ಬಂಗಾರವನೊರೆದು ಬಣ್ಣವ ಕಾಣಬೇಕಲ್ಲದೆ, ಬಣ್ಣವನೊರೆದು ಬಂಗಾರದ ಇರವನರಿಯಬಹುದೆ ? ಜೀವವರಿದು ಜ್ಞಾನವ ಕಾಣಬೇಕಲ್ಲದೆ ಜೀವವಳಿದು ಜ್ಞಾನಕ್ಕೆ ಉಳಿವುಂಟೆ ? ಅದು ಜ್ಯೋತಿಯ ಮೇಲಣ ತಮವದೆ, ಕೆಳಗೆ ಬೆಳಗು, ತುದಿಯಲ್ಲಿ ಸಮವದೆ ತಿಳಿದು ನೋಡಿ. ಆ ಪರಿಯ ಇರವು ಜೀವಪರಮನ ಕಲೆ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗಾ.