ಅಥವಾ

ಪ್ರಾರಂಭ ಪದದ ಹುಡುಕು

(2486) (1140) (579) (82) (281) (102) (4) (0) (707) (126) (71) (360) (75) (2) ಅಂ (2486) ಅಃ (2486) (1934) (29) (733) (90) (0) (176) (4) (464) (0) (0) (3) (3) (7) (0) (4) (920) (0) (323) (118) (1184) (974) (18) (845) (629) (1413) (73) (161) (0) (469) (511) (703) (31) (1162) (990) (0)

ಪದದಿಂದ ಪ್ರಾರಂಭವಾಗುವ ವಚನಗಳು

ಏರಿ ನೀರ ಕುಡಿಯಿತ್ತು. ಬೇರು ಬೀಜವ ನುಂಗಿತ್ತು. ಆರೈಕೆಯ ಮಾಡುವ ತಾಯಿ, ಧಾರುಣಿಯಲ್ಲಿ ಕೊರಳ ಕೊಯ್ದಳು. ಮಗು ಸತ್ತು, ಆ ಕೊರಳು ಬಿಡದು, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಏನೂ ಏನೂ ಎನಲಿಲ್ಲದಂದು ಮಹಾಘನಕ್ಕೆ ಘನವಾದ ಮಹಾಘನ ನಿರಂಜನಾತೀತಪ್ರಣವದ ನೆನಹು ಮಾತ್ರದಲ್ಲಿ ನಿರಂಜನಪ್ರಣವ ಉತ್ಪತ್ಯವಾಯಿತ್ತು. ಆ ನಿರಂಜನಪ್ರಣವದ ನಿರ್ದೇಶ ಸ್ಥಲದ ವಚನವೆಂತೆಂದಡೆ : ಅವಾಚ್ಯಪ್ರಣವ ಕಲಾಪ್ರಣವ ಉತ್ಪತ್ಯವಾಗದತ್ತತ್ತ , ಪ್ರಣವನಾದ ಪ್ರಣವಬಿಂದು ಪ್ರಣವಕಲೆಗಳುತ್ಪತ್ಯವಾಗದತ್ತತ್ತ , ನಿರಂಜನಪ್ರಣವವಾಗಿದ್ದನಯ್ಯ ಇಲ್ಲದಂತೆ ನಮ್ಮ ಅಪ್ರಮಾಣಕೂಡಲಸಂಗಮದೇವ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಏಳು ಕಮಲದ ಮೇಲೆ ಎಲೆಯಿಲ್ಲದ ವೃಕ್ಷದಲ್ಲಿ ಫಲವಿಲ್ಲದ ಹಣ್ಣಿನ ರುಚಿಯ ತಲೆಯೆ ಬಾಯಾಗುಣಬಲ್ಲರೆ, ನೆಲ ಬೆಂದಿತ್ತು, ತಲೆ ಸತ್ತಿತ್ತು. ಇದರ ಹೊಲಬ ಬಲ್ಲಾತನೇ ಪರಶಿವಯೋಗಿ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಏರಿಯ ಕಟ್ಟಬಹುದಲ್ಲದೆ ನೀರ ತುಂಬಬಹುದೆ ? ಕೈದುವ ಕೊಡಬಹುದಲ್ಲದೆ ಕಲಿತನವ ಕೊಡಬಹುದೆ ? ವಿವಾಹವ ಮಾಡಬಹುದಲ್ಲದೆ ಪುರುಷತನವ ಹರಸಬಹುದೆ ? ಘನವ ತೋರಬಹುದಲ್ಲದೆ ನೆನಹ ನಿಲಿಸಬಹುದೆ ? `ಓದು ಒಕ್ಕಾಲು ಬುದ್ಧಿ ಮುಕ್ಕಾಲು' ಎಂಬ ಲೋಕದ ಗಾದೆಮಾತಿನಂತೆ, ಸದ್ಗುರುಕಾರುಣ್ಯವಾದಡೂ ಸಾದ್ಥಿಸಿದವನಿಲ್ಲ , ಸಕಳೇಶ್ವರಾ.
--------------
ಸಕಳೇಶ ಮಾದರಸ
ಏನು ಏನೂ ಎನಲಿಲ್ಲದ ಮಹಾಘನ ನಿರಂಜನಾತೀತದ ನೆನಹುಮಾತ್ರದಲ್ಲಿಯೆ ನವಪದ್ಮ ನವಶಕ್ತಿಗಳುತ್ಪತ್ಯ ಲಯವು. ನಿಶ್ಶಬ್ದವೆಂಬ ಪರಬ್ರಹ್ಮದ ನೆನಹುಮಾತ್ರದಲ್ಲಿಯೆ ಏಕಾಕ್ಷರ ತ್ರಯಾಕ್ಷರ ಸಹಸ್ರಾಕ್ಷರ ಅಷ್ಟನಾದ ಉತ್ಪತ್ಯ ಲಯವು. ದಶಚಕ್ರ ಮೊದಲಾಗಿ, ಚತುರ್ವೇದ ಗಾಯತ್ರಿ ಅಜಪೆ ಕಡೆಯಾಗಿ, ಸಮಸ್ತವು ಅಖಂಡಜ್ಯೋತಿರ್ಮಯವಾಗಿಹ ಗೋಳಕಾಕಾರಪ್ರಣವದಲ್ಲಿ ಉತ್ಪತ್ಯ ಲಯವೆಂದು ಬೋದ್ಥಿಸಿ ಕೃತಾರ್ಥನ ಮಾಡಿದ ಮಹಾಗುರುವಿನ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು ಕಾಣಾ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಏನೆಂದೂ ಎನಲಿಲ್ಲ; ನುಡಿದು ಹೇಳಲಿಕ್ಕಿಲ್ಲ. ನಿಜದಲ್ಲಿ ನಿಂದ ಬೆರಗ ಕುರುಹ ಹರಿವುದೆ ಮರುಳೆ? ಹರಿದು ಹತ್ತುವುದೆ ಮರುಳೆ ಬಯಲು? ಅದು ತನ್ನಲ್ಲಿ ತಾನಾದ ಬಯಲು; ತಾನಾದ ಘನವು. ಇನ್ನೇನನರಸಲಿಲ್ಲ. ಅದು ಮುನ್ನವೆ ತಾನಿಲ್ಲ. ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ.
--------------
ಘಟ್ಟಿವಾಳಯ್ಯ
ಏರಿಯಿಲ್ಲದ ಕೆರೆಯಲ್ಲಿ, ನೀರಿಲ್ಲದ ತಡಿಯಲ್ಲಿ ನಿಂದು ಮಡಕೆಯಿಲ್ಲದೆ ಮೊಗೆವುತ್ತಿದ್ದರು. ಮೊಗೆವರ ಸದ್ದ ಕೇಳಿ, ಒಂದು [ಹಾ]ರದ ಮೊಸಳೆ ಅವರೆಲ್ಲರ ನುಂಗಿತ್ತು. ಏಣಾಂಕಧರ ಸೋಮೇಶ್ವರಲಿಂಗದಲ್ಲಿ ಭಾವವೇನೆಂದು ಅರಿಯೆ.
--------------
ಬಿಬ್ಬಿ ಬಾಚಯ್ಯ
ಏನನೋದಿ ಏನ ಕೇಳಿ ಏನ ಹೇಳಿದಡೆ ಏನು ಫಲ ತನ್ನಲ್ಲಿದ್ದ ವಸ್ತುವ ತಾನರಿಯದನ್ನಕ್ಕ? ಚಿನ್ನದ ತೊಡಹದ ತಾಮ್ರದಂತೆ ಒಳಗೆ ಕಾಳಿಕೆ ಬಿಡದು. ನುಣ್ಣಗೆ ಬಣ್ಣಗೆ ನುಡಿವ ಅಣ್ಣಗಳೆಲ್ಲರು ಕಣ್ಣು ಕಾಣದೇ ಕಾಡಬಿದ್ದರು. ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ, ನಿಮ್ಮನರಿಯದ ಅಂಧಕರೆಲ್ಲರು.
--------------
ಸ್ವತಂತ್ರ ಸಿದ್ಧಲಿಂಗ
ಏಕಮಯ ವಸ್ತು ತನ್ಮಯ ರೂಪಾದಲ್ಲಿ , ಪಂಚಭೂತಿಕಂಗಳು ನಾಮರೂಪಾಯಿತ್ತು. ಆ ಪರಬ್ರಹ್ಮ ಪರವಸ್ತುವಾದಲ್ಲಿ, ಪರವಶವಾಯಿತ್ತು ಪಂಚಬ್ರಹ್ಮ. ಆ ಬ್ರಹ್ಮ ಬ್ರಹ್ಮನ ಕುಕ್ಷಿಗೆ ಹೊರಗಾದಲ್ಲಿ, ವಸ್ತು ನಿರ್ಧರವಾಯಿತ್ತು , ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗದಲ್ಲಿ.
--------------
ಶಿವಲೆಂಕ ಮಂಚಣ್ಣ
ಏರಿಯಕೆಳಗೆ ಬಿದ್ದ ನೀರು ಪೂರ್ವದ ತಟಾಕಕ್ಕೆ ಏರಬಲ್ಲುದೆ ? ವ್ರತಾಚಾರವ ಮೀರಿ ಕೆಟ್ಟ ಅನಾಚಾರಿ ಸದ್ಭಕ್ತರ ಕೂಡಬಲ್ಲನೆ ? ದೇವಾಲಯದಲ್ಲಿ ಸತ್ತಡೆ ಸಂಪ್ರೋಕ್ಷಣವಲ್ಲದೆ ದೇವರು ಸತ್ತಲ್ಲಿ ಉಂಟೆ ಸಂಪ್ರೋಕ್ಷಣ ? ಅಂಗದಲ್ಲಿ ಮರವೆಗೆ ಹಿಂಗುವ ಠಾವಲ್ಲದೆ, ಮನವರಿದು ತಾಕು ಸೋಂಕಿಗೆ ಹೆದರದೆ ಕೂಡಿದ ದುರ್ಗಣಕ್ಕುಂಟೆ ಪ್ರಾಯಶ್ಚಿತ್ತ ? ಇಂತಿವ ಕಂಡಲ್ಲಿ ಗುರುವಾದಡೂ ಬಿಡಬೇಕು, ಲಿಂಗವಾದಡೂ ಬಿಡಬೇಕು, ಜಂಗಮವಾದಡೂ ಬಿಡಬೇಕು ; ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವಾದಡೂ ಬಿಡಬೇಕು.
--------------
ಅಕ್ಕಮ್ಮ
ಏನೇನೂ ಇಲ್ಲದಲ್ಲಿ ಒಬ್ಬ ಪುರುಷ ನಿಂದಿರುವುದ ಕಂಡೆನಯ್ಯ. ಆ ಪುರುಷಂಗೆ ಒಬ್ಬ ಸತಿಯಳು ಹುಟ್ಟಿದಳು ನೋಡಾ. ಆ ಸತಿಯಳ ಅಂಗದಲ್ಲಿ ಮೂವರು ಮಕ್ಕಳು ಇರುವುದ ಕಂಡೆನಯ್ಯ. ಆ ಮಕ್ಕಳು ಒಂದೊಂದು ಎರಡೆರಡಾಗಿ, ಆರು ಕೇರಿಗಳಲ್ಲಿ ಸುಳಿದಾಡುತಿರ್ಪರು ನೋಡಾ. ಆ ಕೇರಿಗಳನಳಿದು, ಮೂರು ಮಕ್ಕಳ ಬಿಟ್ಟು ಆ ಸತಿಯಳ ಅಂಗವ ಕೂಡಿ, ಆ ಪುರುಷನಾಚರಿಸುತಿರ್ಪನು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಏನಿದ್ದಡೇನಿದ್ದಡೊಲ್ಲದು ನಿಮ್ಮನುಭಾವಕ್ಕೆನ್ನ ಮನವು. ಡಂಬಕನೆಂಬವ ನಾನು ಕಂಡಯ್ಯಾ, ಕೂಡಲಸಂಗಮದೇವರ ಪೂಜಿಸಿ ಮಾನವರಾಸೆ ಬಿಡದಾಗಿ. 273
--------------
ಬಸವಣ್ಣ
ಏತರಲ್ಲಿಯೂ ತೆರಹಿಲ್ಲವೆನಗೆ ಏತರಲ್ಲಿಯೂ ಕುರುಹಿಲ್ಲವೆನಗೆ; ಏತರಲ್ಲಿಯೂ ಮೂರ್ತಿಯ ಮುಖ ಕಾಣಿಸದೆನಗೆ, ಸಂಗಯ್ಯನಲ್ಲಿ ಬಸವ ಪ್ರಸಾದಿಯಾದಬಳಿಕ.
--------------
ನೀಲಮ್ಮ
ಏಕೈಕನೆಂ....... ಅನೇಕ ವಿಧ ಸದ್ಭಕ್ತಿ ಪದವನರಿದು ಆ ಗುರುವಿನಾ ಮನದ ಮತಿಯ ಬೆಳಗುವ ನಿರ್ಮಳಾಂಗನು ಶಿಷ್ಯ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಏನೂ ಏನೂ ಎನಲಿಲ್ಲದ ಅನಾದಿ ಅಕಾರ, ಅನಾದಿ ಉಕಾರ, ಅನಾದಿ ಮಕಾರವೆಂಬ ಪ್ರಣವತ್ರಯಂಗಳ ನೆನಹು ಮಾತ್ರದಲ್ಲಿಯೇ ಆದಿ ಪ್ರಣವ ಉತ್ಪತ್ಯವಾಯಿತು. ಆ ಆದಿ ಪ್ರಣವಸ್ಥಲದ ವಚನವದೆಂತೆಂದಡೆ : ಆಧಾರಚಕ್ರ ಸ್ವಾದ್ಥಿಷ್ಠಾನಚಕ್ರ ಉತ್ಪತ್ಯವಾಗದ ಮುನ್ನ , ಮಣಿಪೂರಕಚಕ್ರ ಅನಾಹತಚಕ್ರ ಉತ್ಪತ್ಯವಾಗದ ಮುನ್ನ , ವಿಶುದ್ಧಿಚಕ್ರ ಆಜ್ಞಾಚಕ್ರ ಉತ್ಪತ್ಯವಾಗದ ಮುನ್ನ , ಬ್ರಹ್ಮಚಕ್ರ ಶಿಖಾಚಕ್ರ ಉತ್ಪತ್ಯವಾಗದ ಮುನ್ನ , ಪಶ್ಚಿಮಚಕ್ರ ಅಣುಚಕ್ರ ಉತ್ಪತ್ಯವಾಗದ ಮುನ್ನವೆ ಓಂಕಾರವೆಂಬ ಆದಿಪ್ರಣವವಾಗಿದ್ದನು ನೋಡಾ ಇಲ್ಲದಂತೆ, ನಮ್ಮ ಅಪ್ರಮಾಣಕೂಡಲಸಂಗಮದೇವನು.
--------------
ಬಾಲಸಂಗಯ್ಯ ಅಪ್ರಮಾಣ ದೇವ

ಇನ್ನಷ್ಟು ...
-->