ಅಥವಾ
(247) (109) (40) (3) (37) (5) (0) (0) (43) (7) (8) (33) (6) (0) ಅಂ (63) ಅಃ (63) (196) (4) (38) (10) (0) (8) (0) (42) (0) (0) (0) (0) (1) (0) (0) (87) (0) (16) (13) (104) (70) (0) (63) (53) (93) (9) (14) (0) (29) (30) (30) (2) (78) (81) (0)

ಪದದಿಂದ ಪ್ರಾರಂಭವಾಗುವ ವಚನಗಳು:

ನಿಂದಡೆ; ಹೊನ್ನು ಹೆಣ್ಣು ಮಣ್ಣು ಹಿಡಿದು ನೆಟ್ಟನೆ ಭಕ್ತನಾಗಿ ನಿಲ್ಲಬೇಕು. ಸುಳಿದಡೆ; ಹೊನ್ನು ಹೆಣ್ಣು ಮಣ್ಣು ಬಿಟ್ಟು ನೆಟ್ಟನೆ ಜಂಗಮವಾಗಿ ಸುಳಿಯಬೇಕು. ನಿಂದು ಭಕ್ತನಲ್ಲದ, ಸುಳಿದು ಜಂಗಮವಲ್ಲದ ಉಭಯಭ್ರಷ್ಟರನೇನೆಂಬೆ ಗುಹೇಶ್ವರಯ್ಯಾ ?
--------------
ಅಲ್ಲಮಪ್ರಭುದೇವರು
ನಿಮ್ಮ ನೆನೆವುತ್ತಿದ್ದಿತ್ತು_ನೆನೆವ ಮುಖವಾವುದೆಂದರಿಯದೆ, ಪೂಜೆಯ ಪೂಜಿಸುತ್ತಿದ್ದಿತ್ತು_ಪೂಜೆಯ ಮುಖವಾವುದೆಂದರಿಯದೆ; ಆಡಿ ಹಾಡಿ ಬೇಡುತ್ತಿದ್ದಿತ್ತು_ಬೇಡುವ ಮುಖವಾವುದೆಂದರಿಯದೆ; ಕಾಯದಲ್ಲಿ ಇಲ್ಲ, ಜೀವದಲ್ಲಿಇಲ್ಲ, ಭಾವದಲ್ಲಿ ಇಲ್ಲ; ಭರಿತವು ಅದು ತಾನಪ್ಪುದು. ತಾನಲ್ಲದುದೇನ ಹೇಳುವೆ ಕೌತುಕವ? ಗುಹೇಶ್ವರನೆಂಬ ಹೆಸರೊಳಗಿದ್ದುದ ಬೆಸಗೊಂಬವರಿಲ್ಲ ನಿರಾಳದ ಘನವ !
--------------
ಅಲ್ಲಮಪ್ರಭುದೇವರು
ನೀರಿಲ್ಲದ ಒರಳಿಂಗೆ ನೆಳಲಿಲ್ಲದ ಒನಕೆ ! ರೂಹಿಲ್ಲದ ನಾರಿಯರು ಬೀಜವಿಲ್ಲದಕ್ಕಿಯ ತಳಿಸುತ್ತಲಿ ಬಂಜೆಯ ಮಗನ ಜೋಗುಳವಾಡುತ್ತೈದಾರೆ, ಉರಿಯ ಚಪ್ಪರವನಿಕ್ಕಿ_ ಗುಹೇಶ್ವರನ ಕಂದನು ಲೀಲೆಯಾಡಿದನು !
--------------
ಅಲ್ಲಮಪ್ರಭುದೇವರು
ನಿರ್ಣಯವನರಿಯದ ಮನವೆ, ದುಗುಡವನಾಹಾರಗೊಂಡೆಯಲ್ಲಾ ಮಾಯಾ ಸೂತ್ರವಿದೇನೊ! ಕಂಗಳೊಳ[Àಗಣ]sÀ ಕತ್ತಲೆ ತಿಳಿಯದಲ್ಲಾ ! ಬೆಳಗಿನೊಳಗಣ ಶೃಂಗಾರ ಬಳಲುತ್ತಿದ್ದುದು, ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ನೆನಹು ಸತ್ತಿತ್ತು ಭ್ರಾಂತು ಬೆಂದಿತ್ತು. ಅರಿವು ಮರೆಯಿತ್ತು ಕುರುಹುಗೆಟ್ಟಿತ್ತು. ಗತಿಯನರಸಲುಂಟೆ? ಮತಿಯನರಸಲುಂಟೆ? ಅಂಗವೆಲ್ಲ ನಷ್ಟವಾಗಿ ಲಿಂಗಲೀಯವಾಯಿತ್ತು. ಕಂಗಳಂಗದ ಕಳೆಯ ಬೆಳಗಿನ ಭಂಗ ಹಿಂಗಿತ್ತು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ನಿಮ್ಮ ಲೀಲೆ, ನಿಮ್ಮ ವಿನೋದ, ನಿಮ್ಮ ಹರೆ, ನಿಮ್ಮ ಕೊಳಲು, ಆನಿದಕ್ಕೆ ಬೇಕೆನ್ನೆ ಬೇಡೆನ್ನೆ. ಮೇಘವಹ್ನಿ ಧರೆಗೆರಗುತ್ತ ಭೂಲೋಕವ ಬೆಸಗೊಂಡಿತ್ತೆ ? ಉದರಾಗ್ನಿ ಧರೆಗೆರಗುತ್ತ ಭೂತಂಗಳ ಬೆಸಗೊಂಡಿತ್ತೆ ? ಗುಹೇಶ್ವರ ಅಲ್ಲಮನ ನಿರುಪಮ ಮಹಿಮೆ ಎಂತಿದ್ದಿತ್ತು ಆ ಹಾಂಗೆ ನೀನು ಮಾಡುವುದಲ್ಲದೆ ನಾನಿದಕ್ಕೆ ಬೇಕೆನ್ನೆನು ಬೇಡೆನ್ನೆನು
--------------
ಅಲ್ಲಮಪ್ರಭುದೇವರು
ನೀರ ನೆಳಲನೆ ಕಡಿದು, ಮೇರುವೆಂಬುದ ನುಂಗಿ, ಶಾರದೆಯೆಂಬವಳ ಬಾಯ ಕಟ್ಟಿ, ಕಾರ ಮೇಘದ ಬೆಳಸ ನೀರ ಹರಿ ನುಂಗಲು ದಾರಿ ಮೃತ್ಯುವ ನುಂಗಿ ನಗುತ್ತಿದ್ದಿತು. ನಾರಿಯ ಬೆನ್ನ ಮೇಲೆ ಗಂಡ ಬಂದು ಕುಳ್ಳಿರಲು, ನೀರ ಹೊಳೆಯವರೆಲ್ಲರ ಕೊಡನೊಡೆದವು. ಕಾರೆಯ ಮುಳ್ಳೆರ್ದು ಕಲಿಗಳನಟ್ಟಿ ಸದೆವಾಗ, ಸೋರುಮುಡಿಯಾಕೆ ಗೊರವನ ನೆರೆದಳು. ಬಳ್ಳು ಆನೆಯ ನುಂಗಿ, ಹೊಳೆ (ಒಳ್ಳೆ ?) ಸಮುದ್ರವ ಕುಡಿದು, ಕುಳ್ಳಿರ್ದ ಶಿಶು ಹಲಬರನೆಯ್ದೆ ನುಂಗಿ, ಅತ್ತೆ ಅಳಿಯನ ಕೂಡಿ ಕೋಡಗವ ಹಡೆದಲ್ಲಿ, ಹತ್ತಿರಿರ್ದ ಹಾವಾಡಿಗನನು ಅದು ನುಂಗಿತ್ತು! ಕಪ್ಪೆ ಸರ್ಪನ ಹಿಡಿದು ಒತ್ತಿ ನುಂಗುವಾಗ, ಕಪ್ಪೆಯ ಕೊರಳಲ್ಲಿ ಬಿಳಿದು ಕೆಂಪಡರಲು, ನಿಶ್ಚಿಂತವಾಯಿತ್ತು ಗುಹೇಶ್ವರನ ಶರಣಂಗೆ, ಕಟ್ಟಿದಿರ ಕರ್ಪುರದ ಜ್ಯೋತಿಯಂತೆ!
--------------
ಅಲ್ಲಮಪ್ರಭುದೇವರು
ನೀರೊಳಗಣ ಜ್ಯೋತಿ ಮೇರುವ ನುಂಗಿತ್ತು. ದೂರ[ದ] ಧಾತು ಸಾರಾಯದೊಳಡಗಿತ್ತು. ಪುರದೊಳಗೈವರ ಶಿರವರಿದು, ಪರಿಮಳದೋಕುಳಿಯನಾಡಿತ್ತ ಕಂಡೆ. ಸಾರಿರ್ದ ಬ್ರಹ್ಮನ ಓಲಗ ಹರೆಯಿತ್ತು, ಘೋರ ರುದ್ರನ ದಳ ಮುರಿಯಿತ್ತು_ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ನಿಜ ಬಲ್ಲವಂಗೆ ಜಲವೂ ಸರಿ, ನೆಲವೂ ಸರಿ. ಅರಿದು ನುಡಿವಂಗೆ ಜಗವೂ ಸರಿ, ಸಮಯವೂ ಸರಿ. ಎಮಗಾಮಿಥ್ಯವಿಲ್ಲ, ಸಂಗನಬಸವಣ್ಣಾ, ಗುಹೇಶ್ವರಲಿಂಗವು ಪರಿಪೂರ್ಣವಾದ ಕಾರಣ.
--------------
ಅಲ್ಲಮಪ್ರಭುದೇವರು
ನೆಳಲ ಹೂಳಿಹೆನೆಂದು ಬಳಲುತ್ತಿದೆ ಜಗವೆಲ್ಲಾ. ನೆಳಲು ಸಾಯಬಲ್ಲುದೆ ಅಂಗಪ್ರಾಣಿಗಳಿಗೆ ? ಸಮುದ್ರದಾಚೆಯ ತಡಿಯಲ್ಲಿ ಕಳ್ಳನ ಕಂಡು, ಇಲ್ಲಿಂದ ಮುನಿದು ಬೈದಡೆ, ಅವ ಸಾಯಬಲ್ಲನೆ ? ಭಾವದಲ್ಲಿ ಹೊಲಿದ ಹೊಲಿಗೆಯ ಭೇದವನರಿಯರು, ಕಾಮಿಸಿದಡುಂಟೆ ನಮ್ಮ ಗುಹೇಶ್ವರಲಿಂಗವು ?
--------------
ಅಲ್ಲಮಪ್ರಭುದೇವರು
ನವನಾಳ ಬಿಂದು ಪವನ ಹೃದಯಕಮಲ ಮಧ್ಯದ ದಳವ ಮೆಟ್ಟಿ, ಗಳಿಗೆ ಗಳಿಗೆಗೆ ಚರಿಸುವ ಪರಮಹಂಸನ ಆರಿಗೆಯೂ ಅರಿಯಬಾರದು_ಘಮ್ಮುಘಮ್ಮೆನೆ ಸುತ್ತುವನಲ್ಲದೆ ! ಅದೆಂತೆಂದಡೆ: ``ಪೂರ್ವದಲೇ ಭವೇತ್ ಭಕ್ತಿರಾಗ್ನೇಯಾಂ ಚ ಕ್ಷುಧೈವ ಚ ದಕ್ಷಿಣೇ ಕ್ರೋಧಮುತ್ಪನ್ನಂ ನೈರುತ್ಯಾಂ ಸತ್ಯಮೇವ ಚ ಪಶ್ಚಿಮೇ ತು ಭವೇತ್ ನಿದ್ರಾ ವಾಯವ್ಯಾಂ ಗಮನಸ್ತಥಾ ಉತ್ತರಾಯಾಂ ಧರ್ಮಶೀಲಾವೈಶಾನ್ಯಾಂ ವಿಷಯಸ್ತಥಾ ಅಷ್ಟದಲೇಷು ಮಧ್ಯಸ್ಥಮಾನಚಂದಮಚಲಂ ಶಿವಃ_ಎಂದುದಾಗಿ ಇಂದು ಅಷ್ಟದಳವ ಮೆಟ್ಟಿ ಚರಿಸುವ ಆ ಪರಮಹಂಸನ ತಲೆಗಿಂಬ ಮಾಡಿ ನಿಲಿಸಬಲ್ಲ ನಿಮ್ಮ ಶರಣ ಚನ್ನಬಸವಣ್ಣಂಗೆ ನಾನು ನಮೋ ನಮೋ ಎಂಬೆನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ನೋಟದ ಸುಖ ಉಳ್ಳನ್ನಬರ ಬೆರಸಲೆಲ್ಲಿಯದೊ? ಬೆರಸುವ ಭರ ಉಳ್ಳನ್ನಬರ ತವಕ ಹಿಂಗದು. ನಿಮ್ಮ ನೋಡಿ ಕೂಡಿ ಸೈವರಗಾದ ಸುಖವ, ಏನೆಂದುಪಮಿಸುವೆ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ನೀ ನಾನೆಂಬ ಭಾವವಾರಿಂದಾಯಿತ್ತು ಹೇಳಾ? ನೀನೆಂಬುದು ಅಜ್ಞಾನ, ನಾನೆಂಬುದು ಮಾಯಾಧೀನ. ನೀನೆನ್ನದೆ ನಾನೆನ್ನದೆ ಇಪ್ಪ ಸುಖವ ಭಿನ್ನವಿಲ್ಲದೆ ಅರಿಯಬಲ್ಲಡೆ; ಆ ಸುಖ ನಿಮಗರ್ಪಿತ ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ನಿಷ್ಠೆ ಘಟಿಸಿ ಕ್ರಿಯವಗ್ರಹಿಸಿ ಭಾವಭರಿತವಾಗಿ ಜ್ಞಾನವೆ ಅಂಗವಾಗಿ ಕ್ರಿಯೆ ಪ್ರಾಣವಾಗಿ, ಮತ್ತೆ ಜ್ಞಾನವೆ ಪ್ರಾಣವಾಗಿ ಕ್ರಿಯೆ ಅಂಗವಾಗಿ ಅಂಗಮನಕ್ರಿಭಾವ ಈ ಚತುರ್ವಿಧವೊಂದಾಗಿ, ಮತ್ತೆ ನಿಷ್ಠೆಘಟಿಸಿ ಕ್ರಿಜ್ಞಾನ ಎರಡ ವಿೂರಿನಿಂದ ಭಕ್ತವಿರಕ್ತನ ತೂರ್ಯದ ಕ್ರಿಯೆ ವೇಧಿಸಿ ನಿಂದವನ ನಿಲವು ಎಂತುಟೆಂದರೆ: ಕ್ರಿಯೆಂದರೆ ಇಷ್ಟಲಿಂಗ, ಅಂಗವೆಂದರೆ ಪ್ರಾಣಲಿಂಗ. ಆ ಪ್ರಾಣಲಿಂಗವ ಇಷ್ಟಲಿಂಗದಲ್ಲಡಗಿಸಿಕೊಂಡು ನಿಂದುದು ಎರಡಾಗಿ ಭಕ್ತನೆಂದು ಮಾಹೇಶ್ವರನೆಂದು ನಿಷ್ಠೆಯಲ್ಲಿ ನೆರೆನಿಂದಿರಲು ಮತ್ತಾ ನಿಷ್ಠೆಪಸರಿಸಿ ಆ ಭಕ್ತಮಾಹೇಶ್ವರರು ತಮ್ಮ ಮುನ್ನಿನ ನಿಷ್ಠೆಯ ಬಳಿಗೆ ಬಂದು ಎನ್ನಕ್ರಿ ನಿಮ್ಮಲ್ಲಿಯೇ ಅಡಗಿತ್ತು ಆ ಮುಕ್ತತ್ವದ ಕ್ರಿಯೊಳಗೊಂಡು ದೃಷ್ಟವ ಕಂಡು ಬರ....ಕೇಳಲಾಗಿ, ಎನ್ನ ಇಷ್ಟವಾಸರಿಸಿತ್ತೆಂದು ಹೇಳಲು ಸುಮ್ಮನೆ ಅವನ ಕೂಡೆ ಪ್ರಸಂಗಿಸಲಾಗದು. ಅದೇನು ಕಾರಣವೆಂದರೆ: ಮೊಟ್ಟ ಮೊದಲಲ್ಲಿ ಮೂರು ಭಿನ್ನವ ಕೇಳುವದು ಆ ಮೂರು ಭಿನ್ನಯೆಂತಾದವಯ್ಯಯೆಂದರೆ, ಅದರೊಳಗೈದು ಭಿನ್ನ ಉಂಟು. ಇಂತೀ ಎಂಟರೊಳಗೆ ನಾಲ್ಕು ಲಿಂಗದ ನೆಲೆ ಸಿಕ್ಕಿದರೆ ಅವೆಲ್ಲರಲ್ಲಿ ಬಂಧಿಸೂದು. ಅದಲ್ಲದೆ ನಿಂದರೆ ಮುಂದಣ ನಾಲ್ಕು ಅವನ ಭಾವವ ತೊರೆದು ನೋಡೂದು. ನೋಡಿ ನಿಶ್ಚಯವಾದ ಮತ್ತೆ ಕೂಡೆಯಿಟ್ಟುಕೊಂಡಿರ್ಪ ಸಮಯದಲ್ಲಿ, ಮೂಲಾಗ್ನಿಯ ಜ್ವಾಲೆಯಿಂದ ಮೇಲುವಾಯ್ದು ಒತ್ತಿಲಿರ್ದ ತನ್ನ ತೆತ್ತಿಗರ ನಿಲ್ಲದಂತೆ ನೀಕರಿಸುತ್ತಿರಲು, ಸಲಹಲಾರದ ತಾಯಿ ಶಿಶುವ ಬೈದು ಕೊಲುವಂತೆ ತಮ್ಮ ತ್ಯಾಗದ ಮೈಮರೆದಿರ್ದಾತನ ಎಚ್ಚರ ಮಾಡಿ, ನೀ ಮುನ್ನಲಿಂತಹವನೆಂದೆ ನುಡಿದು ಹೋಗುವ ನಿಷ್ಠೆ ಭಂಡರ ಗುಹೇಶ್ವರ ಸಾಕ್ಷಿಯಾಗಿ ಅಲ್ಲಯ್ಯನೊಲ್ಲ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ನಚ್ಚು ಮಚ್ಚಿನ ಸುಖ ಪರಿಣಾಮ ಸನ್ನಹಿತವಾದ ಬಳಿಕ, ಇನ್ನು ಅನುಭಾವವೆಂಬುದಿಲ್ಲ_ಅಂತಿರಲಿ ನುಡಿಯ ಗಡಣ. ಶಶಿಧರನಟ್ಟಿದ ಬೆಸನ ಮಾಡಬಂದ ಬಳಿಕ, ಹೇಳಿದ ಮಣಿಹವ ಮಾಡುತ್ತಿಹುದಲ್ಲದೆ ಅದು ತನ್ನಲ್ಲಿ ತಾನು ಬೆರಸುವಂದಿಗೆ ಬೆರಸಲಿ; ಆ ದಿನಕ್ಕೆ ಬಂದು ಹೇಳುವೆವು ನಿರ್ಣಯವ. ಗುಹೇಶ್ವರಲಿಂಗದ ಆಣತಿ ಬಪ್ಪನ್ನಬರ ಶಿವಶರಣರೆಲ್ಲರೂ ಸಂಗನಬಸವಣ್ಣ ಸಹಿತ ನಿತ್ಯರಾಗಿ ಇರಿ.
--------------
ಅಲ್ಲಮಪ್ರಭುದೇವರು
ನಾರು ಬೇರಿನ ಕುಟಿಲ ಕಪಟದ ಯೋಗವಲ್ಲಿದು ನಿಲ್ಲಿ ಭೋ. ಕಾಯಸಮಾಧಿ ಕರಣಸಮಾಧಿ_ ಯೋಗವಲ್ಲಿದು ನಿಲ್ಲಿ ಭೋ. ಜೀವಸಮಾಧಿಯೆಂಬುದಲ್ಲ, ನಿಜ ಸಹಜಸಮಾಧಿ ಗುಹೇಶ್ವರಾ !
--------------
ಅಲ್ಲಮಪ್ರಭುದೇವರು
ನಿಧಾನವ ಸಾಧಿಸಿದವರಿಗೆ ವಿಗುರ್ಬಣೆ ಕಾಡುವುದು. ಅದಕ್ಕಂಜಲಾಗದು ಬೆಚ್ಚಲಾಗದು ಬೆದರಲಾಗದು. ಹೊನ್ನು ಹೆಣ್ಣು ಮಣ್ಣು ಈ ತ್ರಿವಿಧಮಾಯವ ತೋರಿ, ಹೆರತೆಗೆಸುವನಾಗಿ ! ಸತಿಪುರುಷಸಂಯೋಗದ ವೇಳೆಯಲ್ಲಿ ಜೀವಧನ ಬಿಟ್ಟುಕೊಂಡು ಮಡಕೆಯನೂಕುವುದು. ಇದಿರ ಜೀವಧನ ಬಿಟ್ಟುಕೊಂಡು ಮನೆಯ ಹಿಂದನುಚ್ಚುವುದು. ಬೆಕ್ಕು ನೆಲಹಿಗೆ ತುಡುಕುವುದು. ನಾಯಿ ಮನೆಯ ಹೊರಗ ಹೊಂಚಿಕೊಂಡಿಹುದು. ಮಗುವು ಮೊಲೆಗೆ ಅಳುವುದ ಕೇಳಿ_ ಇವೆಲ್ಲವ ಸಂತವಿಟ್ಟು ಬಂದು ಪುರುಷನ ನೆರೆವಳು, [ಇದು ಸಜ್ಜನಸ್ತ್ರೀಯ ಲಕ್ಷಣವು ! ಇಂತಪ್ಪ ಆ ತವಕ ನಿನಗಳವಟ್ಟಿತ್ತು ಬಸವಾ ಆ ಗುಹೇಶ್ವರನ ಸಂಯೋಗದ ವೇಳೆಯಲ್ಲಿ !
--------------
ಅಲ್ಲಮಪ್ರಭುದೇವರು
ನಾನೆಂಬ ಅಹಂಕಾರದಲ್ಲಿ ನಾನುಂಡೆನಾದಡೆ, ಎನಗದೆ ಭಂಗ. ಸ್ತುತಿ_ನಿಂದೆಗೆ ನೊಂದೆನಾದಡೆ ಅಂಗೈಯಲ್ಲಿರ್ದ ಗುಹೇಶ್ವರಲಿಂಗಕ್ಕೆ ದೂರ ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ನವಿರೂ ನೆಳಲೂ ಇಲ್ಲದಂದು, ಷಡುಶೈವರಿಲ್ಲದಂದು ಬ್ರಹ್ಮಾಂಡ ಭಾಂಡ ಭಾಂಡಾವಳಿಗಳಿಲ್ಲದಂದು ಪಿಂಡಾಂಡ ಅಂಡ ಪಿಂಡಾವಳಿಗಳಿಲ್ಲದಂದು ಅಖಂಡಿತ ಜ್ಯೋತಿರ್ಮಯಲಿಂಗ ! ಶರಣನ ಲೀಲೆಯಿಂದಾದ ಏಳು ತೆರದ ಗಣ[ಘನ?] ಪಿಂಡವಂ ಕಂಡು ಅಖಂಡಿತನಾಗಿ ಬದುಕಿದೆನಯ್ಯಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ನೆಲೆಗಾಂಬನ್ನಕ್ಕರ ತೊರೆಯ ಅಂಜಿಕೆಯೈಸೆ ? ನೆಲೆಗಂಡ ಬಳಿಕ ತೊರೆ ಬರುದೊರೆಯಲ್ಲದೆ ಅಂಜಿಕೆಯಿಲ್ಲ. ಮನವುಳ್ಳನ್ನಬರ ಕರ್ಮದ ಕೋಟಲೆಯೈಸೆ ? ಮನವಳಿದ ಬಳಿಕ ಕರ್ಮ ನಿಃಕರ್ಮವಲ್ಲದೆ ಬೇಕು ಬೇಡೆಂಬ ಸಂದೇಹವುಂಟೆ, ಗುಹೇಶ್ವರಾ ನಿಮ್ಮ ನಿಜವನರಿದ ಶರಣಂಗೆ ?
--------------
ಅಲ್ಲಮಪ್ರಭುದೇವರು
ನೋಡುವ ಸೂರ್ಯ ಸುರಿವ ಜಲ ಹೊಲೆನೆಲೆ ಶುದ್ಧ ಎಲ್ಲಕ್ಕೂ ಸರಿ. ಅರಿದು ನುಡಿವವಂಗೆ, ಮರೆದು ನುಡಿದು ತಲ್ಲಣಿಸುವವಂಗೆ ಅವನ ಹೃದಯವೆ ಸಾಕ್ಷಿ ! ಗುಹೇಶ್ವರಲಿಂಗಕ್ಕೆ ತಥ್ಯ ಮಿಥ್ಯವಿಲ್ಲ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ನೀರೂ ನೆಳಲೂ ಇಲ್ಲದಂದು, ಷಡುಶೈವ (ದೈವ ?) ರಿಲ್ಲದಂದು. ಬ್ರಹ್ಮಾಂಡ ಭಾಂಡ ಭಾಂಡಾವಳಿಗಳಿಲ್ಲದಂದು, ಪಿಂಡಾಂಡ ಅಂಡ ಅಂಡಾವಳಿಗಳಿಲ್ಲದಂದು, ಅಖಂಡಿತ ಜ್ಯೋತಿರ್ಮಯಲಿಂಗ ಶರಣನ ಲೀಲೆಯಿಂದಾದ ಏಳು ತರದ ಗಣಪಿಂಡವಂ ಕಂಡು ಅಖಂಡಿತನಾಗಿ ಬದುಕಿದೆನಯ್ಯಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ನುಡಿಗೆಡೆಗೊಡದ ಘನವ ಹಿಡಿದು ಒಡಬಂದಿಯಾಳು. ಎಡೆಯಿಲ್ಲದ ಪರಿಪೂರ್ಣದೊಳಗೆ ನಡೆನುಡಿಗೆಟ್ಟಳು. ತನ್ನ ನಿಲುಕಡೆಯ ನಿಜವ ತಾನರಿಯದಂತೆ ಎನ್ನಿಂದ ಕೇಳಿ ಸ್ವಯವಾದಳು. ಗುಹೇಶ್ವರಲಿಂಗ ಸಾಕ್ಷಿಯಾಗಿ, ಮಹಾದೇವಿಯಕ್ಕನ ನಿಲವ ಕೊಂಡಾಡುವುದಕ್ಕೆ ತೆರಹಿಲ್ಲ ಕಾಣಾ ಮಡಿವಾಳಯ್ಯ.
--------------
ಅಲ್ಲಮಪ್ರಭುದೇವರು
ನೀರೊಳಗೆ ಚಿತ್ರವ ಬರೆದಡೆ ಅದಾರ ಕಣ್ಣಿಗೆ ಕಾಣಬಹುದು ? ಒಡಲು ಬರಿಯ ಬಯಲು ಬೊಮ್ಮವ ನುಡಿವಲ್ಲಿ ಆ ಬೊಮ್ಮದ ಮಾತದೆಲ್ಲಿ ಬಿದ್ದಿತ್ತು ? ಅದು ಸಾಕಾರದೊಡಲುಗೊಂಡು ನುಡಿಯಿತ್ತು. ಆ ಉಭಯವನರಿದು ಅಡಗುವನ್ನಕ್ಕ ನಮ್ಮ ಗುಹೇಶ್ವರಲಿಂಗವೆಂಬ ಕುರುಹು ಬೇಕು ಕಾಣಾ ಎಲೆ ಅಂಬಿಗರ Zõ್ಞಡಯ್ಯ.
--------------
ಅಲ್ಲಮಪ್ರಭುದೇವರು
ನೇಮಸ್ಥ ಲಿಂಗವನರಿಯ, ಸೂಳೆಯ ಮಗ ತಂದೆಯನರಿಯ. ಪಿತೃಕಾರ್ಯ ಮಹಳವ ಮಾಡುವಲ್ಲಿ ಆರ ಹೆಸರ ಹೇಳಿ ಮಾಡುವನಯ್ಯಾ ? ಗುಹೇಶ್ವರಾ, ನಿಮ್ಮನರಿಯದವರನು ಉಭಯಭ್ರಷ್ಟರೆಂಬೆ.
--------------
ಅಲ್ಲಮಪ್ರಭುದೇವರು

ಇನ್ನಷ್ಟು ...