ಅಥವಾ
(6) (4) (1) (0) (1) (0) (0) (0) (8) (1) (0) (0) (1) (0) ಅಂ (1) ಅಃ (1) (10) (0) (0) (0) (0) (0) (0) (0) (0) (0) (0) (0) (0) (0) (0) (2) (0) (1) (0) (6) (2) (0) (2) (3) (7) (0) (0) (0) (2) (1) (5) (0) (2) (0) (0)

ಅಂ ಪದದಿಂದ ಪ್ರಾರಂಭವಾಗುವ ವಚನಗಳು:

ಅಂಗದ ಮೇಲಕ್ಕೆ ಬಂದ ಆಚಾರಲಿಂಗದ ಹೊಲಬನರಿಯದೆ ಕೈಲಾಸದ ಮೇಲಿಪ್ಪ ಬಾಲಕೋಟಿಸೂರ್ಯಪ್ರಕಾಶವನುಳ್ಳ ಶಿವನನೊಲಿಸಬೇಕೆಂದು ಒಂದು ವಸ್ತುವ ಎರಡಿಟ್ಟು ನುಡಿವ ಮಂದಮತಿಗಳು ನೀವು ಕೇಳಿರೇ. ಮಹಾಮೇರುಪರ್ವತವೇ ಶರಣ. ಆ ಶರಣನ ಸ್ಥೂಲತನುವೇ ರಜತಾದ್ರಿ. ಸೂಕ್ಷ ್ಮತನುವೇ ಹೇಮಾದ್ರಿ. ಕಾರಣತನುವೇ ಮಂದರಾದ್ರಿ. ಈ ಮೂರುಪರ್ವತಂಗಳ ಅರಮನೆಗಳಲ್ಲಿ ನೆಲಸಿಪ್ಪ ಶಿವನಾರೆಂದರೆ ನಿರಾಕಾರ ಶೂನ್ಯಬ್ರಹ್ಮವೇ. ಶರಣನ ಕುರಿತು ಪಂಚಸಾದಾಖ್ಯಂಗಳನೊಳಕೊಂಡು ಸಾಕಾರವಾಗಿ ಬಂದ ಇಷ್ಟಲಿಂಗವೇ[ಆ] ಶಿವನು. ಗ್ರಂಥ : `ಜ್ವಲತ್ ಕಾಲಾನಲಾಭಾಸಾ ತಟಿತ್ ಕೋಟಿ ಸಮಪ್ರಭಾ| ತಸ್ಯೋಧ್ರ್ವಾ ಚ ಶಿಖಾ ಸೂಕ್ಷ ್ಮ ಚಿದ್ರೂಪಾ ಪರಮಾ ಕಲಾ| ಏವಂ ವೇದ ಕಲಾ ದೇವಿ ಸದ್ಗುರೋಶ್ಯಿಷ್ಯಮಸ್ತಕೇ ಹಸ್ತಾಬ್ಜಮಥನಾದ್ ಗ್ರಾಹ್ಯಾ ತಸ್ಯ ಭಾವ ಕರೋದಿತಾ ವಪುರೇವಂ ಸಮುತ್ಪನ್ನಂ ತತ್ ಪ್ರಾಣಂ ಮಿಶ್ರಿತಂ ಭವೇತ್ ಯಥಾ ಗುರುಕರೇ ಜಾತಾ ಲಿಂಗ ಭಕ್ತಿದ್ರ್ವಿಭೇದಕಾ' ಇಂತೆಂದುದಾಗಿ ಆ ನಿರಾಕಾರಬ್ರಹ್ಮನೇ ಶಿವನು. ಆ ಶಿವನ ಧರಿಸಿಪ್ಪ ಶರಣನ ಕಾಯವೇ ಕೈಲಾಸ. ಇದಲ್ಲದೆ ಮತ್ತೊಂದು ಕೈಲಾಸ ಬೇರೊಬ್ಬ ಶಿವನುಂಟೆಂದು ಭ್ರಮೆಗೊಂಡು ಮನವನೆರಡು ಮಾಡಿಕೊಂಬುದು ಅಜ್ಞಾನ ನೋಡಾ. ಉರದ ಮಧ್ಯದಲ್ಲಿ ಒರಗಿಪ್ಪ ಗಂಡನಂ ಬಿಟ್ಟು ಇನ್ನು ನೆರೆಮನೆಯ ಗಂಡರಿಗೆ ಮನವನಿಕ್ಕುವ ಹಾದರಗಿತ್ತಿಗೆ ಪತಿಭಕ್ತಿಯೆಲ್ಲಿಯದೋ?. ಶ್ರೀಗುರು ಕರುಣಿಸಿಕೊಟ್ಟ ಕ್ರಿಯಾಲಿಂಗವನು ಅರ್ಚನೆ ಪೂಜನೆಯಿಂದ ಅರ್ಪಿತಾವಧಾನದಿಂದ ಧ್ಯಾನ ಧಾರಣದಿಂದ ಸಮತೆ ಸಮಾಧಾನದಿಂದ ಧ್ಯಾನ ಮೌನ ಉಪಾವಸ್ಥೆಯಿಂದ ಮುನಿಸು ಮೂದಲೆಯಿಂದ ಕಾಮಿಸಿ ಕಂಬನಿದುಂಬಿ ಕರಸ್ಥಲದಲಿಪ್ಪ ಪ್ರಾಣೇಶ್ವರನ ಶ್ರೀ ಚರಣಕ್ಕೆ ಲಲಾಟ ಪೂಜೆಯ ಮಾಡಿ ಒಲಿಸಿ ಒಡಗೂಡಿ ನಿಜಮುಕ್ತಿವಡೆಯದೆ ಆಕಾರವಂ ಮರೆದು ನಿರಾಕಾರವಂ ಕೂಡಿಹೆನೆಂಬ ಲೋಕದ ಕಾಕುಮಾನವರೆಲ್ಲಾ ಕಾಲ ಕಾಮರಿಗೆ ತುತ್ತಾಗಿ ಕಾಲಾಗ್ನಿರುದ್ರನ ಹೊಡೆಗಿಚ್ಚಿಗೊಳಗಾದರಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ