ಒಟ್ಟು 49 ಕಡೆಗಳಲ್ಲಿ , 22 ವಚನಕಾರರು , 39 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಪಾಷಾಣದುದಕ ಏತರಿಂದ ದ್ರವ ?ಪಾಷಾಣದ ಪಾವಕ ಅದೇತರಿಂದ ಕ್ರೋಧ ?ಅಪ್ಪುವಿನ ಸಂಚಾರದ ರೂಪು ಅದೇತರ ಒಪ್ಪದಿಂದ ?ಅರಿದರುಹಿಸಿಕೊಂಬ ಅರ್ಕೇಶ್ವರಲಿಂಗನ ಇರವು ಅದೇತರಿಂದ?
ಎಲ್ಲರೂ ಕೂಡಿ ಬೀರನ ಚಪ್ಪರಕ್ಕೆ ಬಂದ ಅಜಗಾಹಿಗಳಂತೆ.ದ್ವೇಷದಲ್ಲಿ , ಅಸಿಯ ಒಡಲಲ್ಲಿ ಗಸಣಿಗೊಂಡಡೆ, ಅದು ಮಿಸುಕದಂತೆ.ಕೂಟದಲ್ಲಿ ಕೂಡಿ, ಮಾತಿನಲ್ಲಿ ನಿಜವಿಲ್ಲದೆ, ಅದೇತರ ಭಕ್ತಿಯ ವ್ರತ?ನಿಜನೀತಿಯ ನಿಚ್ಚಟಂಗೆ ಬಳಕೆಯ ಬಳಸುವನೀತಿಯ ಅರ್ತಿಕಾರರಿಗಿಲ್ಲ, ನಿಚ್ಚಟಂಗಲ್ಲದೆ.ಬಂಕೇಶ್ವರಲಿಂಗದ ಒಲುಮೆ ಎಲ್ಲರಿಗೆಲ್ಲಿಯದೊ !
ಪ್ರಸಾದವ ಪಡೆದವರೆಂದು ಬದ್ಧಸಂಕಲ್ಪ ದುರ್ವರ್ತನೆಗಳನೇನೆಂಬೆನಯ್ಯಾ!ಗಣಸಮೂಹದಲ್ಲಿ ಸೌಖ್ಯವಿಲ್ಲೆಂದು ಚಿಕ್ಕ ಬಟ್ಟಲಲ್ಲರ್ಪಿಸಿಕೊಂಡು,ಪೂರ್ವ ಬಳಗಗೂಡಿ ಹಂದಿ ನಾಯಿಯಂತೆ ಒಗೆದಾಡಿ ತಿಂಬುವಬೆಂದ ನರಕಿಗಳಿಗೆ ಪ್ರಸಾದವೆಲ್ಲಿ ಹುದಯ್ಯಾ?ಪ್ರಸಾದಿ ಒಮ್ಮೆ ಪ್ರಸಾದವ ಸೇವಿಸಿ, ಒಮ್ಮೆ ಉಚ್ಛಿಷ್ಟಕೂಳ ಸೇವಿಸುವನೆ?ಛೀ ಅದೇತರ ನಡೆನುಡಿ ಅತ್ತ ಹೋಗಿ,ನಮ್ಮ ಗುರುನಿರಂಜನ ಚನ್ನಬಸವಲಿಂಗಶರಣರ ತಿಂಥಿಣಿಯ ಸೋಂಕದೆ.
ನಾರಿಯಲ್ಲಿ ಕೋಲ ಹೂಡಿ, ಆರೈಕೆಯ ಮಾಡಿ ಎಸೆಯಲಿಕ್ಕೆತಾಗಿತು ಮನ ಸಂದ ಗುರಿಯ.ಅದೇತರ ಗುಣದಿಂದ?ಮರ ಬಾಗಿ ನಾರಿಯೈದಿ ಬಾಣ ಶರಸಂಧಾನವಾಗಿ ತಾಗಿದಂತೆಚಿತ್ತ ಹಸ್ತದ ಲಿಂಗದ ದೃಷ್ಟ.ಮನ ವಚನ ಕಾಯ ತ್ರಿಕರಣದಲ್ಲಿ ಕರಣಂಗಳಿಂದ ಅರಿತುಕಾಯದ ನೆಮ್ಮುಗೆಯಲ್ಲಿ ಕಾಣಬೇಕು.ಕಾಬ ತೆರದ ಮರೆಯಲ್ಲಿ ಕಳೆ ತೋರುತ್ತದೆಕುಡಿವೆಳಗು ಕಳೆಕಳಿಸುತ್ತದೆ ಸದಾಶಿವ[ಮೂರ್ತಿ]ಲಿಂಗದಲ್ಲಿ.
ಕಾಡಿ ಬೇಡಿ ಉಂಬರೆಲ್ಲರು ಜಗದ ರೋಡಗವಂತರು.ಬೇಡದೆ ಕಾಡದೆ ಚಿತ್ತದಲ್ಲಿ ಆಸೆಯ ಕಲೆದೋರದೆ,ಹೊತ್ತ ಘಟಕ್ಕೆ ತುತ್ತು, ಶೀತಕ್ಕೆ ಅಂಬರನಿರ್ಜಾತನ ಒಲುಮೆ ಎಲ್ಲಿದ್ದರೂ ತಪ್ಪದೆಂದುವಿಶ್ವಾಸವುಳ್ಳ ಶರಣಂಗೆಅವ ತೊಟ್ಟಿದ್ದುದು ಅದೇತರ ಕಾಯ? ದಗ್ಧಪಟ ನ್ಯಾಯ!ನಾರಾಯಣಪ್ರಿಯ ರಾಮನಾಥನಲ್ಲಿ ಕಳೆದುಳಿದಶರಣಂಗೆ!
ಸುಧೆಯೊಳಗೆ ವಿಷವುಂಟೆ? ಮಧುರದೊಳಗೆ ಕಹಿಯುಂಟೆ?ದಿನಮಣಿಯೊಳಗೆ ಕಪ್ಪುಂಟೆ? ಬೆಳದಿಂಗಳೊಳಗೆ ಕಿಚ್ಚುಂಟೆ?ಅಮೃತಸಾಗರದೊಳಗೆ ಬೇವಿನ ಬಿಂದುವುಂಟೆ?ಮಹಾಜ್ಞಾನಸ್ವರೂಪರಪ್ಪ ಶರಣರೇ ಲಿಂಗವೆಂದರಿದ ಮಹಾತ್ಮಂಗೆಸಂಕಲ್ಪ ಭ್ರಮೆಯುಂಟೆ? ಅದೇತರ ವಿಶ್ವಾಸ? ಸುಡು ಸುಡು,ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
ಕೂಪಚಿಲುಮೆ ಬಹುಜಲಂಗಳಲ್ಲಿ ಸ್ವೀಕರಿಸಿಕೊಂಬುದು ಅದೇತರ ಶೀಲ ತನು ಕರಗದೆ, ಮನ ಮುಟ್ಟದೆ, ಆಗಿಗೆ ಮುಯ್ಯಾಂತು ಚೇಗಿಗೆ ಹಲುಬುತ್ತ, ಸುಖದುಃಖವೆಂಬ ಉಭಯವರಿಗಾಣದೆ, ಅಂದಂದಿಗೆ ಆಯು ಸಂದಿತ್ತೆಂದಿರಬೇಕು. ಆ ಗುಣ ಶಿವಲಿಂಗ ಖಂಡಿತನೇಮ, ಈ ಸಂಗವೆ ಎನಗೆ ಸುಖ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ಕೂಟ.
ವಾಸನೆ ವೆಗ್ಗಳದ ಕುಸುಮವ, ಅದ ಲೇಸ ಕಂಡು ವಾಸಿಸಿದಡೆ ಸುಖವಲ್ಲದೆ,ಅದ ಘಾಸಿ ಎಸೆದಡೆ ಅದೇತರ ಗಂಧ ? ನಾತದ ಕೂಟ.ಭಕ್ತನ ಪೂಜೆಯ ಗುರುವಿನ ಯುಕ್ತಿ, ಇಷ್ಟನರಿತಡೆ ಆತನಿರವು, ತತ್ವದಬ್ಥಿತ್ತಿ,ಅಲೇಖನಾದ ಶೂನ್ಯ ಕಲ್ಲಿನ ಮೆಲ್ಲೆದೆಯಾಗದಿರಯ್ಯಾ.
ಗಂಪಕ್ಕೆ ಸಿಕ್ಕೆ, ಬಲೆಗೊಳಗಾಗೆ,ಗೂಳಿಯ ಇರಿತದ ಡಾವರಕ್ಕೆ ನಿಲ್ಲೆ,ಸೆಳೆಗೋಲಿನ ಗಾಣದ ಕೀಟಕವನೊಲ್ಲೆ.ನಿನ್ನಾಟ ಅದೇತರ ಮಡುವಿನಾಟ ಹೇಳಾ,ಕದಕತನ ಬೇಡ ಕದಂಬಲಿಂಗಾ.
ತೂತಿಗೆ ಬಹವರ ಶುದ್ಧಿಯ ಮಾತು,ಅದೇತರ ವೇದ? ಅದೇತರ ಶಾಸ್ತ್ರ?ಅದೇತರ ಆಗಮಯುಕ್ತಿ?ಪೂರ್ವ ಅಪರವೆಂಬ ತೂತಿನ ಭೇದವ ಮುಚ್ಚಿಆತನನರಿತಲ್ಲಿ ಸಕಲ ಭ್ರಾಂತು ನಿರಸನ,ಆತುರವೈರಿ ಮಾರೇಶ್ವರಾ.
ಜಲವ ಕಾಣದ ಬೋದನಂತೆನೋಡುತ್ತ ಗರಿಯ ಹಿಡಿದ ಅಂಟಿನಂತೆಹಿಡಿದೊಡವೆಯ ಬಿಡಲಾರದೆ ಬೇವುತ್ತಅಡಿವಜ್ಜೆಯ ಮೆಟ್ಟಿ ಬಿಡಲಾರದೆ ಅಡಿಗಡಿಗೆ ಎಡತಾಕುತ್ತಕೂಪರ ಕೈಯಿಂದ ಘಾತಕತನದಿಂದ ವ್ಯಾಪರಿಸುತ್ತಸುಡು ಅದೇತರ ವಿರಕ್ತಿ!ಮಾತಿನ ಮಾಲೆಯ ಪೂಸತ್ವ!ಇದ ನಿಹಿತಲಿಂಗಾಂಗಿಗಳೊಪ್ಪರು.ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ,ಮಾತುಳಂಗ ಮಧುಕೇಶ್ವರನು.
ಮಾಡುವರ ಮಾಟಕ್ಕಂಜಿ ತೂತ ಬಿಟ್ಟಡೆಅದೇತರ ಯೋಗ? ಅದೇತರ ಪೂಜೆ?ಪರರ ಬೇಡುವ ಬಾಯಿ ತೂತ ಮುಚ್ಚಿದಡೆ ಆಸೆಗೆ ಹೊರಗು,ಆತುರವೈರಿ ಮಾರೇಶ್ವರಾ.
ಮಾತಿನಲ್ಲಿ ನಿರ್ವಾಣ, ಆತ್ಮನಲ್ಲಿ ಘಾತಕ, ಕೂಸು ಹೇತು ಕಲಿಸುವಂತೆ,ತ್ರಿವಿಧದ ಆಸೆಗೆ ಸಿಕ್ಕಿ ಸಾವ ತೂತರಿಗೆಲ್ಲಿಯದೊ ಲಿಂಗ ?ಅದೇತರ ನಿರ್ವಾಣ?ಏತದ ಕೂನಿಯಂತೆ, ರಾಟಾಳದಂತೆ,ಭವಪಾಶದಲ್ಲಿ ಬಿದ್ದು ಘಾಸಿಯಾದ ಮತ್ತೆ ನಿನಗಿನ್ನೇತರ ಭಾಷೆಯೊ,ನಿಃಕಳಂಕ ಮಲ್ಲಿಕಾರ್ಜುನಾ?
ಭವಿಸಂಗವನೊಲ್ಲೆನೆಂದು, ಭವಿಗಳ ಮನೆಯಲ್ಲಿ ಉಣ್ಣೆನೆಂದು,ಭವಿಗಳಿಗೆ ಇಕ್ಕೆನೆಂದು, ಭವಿಪಾಕದ ಕ್ಷಾರ ಕ್ರಮುಕ ಮಧುರ ತಿಲ ಚೂರ್ಣಇವು ಮೊದಲಾದ ದ್ರವ್ಯಂಗಳ ಭಕ್ಷಿಸಿ, ಪ್ರೇತರ ಕೂಟವನೊಲ್ಲೆನೆಂಬ,ಜಗನೀತಿಯ ವರ್ತಕರುಗಳಿಗೆ ಅದೇತರ ಶೀಲ,ಬಂಕೇಶ್ವರಲಿಂಗದಲ್ಲಿ ?
ಕಾಯ ಹಲವು ಭೇದಗಳಾಗಿಆತ್ಮನೇಕವೆಂಬುದು ಅದೇತರ ಮಾತು?ಬೆಂಕಿಯಿಂದಾದ ಬೆಳಗು ಸುಡಬಲ್ಲುದೆ? ಬೆಂಕಿಯಿಲ್ಲದೆ.ಹಲವು ಘಟದಲ್ಲಿ ಅವರವರ ಹೊಲಬಿನಲ್ಲಿ ಅನುಭವಿಸುತ್ತಮತ್ತೊಂದರಲ್ಲಿ ಕೂಟಸ್ಥವಪ್ಪ ಸುಖ ಉಂಟೆ?ಈ ಗುಣ ಎನ್ನಯ್ಯ ಚೆನ್ನರಾಮನನರಿದಲ್ಲಿ.