ಅಥವಾ
(4) (1) (3) (1) (0) (0) (0) (0) (1) (0) (0) (0) (1) (0) ಅಂ (2) ಅಃ (2) (1) (0) (5) (1) (0) (0) (0) (1) (0) (0) (0) (0) (0) (0) (0) (1) (0) (1) (1) (4) (2) (0) (1) (1) (0) (0) (0) (0) (5) (1) (2) (0) (2) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಪಾದಪೂಜೆಯ ಮಾಡಿ ಪಾದತೀರ್ಥವ ಪಡೆದುಕೊಂಬ ಕ್ರಮವು ಎಂತೆಂದಡೆ : 'ದೇಶಿಕಸ್ಯ ಪದಾಂಗುಷ್ಠೇ ಲಿಖಿತಾ ಪ್ರಣವಂ ತತಃ | ಪಾದಪೂಜಾವಿಧಿಂ ಕೃತ್ವಾ ವಿಶೇಷಂ ಶೃಣು ಪಾರ್ವತಿ ||' ಎಂದುದಾಗಿ, ಭಯಭಕ್ತಿ ಕಿಂಕುರ್ವಾಣದಿಂದೆ ಜಂಗಮಕ್ಕೆ ಪಾದಾರ್ಚನೆಯಂ ಮಾಡಿ ಗದ್ದುಗೆಯನಿಕ್ಕಿ ಮೂರ್ತವ ಮಾಡಿಸಿ ತನ್ನ ಕರಕಮಲವಂ ಮುಗಿದು ಅಯ್ಯಾ, ಹಸಾದ ಮಹಾಪ್ರಸಾದ ಪೂರ್ವಜನ್ಮ ನಿವಾರಣಂ ದೀಕ್ಷಾಗುರು ಶಿಕ್ಷಾಗುರು ಮೋಕ್ಷಗುರು ಗುರುವಿನಗುರು ಪರಮಗುರು ಪರಮಾರಾಧ್ಯ ಶ್ರೀಪಾದಗಳಿಗೆ ಶರಣು ಶರಣಾರ್ಥಿಯೆಂದು 'ಪ್ರಣಮ್ಯ ದಂಡವದ್ಭೂಮೌ ಇಷ್ಟಮಂತ್ರಂ [ಸದಾಜಪೇತ್] ಶ್ರೀ ಗುರೋಃ ಪಾದಪದ್ಮಂ ಚ ಗಂಧಪುಷ್ಪಾsಕ್ಷತಾದಿಭಿಃ ||' ಎಂದುದಾಗಿ, ದೀರ್ಘದಂಡ ನಮಸ್ಕಾರವಂ ಮಾಡಿ ಪಾದಪೂಜೆಗೆ ಅಪ್ಪಣೆಯಂ ತಕ್ಕೊಂಡು ಮೂರ್ತವಂ ಮಾಡಿ ಲಿಂಗವ ನಿರೀಕ್ಷಿಸಿ ತನ್ನ ಅಂಗೈಯಲ್ಲಿ ಓಂಕಾರ ಪ್ರಣವಮಂ ವಿಭೂತಿಯಲ್ಲಿ ಬರೆದು ಆ ಜಂಗಮದ ಎರಡು ಪಾದಗಳ ತನ್ನ ಕರಕಮಲದಲ್ಲಿ ಲಿಂಗೋಪಾದಿಯಲ್ಲಿ ಪಿಡಿದುಕೊಂಡು ಎರಡು ಅಂಗುಷ್ಠಗಳಲ್ಲಿ ಪ್ರಣವಮಂ ಬರೆದು, ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಿ ನಮಸ್ಕರಿಸಿ, ಆ ಪೂಜೆಯಂ ಇಳುಹಿ ಬಟ್ಟಲೊಳಗೆ ಪ್ರಣವಮಂ ಬರೆದು ಬ್ರಹ್ಮರಂಧ್ರದಲ್ಲಿರ್ದ ಸತ್ಯೋದಕವೆಂದು ಭಾವಿಸಿ, ಆ ಉದಕದ ಬಲದಂಗುಷ್ಠದ ಮೇಲೆ ನೀಡುವಾಗ ಆಱುವೇಳೆ ಷಡಕ್ಷರವ ನುಡಿದು ಇಷ್ಟಲಿಂಗವೆಂದು ಭಾವಿಸಿ, ಎಡದಂಗುಷ್ಠದ ಮೇಲೆ ನೀಡುವಾಗ ಐದುವೇಳೆ ಪಂಚಾಕ್ಷರವ ನುಡಿದು ಪ್ರಾಣಲಿಂಗವೆಂದು ಭಾವಿಸಿ, ಎರಡಂಗುಷ್ಠದ ಮಧ್ಯದಲ್ಲಿ ಉದಕವ ನೀಡುವಾಗ ಒಂದು ವೇಳೆ 'ಓಂ ಬಸವಲಿಂಗಾಯನಮಃ' ಎಂದು ಸ್ಮರಿಸಿ, ಭಾವಲಿಂಗವೆಂದು ಭಾವಿಸಿ ದ್ರವನೆಲ್ಲವ ತೆಗೆದು ಮತ್ತೆ ಪೂಜೆಯ ಮಾಡಿ ನಮಸ್ಕರಿಸಿ ಶರಣಾರ್ಥಿಯೆಂದು ಆ ಜಂಗಮವು ಸಲ್ಲಿಸಿದ ಮೇಲೆ ತಾನು ಪಾದತೀರ್ಥವ ಸಲ್ಲಿಸುವುದು. ಪಂಚಾಂಗುಲಿ ಪಂಚಾಕ್ಷರಿಯಿಂದಲಿ ಲಿಂಗಕರ್ಪಿಸಿ ಆ ಪಂಚಾಂಗುಲಿಯುತ ಜಿಹ್ವೆಯಿಂದ ಸ್ವೀಕರಿಸುವುದು ಗುರುಪಾದೋದಕ. ಲಿಂಗವನೆತ್ತಿ ಅಂಗೈಯಲ್ಲಿರ್ದ ತೀರ್ಥವ ಸಲ್ಲಿಸಿದುದು ಲಿಂಗಪಾದೋದಕ. ಬಟ್ಟಲೊಳಗಿರ್ದ ತೀರ್ಥವ ಸಲಿಸಿದುದು ಜಂಗಮಪಾದೋದಕ. ಈ ತ್ರಿವಿಧ ಪಾದೋದಕ ಒಂದೇ ಎಂದರಿವುದು. ಹೀಗೆ ಕ್ರಮವರಿದು ಸಲಿಸುವರ್ಗೆ ಮುಕ್ತಿಯಾಗುವುದಕ್ಕೆ ತಡವಿಲ್ಲವೆಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಪ್ರಸಾದಿ ಪ್ರಸಾದಿಗಳೆಂದು ನುಡಿದುಕೊಂಡು ನಡೆಯಬಹುದಲ್ಲದೆ ಪ್ರಸಾದವ ಕೊಂಬ ಭೇದವನರಿಯರು. ಕರುಣಿಸು ಮದ್ಗುರವೆ, ಕೇಳಯ್ಯ ಮಗನೆ : ಗುರುವಿನಲ್ಲಿ ತನುವಂಚನೆಯಿಲ್ಲದೆ ಕೊಂಬುದು ಶುದ್ಧಪ್ರಸಾದ ; ಲಿಂಗದಲ್ಲಿ ಮನವಂಚನೆಯಿಲ್ಲದೆ ಕೊಂಬುದು ಸಿದ್ಧಪ್ರಸಾದ ; ಜಂಗಮದಲ್ಲಿ ಧನವಂಚನೆಯಿಲ್ಲದೆ ಕೊಂಬುದು ಪ್ರಸಿದ್ಧಪ್ರಸಾದ. ಈ ತ್ರಿವಿಧಲಿಂಗದಲ್ಲಿ ತ್ರಿವಿಧ ವಂಚನೆಯಿಲ್ಲದೆ ಅವರ ಕರುಣಪ್ರಸಾದವ ಕೊಂಬ ಪ್ರಸಾದಕಾಯಕ್ಕೆ ಪ್ರಳಯಬಾಧೆಗಳು ಬಾಧಿಸಲಮ್ಮವು ; ಕರಿ ಉರಗ ವೃಶ್ಚಿಕ-ಇವು ಹೊದ್ದಲಮ್ಮವು ; ಇರುವೆ ಕೆಂಡವು ಹೊದ್ದಲಮ್ಮವು. ಹೊದ್ದುವ ಪರಿ ಎಂತೆಂದೊಡೆ : ಲಿಂಗದಲ್ಲಿ ನಿಷೆ*ಯಿಲ್ಲ ; ಜಂಗಮದಲ್ಲಿ ಪ್ರೇಮ-ಭಕ್ತಿಯಿಲ್ಲ ; ವಿಭೂತಿ - ರುದ್ರಾಕ್ಷೆಯಲ್ಲಿ ವಿಶ್ವಾಸವಿಲ್ಲ ; ಶಿವಾಚಾರದಲ್ಲಿ ದೃಢವಿಲ್ಲದ ಕಾರಣ ತಾಪತ್ರಯಂಗಳು ಕಾಡುವವು ಎಂದಿರಿ ಸ್ವಾಮಿ, 'ಮತ್ತೆ ನಂಬುಗೆಯುಳ್ಳ ಪ್ರಸಾದಿಗಳಿಗೆ ವ್ಯಾಧಿಯೇಕೆ ಕಾಡುವವು ? ಸದ್ಗುರುಮೂರ್ತಿಯೆ ಕರುಣಿಸು ಎನ್ನ ತಂದೆ'. ಕೇಳೈ ಮಗನೆ : ಭಕ್ತಗಣಂಗಳಿಗೆ ವಂದಿಸಿ ನಿಂದಿಸಿ ಹಾಸ್ಯ ದೂಷಣವ ಮಾಡಿದಡೆ ಅದೇ ವ್ಯಾಧಿರೂಪಾಗಿ ಕಾಡುವದು ; ತಲೆಶೂಲೆ ಹೊಟ್ಟೆಶೂಲೆ ನಾನಾತರದ ಬೇನೆಯಾಗಿ ಕಾಡುವವು. ಆ ಭಕ್ತಗಣಂಗಳಿಗೆ ತಾನು ನಿಂದಿಸಿದುದ ತಿಳಿದು, ಅವರಿಗೆ ತ್ರಿಕರಣಶುದ್ಧವಾಗಿ ಸೇವೆಯ ಮಾಡಿ, ಅವರ ಕರುಣವ ಹಡೆದಡೆ ಆಗ ಅವರಿಗೆ ವ್ಯಾಧಿ ಬಿಟ್ಟು ಹೋಗುವವು ಎಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ