ದಾರಿಯಲ್ಲಿ ಬೀದಿಯಲ್ಲಿ ಮನೆಗಳಲ್ಲಿ
ಹೊನ್ನು ಹೆಣ್ಣು ಮಣ್ಣಿನ ಮೇಲಣ ಕಾಮವಿಕಾರ ತೋರಿದಡೆ
ಅದಕ್ಕೇನೂ ಶಂಕೆಯಿಲ್ಲ.
ಅದೇನು ಕಾರಣವೆಂದಡೆ:
ಚಿತ್ರದ ಹುಲಿ, ಕನಸಿನ ಹಾವು. ಜಲಮಂಡುಕ ಕಚ್ಚಿ ಸತ್ತವರುಂಟೆ?
ಇದು ಕಾರಣ ಜಾಗ್ರಸ್ವಪ್ನಸುಷುಪ್ತಿಗಳಲ್ಲಿ ಕಾಮವಿಕಾರ ತೋರಿತ್ತೆಂದು
ಶಸ್ತ್ರ ಸಮಾಧಿ ನೀರು ನೇಣು ವಿಷ ಔಷಧಿಗಳಿಂದ ಘಟವ ಬಿಟ್ಟಡೆ,
ಆತ ಗುರುದ್ರೋಹಿ, ಲಿಂಗದ್ರೋಹಿ, ಜಂಗಮದ್ರೋಹಿ.
ಇದು ಭಕ್ತರಾಚರಣೆ, ವಿರಕ್ತನಿರ್ಣಯ.
ಇಂತಪ್ಪವರಿಗೆ ಸದ್ಯೋಜಾತಲಿಂಗವುಂಟಿಲ್ಲವೆಂದೆನು.