ಚತುರ್ವಿಂಶತಿತತ್ವಕೂಡಿ ಶರೀರ ಹೇಗಾಯಿತ್ತೆಂದಡೆ,
ಹೇಳುವೆ ಕೇಳಿರಣ್ಣಾ :
ಆ ಆಕಾಶ ಆಕಾಶವ ಬೆರಸಲು ಜ್ಞಾನ ಹುಟ್ಟಿತ್ತು.
ಆ ಆಕಾಶ ವಾಯುವ ಬೆರಸಲು ಮನ ಹುಟ್ಟಿತ್ತು.
ಆಕಾಶ ಅಗ್ನಿಯ ಬೆರಸಲು ಅಹಂಕಾರ ಹುಟ್ಟಿತ್ತು.
ಆಕಾಶ ಅಪ್ಪುವ ಬೆರಸಲು ಬುದ್ಧಿ ಹುಟ್ಟಿತ್ತು.
ಆಕಾಶ ಪೃಥ್ವಿಯ ಬೆರಸಲು ಚಿತ್ತ ಹುಟ್ಟಿತ್ತು.
ಇಂತಿವು ಕರಣಚತುಷ್ಟಯಂಗಳುತ್ಪತ್ತಿಯೆಂದು ಹೇಳಲ್ಪಟ್ಟಿತ್ತಯ್ಯ
ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.