ಹೂವ ಕೊಯ್ಯುವರಲ್ಲದೆ, ಹೂವಿನ ಗಂಧವ ಕೊಯ್ದವರುಂಟೆ ಅಯ್ಯಾ? ಮಾತನಾಡುವರಲ್ಲದೆ, ಮಾತಿನ ಭೇದದ ವಾಸನೆಯ ಕಂಡವರುಂಟೆ ಅಯ್ಯಾ? ಇದು ನೀತಿಯ ಒದಗು, ಕ್ರೀಯ ನಿಹಿತವಾಗಿ ಮಾಡುವಲ್ಲಿ ಭಾವಶುದ್ಧವಾಗಿರಬೇಕು. ಮಾತನರಿದಾಡುವಲ್ಲಿ, ಮಾತಿನ ರೀತಿಗೆ ತಾ ಒದಗು ನಿಹಿತವಾಗಿರಬೇಕು. ಅದು ಕೂಟಸ್ಥ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಾ.