ಊರೊಳಗೆಲ್ಲ. ಈ ಬೆಡಗಿನ ಮಾಯೆಯ ಬಡಿಹಾರಿ ಸಮಯಿಗಳ ನುಡಿಗೆ ನಾಚುವೆನೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅರಿವನರಿದಲ್ಲಿ ತಾನೆನ್ನದೆ ಇದಿರೆನ್ನದೆ, ಪಥವನರಿಯದಿರ್ದಡೆ, ಮುಂದೆ ಹೆರರಿಗೆ ದೀಕ್ಷೆಯ ಮಾಡಲೇಕೆ ? ತೊರೆಯಲದ್ದವನನೀಸಲರಿಯದವ ತೆಗೆಯ ಹೋದಂತಾಯಿತ್ತೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅಂದ ಛಂದವ ಬಿಟ್ಟು, ಮಂಡೆ ಬೋಳಾದ ಮತ್ತೆ ಅಂಗಕ್ಕೆ ಛಂದ ಅಲಂಕಾರವುಂಟೆ ? ತಮ್ಮಂಗದ ಸಂಗವನರಿಯದೆ ಲಿಂಗಸಂಗಿ ಎಂಬ ಭಂಡರನೇನೆಂಬೆನೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅಯ್ಯಾ, ನಾವು ಪರಮವಿರಕ್ತರು, ಪಟ್ಟದ ಅಯ್ಯನವರು, ಚರಮೂರ್ತಿಗಳು, ಪರದೇಶಿಗಳು ಎಂದು ಶಂಖ ಗಿಳಿಲು ದಂಡಾಗ್ರ ಎಂಬ ಬಿರುದು ಪಿಡಿದು, ಕಾವಿ ಕಾಷಾಯಾಂಬರವ ಹೊತ್ತು, ಸರ್ವಕಾರ್ಯದಲ್ಲಿ ಶ್ರೇೀಷ*ರೆಂದು ಗರ್ವದಲ್ಲಿ ಕೊಬ್ಬಿ, ಕಾಮನಾಟದಲ್ಲಿ ಕಲಕಿ, ಮನಸ್ಸಿನಲ್ಲಿ ದುರ್ಗುಣವನ್ನಿಟ್ಟುಕೊಂಡು ಮಾತಿನಲ್ಲಿ ನೀತಿಯ ಸೇರಿಸುತ್ತ ಕಪಟದಲ್ಲಿ ಚರಿಸುವಂತಹ ತೊನ್ನ ಹೊಲೆಮಾದಿಗರ ಸಂಗಮಾಡಲಾಗದು, ಅವರ ಪ್ರಸಂಗವ ಕೇಳಲಾಗದು. ಅದೇನು ಕಾರಣವೆಂದಡೆ: ಗುರುಲಿಂಗಜಂಗಮವಾದ ಬಳಿಕ ಅಷ್ಟಾವರಣದಲ್ಲಿ ನಿಷಾ*ಪರವಾಗಿರಬೇಕು. ಪರಧನ ಪರಸತಿಯರ ಹಿಡಿಯೆನೆಂಬ ನೇಮದಲ್ಲಿ ಬಲ್ಲಿದರಾಗಿರಬೇಕು. ಶಿವಭಕ್ತರಾದವರ ಭವವ ಗೆಲಿಸಿ ಮೋಕ್ಷವ ಹೊಂದಿಸಬೇಕು. ಶಿವಲಾಂಛನವ ಹೊತ್ತ ಬಳಿಕ ಶಿವನಂತಿರಬೇಕು ಬರಿದೆ, ನಾನು ಮಾಹೇಶ್ವರನೆಂದು, ನಾನು ಶಿವಭಕ್ತನೆಂದು ತನ್ನ ಹೃನ್ಮಂದಿರದಲ್ಲಿ ನೆಲಸಿದ ಚಿನ್ಮಯಜಂಗಮಲಿಂಗಕ್ಕೆ ತನು-ಮನ-ಧನವೆಂಬ ತ್ರಿವಿಧಪದಾರ್ಥವನರ್ಪಿಸಿ, ತ್ರಿವಿಧಪ್ರಸಾದವ ಗರ್ಭೀಕರಿಸಿಕೊಂಡು, ಪ್ರಸನ್ನಪ್ರಸಾದವ ಸ್ವೀಕರಿಸಿ ಪರತತ್ವಪ್ರಸಾದದಲ್ಲಿ ತಾನು ತಾನಾಗಲರಿಯದೆ ಉಚ್ಚಂಗಿದುರ್ಗಿಗೆ ಬಿಟ್ಟ ಪೋತರಾಜನಂತೆ ಮೂರು ಮೂರು ಜಡೆಗಳ ಬಿಟ್ಟು, ಆಡಿನೊಳಗಿರುವ ಹಿರಿಯ ಹೋತಿನಂತೆ ಮೊಳ ಮೊಳ ಗಡ್ಡವ ಬಿಟ್ಟು, [ಡಂ]ಬ ಜಾತಿಗಾರನಂತೆ ವೇಷವ ತೊಟ್ಟು, ಮೀಸೆಯ ಬೋಳಿಸಿಕೊಂಡು, ಕೈಪವ ಧರಿಸಿ, ಸಂಸ್ಕೃತ ಗೀರ್ವಾಣಭಾಷೆಯ ಕಲಿತು, ಕಾಕ ಕುಟಿಲ ಕುಹಕದ ಗಾಳಿಪೂಜೆಯಿಂದ ಬಂದ ಸುಡಗಾಡು ಸಿದ್ಧಯ್ಯಗಳಂತೆ, ಗಿಡಮೂಲಿಕೆಗಳು ತಂತ್ರ ಮಂತ್ರ ಯಂತ್ರದ ಭಾಷೆಗಳ ಕಲಿತುಕೊಂಡು ಪುರಜನರ ಮೆಚ್ಚಿಸಬೇಕೆಂದು ಅಯ್ಯಾ, ನಾವು ಕೆರೆ ಭಾವಿಯನಗೆಸಬೇಕೆಂದು, ಮಠ ಗುಡಿಯ ಕಟ್ಟಿಸಬೇಕೆಂದು, ಮಾನ್ಯದಲಿ ಬಿಲ್ವಗಿಡಗಳ ಹಚ್ಚಬೇಕೆಂದು, ಮದುವೆ ಅಯ್ಯಾಚಾರವ ಮಾಡಬೇಕೆಂದು, ಅನ್ನಕ್ಷೇತ್ರ ಅರವಟ್ಟಿಗೆಯ ಇಡಿಸಬೇಕೆಂದು, ಪುರಾಣಗಳ ಹಚ್ಚಿಸಬೇಕೆಂದು, ಇಂತಪ್ಪ ದುರಾಸೆಯ ಮುಂದುಗೊಂಡು ನಾನಾ ದೇಶವ ತಿರುಗಿ, ಅರಸರ ಮದದಂತೆ ಗರ್ವದಿಂದ ಹೆಚ್ಚಿ, ಹೇಸಿ ಹೊಲೆ ಮಾದಿಗರ ಕಾಡಿ ಬೇಡಿ, ಹುಸಿಯನೆ ಬೊಗಳಿ ಒಬ್ಬನ ಒಲವ ಮಾಡಿ[ಕೊಂ]ಡು, ವ್ಯಾಪಾರ ಮರ್ಯಾದೆಯಲ್ಲಿ ಪೇಟೆಯಲ್ಲಿ ಕುಳಿತು ಅನಂತ ಮಾತುಗಳನಾಡುತ್ತ, ಸೆಟ್ಟಿ ಮುಂತಾದ ಅನಂತ ಕಳ್ಳ ಹಾದರಗಿತ್ತಿಯ ಮಕ್ಕಳ ಮಾತಿನಿಂದೊಲಿಸಿ, ಅವರು ಕೊಟ್ಟಡೆ ಹೊಗಳಿ, ಕೊಡದಿರ್ದಡೆ ಬೊಗಳಿ, ಆ ಭ್ರಷ್ಟ ಹೊಲೆಮಾದಿಗರು ಕೊಟ್ಟ ದ್ರವ್ಯಗಳ ತೆಗೆದುಕೊಂಡು ಬಂದು ಕಡೆಗೆ ಚೋರರು ಒಯ್ದರೆಂದು ಮಠದೊಳಗೆ ಮಡಗಿಕೊಂಡು ಪರಸ್ತ್ರೀಯರ ಹಡಕಿ ಯೋನಿಯೊಳಗೆ ಇಂದ್ರಿಯ ಬಿಟ್ಟು, ಕಾಮಕ್ರೋಧದಲ್ಲಿ ಮುಳುಗಿ ಮತಿಗೆಟ್ಟು, ಶಿವಪಥಕ್ಕೆ ದೂರಾಗಿ, ದುರಾಚಾರವ ಆಚರಿಸಿ, ನಡೆನುಡಿಗಳ ಹೊರತಾಗಿ, ವ್ಯರ್ಥ ಹೊತ್ತುಗಳೆದು, ಸತ್ತುಹೋಗುವ ಜಡದೇಹಿ ಕಡುಪಾತಕ ಕತ್ತೆ ಹಡಿಕರಿಗೆ ಪರಮ ನಿರಂಜನ ಜಂಗಮಲಿಂಗದೇವರೆಂದು ಕರೆತಂದು, ಪಾದತೀರ್ಥ ಪ್ರಸಾದವ ತೆಗೆದುಕೊಂಬುವರಿಗೆ ಇಪ್ಪತ್ತೊಂದು ಯುಗಪರಿಯಂತರ ನರಕಕೊಂಡದಲ್ಲಿಕ್ಕುವ. ಇಂತಪ್ಪ ಜಂಗಮವನು ಪೂಜೆ ಮಾಡುವಂತಹ ಶಿವಭಕ್ತನ ಉಭಯತರ ಮೂಗ ಸೀಳಿ ಮೆಣಸಿನ ಹಿಟ್ಟು ತುಪ್ಪವ ತುಂಬಿ, ಪಡಿಹಾರಿ [ಉತ್ತಣ]ಗಳೆಡದ ಪಾದುಕೆಯಿಂದ ಪಡಪಡನೆ ಹೊಡಿ ಎಂದಾತ ನಮ್ಮ ಅಂಬಿಗರ ಚೌಡಯ್ಯ ನಿಜಶರಣನು.
--------------
ಅಂಬಿಗರ ಚೌಡಯ್ಯ
ಅಂಗದ ಗುಣವನರತು ಲಿಂಗವನರಿಯಬೇಕೆಂಬರು ಅಂಗವರತ ಮತ್ತೆ ಲಿಂಗಕ್ಕೆ ಕುರುಹುಂಟೆ ? ಅಂಗವೆ ಲಿಂಗ, ನಿರಂಗವೆ ಸಂಗ. ಭಾವದ ಅಂಗವನರಿಯಬೇಕೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅರ್ಚನೆಯ ಮಾಡುವಲ್ಲಿ ಆವೇಶ ಅರತಿರಬೇಕು. ಪೂಜೆಯ ಮಾಡುವಲ್ಲಿ ಪುಣ್ಯಮೂರ್ತಿಯಾಗಿರಬೇಕು. ಕೊಡುವ ಕೊಂಬಲ್ಲಿ ಸರ್ವಭೂತಹಿತನಾಗಿರಬೇಕು. ಇಂತೀ ಸಡಗರಿಸಿಕೊಂಡಿಪ್ಪಾತನ ಅಡಿಗೆರಗುವೆನೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅರಿವುದೊಂದು ವಾಯು, ಮರೆವುದೊಂದು ವಾಯು. ಉಭಯದಿಂ ತೋರುವ ವಾಯು ಒಂದೆಯಾಗಿ, ವಾಳುಕದ ಒಳ ಹೊರಗಿನ ನೀರಿನಂತೆ ವೆಗ್ಗಳಿಸಿದಡೆ ನಿಂದು ತೆಗೆದಡೆ ಅಲ್ಲಿಯ ಅಡಗುವಂತೆ, ಅರಿದು ನುಡಿದು ನಡೆದಡೆ ಜ್ಞಾನಿ, ನುಡಿದ ನುಡಿಗೆ ನಡೆಯಡಗೆ ಆತನೆ ಜೀವಭಾವಿ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅರುಹಿಯರ ದೈವ ಅಗಲ [ತೈಲವಿ]ಲ್ಲಾ ಎಂದಡೆ ಹೊಲೆಯರ ಬೊ[ಮ್ಮು]ಗ ತೋಯೆ ತುಪ್ಪವ ಬೇಡುವಂತೆ ಬ್ರಹ್ಮವಿಷ್ಣುಗಳೆಂಬರಿನ್ನು ಕಾಣರು, ವೇದಂಗಳು ನಾಚದೆ ನುಡಿವ ಪರಿಯ ನೋಡಾ! ಗಂಗೆವಾಳುಕಸಮರುದ್ರುರು ಲಿಂಗವ ಕಂಡರೈಸೆ, ಸ್ವಯಂಭುವ ಕಾಣರೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅಯ್ಯ! ಅಂಗಾಚಾರವುಳ್ಳ ಶಕ್ತಿ-ಭಕ್ತ-ಜಂಗಮದ ಗೃಹದಲ್ಲಿ ಲಿಂಗಾಚಾರವುಳ್ಳ ಶಿವಭಕ್ತಿ-ಶಿವಭಕ್ತ-ಶಿವಜಂಗಮವು ಜಿಹ್ವಾಲಂಪಟಕಿಚ್ಛೈಸಿ ಅವರ ಗೃಹದಲ್ಲಿ ಲಿಂಗಾರ್ಚನೆ-ಲಿಂಗಾರ್ಪಣವ ಮಾಡಲಾಗದು. ಇದ ಮೀರಿ ಅಂಗಭೋಗಿಗಳ ಸಮಪಾಕ, ಸಮಭಾಜನ, ಸಮಪಂಕ್ತಿ, ಶಿವಮಂತ್ರ, ಶಿವಪ್ರಸಾದ, ಶಿವಾನುಭಾವಗೋಷಿ*ಯ ಮಾಡಿದಡೆ ಬಸವ ಮೊದಲಾದ ಸಮಸ್ತಗಣಸಾಕ್ಷಿಯಾಗಿ ಶಿವಲೋಕ, ಶಾಂಭವಲೋಕ, ರುದ್ರಲೋಕ, ದೇವಲೋಕ, ಮತ್ರ್ಯಲೋಕ ಮೊದಲಾದ ಸಮಸ್ತಲೋಕಪಾವನಾರ್ಥ ಮಹಾಗಣಂಗಳ ಸಮಯಾಚಾರಕ್ಕೆ ಹೊರಗೆಂದಾತನಂಬಿಗರ ಚೌಡಯ್ಯನು.
--------------
ಅಂಬಿಗರ ಚೌಡಯ್ಯ
ಅಡವಿಯೊಳಗರಸುವಡೆ ಸಿಡಿಗಂಟಿ ತಾನಲ್ಲ. ಮಡುವಿನೊಳಗರಸುವಡೆ ಮತ್ಸ್ಯಮಂಡೂಕನಲ್ಲ. ತಪಂಬಡುವಡೆ ವೇಷಕ್ಕೆ ವೇಳೆಯಲ್ಲ. ಒಡಲ ದಂಡಿಸುವಡೆ ಕೊಡುವ ಸಾಲಿಗನಲ್ಲ. ಅಷ್ಟತನುವಿನೊಳಗೆ ಹುದುಗಿದ್ದ ಲಿಂಗವ ನಿಲುಕಿ ನೋಡಿಯೆ ಕಂಡನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅಷ್ಟಮದಂಗಳ ಘಟ್ಟಿಯನೆ ಕರಗಿಸಿ, ಸತ್ವ ರಜ ತಮಂಗಳ ಬಿಟ್ಟು ಕಳೆದು, ಸುತ್ತುವ ಮನದ ಸುಳಿಯ ತಪ್ಪಿಸಿ ಮುಂದೆ ಹುಟ್ಟದೆ ಹೋಗೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅಳುಪೆಂಬ ನಾಯ ಕಳವಳದರ್ಥವ ಇದ ಬಿಡೈ, ನಿನಗೆ ಸಂಗಡವಲ್ಲ. ಬಂದ ಹೊಲೆಯನ, ನಿಂದ ಹಾರುವನ ಇವರಿಬ್ಬರ ಕೂಡಿಕೊಂಡು ನಿನಗೆ ದೇಹಾರವಾಗದಣ್ಣಾ. ಇವರ ಹಿಂಗಿಸಿ ನಿಜವರಿದು, ನಿಂದಲ್ಲಿ ನೆನದಡೆ ಅಂದಿಂಗಲ್ಲದೆ ಶಿವನಿರನೆಂದಾತನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅತ್ಯಾಹಾರವನುಂಡು ಹೊತ್ತುಗಳೆದು ಹೋಕಿನ ಮಾತನಾಡುತ್ತ ಚಿತ್ತ ಬಂದ ಪರಿಯಲ್ಲಿ ವ್ಯವಹರಿಸಿಕೊಳ್ಳುತ್ತ, ಮತ್ತೆ ಶಿವನ ನೆನೆದೆನೆಂದಡೆ ಶಿವನ ವರ ಎತ್ತಲೆಂದರಿಯದೆಂದಾತ, ನಮ್ಮಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅಯ್ಯ! ಶ್ರೀಗುರುಲಿಂಗಜಂಗಮದ ವೇಧಾಮಂತ್ರಕ್ರಿಯಾದೀಕ್ಷೆಗೆ ಹೊರಗಾದ ಭುವನದ ಶೈವದೈವದಾರ್ಚನೆ ಪೂಜೆಯ ಮಾಡಿ, ಅದರುಚ್ಛಿಷ್ಟವ ಭುಂಜಿಸುವದಂಗಾಚಾರ. ಅದನುಳಿದು ಶುದ್ಧಸಿದ್ಧಪ್ರಸಿದ್ಧಪ್ರಸಾದಸ್ವರೂಪವಾದ ಅನಾದಿಗುರುಲಿಂಗಜಂಗಮದ ಅರ್ಚನೆ ಪೂಜೆಯ ಮಾಡಿ ಕಿಂಕರ್ವಾಣದಿಂದ ಅವರ ಒಕ್ಕುಮಿಕ್ಕ ಪ್ರಸಾದವ ಹಾರೈಸುವುದೆ ಲಿಂಗಾಚಾರ. ಈ ಭೇದವ ತಿಳಿದು ಪಂಚಾಚಾರ ಆಚರಣೆಗೆ ತಂದು, ಸಪ್ತಾಚಾರವ ಸಂಬಂಧವಿಟ್ಟು, ಅಷ್ಟಾವರಣದ ಕಲೆನೆಲೆಗಳ ಒಳಗು-ಹೊರಗು ಎನ್ನದೆ, ಸದ್ಗುರುಮುಖದಿಂದ ಆಚರಣೆ-ಸಂಬಂಧವ ತಿಳಿದು, ಸದ್ಭಕ್ತಿ-ಸಮ್ಯಜ್ಞಾನ-ವೈರಾಗ್ಯ-ಷಟ್ಸ್ಥಲಮಾರ್ಗವ ಹಿಡಿದು, ನಿಜಾಚರಣೆಯಲ್ಲಿ ಆಚರಿಸುವರೆ ಶಿವಶಕ್ತಿ, ಶಿವಭಕ್ತ, ಶಿವಜಂಗಮವಲ್ಲದೆ, ಉಳಿದ ವೇಷಧಾರಿಗಳೆಲ್ಲ ಎನ್ನೊಡೆಯ ಪ್ರಮಥಗಣಾಚಾರಕ್ಕೆ ಹೊರಗೆಂದಾತನಂಬಿಗರ ಚೌಡಯ್ಯನು.
--------------
ಅಂಬಿಗರ ಚೌಡಯ್ಯ

ಇನ್ನಷ್ಟು ...