ಮೂರಂಗುಲದಲ್ಲಿ ಅಳೆದು, ಐದಂಗುಲದಲ್ಲಿ ಪ್ರಮಾಣಿಸಿ
ಆರಂಗುಲದಲ್ಲಿ ವಟ್ಟಕ್ಕೆ ಶುದ್ಧವಾಯಿತ್ತು.
ಎಂಟರಳತೆ ಹದಿನಾರರ ಚದುರಸ
ಮೂವತ್ತೆರಡರ ಮಧ್ಯದಲ್ಲಿ ಹಸ್ತಕಂಬಿಯನಿಕ್ಕಿ
ಮೂರರಲ್ಲಿ ಭಾಗಿಸಲಾಗಿ, ಎರಡು ಒಳಗು ನಿಂದಿತ್ತು.
ಒಂದು ಹೊರಗಾದ ಕೈಸಾಲೆಯಾಯಿತ್ತು.
ಈ ಕೆಲಸವ ಹೊರಗೆ ಬಾಚಿಯಲ್ಲಿ ಸವೆದೆ,
ಒಳಗೆ ಉಳಿಯಲ್ಲಿ ಸವೆದೆ. ಇಂತೀ ತೆರನ ತಿಳಿದಡೆ
ಬಸವಣ್ಣಪ್ರಿಯ ವಿಶ್ವಕರ್ಮಟಕ್ಕೆ
ಕಾಳಿಕಾವಿಮಲ ರಾಜೇಶ್ವರಲಿಂಗವಲ್ಲದಿಲ್ಲಾ ಎಂದೆ.