ಅನಾದಿಯಾಗಿ ಪಶು ಪಾಶ ಮಲ ಮಯಾಕರ್ಮಗಳುಂಟಾದರೆ, ಈ ಜಗವನೊಬ್ಬರೂ ಸೃಷ್ಟಿಮಾಡಿದ ಕರ್ತುವಲ್ಲ. ಎಂದೆಂದೂ ಜಗವಿದ್ದಿತ್ತು ನಿತ್ಯವೆನ್ನು. ಎಂದೆಂದೂ ಜಗವಿದ್ದಿತ್ತೆಂಬೆಯಾದರೆ, ಶಿವನ ಸೃಷ್ಟಿ, ಸ್ಥಿತಿ, ಸಂಹಾರ, ಸ್ಥಿರೋಭಾವ, ಅನುಗ್ರಹವೆಂಬ ಪಂಚಕೃತ್ಯಗಳು ಹುಸಿಯೆಂದೆನ್ನು. ಶಿವನಿಗೆ ಸೃಷ್ಟಿ ಸ್ಥಿತಿ ಸಂಹಾರಾರ್ಥವುಂಟಾದರೆ, ಈ ಜಗತ್ತೆಲ್ಲವೂ ಶಿವನ ನೆನಹು ಮಾತ್ರದಿಂದ ಹುಟ್ಟಿತ್ತಲ್ಲದೆ, ಎಂದೆಂದೂ ಉಂಟೆಂಬುದು ಶೈವ ಪಶುಮತವಲ್ಲದೆ, ವೀರಶೈವರ ಮತವಲ್ಲ. ವೀರಶೈವರ ಮತವೆಂತೆಂದಡೆ: ಘನ ಗಂಬ್ಥೀರ ವಾರಿದ್ಥಿಯೊಳಗೆ ಫೇನತರಂಗ ಬುದ್ಬುದ ಶೀಕರಾದಿಗಳು ತೋರಿದಡೆ, ಆ ಸಾಗರ ಹೊರಗಾಗಿ ತೋರಬಲ್ಲವೇ? ಆ ಪರಶಿವಸಾಗರದಲ್ಲಿ ತೃಣಾದಿ ಬ್ರಹ್ಮಾಂತವಾದ ದೇಹಿಗಳು ಉತ್ಪತ್ತಿಯಾಗಿ ಮತ್ತಲ್ಲಿಯೇ ಅಡಗುತ್ತಿಪ್ಪರು ನೋಡಾ. ಇದು ಕಾರಣ, ಲಿಂಗನಿರ್ಮಿತದಿಂದ ಜಗತ್ತಾಯಿತೆಂದೆ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ. |