ಅಥವಾ

ಒಟ್ಟು 109 ಕಡೆಗಳಲ್ಲಿ , 14 ವಚನಕಾರರು , 30 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರತತ್ತ್ವದ ಆಕಾಶದ ಮೇಲೆ ನಿರಂಜನ ವಿಶುದ್ಧಿಚಕ್ರ. ಅಲ್ಲಿಯ ಪದ್ಮ ನೂರಾ ಎಂಬತ್ತುದಳದಪದ್ಮ. ಆ ಪದ್ಮದ ವರ್ಣ ನೂರುಸಾವಿರದಾರುನೂರು ಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶದ ವರ್ಣ. ಅಲ್ಲಿಯ ಅಕ್ಷರ ನೂರಾ ಎಂಬತ್ತಕ್ಷರ ; ಆ ಅಕ್ಷರ ಜ್ಞಾನಾತೀತವಾಗಿಹುದು. ಅಲ್ಲಿಯ ಶಕ್ತಿ ನಿರಾಮಯವೆಂಬ ಮಹಾಶಕ್ತಿ. ಆನಂದಬ್ರಹ್ಮವೆ ಅಧಿದೇವತೆ. ಅಲ್ಲಿಯ ನಾದ ನಿರಾಳಾನಂದವೆಂಬ ಮಹಾನಾದ. ಅಲ್ಲಿಯ ಬೀಜಾಕ್ಷರ ಅವಾಚ್ಯಪ್ರಣವ ನೋಡಾ ಅಪ್ರಮಾಣಕೂಡಲಸಂಗಮದೇವಾ. || 650 ||
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಗವೆ ಶರಣನಾದ ನಿಮಿತ್ಯದಲ್ಲಿ ಶರಣನ ಸರ್ವೇಂದ್ರಿಯಂಗಳೆಲ್ಲ ಲಿಂಗಮುಖ ಗುಟಕಿಯ[ಲ್ಲದೆ ಅನ್ಯ ಗುಟಕಿಯ ಕೊಂಡರೆ] ಅಲ್ಲಿಯ ಹೀನ ಹುಯ್ಯಲಂಗಳ ಗುಟಕಿಯ ತೆಗೆದುಕೊಂಡಂತೆ, ಶರಣನ ಅಂಗದಲ್ಲಿ ಸೋಂಕಿದ ಸುಖಂಗಳೆಲ್ಲ ಲಿಂಗಮಯವೆಂದರಿಯದೆ ಲಿಂಗವ ಬೇರೆ ಇಟ್ಟು ಕೊಟ್ಟುಕೊಂಬೆನೆಂಬ ಕುನ್ನಿಗಳಿಗೆ ಶಿವಲಿಂಗ ಮುನ್ನವಿಲ್ಲವೆಂದ ನಿಮ್ಮ ಶರಣ ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ಪರತತ್ತ್ವದ ತೇಜದ ಮೇಲೆ ನಿರಂಜನ ಮಣಿಪೂರಕಚಕ್ರ. ಅಲ್ಲಿಯ ಪದ್ಮ ಮೂರುನೂರರುವತ್ತುದಳದಪದ್ಮ. ಆ ಪದ್ಮದ ವರ್ಣ ಎಂಬತ್ತುಸಾವಿರದಾರುನೂರುಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶದ ವರ್ಣ. ಅಲ್ಲಿಯ ಅಕ್ಷರ ಮೂರುನೂರರುವತ್ತಕ್ಷರ ; ಆ ಅಕ್ಷರ ವರ್ಣಾತೀತವಾಗಿಹುದು. ಅಲ್ಲಿಯ ಶಕ್ತಿ ನಿತ್ಯಾನಂದಶಕ್ತಿ ; ವಿಮಲಬ್ರಹ್ಮವೆ ಅಧಿದೇವತೆ. ಅಲ್ಲಿಯ ನಾದ ಅಮಲಾನಂದವೆಂಬ ಮಹಾನಾದ. ಅಲ್ಲಿಯ ಬೀಜಾಕ್ಷರ ಅಖಂಡಮಹಾಜ್ಯೋತಿಪ್ರಣಮ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಶಿವತತ್ತ್ವದ ಆಕಾಶದ ಮೇಲೆ ನಿರಾಳ ವಿಶುದ್ಧಿಚಕ್ರ. ಅಲ್ಲಿಯ ಪದ್ಮ ನೂರಯೆಂಬತ್ತು ದಳದಪದ್ಮ. ಆ ಪದ್ಮ ವರ್ಣಾತೀತವಾಗಿಹುದು. ಅಲ್ಲಿಯ ಅಕ್ಷರ ನೂರಯೆಂಬತ್ತಕ್ಷರ ; ಆ ಅಕ್ಷರ ರೂಪಾತೀತವಾಗಿಹುದು. ಅಲ್ಲಿಯ ಶಕ್ತಿ ನಿರಾಳಮನೋನ್ಮನಿಶಕ್ತಿ. ಸಕಲನಿಃಕಲಾತೀತಬ್ರಹ್ಮವೇ ಅಧಿದೇವತೆ. ಅಲ್ಲಿಯ ನಾದ ಮಹಾನಾದ. ಅಲ್ಲಿಯ ಬೀಜಾಕ್ಷರ ಅನಾದಿಪ್ರಣವ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಗುದದಲ್ಲಿ ಆಧಾರಚಕ್ರ, ಪೃಥ್ವಿಯೆಂಬ ಮಹಾಭೂತ, ಚತುಃಷ್ಕೋಣ, ಚೌದಳಪದ್ಮ, ಅಲ್ಲಿಯ ಅಕ್ಷರ ವಶಷಸವೆಂಬ ನಾಲ್ಕು ಅಕ್ಷರ, ಅದರ ವರ್ಣ[ಪೀತ], ಅದಕ್ಕೆ ಅಧಿದೇವತೆ[ಬ್ರಹ್ಮ], ಭಕ್ತ ಮುಖ, ಕ್ರಿಯಾಶಕ್ತಿ, ಆಚಾರಲಿಂಗ, ನಕಾರ ಸ್ವಾಯತ. ಲಿಂಗಸ್ಥಾನದಲ್ಲಿ ಸ್ವಾಧಿಷಾ*ನಚಕ್ರ, ಅಪ್ಪುವೆಂಬ ಮಹಾಭೂತ, ಧನುರ್ಗತಿ, ಷಡುದಳಪದ್ಮ, ಅಲ್ಲಿಯ ಅಕ್ಷರವಾರು ಬ ಭ ಮ ಯ ರ ಲ ; ಅದರ ವರ್ಣ [ಶ್ವೇತ], ಅಧಿದೇವತೆ [ವಿಷ್ಣು], ಮಹೇಶ ಮುಖ, ಜ್ಞಾನಶಕ್ತಿ, ಗುರುಲಿಂಗ, ಅಲ್ಲಿ ಮಕಾರ ಸ್ವಾಯತ. ನಾಭಿಸ್ಥಾನದಲ್ಲಿ ಮಣಿಪೂರಕಚಕ್ರ, ತೇಜವೆಂಬ ಮಹಾಭೂತ, ತ್ರಿಕೋಣ, ದಶದಳಪದ್ಮ, ಅಲ್ಲಿಯ ಅಕ್ಷರ ಹತ್ತು ; ಡಢಣ ತಥದಧನ ಪಫ, ಅದಕ್ಕೆ [ಹರಿತ]ವರ್ಣ, ಅಧಿದೇವತೆ [ರುದ್ರ], ಪ್ರಸಾದಿ ಮುಖ, ಇಚ್ಚಾಶಕ್ತಿ , ಶಿವಲಿಂಗ, ಶಿಕಾರ ಸ್ವಾಯತ. ಹೃದಯಸ್ಥಾನದಲ್ಲಿ ಅನಾಹತಚಕ್ರ, ವಾಯುವೆಂಬ ಮಹಾಭೂತ, ಷಟ್ಕೋಣ, ದ್ವಿದಶದಳಪದ್ಮ, ಅಲ್ಲಿಯ ಅಕ್ಷರ ಹನ್ನೆರಡು : ಕ ಖ ಗ ಘ ಙ ಚ ಛ ಜ ಝ ಞ ಟ ಠ ಅದರ ವರ್ಣ [ಮಾಂಜಿಷ್ಟ], ಅದಕ್ಕೆ ಅಧಿದೇವತೆ [ಈಶ್ವರ], ಪ್ರಾಣಲಿಂಗಿ ಮುಖ, Wಆದಿಘೆಶಕ್ತಿ, ಜಂಗಮಲಿಂಗ, ಅಲ್ಲಿ ವಕಾರ ಸ್ವಾಯತ. ಕಂಠಸ್ಥಾನದಲ್ಲಿ ವಿಶುದ್ಧಿಚಕ್ರ, ಆಕಾಶವೆಂಬ ಮಹಾಭೂತ, ವರ್ತುಳಾಕಾರ, ಷೋಡಷದಳಪದ್ಮ, ಅಲ್ಲಿಯ ಅಕ್ಷರ ಹದಿನಾರು :ಅ ಆ ಇ ಈ ಉ ಊ ಋ Iೂ ಲೃ ಲೃೂ ಏ ಐ ಓ ಔ ಅಂ ಅಃ, ಅದಕ್ಕೆ ವರ್ಣ [ಕಪೋತ], ಅಧಿದೇವತೆ ಸದಾಶಿವನು, ಶರಣ ಮುಖ, [ಪರಾ]ಶಕ್ತಿ , [ಪ್ರಸಾದಲಿಂಗ, ಯಕಾರ ಸ್ವಾಯತ. ಭ್ರೂಮಧ್ಯದಲ್ಲಿ ಆಜ್ಞಾಚಕ್ರ, ಮನವೆಂಬ ಮಹಾಭೂತ, ದ್ವಿದಳಪದ್ಮ,] ಅಲ್ಲಿಯ ಅಕ್ಷರವೆರಡು :ಹ ಷ ವೆಂಬ [ಅಕ್ಷರ], ಮಾಣಿಕ್ಯ ವರ್ಣ, [ಅದಕ್ಕೆ ಅಧಿದೇವತೆ ಮಹೇಶ್ವರ], ಐಕ್ಯ ಮುಖ, ಕ್ರಿಯಾಶಕ್ತಿ, ಮಹಾಲಿಂಗ, ಓಂಕಾರ ಸ್ವಾಯತ. ಇಂತೀ ಷಡುಚಕ್ರದ, ಷಡುಸ್ಥಳದ, ಷಡುಲಿಂಗದ, ಷಡುಶಕ್ತಿಯರಿಗೆ ಷಡಕ್ಷರವೆ ಪ್ರಾಣವಾಗಿ ವಿರಾಜಿಸುತ್ತಿದ್ದಿತಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಮುಖದಲ್ಲಿ ಮಂತ್ರ ಹೃದಯದಲ್ಲಿ ಧ್ಯಾನ, ಪ್ರಾಣದಲ್ಲಿ ಲಿಂಗ ನೆನಹು ಕರಿಗೊಂಡ ಶಿವಾತ್ಮಶರಣನ ಹೃದಯವೇ ಪರಮೇಶ್ವರರಿಗೆ ನಿವಾಸಸ್ಥಾನ, ನೆರೆಮನೆಯಾಗಿಪ್ಪುದಯ್ಯ. ಆ ಪರಮೇಶ್ವರನೊಳಗಣ ಸಮರಸ ಭಾವವೆ ಆ ಶರಣಂಗೆ ನಿತ್ಯ ನೇಮ ಪೂಜೆಯಾಗಿಪ್ಪುದಯ್ಯ. ಇದೇ ಪೂರ್ಣ ಶರಣಭಾವ. ಅಲ್ಲಿಯ ಲಿಂಗಸಿದ್ಧಿ, ಘನಲಿಂಗ ಪದಸ್ಥಿತಿ. ಲಿಂಗಪೂಜೆ. ಮತ್ತಲ್ಲಿಯೆ ನಿಶ್ಚಯವದೇ ಪರಮಾರ್ಥ. ಇದಲ್ಲದೆ ಅನ್ಯವಪ್ಪೆಲ್ಲವು ಆತ್ಮ ದುಃಖ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಚೊತ್ತಿದಂತೆ ಒಚ್ಚತಗೊಂಡರು ಬಸವಣ್ಣ ಮೊದಲಾದ ಪುರಾತರೆಲ್ಲ. ಸೂರೆಗೊಂಡರಯ್ಯಾ ನಿಮ್ಮ ಪ್ರಸಾದ ಭಂಡಾರವ. ಅಲ್ಲಿಯ ಶೇಷವೆನಗಾದರೆ ಅವರಂತೆ ಆನಪ್ಪೆನು ಇಲ್ಲದಿದ್ದಡೆ ಮುನ್ನಿನಂತೆ ಅಯ್ಯಾ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಆ ಪರತತ್ತ್ವದ ಪೃಥ್ವಿಯ ಮೇಲೆ ನಿರಂಜನ ಆಧಾರಚಕ್ರ. ಅಲ್ಲಿಯ ಪದ್ಮ ಐನೂರುನಾಲ್ವತ್ತುದಳದಪದ್ಮ. ಆ ಪದ್ಮದ ವರ್ಣ ಅರವತ್ತುಸಾವಿರದಾರುನೂರು ಕೋಟಿ ಸೂರ್ಯಚಂದ್ರಾಗ್ನಿಪ್ರಕಾಶದ ವರ್ಣ. ಅಲ್ಲಿಯ ಅಕ್ಷರ ಐನೂರು ನಾಲ್ವತ್ತಕ್ಷರ ; ಆ ಅಕ್ಷರ ವಾಚಾತೀತವಾಗಿಹುದು. ಅಲ್ಲಿಯ ಶಕ್ತಿ, ನಿಃಕಲಶಕ್ತಿ, ಅಲ್ಲಿಯ ನಾದ ಚಿನ್ನಾದ. ಅಚಲ ಬ್ರಹ್ಮವೆ ಅಧಿದೇವತೆ. ಅಲ್ಲಿಯ ಬೀಜಾಕ್ಷರ ಅಖಂಡಜ್ಯೋತಿರ್ಮಯವಾಗಿಹ ಗೋಳಕಾಕಾರ ಪ್ರಣವ ನೋಡಾ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ನವನಾಳಂಗಳ ಬಲಿದು ಶಿವಧ್ಯಾನದಲ್ಲಿ ಕುಳ್ಳಿರ್ದು ಭಾವದ ದೃಕ್ಕಿನಿಂದ ನವಲಿಂಗಗಳ ನೋಡಿ ಪೂಜಿಸಿ, ಕದಡುವ ಭೇದವೆಂತೆಂದೊಡೆ : ಆಧಾರಚಕ್ರವೆಂಬ ರಂಗಮಂಟಪದಲ್ಲಿ ಮೂರ್ತಿಗೊಂಡಿರ್ದ ಆಚಾರಲಿಂಗಕ್ಕೆ ಶಿವಾನಂದ ಜಲದಿಂ ಮಜ್ಜನಕ್ಕೆರೆದು ಪೃಥ್ವಿ ನಿವೃತ್ತಿಯಾದ ಗಂಧವ ಧರಿಸಿ, ಚಿತ್ತ ಸುಚಿತ್ತವಾದ ಅಕ್ಷತೆಯನಿಟ್ಟು, ಅಲ್ಲಿಯ ಚತುರ್ದಳಂಗಳನೆ ಪುಷ್ಪದ ಮಾಲೆಯೆಂದು ಧರಿಸಿ, ಅಲ್ಲಿಯ ಕಮಲಸದ್ವಾಸನೆಯ ಧೂಪವ ಬೀಸಿ, ಅಲ್ಲಿಯ ಪೀತವರ್ಣವನೆ ಕರ್ಪುರದ ಜ್ಯೋತಿಯೆಂದು ಬೆಳಗಿ, ಅಲ್ಲಿಯ ಜಾಗ್ರಾವಸ್ಥೆಯೆಂಬ ನವೀನ ವಸ್ತ್ರವ ಹೊದಿಸಿ, ನಿಷ್ಕಾಮವೆಂಬ ಆಭರಣವ ತೊಡಿಸಿ, ಸುಗಂಧವೆಂಬ ನೈವೇದ್ಯವನರ್ಪಿಸಿ, ಶ್ರದ್ಧೆಯೆಂಬ ತಾಂಬೂಲವನಿತ್ತು, ಇಂತು ಆಚಾರಲಿಂಗದ ಅಷ್ಟವಿಧಾರ್ಚನೆಯ ಮಾಡಿ, ಕೋಟಿಸೂರ್ಯಪ್ರಭೆಯಂತೆ ಬೆಳಗುವ ಆಚಾರಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತೋಷಂಗೊಂಡು ಆ ಆಚಾರಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ ಓಂ ನಂ ನಂ ನಂ ನಂ ನಂ ನಂ ಎಂಬ ನಕಾರಷಡ್ವಿಧಮಂತ್ರಂಗಳಿಂದೆ ನಮಸ್ಕರಿಸಿ, ಆ ಆಚಾರಲಿಂಗವನು ಕೂಡಿ ಎರಡಳಿದು ಅಲ್ಲಿಂದ ಮುಂದಕ್ಕೆ ಹೋಗಿ, ಸ್ವಾಧಿಷಾ*ನಚಕ್ರವೆಂಬ ರಂಗಮಂಟಪದಲ್ಲಿ ಮೂರ್ತಿಗೊಂಡಿರ್ದ ಗುರುಲಿಂಗಕ್ಕೆ ಪರಿಣಾಮವೆಂಬ ಜಲದಿಂ ಮಜ್ಜನಕ್ಕೆರೆದು, ಅಪ್ಪು ನಿವೃತ್ತಿಯಾದ ಗಂಧವ ಧರಿಸಿ ಬುದ್ಧಿ ಸುಬುದ್ಧಿಯಾದ ಅಕ್ಷತೆಯನಿಟ್ಟು ಅಲ್ಲಿಯ ಷಡುದಳಂಗಳನೆ ಪುಷ್ಪದ ಮಾಲೆಯೆಂದು ಧರಿಸಿ, ಅಲ್ಲಿಯ ಕಮಲ ಸದ್ವಾಸನೆಯ ಧೂಪವ ಬೀಸಿ, ಅಲ್ಲಿಯ ನೀಲವರ್ಣವನೆ ಕರ್ಪುರದ ಜ್ಯೋತಿಯೆಂದು ಬೆಳಗಿ ಅಲ್ಲಿಯ ಸ್ವಪ್ನಾವಸ್ಥೆಯೆಂಬ ವಸ್ತ್ರವ ಹೊದಿಸಿ ನಿಃಕ್ರೋಧವೆಂಬ ಆಭರಣವ ತೊಡಿಸಿ ಸುರುಚಿಯೆಂಬ ನೈವೇದ್ಯವನರ್ಪಿಸಿ, ನಿಷೆ*ಯೆಂಬ ತಾಂಬೂಲವನಿತ್ತು, ಇಂತು ಗುರುಲಿಂಗದ ಅಷ್ಟವಿಧಾರ್ಚನೆಯ ಮಾಡಿ, ಕೋಟಿಸೂರ್ಯಪ್ರಭೆಯಂತೆ ಬೆಳಗುವ ಗುರುಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತೋಷಂಗೊಂಡು ಆ ಗುರುಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ, ಓಂ ಮಂ ಮಂ ಮಂ ಮಂ ಮಂ ಮಂ ಎಂಬ ಮಕಾರಷಡ್ವಿಧಮಂತ್ರಂಗಳಿಂದೆ ನಮಸ್ಕರಿಸಿ, ಆ ಗುರುಲಿಂಗವನು ಕೂಡಿ ಎರಡಳಿದು ಅಲ್ಲಿಂದ ಮುಂದಕ್ಕೆ ಹೋಗಿ ಮಣಿಪೂರಕವೆಂಬ ರಂಗಮಂಟಪದಲ್ಲಿ ಮೂರ್ತಿಗೊಂಡಿರ್ದ ಶಿವಲಿಂಗಕ್ಕೆ ಪರಮಾನಂದವೆಂಬ ಜಲದಿಂ ಮಜ್ಜನಕ್ಕೆರೆದು, ಅಗ್ನಿನಿವೃತ್ತಿಯಾದ ಗಂಧವ ಧರಿಸಿ ಅಹಂಕಾರ ನಿರಹಂಕಾರವಾದ ಅಕ್ಷತೆಯನಿಟ್ಟು ಅಲ್ಲಿಯ ದಶದಳಂಗಳನೆ ಪುಷ್ಪದಮಾಲೆಯೆಂದು ಧರಿಸಿ ಅಲ್ಲಿ ಕಮಲ ಸದ್ವಾಸನೆಯ ಧೂಪವ ಬೀಸಿ ಅಲ್ಲಿಯ ಕೆಂಪುವರ್ಣವನೆ ಕರ್ಪುರದ ಜ್ಯೋತಿಯೆಂದು ಬೆಳಗಿ ಅಲ್ಲಿಯ ಸುಷುಪ್ತಾವಸ್ಥೆಯೆಂಬ ವಸ್ತ್ರವ ಹೊದಿಸಿ ನಿರ್ಲೋಭವೆಂಬ ಆಭರಣವ ತೊಡಿಸಿ ಸುರೂಪವೆಂಬ ನೈವೇದ್ಯವನರ್ಪಿಸಿ ಸಾವಧಾನವೆಂಬ ತಾಂಬೂಲವನಿತ್ತು, ಇಂತು ಶಿವಲಿಂಗದ ಅಷ್ಟವಿಧಾರ್ಚನೆಯ ಮಾಡಿ ಕೋಟಿಸೂರ್ಯಪ್ರಭೆಯಂತೆ ಬೆಳಗುವ ಶಿವಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತಸಂಗೊಂಡು ಆ ಶಿವಲಿಂಗದ ಪೂಜೆಯ ನಿರ್ಮಾಲ್ಯಮಂ ಮಾಡದೆ, ಓಂ ಶಿಂ ಶಿಂ ಶಿಂ ಶಿಂ ಶಿಂ ಶಿಂ ಎಂಬ ಶಿಕಾರಷಡ್ವಿಧಮಂತ್ರಂಗಳಿಂದೆ ನಮಸ್ಕರಿಸಿ, ಆ ಶಿವಲಿಂಗವನು ಕೂಡಿ ಎಡರಳಿದು, ಅಲ್ಲಿಂದ ಮುಂದಕ್ಕೆ ಹೋಗಿ ಅನಾಹತಚಕ್ರವೆಂಬ ರಂಗಮಂಟಪದಲ್ಲಿ ಮೂರ್ತಿಗೊಂಡಿರ್ದ ಜಂಗಮಲಿಂಗಕ್ಕೆ ಶಾಂತಿಯೆಂಬ ಜಲದಿಂ ಮಜ್ಜನಕ್ಕೆರೆದು ವಾಯುನಿವೃತ್ತಿಯಾದ ಗಂಧವ ಧರಿಸಿ ಮನ ಸುಮನವಾದ ಅಕ್ಷತೆಯನಿಟ್ಟು ಅಲ್ಲಿಯ ದ್ವಾದಶದಳಂಗಳನೆ ಪುಷ್ಪದ ಮಾಲೆಯೆಂದು ಧರಿಸಿ, ಅಲ್ಲಿಯ ಕಮಲ ಸದ್ವಾಸನೆಯ ಧೂಪವ ಬೀಸಿ ಅಲ್ಲಿಯ ಮಾಂಜಿಷ್ಟವರ್ಣವನೆ ಕರ್ಪುರದಜ್ಯೋತಿಯೆಂದು ಬೆಳಗಿ, ಅಲ್ಲಿಯ ತೂರ್ಯಾವಸ್ಥೆಯೆಂಬ ವಸ್ತ್ರವ ಹೊದಿಸಿ ನಿರ್ಮೋಹವೆಂಬ ಆಭರಣವ ತೊಡಿಸಿ ಸುಸ್ಪರ್ಶನವೆಂಬ ನೈವೇದ್ಯವನರ್ಪಿಸಿ ಅನುಭಾವವೆಂಬ ತಾಂಬೂಲವನಿತ್ತು ಇಂತು ಜಂಗಮಲಿಂಗಕ್ಕೆ ಅಷ್ಟವಿಧಾರ್ಚನೆಯ ಮಾಡಿ, ಕೋಟಿಸೂರ್ಯಪ್ರಭೆಯಂತೆ ಬೆಳಗುವ ಜಂಗಮಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತೋಷಂಗೊಂಡು ಆ ಜಂಗಮಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ ಓಂ ವಾಂ ವಾಂ ವಾಂ ವಾಂ ವಾಂ ವಾಂ ಎಂಬ ವಕಾರಷಡ್ವಿಧಮಂತ್ರಂಗಳಿಂದೆ ನಮಸ್ಕರಿಸಿ, ಆ ಜಂಗಮಲಿಂಗವನು ಕೂಡಿ ಎರಡಳಿದು, ಅಲ್ಲಿಂದ ಮುಂದಕ್ಕೆ ಹೋಗಿ ವಿಶುದ್ಧಿಚಕ್ರವೆಂಬ ರಂಗಮಂಟಪದಲ್ಲಿ ಮೂರ್ತಿಗೊಂಡಿರ್ದ ಪ್ರಸಾದಲಿಂಗಕ್ಕೆ ಕ್ಷಮೆಯೆಂಬ ಜಲದಿಂ ಮಜ್ಜನಕ್ಕೆರೆದು ಗಗನನಿವೃತ್ತಿಯಾದ ಗಂಧವ ಧರಿಸಿ, ಜ್ಞಾನ ಸುಜ್ಞಾನವಾದ ಅಕ್ಷತೆಯನಿಟ್ಟು, ಅಲ್ಲಿಯ ಷೋಡಶದಳಂಗಳನೆ ಪುಷ್ಪದ ಮಾಲೆಯೆಂದು ಧರಿಸಿ, ಅಲ್ಲಿಯ ಕಮಲಸದ್ವಾಸನೆಯ ಧೂಪವ ಬೀಸಿ, ಅಲ್ಲಿಯ ಕೃಷ್ಣವರ್ಣವನೆ ಕರ್ಪುರದ ಜ್ಯೋತಿಯೆಂದು ಬೆಳಗಿ, ಅಲ್ಲಿಯ ತೂರ್ಯಾತೀತಾವಸ್ಥೆಯೆಂಬ ವಸ್ತ್ರವ ಹೊದಿಸಿ ನಿರ್ಮದವೆಂಬ ಆಭರಣವ ತೊಡಿಸಿ ಸುಶಬ್ದವೆಂಬ ನೈವೇದ್ಯವನರ್ಪಿಸಿ ಆನಂದವೆಂಬ ತಾಂಬೂಲವನಿತ್ತು, ಇಂತು ಪ್ರಸಾದಲಿಂಗದ ಅಷ್ಟವಿಧಾರ್ಚನೆಯ ಮಾಡಿ ಕೋಟಿ ಸೂರ್ಯಪ್ರಭೆಯಂತೆ ಬೆಳಗುವ ಪ್ರಸಾದಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತೋಷಂಗೊಂಡು ಆ ಪ್ರಸಾದಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ ಓಂ ಯಂ ಯಂ ಯಂ ಯಂ ಯಂ ಯಂ ಎಂಬ ಯಕಾರಷಡ್ವಿಧಮಂತ್ರಂಗಳಿಂದೆ ನಮಸ್ಕರಿಸಿ, ಆ ಪ್ರಸಾದಲಿಂಗವನು ಕೂಡಿ ಎರಡಳಿದು, ಅಲ್ಲಿಂದ ಮುಂದಕ್ಕೆ ಹೋಗಿ ಆಜ್ಞಾಚಕ್ರವೆಂಬ ರಂಗಮಂಟಪದಲ್ಲಿ ಮೂರ್ತಿಗೊಂಡಿರ್ದ ಮಹಾಲಿಂಗಕ್ಕೆ ಸಂತೋಷವೆಂಬ ಜಲದಿಂ ಮಜ್ಜನಕ್ಕೆರೆದು ಆತ್ಮನಿವೃತ್ತಿಯಾದ ಗಂಧವ ಧರಿಸಿ, ಭಾವ ಸದ್ಭಾವವಾದ ಅಕ್ಷತೆಯನಿಟ್ಟು, ಅಲ್ಲಿಯ ದ್ವಿದಳಂಗಳನೆ ಪುಷ್ಪದಮಾಲೆಯೆಂದು ಧರಿಸಿ, ಅಲ್ಲಿಯ ಕಮಲಸದ್ವಾಸನೆಯ ಧೂಪವ ಬೀಸಿ ಅಲ್ಲಿಯ ಮಾಣಿಕ್ಯವರ್ಣವನೆ ಕರ್ಪುರದಜ್ಯೋತಿಯೆಂದು ಬೆಳಗಿ, ಅಲ್ಲಿಯ ನಿರಾವಸ್ಥೆಯೆಂಬ ವಸ್ತ್ರವ ಹೊದಿಸಿ ನಿರ್ಮಲವೆಂಬ ಆಭರಣವ ತೊಡಿಸಿ ಸುತೃಪ್ತಿಯೆಂಬ ನೈವೇದ್ಯವನರ್ಪಿಸಿ ಸಮರಸವೆಂಬ ತಾಂಬೂಲವನಿತ್ತು, ಇಂತು ಮಹಾಲಿಂಗದ ಅಷ್ಟವಿಧಾರ್ಚನೆಯ ಮಾಡಿ ಕೋಟಿಸೂರ್ಯಪ್ರಭೆಯಂತೆ ಬೆಳಗುವ ಮಹಾಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತೋಷಂಗೊಂಡು ಆ ಮಹಾಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ, ಓಂ ಒಂ ಒಂ ಒಂ ಒಂ ಒಂ ಒಂ ಎಂಬ ಓಂಕಾರಷಡ್ವಿಧಮಂತ್ರಂಗಳಿಂದೆ ನಮಸ್ಕರಿಸಿ, ಆ ಮಹಾಲಿಂಗವನು ಕೂಡಿ ಎರಡಳಿದು ಅಲ್ಲಿಂದ ಮುಂದಕ್ಕೆ ಹೋಗಿ ಬ್ರಹ್ಮರಂಧ್ರವೆಂಬ ಸಹಸ್ರದಳಮಂಟಪದಲ್ಲಿ ಮೂರ್ತಿಗೊಂಡಿರ್ದ ನಿಷ್ಕಳಲಿಂಗಕ್ಕೆ ಅನುಪಮವೆಂಬ ಜಲದಿಂ ಮಜ್ಜನಕ್ಕೆರೆದು ಅನಾದಿಯೆಂಬ ಗಂಧವ ಧರಿಸಿ, ಅಗಮ್ಯವೆಂಬ ಅಕ್ಷತೆಯನಿಟ್ಟು ಅವಿರಳವೆಂಬ ಪುಷ್ಪದ ಮಾಲೆಯ ಧರಿಸಿ, ಅಪ್ರಮಾಣವೆಂಬ ಧೂಪವ ಬೀಸಿ ಅಖಂಡವೆಂಬ ಜ್ಯೋತಿಯ ಬೆಳಗಿ ಸತ್ಯವೆಂಬ ವಸ್ತ್ರವ ಹೊದಿಸಿ ಸದಾನಂದವೆಂಬ ಆಭರಣವ ತೊಡಿಸಿ ನಿತ್ಯವೆಂಬ ನೈವೇದ್ಯವನರ್ಪಿಸಿ ನಿರುಪಮವೆಂಬ ತಾಂಬೂಲವನಿತ್ತು, ಇಂತು ನಿಷ್ಕಲಲಿಂಗದ ಅಷ್ಟವಿಧಾರ್ಚನೆಯ ಮಾಡಿ ಅನಂತಕೋಟಿಸೂರ್ಯಪ್ರಭೆಯಂತೆ ಬೆಳಗುವ ನಿಷ್ಕಲಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತೋಷಂಗೊಂಡು ಆ ನಿಷ್ಕಲಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ ಅಗಣಿತವೆಂಬ ನಮಸ್ಕಾರಮಂ ಮಾಡಿ, ಆ ನಿಷ್ಕಲಲಿಂಗವನು ಕೂಡಿ ಎರಡಳಿದು, ಅಲ್ಲಿಂದ ಮುಂದಕ್ಕೆ ಹೋಗಿ ಶಿಖಾಚಕ್ರವೆಂಬ ತ್ರಿದಳಮಂಟಪದಲ್ಲಿ ಮೂರ್ತಿಗೊಂಡಿರ್ದ ಶೂನ್ಯಲಿಂಗಕ್ಕೆ ನಿರ್ಭಾವವೆಂಬ ಜಲದಿಂ ಮಜ್ಜನಕ್ಕೆರೆದು, ನಿರ್ಜಾತವೆಂಬ ಗಂಧವ ಧರಿಸಿ ನಿರ್ಜಡವೆಂಬ ಅಕ್ಷತೆಯನಿಟ್ಟು ನಿಧ್ರ್ವಂದ್ವವೆಂಬ ಪುಷ್ಪದಮಾಲೆಯ ಧರಿಸಿ ನಿರ್ಲಜ್ಜೆಯೆಂಬ ಧೂಪವ ಬೀಸಿ ನಿರಾಭಾರವೆಂಬ ಜ್ಯೋತಿಯ ಬೆಳಗಿ ನಿರಾಮಯವೆಂಬ ವಸ್ತ್ರವ ಹೊದಿಸಿ ನಿಸ್ಪೃಹವೆಂಬ ಆಭರಣವ ತೊಡಸಿ ನಿರಾಳವೆಂಬ ನೈವೇದ್ಯವನರ್ಪಿಸಿ ನಿರಾಲಂಬವೆಂಬ ತಾಂಬೂಲವನಿತ್ತು, ಇಂತು ಶೂನ್ಯಲಿಂಗದ ಅಷ್ಟವಿಧಾರ್ಚನೆಯಂ ಮಾಡಿ, ಅಗಣಿತ ಕೋಟಿಸೂರ್ಯ ಪ್ರಭೆಯಂತೆ ಬೆಳಗುವ ಶೂನ್ಯಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತೋಷಂಗೊಂಡು ಆ ಶೂನ್ಯಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ ನಿರ್ಭೇದ್ಯವೆಂಬ ನಮಸ್ಕಾರಮಂ ಮಾಡಿ ಆ ಶೂನ್ಯಲಿಂಗವನು ಕೂಡಿ ಎರಡಳಿದು, ಅಲ್ಲಿಂದ ಮುಂದಕ್ಕೆ ಹೋಗಿ, ಪಶ್ಚಿಮಚಕ್ರವೆಂಬ ಏಕದಳಮಂಟಪದಲ್ಲಿ ಮೂರ್ತಿಗೊಂಡಿರ್ದ ನಿರಂಜನಲಿಂಗಕ್ಕೆ ನಿರ್ನಾಮವೆಂಬ ಜಲದಿಂ ಮಜ್ಜನಕ್ಕೆರೆದು ನಿಷ್ಕಾರಣವೆಂಬ ಗಂಧವ ಧರಿಸಿ ನಿಃಸಂಗವೆಂಬ ಅಕ್ಷತೆಯನಿಟ್ಟು ನಿಸ್ಸಾರವೆಂಬ ಪುಷ್ಪವ ಧರಿಸಿ ನಿರುಪಾಧಿಕವೆಂಬ ಧೂಪವ ಬೀಸಿ ನಿಷ್ಕಳೆಯೆಂಬ ಜ್ಯೋತಿಯ ಬೆಳಗಿ ನಿಶ್ಚಲವೆಂಬ ವಸ್ತ್ರವ ಹೊದಿಸಿ ನಿರ್ವಾಸನೆಯೆಂಬ ಆಭರಣವ ತೊಡಿಸಿ ನಿಃಶೂನ್ಯವೆಂಬ ನೈವೇದ್ಯವನರ್ಪಿಸಿ ನಿರವಯವೆಂಬ ತಾಂಬೂಲವನಿತ್ತು, ಇಂತು ನಿರಂಜನಲಿಂಗದ ಅಷ್ಟವಿಧಾರ್ಚನೆಯ ಮಾಡಿ ತೆರಹಿಲ್ಲದೆ ಬೆಳಗಿನ ಮಹಾಬೆಳಗನೊಳಕೊಂಡು ಬೆಳಗುವ ನಿರಂಜನಲಿಂಗವನು ಕಂಗಳು ತುಂಬಿ ನೋಡಿ, ಮನದಲ್ಲಿ ಸಂತೋಷಂಗೊಂಡು ಆ ನಿರಂಜನಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ, ನಿಃಶಬ್ದವೆಂಬ ನಮಸ್ಕಾರಮಂ ಮಾಡಿ ಆ ನಿರಂಜನಲಿಂಗವನು ಕೂಡಿ ಎರಡಳಿದು ಅಲ್ಲಿಂದ ಮುಂದೆ ನೋಡಲು ಬಚ್ಚಬರಿಯ ಬಯಲಿರ್ಪುದ ಕಂಡು ಆ ಬಯಲೆ ತನ್ನ ನಿಜನಿವಾಸವೆಂದು ತಿಳಿದು ಆ ನಿಜವಾಸದಲ್ಲಿ ತಾ ನಿಂದು ತನ್ನಿಂದ ಕೆಳಗಣ ನವಚಕ್ರಂಗಳಲ್ಲಿರ್ದ ನವಲಿಂಗಗಳ ಪೂಜೆಯ ನಿರಂತರದಲ್ಲಿ ಮಾಡುವ ಶಿವಯೋಗಿಗೆ ಭವಬಂಧನವಿಲ್ಲ. ಆ ಭವಬಂಧನವಿಲ್ಲವಾಗಿ ಜೀವಕಲ್ಪಿತವು ಮುನ್ನವೇ ಇಲ್ಲ. ಆ ಜೀವಕಲ್ಪಿತವಿಲ್ಲವಾಗಿ ಆತನು ಪರಿಪೂರ್ಣನಾಗಿ ಪರಾತ್ಪರನಾಗಿ ಪರಶಿವಬ್ರಹ್ಮವೇ ಆಗಿ ಇರ್ಪನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಅನಂತ ಜನ್ಮಗಳ ಪಾಪಂಗಳು ಸವೆದು ಹೋಗಿ ಶ್ರೀಗುರುವಿನ ಕರುಣಾಕಟಾಕ್ಷದಿಂದ ಪ್ರಾಣಲಿಂಗೋಪದೇಶವ ಪಡೆದು ಸದ್ಭಕ್ತರಾಗಿ ಶಿವಲಿಂಗ ದರ್ಶನ ಸ್ಪರ್ಶನವ ಮಾಡಿ ಆ ಲಿಂಗವನಂಗದಲ್ಲಿ ಧರಿಸಿಕೊಂಡು ಅಂಗವೇ ಲಿಂಗ ಲಿಂಗವೇ ಅಂಗ ಪ್ರಾಣವೇ ಲಿಂಗ ಲಿಂಗವೇ ಪ್ರಾಣವಾಗಿ ಅಂತರಂಗ ಬಹಿರಂಗ ಸರ್ವಾಂಗವೆಲ್ಲವೂ ಲಿಂಗವಾದ ಬಳಿಕ ಇಂತೀ ಶ್ರೀಗುರು ಕೊಟ್ಟ ಲಿಂಗವ ಬಿಟ್ಟು ಬೋರೆ ಮತ್ತೆ ಆತ್ಮತತ್ತ್ವವ ವಿಚಾರಿಸಿ ನೋಡಬೇಕೆಂದು ಪರಮಾತ್ಮನಲ್ಲಿ ಯೋಗವ ಮಾಡಿ ಯೋಗಿಗಳಾಗಿ ಮುಕ್ತರಾದೆವೆಂಬಿರಿ. ಶಿವಶಿವಾ, ಆತ್ಮನನು ಪರಮಾತ್ಮನನು ಶ್ರೀ ಗುರುಸ್ವಾಮಿ ಒಂದು ಮಾಡಿ ಇದೇ ನಿನ್ನ ನಿಜತತ್ತ್ವವೆಂದು ಅರುಹ ಹೇಳಿ ತೋರಿಸಿಕೊಟ್ಟ ಬಳಿಕ ಇಂತಹ ಗುರುಸ್ವಾಮಿಯ ಆಜ್ಞೆಯ ಮೀರಿ ಲಿಂಗವನರಿಯದೆ ಲಿಂಗಬಾಹಿರರಾದ ದ್ವಿಜರನು ಯೋಗಿಯನು ಸನ್ಯಾಸಿಯನು ಗುರುವೆಂದು ಭಾವಿಸಬಹುದೆ ? ಶಿವ ಶಿವಾ, ಅದು ಗುರುದ್ರೋಹ. ಪರಶಿವಮೂರ್ತಿಯಾದ ಗುರುಸ್ವಾಮಿಯು ಷಡ್ದರ್ಶನಗಳಿಗೂ ಸಮಸ್ತಮತಂಗಳಿಗೂ ಸಮಸ್ತಾಗಮಂಗಳಿಗೆಯೂ ಶಿವನೊಬ್ಬನೇ ಕರ್ತನೆಂದು, ಶಿವದರ್ಶನವೇ ವಿಶೇಷವೆಂದು, ಅಧಿಕವೆಂದು ಹೇಳಿ ತೋರಿ ಕೊಟ್ಟ ಬಳಿಕ ಶೈವವೆಂದು ಶಾಕ್ತೇಯವೆಂದು ವೈಷ್ಣವವೆಂದು ಗಾಣಪತ್ಯವೆಂದು ¸õ್ಞರವೆಂದು ಕಾಪಾಲಿಕವೆಂದು ಇಂತೀ ಷಡ್ದರ್ಶನಂಗಳಿಗೆಯೂ ಶಿವನೊಬ್ಬನೇ ಕರ್ತ, ಇಂತೀ ಷಡ್ದರ್ಶನಕ್ಕೆ ಶಿವದರ್ಶನವೇ ಅಧಿಕವೆಂದು, ಇಂತೀ ಶಿವದರ್ಶನ ಮಾರ್ಗವಿಲ್ಲದೆ ಮುಕ್ತಿಯಿಲ್ಲವೆಂದು, ಆ ಪರಶಿವನೆಂಬ ಗುರುಮೂರ್ತಿ ಅರುಹಿ ಕಾಣಿಸಿ ಹೇಳಿ ತೋರಿ ಕೊಟ್ಟ ಬಳಿಕ ಅದೆಂತೆಂದಡೆ ಶಿವಧರ್ಮೇ_ ದರ್ಶನ ಷಡ್ವಿಧಂ ಪ್ರೋಕ್ತಂ ಶೈವಂ ಶಾಕ್ತಂ ವೈಷ್ಣವಂ ಗಣಾಪತ್ಯಂ ಚ ¸õ್ಞರಂ ಚ ಕಾಪಾಲಿಕಮಿತಿ ಸ್ಮೃತಮ್ ಮತ್ತಂ ಷಡ್ದರ್ಶನಾದಿ ದೇವೋ ಹಿ ಮಹಾದೇವೋ ನ ಸಂಶಯಃ ಮಂತ್ರಪೂಜಾದಿ ಭಿನ್ನಾನಾಂ ಮೂಲಂ ಪರಶಿವಸ್ತಥಾ ಎಂಬುದಾಗಿ, ಇನ್ನು ವೈಷ್ಣವವೆಂದು ಆತ್ಮಯೋಗವೆಂದು ಶಾಕ್ತಿಕವೆಂದು ವೈದಿಕವೆಂದು ಇಂತೀ ಭ್ರಾಂತಿನ ದರ್ಶನಮತಂಗಳನು ಕೇಳಿ, ಅಲ್ಲಿಯ ಧರ್ಮಾಧರ್ಮಂಗಳನು ಕೇಳಿ, ಅಲ್ಲಿ ಉಪದೇಶವ ಮಾಡಿಸಿಕೊಳ್ಳಬಹುದೇ ? ಶಿವಶಿವಾ, ಅದು ಗುರುದ್ರೋಹ, ಆ ಶ್ರೀಗುರುವಿನಾಜ್ಞೆಯ ಮೀರದಿರಿ. ಆ ಪರಶಿವಮೂರ್ತಿತತ್ತ್ವವೇ ಗುರುಸ್ವಾಮಿಯಾಗಿ ಚೆನ್ನಾಗಿ ಅರುಹಿ ತೋರಿ ಹೇಳಿ ಕೊಟ್ಟನಲ್ಲದೆ ಆ ಗುರುಸ್ವಾಮಿ ಏನು ತಪ್ಪಿ ಹೇಳಿದುದಿಲ್ಲ. ಶ್ರುತಿ ``ಏಕೋ ದೇವೋ ನ ದ್ವಿತೀಯಾಯ ತಸ್ಥೇ' ಎಂದುದಾಗಿ ಶಿವನೊಬ್ಬನೇ ದೈವವೆಂದು ತೋರಿಕೊಟ್ಟ ಶ್ರೀಗುರು. ಶ್ರುತಿ ``ಏಕೋ ಧ್ಯೇಯಃ' ಎಂದು ಶಿವನೊಬ್ಬನನ್ನೇ ಧ್ಯಾನಿಸಿ ಪೂಜಿಸೆಂದು ಹೇಳಿ ತೋರಿಕೊಟ್ಟನು ಶ್ರೀಗುರು. ಶ್ರುತಿ ``ನಿರ್ಮಾಲ್ಯಮೇವ ಭಕ್ಷಯಂತಿ' ಎಂದುದಾಗಿ ಶಿವಪ್ರಸಾದವನೆ ಗ್ರಹಿಸಿಯೆಂದು ಪ್ರಸಾದವ ಕರುಣಿಸಿದ ಶ್ರೀಗುರು ಇಂತಹ ಶ್ರೀಗುರು ಮರುಳನು, ನೀನು ಬುದ್ಧಿವಂತನೇ ? ಕೇಳಾ, ನಿಮ್ಮ ಗುರುವ ಮರುಳ ಮಾಡಿದಿರಿ, ಅದೆಂತೆಂದಡೆ: ನಿಮ್ಮಿಚ್ಛೆಯಲ್ಲಿಯೇ ಬಂದುದಾಗಿ, ಅದಲ್ಲದೆ ಮತ್ತೆ ಕೇಳು: ಪೂರ್ವದ ಪುರುಷರು ಮರುಳರು, ನೀನೊಬ್ಬನೇ ಬುದ್ಧಿವಂತ ? ಕೇಳೋ: ದೂರ್ವಾಸ ಉಪಮನ್ಯು ದಧೀಚಿ ಜಮದಗ್ನಿ ಮಾರ್ಕಂಡೇಯ ಪರಾಶರ ಮೊದಲಾದ ಋಷಿಗಳೆಲ್ಲ ಶಿವಾರ್ಚನೆಯಂ ಮಾಡಿದರು. ಬ್ರಹ್ಮವಿಷ್ಣು ಮೊದಲಾದವರೆಲ್ಲರೂ ಶಿವಲಿಂಗಾರ್ಚನೆಯ ಮಾಡಿದರು, ಕೇಳಿರೇ ನೋಡಿರೇ ದೃಷ್ಟವನು. ಮತ್ಸ್ಯಕೇಶ್ವರ ಕೂರ್ಮೇಶ್ವರ ವರಾಹೇಶ್ವರ ನಾರಸಿಂಹೇಶ್ವರ ರಾಮೇಶ್ವರ ಎಂಬ ದಶಾವತಾರಗಳಲ್ಲಿ ಶಿವಲಿಂಗಪ್ರತಿಷೆ*ಯಂ ಮಾಡಿ ಶಿವಲಿಂಗಾರ್ಚಾನೆಯಂ ಮಾಡಿದರು. ಅನೇಕ ವೇದಶಾಸ್ತ್ರಾಗಮಪುರಾಣಂಗಳ ಕೇಳಿರೇ ನೋಡಿರೇ. ಯಂ ಯಂ ಕಾಮಯತೇ ಕಾಮಂ ತಂ ತಂ ಲಿಂಗಾರ್ಚನಾಲ್ಲಭೇತ್ ನ ಲಿಂಗೇ [ನ] ವಿನಾ ಸಿದ್ದಿದುರ್ಲಭಂ ಪರಮಂ ಪದಂ ಮತ್ತಂ ಅಸುರಾ ದಾನವಾಶ್ಚೈವ ಪಿಶಾಚೋರಗರಾಕ್ಷಸಾಃ ಆರಾಧ್ಯಂ ಪರಮಂ ಲಿಂಗಂ ಪ್ರಾಪುಸ್ತೇ ಸಿದ್ಧಿಮುತ್ತಮಾಮ್ ಮತ್ತಂ ಅಗ್ನಿಹೋತ್ರಶ್ಚವೇದಶ್ಚ ಯಜ್ಞಾಶ್ಚ ಬಹುದಕ್ಷಿಣಾಃ ಶಿವಲಿಂಗಾರ್ಚನಸ್ಯೈತೇ ಕೋಟ್ಯಂಶೇನಾಪಿ ನೋ ಸಮಾಃ ಎಂದುದಾಗಿ, ಇಂತು ಇದು ಮೊದಲಾದ ದೇವಜಾತಿಗಳೆಲ್ಲ ಶಿವಲಿಂಗಾರ್ಚನೆಯಂ ಮಾಡಿದುದಕ್ಕೆ ದೃಷ್ಟ ನೋಡಿರೇ: ಕಾಶೀಕ್ಷೇತ್ರದಲ್ಲಿ ಬ್ರಹ್ಮೇಶ್ವರ ಇಂದ್ರೇಶ್ವರ ಯಕ್ಷಸಿದ್ದೇಶ್ವರ ಎಂಬ ಲಿಂಗಂಗಳಂ ಪ್ರತಿಷಿ*ಸಿ ಶಿವಲಿಂಗಾರ್ಚನೆಯಂ ಮಾಡಿದರು. ತಾರಕ ರಾವಣಾದಿಗಳೆಲ್ಲ ಶಿವಲಿಂಗಾರ್ಚನೆಯಂ ಮಾಡಿದರು. ಇಂತವರೆಲ್ಲರು ಮರುಳರು, ನೀನೊಬ್ಬನೇ ಬುದ್ಧಿವಂತನೆ ? ಅದು ಕಾರಣ, ಆ ಶ್ರೀಗುರುವಿನಾಜ್ಞೆಯಂ ಮೀರಿ ಕೆಡದಿರಿ ಕೆಡದಿರಿ. ಆ ಮಹಾ ಶ್ರೀಗುರುವಿನ ವಾಕ್ಯವನೇ ನಂಬಿ, ಗುರುಲಿಂಗಜಂಗಮವನೊಂದೇಯೆಂದು ನಿಶ್ಚಯಿಸಿ, ಇದೇ ಅಧಿಕ, ಇದರಿಂದ ಬಿಟ್ಟು ಮತ್ತಾವುದು ಅಧಿಕವಿಲ್ಲ. ಅಂದು ಗುರುಲಿಂಗಜಂಗಮದಲ್ಲಿಯ ಭಕ್ತಿಯೆ ಭಕ್ತಿ, ಅರ್ಚನೆಯೇ ಅರ್ಚನೆ, ಆ ಸಂಗವೇ ಶಿವಯೋಗ, ಇದು ಸತ್ಯ ಶಿವನಾಣೆ, ಉರಿಲಿಂಗಪೆದ್ಧಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಆ ಶಿವತತ್ವದ ಪೃಥ್ವಿಯ ಮೇಲೆ ನಿರಾಳ ಆಧಾರಚಕ್ರ. ಅಲ್ಲಿಯ ಪದ್ಮ ಐನೂರುನಾಲ್ವತ್ತುದಳದ ಪದ್ಮ, ಆ ಪದ್ಮಕ್ಕೆ ವರ್ಣವಿಲ್ಲ. ಅಲ್ಲಿಯ ಅಕ್ಷರ ಐನೂರು ನಾಲ್ವತ್ತಕ್ಷರ ; ಆ ಅಕ್ಷರಕ್ಕೆ ರೂಪಿಲ್ಲ. ಅಲ್ಲಿಯ ಶಕ್ತಿ ನಿರಾಳರುದ್ರಶಕ್ತಿ ; ನಿರಾಳಬ್ರಹ್ಮವೆ ಅಧಿದೇವತೆ. ಅಲ್ಲಿಯ ನಾದ ಅಕಾರನಾದ. ಅಲ್ಲಿಯ ಬೀಜಾಕ್ಷರ ಅಕಾರ ನೋಡಾ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಶಿವತತ್ತ್ವದ ಅಪ್ಪುವಿನ ಮೇಲೆ ನಿರಾಳ ಸ್ವಾಧಿಷಾ*ನಚಕ್ರ, ಅಲ್ಲಿಯ ಪದ್ಮ ನಾನೂರು ಐವತ್ತು ದಳದ ಪದ್ಮ ; ಆ ಪದ್ಮವು ಉಪಮೆ ಇಲ್ಲದ ವರ್ಣ. ಅಲ್ಲಿಯ ಅಕ್ಷರ ನಾನೂರ ಐವತ್ತಕ್ಷರ ; ಆ ಅಕ್ಷರ ನಿರಾಕಾರವಾಗಿಹುದು. ಅಲ್ಲಿಯ ಶಕ್ತಿ ನಿರಾಳ ಈಶ್ವರಶಕ್ತಿ. ನಿತ್ಯಾನಂದಬ್ರಹ್ಮವೆ ಅಧಿದೇವತೆ. ಅಲ್ಲಿಯ ನಾದ ಪ್ರಣವನಾದ. ಅಲ್ಲಿಯ ಬೀಜಾಕ್ಷರ ಉಕಾರ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ದರ್ಪಣದೊಳಗಣ ರೂಹಿಂಗೆ ಆ ದರ್ಪಣವೆ ಉತ್ಪತ್ತಿ ಸ್ಥಿತಿ ಲಯವಲ್ಲದೆ ಮತ್ರ್ಯಲೋಕದೊಳಗಣ ಆಕೃತಿ ಅಲ್ಲಿಲ್ಲವೇಕಯ್ಯಾ ? ಆ ಲೋಕದೊಳಗೆ ಉತ್ಪತ್ಯ(ತ್ತಿ ?) ಸ್ಥಿತಿ ಲಯ_ಇದೆಂತಹ ಕರ್ಮಬದ್ಧರು ? ಒಂದರ ಪರಿ ಒಂದಕ್ಕಿಲ್ಲ ಕಂಡಿರೆ ! ದೃಷ್ಟವಹ ಗುರುಹಸ್ತದೊಳಗಣ ಸದ್ಭಕ್ತಂಗೆ, ಅಲ್ಲಿಯ ಉತ್ಪತ್ತಿ ಸ್ಥಿತಿ ಲಯ_ಇದೆಂತಹ ಕರ್ಮದ ಪರಿಯೊ ? ಮತ್ತಾವ ಪರಿಯೂ ಇಲ್ಲ, ಲಿಂಗದ ಪರಿಯ ಮಾಡಿದ ಗುಹೇಶ್ವರ.
--------------
ಅಲ್ಲಮಪ್ರಭುದೇವರು
ಅಲ್ಲಿರುವಾತನ ರೂಹು ನೀವಲ್ಲೆಂಬಡೆ, ಅಲ್ಲಿರುವಾತನ ರೂಹು ದೇವಾಲಯವ ತೆಗೆಸರಯ್ಯಾ. ಅಲ್ಲಿಯ ರೂಹು ಇಲ್ಲಿಯ ರೂಹು ಕಪಿಲಸಿದ್ಧಮಲ್ಲಿಕಾರ್ಜುನನೆಂದು ಕಂಡೆನು ಅಲ್ಲಮದೇವಾ, ಇನ್ನಾದರೂ ಕರುಣಿಸಯ್ಯಾ.
--------------
ಸಿದ್ಧರಾಮೇಶ್ವರ
ಕಲ್ಲ ಹೋರಿನೊಳಗೊಂದು ಕಾರ್ಯವ ಕಾಬಡೆ, ಕಲ್ಲ ಬೆದಕದೆ ಕಪ್ಪೆಯ ಸೋಂಕದೆ ಅಲ್ಲಿಯ ಉದಕವ ಕುಡಿಯ ಬಲ್ಲಡೆ_ಅದು ಯೋಗ. ಬಲ್ಲಡೆ ನಿಮ್ಮಲ್ಲಿ ನೀವೆ ತಿಳಿದು ನೋಡಿರೆ. ಅರಿವ ಯೋಗಕ್ಕಿದು ಚಿಹ್ನವಯ್ಯಾ: ಕಲ್ಲು ಕಪ್ಪೆಯೊಳಗಣ ಹುಲ್ಲುರಿಯದೆ ಅಟ್ಟುಂಬಂತೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
-->