ಅಥವಾ

ಒಟ್ಟು 65 ಕಡೆಗಳಲ್ಲಿ , 14 ವಚನಕಾರರು , 52 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನು ಶರಣನಲ್ಲಿಯ ಷಡ್ವಿಧ ಷಡುಸ್ಥಲಲಿಂಗ ಮಿಶ್ರಾರ್ಪಣ ಭೇದವೆಂತೆಂದಡೆ : ಆಕಾಶವೆ ಅಂಗವಾದ ಶರಣನ ಸುಜ್ಞಾನವೆಂಬ ಹಸ್ತದಲ್ಲಿ ಪ್ರಸಾದಲಿಂಗಕ್ಕೆ ಶ್ರೋತ್ರವೆಂಬ ಮುಖದಲ್ಲಿ ಪಾತ್ರದಲ್ಲಿ ಹುಟ್ಟಿದ ಸುನಾದಾಳಾಪನೆಯ ಶಬ್ದದ್ರವ್ಯವನು ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ನಿರಂಜನಜಾಗ್ರದಲ್ಲಿನಿಂದಡೆ ಭಕ್ತನೆಂಬೆ. ನಿರಂಜನಸ್ವಪ್ನದಲ್ಲಿನಿಂದಡೆ ಮಹೇಶ್ವರನೆಂಬೆ ನಿರಂಜನಸುಷುಪ್ತಿಯಲ್ಲಿ ನಿಂದಡೆ ಪ್ರಸಾದಿಯೆಂಬೆ. ನಿರಂಜನತೂರ್ಯದಲ್ಲಿ ನಿಂದಡೆ ಪ್ರಾಣಲಿಂಗಿಯೆಂಬೆ. ನಿರಂಜನವ್ಯೋಮದಲ್ಲಿ ನಿಂದಡೆ ಶರಣನೆಂಬೆ. ನಿರಂಜನವ್ಯೋಮಾತೀತದಲ್ಲಿ ನಿಂದಡೆ ಐಕ್ಯನೆಂಬೆ. ನಿರಂಜನವ್ಯೋಮಾತೀತಕತ್ತತ್ತವಾಗಿಹ ಮಹಾಘನ ನಿರ್ವಾಣಾತೀತವೆ ಅಂಗವಾದ ಮಹಾಶರಣಂಗೆ ಭವಹಿಂಗಿತ್ತಾಗಿ, ಅವರ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಲಿಂಗವ ನೆರೆಯರಿದು ನಿಷ್ಠೆ ನಿಬ್ಬೆರಸಿದ ಬಳಿಕ ಅಹಂಕಾರ ಮಮಕಾರಂಗಳುಂಟೆ? ಪಂಚಕ್ಲೇಶಂಗಳು ಮದ ಮತ್ಸರಗಳುಂಟೆ? ಕ್ರಾಮ ಕ್ರೋಧಂಗಳು ತಾಮಸಗುಣಂಗಳುಂಟೆ? ಲಿಂಗದಂಗವೆ ಅಂಗವಾದ ಲಿಂಗದೇಹಿಗೆ? ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಇನ್ನು ಮಹೇಶ್ವರನಲ್ಲಿಯ ಷಡ್ವಿಧ ಷಡುಸ್ಥಲಲಿಂಗ ಮಿಶ್ರಾರ್ಪಣವೆಂತೆಂದಡೆ : ಅಪ್ಪುವೆ ಅಂಗವಾದ ಮಾಹೇಶ್ವರನು ಸುಬುದ್ಧಿಯೆಂಬ ಹಸ್ತದಲ್ಲಿ ಗುರುಲಿಂಗಕ್ಕೆ ಜಿಹ್ವೆಯೆಂಬ ಮುಖದಲ್ಲಿ ಓಗರಾದುರು ಚಿದ್ರವ್ಯವ ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಬಯಲೇ ಅಂಗವಾದ ಶರಣಂಗೆ ನಿರ್ವಯಲೇ ಲಿಂಗವಾಗಿ ತೋರುತಿಪ್ಪುದು ನೋಡಾ. ಆ ಲಿಂಗದ ಬೆಳಗಿನೊಳಗೆ ಆರು ಮೂರ್ತಿಗಳು ಆರಾರ ಲಿಂಗಾರ್ಚನೆಯ ಮಾಡುತಿಪ್ಪರು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಇನ್ನೊಂದು ಪ್ರಕಾರದ ಷಡ್ಲಿಂಗನ್ಯಾಸಸ್ಥಲವೆಂತೆಂದಡೆ : ಪೃಥ್ವಿಯೇ ಅಂಗವಾದ ಭಕ್ತನ ಸುಚಿತ್ತಹಸ್ತದಲ್ಲಿ ಆಚಾರಲಿಂಗ ನ್ಯಾಸವಾಗಿಹುದು. ಅಪ್ಪುವೆ ಅಂಗವಾದ ಮಹೇಶ್ವರನ ಸುಬುದ್ಧಿಹಸ್ತದಲ್ಲಿ ಗುರುಲಿಂಗ ನ್ಯಾಸವಾಗಿಹುದು. ಅನಲಾಂಗವಾದ ಪ್ರಸಾದಿಯ ನಿರಹಂಕಾರಹಸ್ತದಲ್ಲಿ ಶಿವಲಿಂಗ ನ್ಯಾಸವಾಗಿಹುದು. ವಾಯುವೇ ಅಂಗವಾದ ಪ್ರಾಣಲಿಂಗಿಯ ಸುಮನವೆಂಬ ಹಸ್ತದಲ್ಲಿ ಚರಲಿಂಗ ನ್ಯಾಸವಾಗಿಹುದು. ವ್ಯೋಮಾಂಗವಾದ ಶರಣನ ಸುಜ್ಞಾನಹಸ್ತದಲ್ಲಿ ಪ್ರಸಾದಲಿಂಗ ನ್ಯಾಸವಾಗಿಹುದು. ಆತ್ಮಾಂಗವಾದ ಐಕ್ಯನ ಭಾವಹಸ್ತದಲ್ಲಿ ಮಹಾಲಿಂಗ ನ್ಯಾಸವಾಗಿಹುದು ನೋಡಾ. ಇದಕ್ಕೆ ಈಶ್ವರ್ದೋವಾಚ : ``ಆಚಾರಂ ಚಿತ್ತಹಸ್ತಂ ಚ ಬುದ್ಧಿಹಸ್ತೇ ಗುರುಸ್ತಥಾ | ಶಿವಲಿಂಗಂ ಚ ಅಹಂಕಾರೇ ಚರಲಿಂಗ ಮನೇ ತಥಾ || ಪ್ರಸಾದಂ ಜ್ಞಾನಹಸ್ತೇ ಚ ಭಾವಹಸ್ತೇ ಮಹಸ್ತಥಾ | ಇತಿ ಲಿಂಗಸ್ಥಲಂ ಜ್ಞಾತುಂ ದುರ್ಲಭಂ ಚ ವರಾನನೇ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಗದಂತೆ ಲಿಂಗ, ಲಿಂಗದಂತೆ ಅಂಗವಾದ ಬಳಿಕ ಅಂಗದಂತೆ ಲಿಂಗೈಕ್ಯ ಲಿಂಗದಂತೆ ಅಂಗೈಕ್ಯ. ಮನವೆ ಲಿಂಗ, ಲಿಂಗವೆ ಮನವಾದ ಬಳಿಕ, ಮಾತು ಮಾತುಗಳೆಲ್ಲ ಹೊಳ್ಳಾದ ಕಾರಣ ಮಾತೇ ಲಿಂಗೈಕ್ಯ :ಲಿಂಗೈಕ್ಯವೆ ಸ್ವರ! ಶಬ್ದಸಂದಣಿಗಿನ್ನು ತೆರಹುಂಟೆ? ಕಪಿಲಸಿದ್ಧಮಲ್ಲಿನಾಥಯ್ಯಾ, ಇನ್ನು ನಿಮ್ಮ ದೇವರೆಂದು ಅರಸಲುಂಟೋ ಇಲ್ಲವೋ ಎಂಬುದನು ತಿಳಿಹಿಕೊಡಾ ಅಯ್ಯಾ2
--------------
ಸಿದ್ಧರಾಮೇಶ್ವರ
ಆತ್ಮವೆ ಅಂಗವಾದ ಐಕ್ಯಂಗೆ ಸದ್‍ಭಾವನೆ ಹಸ್ತ. ಆ ಹಸ್ತಕ್ಕೆ ಚಿಚ್ಛಕ್ತಿ , ಆ ಶಕ್ತಿಗೆ ಮಹಾಲಿಂಗ, ಆ ಲಿಂಗಕ್ಕೆ ಹೃದಯೇಂದ್ರಿಯವೆ ಮುಖ, ಆ ಮುಖಕ್ಕೆ ಸುತೃಪ್ತಿ ಪದಾರ್ಥ; ಆ ಪದಾರ್ಥವನು ಹೃದಯದಲ್ಲಿಹ ಮಹಾಲಿಂಗಕ್ಕೆ ಸಮರಸಭಕ್ತಿಯಿಂದರ್ಪಿಸಿ, ಆ ಪದಾರ್ಥವನು ಹೃದಯಲ್ಲಿಹ ಮಹಾಲಿಂಗಕ್ಕೆ ಸಮರಸ ಭಕ್ತಿಯಿಂದರ್ಪಿಸಿ ಆ ಸುತೃಪ್ತಿಪ್ರಸಾದವನು ಪಡೆದು ಸುಖಿಸುವಾತನೆ ಐಕ್ಯನು ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಜ್ಞಾನದಲ್ಲಿ ಸುಳಿವ ಜಂಗಮಸ್ಥಲದ ಇರವು ಹೇಂಗಿರಬೇಕೆಂದಡೆ: ಅಂಬುದ್ಥಿಯ ಕೂಡಿದ ಸಂ[ಭೇದದ]ತಿರಬೇಕು. ಮುಖ ಶಿರ ಬೋಳಾದಡೇನೊ, ಹುಸಿ ಕೊಲೆ ಕಳವು ಪಾರದ್ವಾರ ಅತಿಕಾಂಕ್ಷೆಯ ಬಿಡದನ್ನಕ್ಕರ ? ಗಡ್ಡ ಜಡೆ ಕಂಥೆ ಲಾಂಛನವ ತೊಟ್ಟಿಹ ಬಹುರೂಪರಂತೆ, ಜಗದೊಳಗೆ ಸುಳಿವ ಬದ್ಧಕತನದಲ್ಲಿ ದ್ರವ್ಯಕ್ಕೆ ಗೊಡ್ಡೆ[ಯ]ರ[ನಿ]ರಿವ ದೊಡ್ಡ ಮುದ್ರೆಯ ಕಳ್ಳರು, ತುರುಬ ಚಿಮ್ಮುರಿಗಳ ಕಟ್ಟಿ, ನಿರಿಗುರುಳ ಬಾಲೆಯರ ಮುಂದೆ ತಿರುಗುತಿಪ್ಪ ಬರಿವಾಯ ಭುಂಜಕರುಗಳು ಅರಿವುಳ್ಳವರೆಂದು ಬೀಗಿ ಬೆರೆವುತಿಪ್ಪರು. ಅರಿವಿನ ಶುದ್ಧಿಯನರಿದ ಮಹಾತ್ಮಂಗೆ ಹಲುಬಲೇತಕ್ಕಯ್ಯಾ, ಮೊಲೆಯ ಕಾಣದ ಹಸುಳೆಯಂತೆ ? ಅರಿವಿನ ಶುದ್ಧಿ ಕರಿಗೊಂಡವಂಗೆ, ನರಗುರಿಗಳ ಭವನವ ಕಾಯಲೇತಕ್ಕೆ ? ಅರಿವೆ ಅಂಗವಾದ ಲಿಂಗಾಂಗಿಗೆ ಬರುಬರ ಭ್ರಾಂತರ ನೆರೆ ಸಂಗವೇತಕ್ಕೆ ? ಇದು ಕಾರಣ, ತುರುಬೆಂಬುದಿಲ್ಲ, ಜಡೆಯೆಂಬುದಿಲ್ಲ, ಬೋಳೆಂಬುದಿಲ್ಲ. ಅರುಹು ಕುರುಹಿಂಗೆ ಸಿಕ್ಕದು, ಅರಿದುದು ಕುರುಹಿಂಗೆ ಸಿಕ್ಕದು, ಅರಿದುದು ಮರೆಯಲಾಗಿ, ಮರೆದುದು ಅರಿದುದಕ್ಕೆ ಕುರುಹಿಲ್ಲವಾಗಿ, ಇಂತೀ ಸಂಚಿತ ಪ್ರಾರಬ್ಧ ಆಗಾಮಿಗೆ ಹೊರಗಾದುದು, ಜ್ಞಾನ ಜಂಗಮಸ್ಥಲ. ಹೀಂಗಲ್ಲದೆ ಗೆಲ್ಲ ಸೋಲಕ್ಕೆ ಹೋರಿ ಬಲ್ಲವರಾದೆವೆಂಬವರ ವಲ್ಲಭ ನಿಃಕಳಂಕ ಮಲ್ಲಿಕಾರ್ಜುನಲಿಂಗನವರನೊಲ್ಲನಾಗಿ.
--------------
ಮೋಳಿಗೆ ಮಾರಯ್ಯ
ಆತ್ಮನೆ ಅಂಗವಾದ ಐಕ್ಯ ಭಾವವೆಂಬ ಹಸ್ತದಲ್ಲಿ ಮಹಾಲಿಂಗಕ್ಕೆ ಮನವೆಂಬ ಮುಖದಲ್ಲಿ ಪರಿಣಾಮ ಸಮರ್ಪಣವ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ. ಇದಕ್ಕೆ ಈಶ್ವರ್ದೋವಾಚ : ``ಆತ್ಮಾಂಗೋ ಭಾವಹಸ್ತೇನ ಐಕ್ಯಶ್ಚಾಪಿ ಮಹಾತ್ಮನೇ | ಹೃನ್ಮುಖೀ ಅರ್ಪಿತಂಚೈವ ಪದಾರ್ಥಂ ತೃಪ್ತಿಭೋಕ್ತವಾನ್ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪವನವೆ ಅಂಗವಾದ ಪ್ರಾಣಲಿಂಗಿಗೆ ಸುಮನವೆ ಹಸ್ತ. ಆ ಹಸ್ತಕ್ಕೆ ಆದಿಶಕ್ತಿ, ಆ ಶಕ್ತಿಗೆ ಜಂಗಮಲಿಂಗ, ಆ ಲಿಂಗಕ್ಕೆ ತ್ವಗಿಂದ್ರಿಯವೆ ಮುಖ, ಆ ಮುಖಕ್ಕೆ ಸ್ಪರ್ಶನಪದಾರ್ಥ; ಆ ಪದಾರ್ಥವನು ತ್ವಕ್ಕಿನಲ್ಲಿಹ ಜಂಗಮಲಿಂಗಕ್ಕೆ ಅನುಭಾವಭಕ್ತಿಯಿಂದರ್ಪಿಸಿ, ಆ ಸುಸ್ಪರ್ಶನ ಪ್ರಸಾದವನು ಪಡೆದು ಸುಖಿಸುವಾತನೆ ಪ್ರಾಣಲಿಂಗಿಯಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಅಗ್ನಿಯೆ ಅಂಗವಾದ ಪ್ರಸಾದಿಯಲ್ಲಿ ಪ್ರಾಣಲಿಂಗ ಶರಣ ಐಕ್ಯ ಭಕ್ತ ಮಾಹೇಶ್ವರನಪ್ಪ ಅಂಗಪಂಚಕವು ಗರ್ಭೀಕೃತವಾಗಿ ಆ ಪ್ರಸಾದಿಯಲ್ಲಿ ಶಿವಲಿಂಗ ಸಂಬಂಧವಾಗಿ ಆ ಶಿವಲಿಂಗದಲ್ಲಿಯೆ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಆಚಾರಲಿಂಗ ಗುರುಲಿಂಗವೆನಿಸುವ ಲಿಂಗಪಂಚಕವು ಗರ್ಭೀಕೃತವಾಗಿ ಶಿವಲಿಂಗವೆ ಸರ್ವಾಶ್ರಯವಾಗಿ ಇಂತೀ ಷಡ್ವಿಧಲಿಂಗದಲ್ಲಿ ಬೆರಸಿ ಬೇರಿಲ್ಲದಿರಬಲ್ಲರೆ ಪ್ರಸಾದಿಯೆಂಬೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಜಲವೆ ಅಂಗವಾದ ಮಾಹೇಶ್ವರನಲ್ಲಿ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಭಕ್ತನಪ್ಪ ಅಂಗಪಂಚಕವು ಗರ್ಭೀಕೃತವಾಗಿ ಆ ಮಾಹೇಶ್ವರಂಗೆ ಗುರುಲಿಂಗ ಸಂಬಂಧವಾಗಿ ಆ ಗುರುಲಿಂಗದಲ್ಲಿಯೆ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಆಚಾರಲಿಂಗವೆನಿಸುವ ಲಿಂಗಪಂಚಕವು ಗರ್ಭೀಕೃತವಾಗಿ ಗುರುಲಿಂಗವೆ ಆಶ್ರಯವಾಗಿ ಇಂತೀ ಷಡ್ವಿಧಲಿಂಗದಲ್ಲಿಯೆ ಬೆರಸಿ ಬೇರಿಲ್ಲದರಿಬಲ್ಲರೆ ಮಾಹೇಶ್ವರನೆಂಬೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಪ್ಪುವೆ ಅಂಗವಾದ ಮಹೇಶ್ವರಂಗೆ ಬುದ್ಧಿಯೆ ಹಸ್ತ. ಆ ಹಸ್ತಕ್ಕೆ ಜ್ಞಾನಶಕ್ತಿ , ಆ ಶಕ್ತಿಗೆ ಗುರುಲಿಂಗ, ಆ ಗುರುಲಿಂಗಕ್ಕೆ ಜಿಹ್ವೇಂದ್ರಿಯವೆಂಬ ಮುಖ, ಆ ಮುಖಕ್ಕೆ ಸುರಸವೆ ಪದಾರ್ಥ ; ಆ ಪದಾರ್ಥವನು ಜಿಹ್ವೆಯಲ್ಲಿಹ ಗುರುಲಿಂಗಕ್ಕೆ ನೈಷಿ*ಕಭಕ್ತಿಯಿಂದರ್ಪಿಸಿ, ಆ ಸುರಸ ಪ್ರಸಾದವನು ಪಡೆದು ಸುಖಿಸುವಾತನೇ ಮಹೇಶ್ವರನು ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ವೇದೋತ್ತರ ಸಂಧಿ ಉಪಸನ್ನೆ ಸಂಜ್ಞೆ ಉತ್ತರ ಚಿಂತನೆ ಖಂಡನೆಗಳಲ್ಲಿ ಭೃಗು, ದಧೀಚಿ, ಕಾಶ್ಯಪ, ಸಾಂಖ್ಯ, ಅಗಸ್ತ್ಯ ಮೊದಲಾದ ಋಷಿವರ್ಗಂಗಳೆಲ್ಲರು ವೇದದ ಕಡೆ ಮೊದಲೆಂದು ಪಠಿಸಿ ವೇಧಿಸಿ ಆ ವೇದ ಚಿಂತನೆಗೆ ಸಂದುದಿಲ್ಲ. ಇಂತೀ ವೇದ ಮೊದಲು ಶಾಸ್ತ್ರ ಆಗಮ ಪುರಾಣಂಗಳಲ್ಲಿ ಸನ್ನಿಧಿ ಸಮನ ಗಮನ ಪರಿಪೂರ್ಣವಾದುದಿಲ್ಲ. ಒಂದು ವೇದ ನಾಮದ ಶಾಖೆವೊಂದಕ್ಕೆ ಉಪನಯನ ಭೇದ ಸಂಖ್ಯೆ ಶತಸಹಸ್ರ ಪುನರಪಿಯಾಗಿ ಬಪ್ಪಲ್ಲಿ ಒಂದು ಅಧ್ಯಾಯ ಸಂಬಂಧದಿಂದ. ಆ ಸಂಬಂಧ ಶಾಖೆ ಉಚಿತವಹಾಗ ವಿಷ್ಣುವಿಂಗೆ ಪರಮಾಯು, ಬ್ರಹ್ಮಂಗೆ ಉಪನಯನವಿಲ್ಲ ಋಷಿವರ್ಗಕ್ಕೆ ವೇದೋಪದೇಶವಿಲ್ಲ. ಇಂತೀ ಶಂಕೆಯ ಸಂಕಲ್ಪದಲ್ಲಿ ನೋಡಿ ಕಂಡೆಹೆನೆಂದಡೆ ಚಕ್ರದ ಅಂಗುಲದ ಬಳಸಿನ ಲೆಕ್ಕದಂತೆ ಇಂತೀ ವೇದದ ಹಾದಿಯಲ್ಲ, ಶಾಸ್ತ್ರದ ಸಂದೇಹವಲ್ಲ. ಆಗಮಂಗಳಲ್ಲಿ ಭೇದ ವಿಭೇದವ ಕಂಡು ತರ್ಕಂಗಳಲ್ಲಿ ಹೋರುವ ಕುತರ್ಕಿಯಲ್ಲ. ಇಂತಿವ ನೇತಿಗಳೆದ ಸರ್ವಾಂಗಲಿಂಗಸಂಬಂಧವಾದ ಶರಣನು ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವೇ ಅಂಗವಾದ ನಿರಂಗನು.
--------------
ಪ್ರಸಾದಿ ಭೋಗಣ್ಣ
ಇನ್ನಷ್ಟು ... -->