ಭಕ್ತಂಗೆ ಮಾಹೇಶ್ವರಸ್ಥಲ, ಪ್ರಸಾದಿಗೆ ಭಕ್ತಸ್ಥಲ.
ಮಾಹೇಶ್ವರಂಗೆ ಪ್ರಾಣಲಿಂಗಿಸ್ಥಲ, ಶರಣಂಗೆ ಪ್ರಸಾದಿಸ್ಥಲ.
ಪ್ರಾಣಲಿಂಗಿಗೆ ಐಕ್ಯಸ್ಥಲ, ಐಕ್ಯಂಗೆ ಭಕ್ತನ ವಿಶ್ವಾಸವನರಿತು
ಮಾಹೇಶ್ವರನ ಪ್ರಸನ್ನತೆಯ ಕಂಡು
ಪ್ರಸಾದಿಯ ಪರಿಪೂರ್ಣತ್ವವನರಿದು
ಪ್ರಾಣಲಿಂಗಿಯ ಉಭಯವ ತಿಳಿದು ನಿಂದುದ ಕಂಡು,
ಇಂತೀ ಚತುಷ್ಟಯ ಭಾವ ಏಕವಾಗಿ
ಶರಣನ ಸನ್ಮತದಲ್ಲಿ ಅಡಗಿ, ಒಡಗೂಡಿದಲ್ಲಿ
ಐಕ್ಯಂಗೆ ಬೀಜನಾಮ ನಿರ್ಲೇಪ, ಇಂತೀ ಸ್ಥಲಭಾವ.
ಪಶುವಿನ ಪಿಸಿತದ ಕ್ಷೀರವ, ಶಿಶುವಿನ ಒಲವರದಿಂದ ತೆಗೆವಂತೆ
ಆ ಕ್ಷೀರದ ಘೃತವ, ನಾನಾ ಭೇದಂಗಳಿಂದ ವಿಭೇದಿಸಿ ಕಾಬಂತೆ
ಭಕ್ತಂಗೆ ವಿಶ್ವಾಸ, ಮಾಹೇಶ್ವರಂಗೆ ಫಲ, ಪ್ರಸಾದಿಗೆ ನಿಷೆ*,
ಪ್ರಾಣಲಿಂಗಿಗೆ ಮೂರ್ತಿಧ್ಯಾನ, ಶರಣಂಗೆ ನಿಬ್ಬೆರಗು,
ಐಕ್ಯಂಗೆ ಈ ಐದು ಲೇಪವಾದ ನಿರ್ನಾಮ.
ಇಂತೀ ಷಟ್ಸ್ಥಲವ ನೆಮ್ಮಿ ಕಾಬುದು ಒಂದೆ ವಿಶ್ವಾಸ.
ಸಂಗನಬಸವಣ್ಣಪ್ರಿಯ ಬ್ರಹ್ಮೇಶ್ವರಲಿಂಗವನು
ಅರಿದವನಿಗಲ್ಲದೆ ಸಾಧ್ಯವಲ್ಲ ನೋಡಾ.