ಅಥವಾ

ಒಟ್ಟು 13 ಕಡೆಗಳಲ್ಲಿ , 10 ವಚನಕಾರರು , 12 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಬ್ದಿಯ ಘೋಷವೆದ್ದು ನಿರ್ಭರ ನಿರ್ವೇಗದಿಂದ ಅಬ್ಬರಿಸಿ ಬರುವಾಗ ಅದನೊಬ್ಬರು ಹಿಡಿದ [ರುಂಟೆ]? ಆಕಾಶದ ಸಿಡಿಲು ಆರ್ಭಟದಿಂದ ಬಡಿವಲ್ಲಿ ತಾಕು ತಡೆಯುಂಟೆ? ಮಹಾದ್ಭುತವಾದ ಅಗ್ನಿಯ ಮುಂದೆ ಸಾರವರತ ತೃಣಕಾಷ್ಟವಿ [ದ್ದುದುಂ]ಟೆ? ತಾ ಸರ್ವಮಯವಾದ ನಿಃಕಳಂಕ ನಿರಂಜನ ಐಕ್ಯಾನುಭಾವಿಗೆ ಅಂಡ ಪಿಂಡ ಬ್ರಹ್ಮಾಂಡ ಅಬ್ದಿ ಆಕಾಶ ಆತ್ಮನೆಂದುಂಟೆ? ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ನಿಲ್ಲು ಮಾಣು.
--------------
ಘಟ್ಟಿವಾಳಯ್ಯ
ನವಿರೂ ನೆಳಲೂ ಇಲ್ಲದಂದು, ಷಡುಶೈವರಿಲ್ಲದಂದು ಬ್ರಹ್ಮಾಂಡ ಭಾಂಡ ಭಾಂಡಾವಳಿಗಳಿಲ್ಲದಂದು ಪಿಂಡಾಂಡ ಅಂಡ ಪಿಂಡಾವಳಿಗಳಿಲ್ಲದಂದು ಅಖಂಡಿತ ಜ್ಯೋತಿರ್ಮಯಲಿಂಗ ! ಶರಣನ ಲೀಲೆಯಿಂದಾದ ಏಳು ತೆರದ ಗಣ[ಘನ?] ಪಿಂಡವಂ ಕಂಡು ಅಖಂಡಿತನಾಗಿ ಬದುಕಿದೆನಯ್ಯಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ನೀರೂ ನೆಳಲೂ ಇಲ್ಲದಂದು, ಷಡುಶೈವ (ದೈವ ?) ರಿಲ್ಲದಂದು. ಬ್ರಹ್ಮಾಂಡ ಭಾಂಡ ಭಾಂಡಾವಳಿಗಳಿಲ್ಲದಂದು, ಪಿಂಡಾಂಡ ಅಂಡ ಅಂಡಾವಳಿಗಳಿಲ್ಲದಂದು, ಅಖಂಡಿತ ಜ್ಯೋತಿರ್ಮಯಲಿಂಗ ಶರಣನ ಲೀಲೆಯಿಂದಾದ ಏಳು ತರದ ಗಣಪಿಂಡವಂ ಕಂಡು ಅಖಂಡಿತನಾಗಿ ಬದುಕಿದೆನಯ್ಯಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ತಟ್ಟು ಕುಂಚ ಕಮಂಡಲಂಗಳೆಂಬ ಲೋಚು ಮುಟ್ಟಿಯ ಹಿಡಿದು, ಭೂತಕಾಯವಾಗಿ ತಿರುಗುವ ಆತನನರಿಯದ ಬೌದ್ಧಕಾರಿಗಳು ಕೇಳಿರೊ. ಜಾಗ್ರಸ್ವಪ್ನಸುಷುಪ್ತಿಯಲ್ಲಿ ತಟ್ಟುಗೆಡೆಯದ ತಟ್ಟಲ್ಲದೆ ಹಾಸಿಕೆಯಲ್ಲ. ಮನ ಬುದ್ಧಿ ಚಿತ್ತ ಅಹಂಕಾರ ಎಂಬಿವು ಕೂಡಿ, ಸುಚಿತ್ತವೆಂಬರಿವು ಹಿಂಗದ ಕೋಲಿನಲ್ಲಿ ಕಟ್ಟಿ, ಮೂರಂಗವ ತೊಡೆವುದು ಕುಂಚ. ಹುಟ್ಟುವ ಅಂಡ, ಜನಿಸುವ ಯೋನಿ, ಮರಣದ ಮರವೆಯೆಂಬೀ ಗುಣವ ಅರಿತು, ಕೀಳುವುದು ಮಂಡೆಯ ಲೋಚು. ಹಿಂಗರಿತು ಕರಿಗೊಂಡು, ಭವವಿರೋಧವಂ ಗೆದ್ದು, ಅಘನಾಶನನ ಅಂಗದ ಮೇಲೆ ಇಂಬಿಟ್ಟು, ಹೆರೆಹಿಂಗದ ಸಂಗವೆ ತಾನಾಗಿ, ಆತ ಮಂಗಳಮಯ ಗುರುಮೂರ್ತಿ, ಎನ್ನಂಗದ ಗೂಡಿನ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗ.
--------------
ಮನುಮುನಿ ಗುಮ್ಮಟದೇವ
ಭೂಮಿಯಿಲ್ಲದ ಧರೆಯಲ್ಲಿ, ಒಂದು ಮಹಾಮೇರುವೆಯ ಬೆಟ್ಟ ಹುಟ್ಟಿತ್ತು. ಅದರ ತಳ ಒಂದಂಡ, ಮೇಲೆ ಮೂರಂಡ ಮೂರರ ಮೇಲೆ ಹಾರಿಬಂದಿತ್ತು ಕಾಗೆ. ಬಂದ ಕಾಗೆ ತುದಿಯಲ್ಲಿ ಅಂತರಿಸಲಾಗಿ, ಮೇರುವೆ ಕುಸಿಯಿತ್ತು. ಕೆಳಗಣ ಅಂಡ ನಿಂದು, ಮೇಲಣ ಮೇರುವೆ ಒಡೆಯಿತ್ತು. ಮೂರಂಡವನೊಡಗೂಡಿದ ಕಾಗೆ ಹಾರಿತ್ತು , ಬೆಟ್ಟ ಬಟ್ಟಬಯಲು ಬೊಮ್ಮನೊಡೆಯ ತನುಮನ ಸಂಗಮೇಶ್ವರಲ್ಲಿ ಒಡಗೂಡಿದವಂಗೆ.
--------------
ಸಗರದ ಬೊಮ್ಮಣ್ಣ
ಹಸುವಿಂಗೆ ಸಂಜ್ಞೆ, ಎತ್ತಿಂಗೆ ಮುಟ್ಟು, ಕರುವಿಂಗೆ ಲಲ್ಲೆ. ಇಂತೀ ತ್ರಿಗುಣದ ಇರವ, ತ್ರಿಗುಣಾತ್ಮಕ ಭೇದವ, ತ್ರಿಗುಣ ಭಕ್ತಿಯ ಮುಕ್ತಿಯ, ತ್ರಿಗುಣ ಘಟಾದಿಗಳ, ತ್ರಿಗುಣ ಮಲ ನಿರ್ಮಲಂಗಳ, ತ್ರಿಗುಣ ಸ್ವಯ ಚರ ಪರಂಗಳಲ್ಲಿ ತ್ರಿವಿಧ ಶಕ್ತಿ ತ್ರಿವಿಧ ಮುಕ್ತಿ ಇಂತೀ ತ್ರಿವಿಧಂಗಳೊಳಗಾಗಿ ಉತ್ಪತ್ಯ ಸ್ಥಿತಿ ಲಯ ತ್ರಿವಿಧದ ಹೆಚ್ಚು ಕುಂದನರಿತು, ಎತ್ತು ಹಸುವಿನ ಸಂಗದಿಂದ ಕರುವಾದ ತೆರನನರಿತು ಇಂತೀ ಒಂದರಲ್ಲಿ ಒಂದು ಕೂಡಲಿಕ್ಕೆ ಬಿಂದು ನಿಂದು ಕುರುಹಾದುದ ಕಂಡು ನೆನೆದು ನೆನೆಸಿಕೊಂಬುದದೇನೆಂದು ತಿಳಿದು, ಇಂತೀ ಅಂಡ ಪಿಂಡಗಳಲ್ಲಿ ನಿರಾತ್ಮನು ಆತ್ಮನಾಗಿ, ನಾನಾರೆಂಬುದ ತಾನರಿತು ತಿಳಿದಲ್ಲಿ ತುರುಮಂದೆಯೊಳಗಾಯಿತ್ತು. ಇದು ಗೋಪತಿನಾಥನ ಕೂಟ, ವಿಶ್ವನಾಥಲಿಂಗನ ಲೀಲಾಭಾವದಾಟ.
--------------
ತುರುಗಾಹಿ ರಾಮಣ್ಣ
ಪರಮಪ್ರಕಾಶ ತನ್ನಯ ಮೂರ್ತಿ ಭಿತ್ತಿ ಅಹಲ್ಲಿ, ಚಿತ್ಪ್ರಕಾಶಶಕ್ತಿ ಮುಕ್ತಿಯ ಸಾಕಾರವ ಧರಿಸಿದಲ್ಲಿ, ತ್ರಿವಿಧದ ಉತ್ಪತ್ಯದ ಭೇದ. ಒಂದು ಮೂರಾಗಿ, ಮೂರ ಹಲವಾಗಿ, ಅಂಡ ಪಿಂಡಗಳಲ್ಲಿ ತೋರುವ ತೋರಿಕೆ, ಬಂಕೇಶ್ವರಲಿಂಗನ ಲೀಲಾಭಾವ.
--------------
ಸುಂಕದ ಬಂಕಣ್ಣ
ಕಾಳಮೇಘಮಂದಿರದ ಜಾಳಾಂಧರದ ಮನೆಯಲ್ಲಿ ಒಬ್ಬ ಸೂಳೆಯ ಬಾಗಿಲಲ್ಲಿ ಎಂಬತ್ತನಾಲ್ಕು ಲಕ್ಷ ಮಿಂಡಗಾರರು. ಅವಳ ಸಂಗದಲ್ಲಿ ಇರಲಮ್ಮರು, ಅವಳು ತಾವೇ ಬರಲೆಂದು ಕರೆಯದಿಹಳು. ಅವಳಿಗೆ ಯೋನಿ ಹಿಂದು, ಅಂಡ ಮುಂದು, ಕಣ್ಣು ಅಂಗಾಲಿನಲ್ಲಿ, ತಲೆ ಮುಂಗಾಲಿನಲ್ಲಿ, ಕಿವಿ ಭುಜದಲ್ಲಿ, ಕೈ ಮಂಡೆಯ ಮೇಲೆ, ಮೂಗು ಹಣೆಯಲ್ಲಿ, ಮೂಗಿನ ದ್ವಾರ ಉಂಗುಷ*ದಲ್ಲಿ, ಬಸುರು ಬಾಯಲ್ಲಿ, ನಡೆವಳು ತಲೆ ಮುಂತಾಗಿ, ಕಾಲು ಮೇಲಾಗಿ. ಅವಳ ಕೂಡುವ ಪರಿಯ ಹೇಳಾ, ಅಲೇಖನಾದ ಶೂನ್ಯ ಗೆದ್ದೆಯಲ್ಲಾ, ಕಲ್ಲಿನ ಹೊಟ್ಟೆಯ ಮರೆಯಲ್ಲಿ.
--------------
ವಚನಭಂಡಾರಿ ಶಾಂತರಸ
ಕಂಡುದ ಬಿಟ್ಟು ಕಾಣದುದ ಕಂಡೆಹೆನೆಂದಡೆ ಅಂಡ ಪಿಂಡಕ್ಕೆ ಹೊರಗಾದವಂಗಲ್ಲದೆ ಸಾಧ್ಯವಲ್ಲ ಅದು ಅಣೋರಣಿಯೊಳಗಣ ಮಹಾರೇಣು. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ ಮಾತುಳಂಗ ಮದುಕೇಶ್ವರನು.
--------------
ದಾಸೋಹದ ಸಂಗಣ್ಣ
ಸ್ವಯದಿಂದ ಪ್ರಕಾಶ, ಪ್ರಕಾಶದಿಂದ ಲಿಂಗ, ಲಿಂಗದಿಂದ ಶಿಷ್ಯ, ಶಿಷ್ಯನಿಂದ ಗುರು, ಗುರುವಿನಿಂದ ಗುರುತ್ವ, ಗುರುತ್ವದಿಂದ ಸಕಲವೈಭವಂಗಳ ಸುಖ. ಈ ಗುಣ ಅವರೋಹಾರೋಹಾಗಿ ಬಂದು, ಆ ವಸ್ತು ವಸ್ತುಕವಾಗಿ ಬಂದುದನರಿದು ಪಿಂಡಜ್ಞಾನಸ್ಥಲವ ಕಂಡು ರತ್ನ ರತ್ನ ಕೂಡಿದಂತೆ, ರತಿ ರತಿ ಬೆರಸಿದಂತೆ, ಸುಖ ಸುಖವನಾಧರಿಸಿದಂತೆ, ಬೆಳಗು ಬೆಳಗಿಂಗೆ ಇದಿರಿಟ್ಟಂತೆ, ಅಂಡ ಪಿಂಡ ಜ್ಞಾನ ತ್ರಿವಿಧ ನೀನಲಾ, ಸದ್ಯೋಜಾತಲಿಂಗದ ಲೀಲಾಭಾವ.
--------------
ಅವಸರದ ರೇಕಣ್ಣ
ಅಂಡ ಪಿಂಡೋಪಾಧಿಗಳಿಲ್ಲದ ಅಖಂಡ ಬಯಲು, ಖಂಡಿತವಾದ ನೆನಹಿಗೆ ನಿಲುಕದ ಚಿದ್ರೂಪ ಪರಮಾನಂದ ಪರತತ್ವವು ತಾನೆ ವಿಚಾರಿಸಿ ಕರಸ್ಥಲವಾಗಿ, ಅಂಡ ಪಿಂಡಂಗಳಿಗೆ ತೆರಹ ಕೊಟ್ಟ ಮಹದಾಕಾಶರೂಪ ನಮ್ಮ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನು.
--------------
ಸ್ವತಂತ್ರ ಸಿದ್ಧಲಿಂಗ
ಅಂಡ ಪಿಂಡವಾಗಿ, ಪಿಂಡಾಂಡವನೊಳಕೊಂಡು ವಿಚ್ಚಿನ್ನವಾದ ಭೇದವ ತಿಳಿದು, ತ್ರಿಗುಣಭೇದದಲ್ಲಿ ಪಂಚಭೂತಿಕದಲ್ಲಿ ಪಂಚವಿಂಶತಿತತ್ವಂಗಳಲ್ಲಿ, ಏಕೋತ್ತರಶತಸ್ಥಲ ಮುಂತಾದ ಭೇದಂಗಳ ತಿಳಿದು, ಆವಾವ ಸ್ಥಲಕ್ಕೂ ಸ್ಥಲನಿರ್ವಾಹವ ಕಂಡು, ಬಹುಜನಂಗಳು ಒಂದೆ ಗ್ರಾಮದ ಬಾಗಿಲಲ್ಲಿ ಬಂದು ತಮ್ಮ ತಮ್ಮ ನಿಳಯಕ್ಕೆ ಸಂದು ಗ್ರಾಮದ ಸುಖ-ದುಃಖವ ಅನುಭವಿಸುವಂತೆ, ಇಂತೀ ಪಿಂಡಸ್ಥಲವನ್ನಾಚರಿಸಿ ಆತ್ಮ ವೃಥಾ ಹೋಹುದಕ್ಕೆ ಮೊದಲೆ ಸದ್ಯೋಜಾತಲಿಂಗವ ಕೂಡಬೇಕು.
--------------
ಅವಸರದ ರೇಕಣ್ಣ
-->