ಸ ಪದದಿಂದ ಪ್ರಾರಂಭವಾಗುವ ವಚನಗಳು:
ಸಾಗರದೊಳಗಣ ಕಿಚ್ಚಿನ ಸಾಕಾರದಂತೆ,ಸಸಿಯೊಳಗಣ ಫಲಪುಷ್ಪ ರುಚಿಯ ಪರಿಮಳದಂತೆ,ಮನವ ಮರೆಯ ಮಾತುನೆನಹಿನಲ್ಲಿ ಅರಿದು, ನಾಲಗೆಯ ನುಡಿವಾಗಲಲ್ಲದೆಕಾಣಬಾರದು, ಕೇಳಬಾರದುಒಂದಂಗದೊಳಗಡಗಿದ ನೂರೊಂದರ ಪರಿ,ರಾಮನಾಥ.
ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ.ಸತಿಪತಿಗಳೊಂದಾಗದವನ ಭಕ್ತಿಅಮೃತದೊಳು ವಿಷ ಬೆರೆದಂತೆ ಕಾಣಾ! ರಾಮನಾಥ.
ಸಾಸಿವೆಯಷ್ಟು ಭಕ್ತಿಯಳ್ಳನ್ನಕ್ಕವೇಶಿಯ ಮುಟ್ಟಿದಡೆಹೊಲೆಯರ ಮನೆಯ ಮುರುಹ ಹೊರಗಿರಿಸಿದಡೆಹಂದಿ ಬಂದು ಮೂಸಿ ಮೇದಂತೆ ಕಾಣಾ! ರಾಮನಾಥ.
ಸೊಡರು ಕೆಟ್ಟಡೆ ದೃಷ್ಟಿಯಡಗಿಪ್ಪ ಭೇದವನುಒಡಲು ಕೆಟ್ಟಡೆ ಜೀವವಾವೆಡೆಯಲಡಗೂದು?ಈ ಮರೆಯೆಡೆಯಣ ಭೇದವ ಭೇದಿಸಬಲ್ಲಡೆಪೊಡವಿಗೆ ಗುರುವಪ್ಪನೆಂದುಮುಡಿಗೆಯನಿಕ್ಕಿದೆ ಪರಸಮಯಕ್ಕೆಂದು, ರಾಮನಾಥ.
ಸತಿಯರ ಸಂಗವನು ಅತಿಶಯ ಗ್ರಾಸವನುಪೃಥ್ವಿಗೀಶ್ವರನ ಪೂಜೆಯನುಅರಿವುಳ್ಳಡೆ ಹೆರರ ಕೈಯಿಂದ ಮಾಡಿಸುವರೆ!
ಸರ್ಪನೂ ಕೂರ್ಮನೂ ದಿಕ್ಕರಿಗೆಳೆಂಟೂಭೂಮಿಯ ಹೊತ್ತಿರ್ದಪರೆಂದುಅನಿಶಾ ಹೊತ್ತಿಪ್ಪವರಿಗೆ ಅತ್ತಲಾಧಾರ ಇತ್ತಲಾಧಾರ.ಉತ್ತರಗುಡುವವರಿಗೆ ಇಕ್ಕುವೆ ಮುಂಡಿಗೆಯ.ಎತ್ತುವರುಳ್ಳಡೆ ತೋರಿರೈ, ರಾಮನಾಥ.
ಸತ್ಯದ ನುಡಿ ತೀರ್ಥ, ಭಕ್ತಿಯ ನಡೆ ತೀರ್ಥ,ಮುಕ್ತಿಯ ಪ್ರಸಂಗ ಉಳ್ಳಡೆ ತೀರ್ಥ,ಹರಿವ ನದಿ ಎತ್ತಣಾ ತೀರ್ಥ! ರಾಮನಾಥ.
ಸಣ್ಣ ನನೆಯೊಳಗಣ ಪರಿಮಳವಹೊರಸೂಸಿ ಇದಿರಿಂಗೆ ಅರುಹಿಸಬಲ್ಲುದೆ ವಾಯು?ಕೊಡಗೂಸಿನೊಳಗಣ ಮೊಲೆ ಮುಡಿಯಹಡೆದ ತಾಯಿ-ತಂದೆಗಳೆಂದಡೆಕಾಣಿಸಿಕೊಡಬಲ್ಲರೆ ಕಾಬವರ ಕಣ್ಣಿಗೆ?ಪಕ್ವಕ್ಕಲ್ಲದೆ ಪರಿಣಾಮ ಕಾಣಿಸದು ಕಾಣಾ!ರಾಮನಾಥ.
ಸ್ವಸ್ತಿಕಾಸನದಲ್ಲಿದ್ದು ಅತ್ತಿತ್ತ ಚಲಿಸದೆನೆಟ್ಟೆಲುವ ನೆಟ್ಟನೆ ಮಾಡಿ,ಅಧೋವಾಯುವನೂಧ್ರ್ವಮುಖಕ್ಕೆ ತಂದು,ಕಂಠ ಸಂಕೋಚದಿಂದ ಊಧ್ರ್ವವಾಯುವ ನಿಲ್ಲೆಂದು ನಿಲಿಸಿ,ಮನವ ತೊಡರಿಸಿ,ಉನ್ಮನಿಯ ಸ್ಥಾನದಲ್ಲಿ ಬಂಧವನವಂ ಮಾಡಿ,ಅಂತರ್ಬಾಹ್ಯ ವ್ಯಾಪಾರವಳಿದು ನಿಂದುದೆ ಯೋಗ,ರಾಮನಾಥ.
ಸರ್ವಜ್ಞಾನಿಗಳಾಗಿ ಅಚ್ಚುಗ ಬಡುವಡೆ,ಹಬ್ಬಿದ ಪಾಪದ ಫಲ ಉಂಬಡೆ,ಒಬ್ಬಳ್ಳವನೆ ಬಿತ್ತಿ ಆ ಒಬ್ಬಳ್ಳವನೆ ಬೆಳೆವಡೆ,ಕಬ್ಬುನ ಹುಳಿವಡೆ ಇನ್ನೇವೆ, ರಾಮನಾಥ.