ಅಥವಾ

ಒಟ್ಟು 88 ಕಡೆಗಳಲ್ಲಿ , 34 ವಚನಕಾರರು , 85 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೃಥ್ವ್ಯಾದಿ ಪಂಚಭೂತಂಗು ಇದಕ್ಕೆ ವಿವರ: ಅಸ್ಥಿ ಚರ್ಮ ಮಾಂಸ ರೋಮ ಮಜ್ಜೆ ಇವೈದು ಪೃಥ್ವಿಯ ಅಂಶ. ಶುಕ್ಲ ಶೋಣಿತ ಶ್ಲೇಷ್ಮ ಪಿತ್ತ ರಕ್ತ ಇವೈದು ಅಪ್ಪುವಿನ ಅಂಶ. ಹಸಿವು ತೃಷೆ ನಿದ್ರೆ ಆಲಸ್ಯ ಸ್ತ್ರೀಸಂಗ ಇವೈದು ಅಗ್ನಿಯ ಅಂಶ. ಹವುದು ಕುಳ್ಳಿರುವುದು ಏಳುವುದು ಮೈಮುರಿವುದು ನಡೆವುದು ಈ ಐದು ವಾಯುವಿನ ಅಂಶ. ಡಂಬು ಪ್ರಕಟ ಪ್ರಪಂಚು ಅಭ್ರಚ್ಛಾಯ ಆನಂದ ಇವೈದು ಆಕಾಶದ ಅಂಶ. ಇಂತೀ ಅಂಗ ಶುದ್ಧಂಗಳ ಬಿಟ್ಟು ಲಿಂಗಾಂಗವ ಮಾಡಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಶರಣನೆನಿಸುವನು
--------------
ಚನ್ನಬಸವಣ್ಣ
ಪೃಥ್ವಿಯ ಮರೆಯ ಸುವರ್ಣದಂತೆ ಚಿಪ್ಪಿನ ಮರೆಯ ಮುತ್ತಿನಂತೆ ಅಪ್ಪುವಿನ ಮರೆಯ ಅಗ್ನಿಯಂತೆ ಒಪ್ಪದೊಳಗಣ ಮಹಾಪ್ರಕಾಶದಂತೆಯಿಪ್ಪ ಘನಲಿಂಗವನರಿಯೆ. ರುದ್ರ ಬ್ರಹ್ಮ ವಿಷ್ಣ್ವಾವದಿಗಳು ತಮ್ಮ ಆತ್ಮಜ್ಞಾನ [ನಿಶ್ಚಿಂ]ತೆಯೆಂಬ ನಿಜವ ನೀಗಾಡಿಕೊಂಡರು. ಇದನರಿಯದೆ ಆಚರಿಸುವರು, ಆರಿಗೂ ಅಳವಲ್ಲವಯ್ಯಾ. ಇಷ್ಟಪ್ರಾಣಭಾವಸಂಬಂದ್ಥಿಗಳಪ್ಪ ಸದ್ಭಾವಾಚಾರವೆಡೆಗೊಂಡ ಶರಣಂಗಲ್ಲದೆ ಮಿಕ್ಕಿನ ದುರಾಚಾರಿಗಳಿಗೆ ಸಾಧ್ಯವಲ್ಲ, ಬಸವಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲ ರಾಜೇಶ್ವರಲಿಂಗವು.
--------------
ಬಾಚಿಕಾಯಕದ ಬಸವಣ್ಣ
ಭಕ್ತ ಭಕ್ತನೆಂಬರು, ಪೃಥ್ವಿಯ ಪೂರ್ವಾಶ್ರಯವ ಕಳೆಯನಲರಿಯಫದನ್ನಕ್ಕ, ಅಪ್ಪುವಿನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ, ತೇಜದ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ, ವಾಯುವಿನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ, ಆಕಾಶದ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ, ಸೋಮಸೂರ್ಯರ ಕಳೆಗಳ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ, ಆತ್ಮನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ,_ ಭಕ್ತರೆಂದು ಲಿಂಗವ ಪೂಜಿಸುವವರ ಕಂಡು ನಾನು ಬೆರಗಾದೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ತ್ರೈಮೂರ್ತಿಗಳು ನಿನ್ನ ಸಾಕಾರದ ಶಾಖೆ. ತ್ರೈಮೂರ್ತಿಗಳು ನಿನ್ನ ಅಪ್ಪುವಿನ ಅಂಕುರ ಶಕ್ತಿ. ಇಂತೀ ಸರ್ವಗುಣ ಸಂಪನ್ನನಾಗಿ ಬ್ರಹ್ಮಂಗೆ ಅಂಡವ ಕೊಟ್ಟು ವಿಷ್ಣುವಿಗೆ ಪಿಂಡವ ಕೊಟ್ಟು ರುದ್ರಂಗೆ ಕಂಡೆಹವ ಕೊಟ್ಟು ಹಿಂಗಿದೆ. ನೀನಿದರಂದವನೊಲ್ಲದೆ ಅಂಗಕ್ಕೆ ಮಯ ನೀನೇ, ನಿರಂಗಕ್ಕೆ ಸಂಗ ನೀನೇ. ಹಿಂಗೂದಕ್ಕೆ ನಿನ್ನಂಗ ಅನ್ಯ ಬ್ಥಿನ್ನವಲ್ಲ. ಮುಕುರದ ಮರೆಯಲ್ಲಿ ತೋರುವ ಪ್ರತಿರೂಪಿನಂತೆ ಸಕಲದೇವರ ಚೈತನ್ಯಭಾವ ನಿನ್ನ ಉಷ್ಣ ಬಿಂದು, ಸಕಲದೇವರ ಶಾಂತಿ ನಿನ್ನ ಸಮಾನ ಬಿಂದು, ಇಂತಿವ ಹೇಳುವಡೆ ವಾಙ್ಮನಕ್ಕತೀತ ಅತ್ಯತಿಷ್ಠದ್ದಶಾಂಗುಲ ನಾರಾಯಣ ನಯನಪೂಜಿತ ಪ್ರಿಯ ರಾಮೇಶ್ವರಲಿಂಗ ನಾ ನೀನಾದೈಕ್ಯ.
--------------
ಗುಪ್ತ ಮಂಚಣ್ಣ
ಪಾಷಾಣದುದಕ ಏತರಿಂದ ದ್ರವ ? ಪಾಷಾಣದ ಪಾವಕ ಅದೇತರಿಂದ ಕ್ರೋಧ ? ಅಪ್ಪುವಿನ ಸಂಚಾರದ ರೂಪು ಅದೇತರ ಒಪ್ಪದಿಂದ ? ಅರಿದರುಹಿಸಿಕೊಂಬ ಅರ್ಕೇಶ್ವರಲಿಂಗನ ಇರವು ಅದೇತರಿಂದ?
--------------
ಮಧುವಯ್ಯ
ಪೃಥ್ವಿ ಸಕಲವ ಧರಿಸಿಕೊಂಡಿಪ್ಪಂತೆ ಶಿವಶರಣ ಸಮಾಧಾನಿಯಾಗಿರಬೇಕಯ್ಯಾ. ಅಪ್ಪುವಿನ ನಿರ್ಮಳದಂತೆ ಶಿವಶರಣ ನಿರ್ಮಳನಾಗಿರಬೇಕಯ್ಯಾ. ಪಾವಕನು ಸಕಲದ್ರವ್ಯಂಗಳ ದಹಿಸಿಯು ಲೇಪವಿಲ್ಲದ ಹಾಂಗೆ ಶಿವಶರಣ ನಿರ್ಲೇಪನಾಗಿರಬೇಕಯ್ಯಾ. ವಾಯು ಸಕಲದ್ರವ್ಯಂಗಳಲ್ಲಿಯು ಸ್ಪರ್ಶನವ ಮಾಡಿಯು ಆ ಸಕಲದ ಗುಣವ ಮುಟ್ಟದ ಹಾಂಗೆ ಶಿವಶರಣ ಸಕಲಭೋಗಂಗಳನು ಭೋಗಿಸಿಯು ಸುಗಂಧ ದುರ್ಗಂಧಂಗಳನು ಮುಟ್ಟಿಯು ನಿರ್ಲೇಪಿಯಾಗಿರಬೇಕಯ್ಯ! ಆಕಾಶವು ಸಕಲದಲ್ಲಿ ಪರಿಪೂರ್ಣವಾಗಿಹ ಹಾಂಗೆ ಶಿವಶರಣ ಸಕಲದಲ್ಲಿ ಪರಿಪೂರ್ಣನಾಗಿರಬೇಕಯ್ಯಾ. ಇಂದುವಿನಂತೆ ಶಿವಶರಣ ಸಕಲದಲ್ಲಿ ಶಾಂತನಾಗಿರಬೇಕಯ್ಯಾ. ಭಾನುವು ತಮವನಳಿಸಿ ಪ್ರಕಾಶವ ಮಾಡುವ ಹಾಂಗೆ ಶಿವಶರಣ ಅವಿದ್ಯವ ತೊಲಗಿಸಿ ಸುವಿದ್ಯವ ಮಾಡಬೇಕಯ್ಯಾ. ಇದು ಕಾರಣ, ಸದ್ಗುರುಪ್ರಿಯ ಸಿದ್ಧಸೋಮನಾಥಾ, ನಿಮ್ಮ ಶರಣ ನಿರ್ಲೇಪನಯ್ಯಾ.
--------------
ಅಮುಗಿದೇವಯ್ಯ
ಅನಾದಿಯ ಮಗನು ಆದಿ, ಆದಿಯ ಮಗನತೀತ, ಅತೀತನ ಮಗನು ಆಕಾಶ,. ಆಕಾಶನ ಮಗನು ವಾಯು, ವಾಯುವಿನ ಮಗನಗ್ನಿ, ಅಗ್ನಿಯ ಮಗನು ಅಪ್ಪು, ಅಪ್ಪುವಿನ ಮಗನು ಪೃಥ್ವಿ. ಪೃಥ್ವಿಯಿಂದ ಸಕಲ ಜೀವರೆಲ್ಲರು ಉದ್ಭವಿಸಿದರು ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಆಚಾರಲಿಂಗದೊಳಗಿಪ್ಪೆವೆಂಬರು ಪೃಥ್ವಿಯ ಕತ್ತಲೆಯೊಳಡಗಿಹರು. ಗುರುಲಿಂಗದೊಳಗಿಪ್ಪೆವೆಂಬರು ಅಪ್ಪುವಿನ ಕತ್ತಲೆಯೊಳಡಗಿಹರು. ಶಿವಲಿಂಗದೊಳಗಿಪ್ಪೆವೆಂಬರು ಅಗ್ನಿಯ ಕತ್ತಲೆಯೊಳಡಗಿಹರು. ಜಂಗಮಲಿಂಗದೊಳಗಿಪ್ಪೆವೆಂಬರು ವಾಯುವಿನ ಕತ್ತಲೆಯೊಳಡಗಿಹರು. ಪ್ರಸಾದಲಿಂಗದೊಳಗಿಪ್ಪೆವೆಂಬರು ಆಕಾಶದ ಕತ್ತಲೆಯೊಳಡಗಿಹರು. ಮಹಾಲಿಂಗದೊಳಗಿಪ್ಪೆವೆಂಬರು ಆತ್ಮನ ಕತ್ತಲೆಯೊಳಡಗಿಹರು. ಇವರನೆಂತು ಶರಣೈಕ್ಯರೆನ್ನಬಹುದು ಹುಸಿಡಂಭಕ ಹೇಸಿಮಾನವರ ? ಗುರುನಿರಂಜನ ಚನ್ನಬಸವಲಿಂಗಾ
--------------
ದೇಶಿಕೇಂದ್ರ ಸಂಗನಬಸವಯ್ಯ
ಪೃಥ್ವಿ ಅಪ್ಪುವಿನ ಸಂಗದಲ್ಲಿ, ಅನಲ ಅನಿಲವೆಂಬ ಪುತ್ಥಳಿ ಹುಟ್ಟಿತ್ತು. ಆ ಪುತ್ಥಳಿಯ ಗರ್ಭದಲ್ಲಿ, ಆಕಾಶ ಮಹದಾಕಾಶವೆಂಬ ಕುರುಹುದೋರಿತ್ತು. ಅದು ನಾದಪೀಠ ಬಿಂದುಲಿಂಗ ಕಳೆ ವಸ್ತುವಾಗಿ, ಹೊಳಹುದೋರುತ್ತದೆ. ಆ ಹೊಳಹು ಆರುಮೂರಾದ ಭೇದವ ತಿಳಿದು, ಮೂರು ಏಕವಾದಲ್ಲಿ, ಐಕ್ಯವನರಿತಲ್ಲಿ, ನಾದಬಿಂದುಕಳೆಭೇದವಿಲ್ಲ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಹಠಯೋಗ ಲಂಬಿಕೆಯೆಂದು ಆಕುಂಚನವೆಂದು ವಜ್ರ ಅಮರಿಯ ಕಲ್ಪವೆಂದು ಮಲಮೂತ್ರಂಗಳ ಸೇವಿಸುತ್ತ ಇದು ಪೂರ್ವ ನವನಾಥಸಿಧhರ ಮತೋಕ್ತವೆಂದು ಕಾಪಾಲಿಕಾಚರಣೆಯ ಆಚರಿಸುವವರಲ್ಲ ಶರಣರು. ಮೇಣು, ತಲೆಯೊಳಗಣ ವಾತ ಪಿತ್ಥ ಶ್ಲೇಷ್ಮವ ತೆಗೆದು ಅಮೃತವೆಂದು ಬಿನುಗು ದೃಷ್ಟವ ತೋರುವರಲ್ಲ ಶರಣರು. ದ್ರವಿಸುವ ದೇಹದಲ್ಲಿ ಅಪ್ಪುವಿನ ಫಲರಸಕ್ಷೀರ ಘೃತ ಮೊದಲಾದವ ಸೇವಿಸುತ್ತ ಅನ್ನವ ಬಿಟ್ಟೆವೆಂಬ ಭೂತಚೇಷ್ಟಕರಲ್ಲ ಶರಣರು. ಇಂತಿವೆಲ್ಲವು ಕಾಕು ಸಟೆ ಭ್ರಾಂತೆಂದು ತಿಳಿದು ನಿರ್ಧರ ನಿಜದಿ ನಿಂದರು, ಗುಹೇಶ್ವರಾ ನಿಮ್ಮ ಶರಣರು ಅಗ್ರಗಣ್ಯರು
--------------
ಅಲ್ಲಮಪ್ರಭುದೇವರು
ಪೃಥ್ವಿಯ ಪೂರ್ವಾಶ್ರಯ ರಂಗವಲ್ಲಿಯಲ್ಲಿ ಹೋಹುದು. ಅಪ್ಪುವಿನ ಪೂರ್ವಾಶ್ರಯ ಶಬ್ದದಿಂದ ಹೋಹುದು. ಅಗ್ನಿಯ ಪೂರ್ವಾಶ್ರಯ ಧೂಪದಿಂದ ಹೋಹುದು. ವಾಯುವಿನ ಪೂರ್ವಾಶ್ರಯ ಧ್ಯಾನದಿಂದ ಹೋಹುದು. ಆಕಾಶದ ಪೂರ್ವಾಶ್ರಯ ಮಂತ್ರದಿಂದ ಹೋಹುದು. ಚಂದ್ರ ಸೂರ್ಯ ಆತ್ಮನ ಪೂರ್ವಾಶ್ರಯ ಮಾಡುವ ಕಿಂಕಿಲದಿಂದ ಹೋಹುದು ಇದು ಕಾರಣ ಭಕ್ತಕಾಯ ಮಮಕಾಯ ಕೂಡಲಚೆನ್ನಸಂಗಮದೇವ.
--------------
ಚನ್ನಬಸವಣ್ಣ
ಜಗದೊಳಗೆ ಹುಟ್ಟಿ ಜಗದ ಹಂಗಿಗರಾಗಿ, ನಾವು ಜಂಗಮ, ನಾವು ಭಕ್ತರೆಂಬ ನುಡಿಗೆ ನಾಚರು ನೋಡಾ. ಅಪ್ಪುವಿನ ಘಟನ ಹೊತ್ತುಕೊಂಡು ಅನ್ನಪಾಂಗಳಿಗೆ ಅನುಸರಿಸಿ ನಡೆವುತ್ತ, ಹೊನ್ನು, ಹೆಣ್ಣು, ಮಣ್ಣನೀವವರ ಬಾಗಿಲ ಕಾಯ್ವ ಅಣ್ಣಗಳ ವೇಷಕ್ಕೆ ಶರಣಾರ್ಥಿ. ಅವರ ಆಶಾಪಾಶವ ಕಂಡು, ಹೇಸಿತ್ತೆನ್ನ ಮನವು. ಅದಂತಿರಲಿ, ಅದು ಬ್ರಹ್ಮನ ಹುಟ್ಟು, ವಿಷ್ಣುವಿನ ಸ್ಥಿತಿ, ರುದ್ರನ ಲಯಕ್ಕೊಳಗಾಗಿ ಹೋಯಿತ್ತು ಅಂತಲ್ಲ ಕೇಳಿರಣ್ಣ. ಜಂಗಮವಾದರೆ ಜಗದೊಳಗೆ ಹುಟ್ಟಿ, ಜಗದ ಹಂಗ ಹರಿದು, ಹೊನ್ನು, ಹೆಣ್ಣು, ಮಣ್ಣು ಕಣ್ಣಿಲೆ ನೋಡಿ ಕಾಮಿಸದೆ, ಮನದಲ್ಲಿ ನೆನೆಯದೆ, ಮಾಯವನುಣ್ಣದೆ, ಆಶೆಗೊಳಗಾಗದೆ, ವೇಷವ ಹೊರದೆ, ದೇಶದ ಮನುಜರ ಸುತ್ತಿದ ಪಾಶಕ್ಕೆ ಹೊರಗಾಗಿ ಸುಳಿವ ಜಂಗಮದ ಈಶನೆಂದೆ ಕಾಂಬೆ. ಆ ಜಂಗಮಕ್ಕೆ ಅರ್ಥ, ಪ್ರಾಣ, ಅಬ್ಥಿಮಾನವನೊಪ್ಪಿಸಿ, ತಪ್ಪದೆ ಒಡೆಯನೆಂದರಿದು ಮಾಡುವ ಭಕ್ತನ ಎಂತಿಪ್ಪನೆಂದು ಕಾಂಬೆ. ಇದನೆಂತಾದರೂ ಒಪ್ಪುಗೊಳ್ಳ ಎನ್ನ. ಬಸವಪ್ರಿಯ ಕೂಡಲಚೆನ್ನಸಂಗನ ಬಸವಣ್ಣನಲ್ಲಿ ಶರಣಗಣಂಗಳು.
--------------
ಹಡಪದ ಅಪ್ಪಣ್ಣ
ಲಿಂಗಸ್ವರೂಪಕ್ಕೆ ಪಂಚಸೂತ್ರ ಲಕ್ಷಣವನರಿತು ವರ್ತುಳ ಖಂಡಿಕಾದಂಡ ಗೋಮುಖ ಗೋಳಕಾಕಾರವಪ್ಪ ಲಿಂಗಮೂರ್ತಿಯಿಂದ ಶಶಿ ರವಿ ಪವನ ಪಾವಕ ಆತ್ಮ ಮುಂತಾದ ಭೇದಂಗಳನರಿದು ಪಂಚಸೂತ್ರದಿಂದ ಪ್ರಯೋಗಿಸಿ, ಅಚೇತನವಪ್ಪ ಶಿಲೆಯ ಕುಲವಂ ಹರಿದು, ತಾ ಶುಚಿರ್ಭೂತನಾಗಿ ಆ ಇಷ್ಟಲಿಂಗವ ತನ್ನ ಕರಸ್ಥಲದಲ್ಲಿ ಮೂರ್ತಿಗೊಳಿಸಿ ತನು ಕರಗಿ ಮನ ರೆುsುೂಂಪಿಸಿ ಪುಳಕಿತದಿಂದ ಆನಂದಾಶ್ರು ಉಣ್ಮಿ ನಿಧಾನಿಸಿ ನಿಕ್ಷೇಪವ ಕಾಬವನಂತೆ ಬಯಲ ಬಂದಿವಿಡಿವವನಂತೆ ಶಿಲೆಯಲ್ಲಿ ರಸವ ಹಿಳವವನಂತೆ ರತ್ನದ ಕಳೆಯ ಗಂಟನಿಕ್ಕಿ ಕಟ್ಟಿ ತಾಹವನಂತೆ ಮುತ್ತಿನೊಳಗಡಗಿದ ಅಪ್ಪುವಿನ ವಿರಾಳದಿಂದ ಶೋದ್ಥಿಸಿ ಮುಚ್ಚಿತಾಹವನಂತೆ ಜ್ಯೋತಿಗೆ ಪ್ರತಿಹಣತೆಯಿಂದ ಆ ಬೆಳಗ ಮುಟ್ಟಿಸಿ ಕಾಹವನಂತೆ, ಇಂತೀ ನಿರವಯದ ಸುವಸ್ತುವಿನ ಪ್ರಯೋಗದಿಂದ ದಿವ್ಯಪ್ರಕಾಶನ ತನ್ನ ಕರತಳಾಮಳಕದಂತೆ ಮೂರ್ತಿಗೊಂಡಿದ್ದ ಶಿವಲಿಂಗಮೂರ್ತಿಗೆ ಧ್ಯಾನದ ಕೈಯಿಂದ ಆ ಸ್ವರೂಪಕ್ಕೆ ಮೂರ್ತಿಗೊಳಿಸಿ ಷೋಡಶಕಳೆಯಿಂದ ಉಪಚರಿಸಿ ನವಕಳಶ ಪ್ರಯತ್ನ ಪ್ರಯೋಗವ ಮಾಡಿ ಚತುರ್ವಿಧ ಆಚಾರ್ಯರ ಕೂಡಿ ಅಷ್ಟದೆಸೆಗಳಲ್ಲಿ ಕರ್ತೃಕಳಶ ನಾಲ್ಕು, ಭೃತ್ಯಕಳಶ ನಾಲ್ಕು, ಶ್ರೀಗುರುಕಳಶ ಮಧ್ಯದಲ್ಲಿ ನಾಲ್ಕು ವರ್ಣಕ್ರೀ ಮುಂತಾದ ಪ್ರಾಣಲಿಂಗವೆಂದು ಉಪೇಕ್ಷಿಸಿ ಧಾರಣವ ಮಾಡುವಲ್ಲಿ ಗುರು ನಾನೆಂಬುದ ಮರೆದು ಅಹಂಕಾರವ ತೊರೆದು ಆತ್ಮತೇಜವ ಹರಿದು ಮುಂದಣ ತ್ರಿವಿಧ ಸೇವೆಯ ತೋರಿ ಮಂತ್ರಾಬ್ಥಿಷೇಕ ತೀರ್ಥಮಂ ತಳೆದು ಶ್ರೀವಿಭೂತಿಯಲ್ಲಿ ಸರ್ವಾಂಗ ಧೂಳಿತವಂ ಮಾಡಿ ತ್ರಿಕರಣ ಶುದ್ಧವಂ ಮಾಡಿ ಕಪಾಲಕ್ಕೆ ಕರವನಿಟ್ಟಲ್ಲಿ ಪರುಷರಸ ಪಾಷಾಣ ಲೋಹದ ಮೇಲೆ ಬಿದ್ದಂತೆ ನಂಜೇರಿದಂಗೆ ಸಂಜೀವನ ಸಂದ್ಥಿಸಿದಂತೆ ಇಂತೀ ಕಪಾಲಕ್ಕೆ ಕರವನಿಟ್ಟು ಕರ್ಣಕ್ಕೆ ಮಂತ್ರವ ಹೇಳಿದಲ್ಲಿ ಹುಸಿ ಕೊಲೆ ಕುಹಕ ಪಾರದ್ವಾರ ಚೋರತ್ವ ಪಿಸುಣತನವಂಬಿಟ್ಟು ಅರುವತ್ತುನಾಲ್ಕು ಶೀಲ, ಐವತ್ತೆರಡು ನೇಮ, ಮೂವತ್ತರೊಳಗಾದ ನಿತ್ಯಕೃತ್ಯ, ಆರುಸ್ಥಲದೊಳಗಾದ ಆಚಾರ, ಇಪ್ಪತ್ತೈದರೊಳಗಾದ ತತ್ತ್ವ ಇಂತಿವರೊಳಗಾದವರಲ್ಲಿ ಸತ್ವಕ್ಕೆ ತಕ್ಕ ಸಾಮಥ್ರ್ಯದಲ್ಲಿ ನಿಶ್ಚೆ ೈಸಿ ನಡೆಯೆಂದು ಲಿಂಗಧಾರಣವ ಮಾಡುವದಿದು ಗುರುದೀಕ್ಷಾ ನಿರ್ವಾಹ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 82 ||
--------------
ದಾಸೋಹದ ಸಂಗಣ್ಣ
ಕಪಿಲವರ್ಣ ನೀಲವರ್ಣ ಮಾಂಜಿಷ್ಟವರ್ಣ ಪೀತವರ್ಣ ಕಪ್ಪುವರ್ಣ ಶ್ವೇತವರ್ಣ ಗೌರವರ್ಣವೆಂಬ ಸಪ್ತಧಾತುಗಳು. ಇವಕ್ಕೆ ವಿವರ : ಕಪಿಲವರ್ಣದ ಧಾತು ಪೃಥ್ವಿ ಅಂಶ, ದೇಹವ ಅಳುುಕುತ್ತಿಹುದು. ನೀಲವರ್ಣದ ಧಾತು ಅಪ್ಪುವಿನ ಅಂಶ, ದೇಹವ [ನಡುಗುತ್ತಿಹುದು]. ಮಾಂಜಿಷ್ಟವರ್ಣದ ಧಾತು ಅಗ್ನಿ ಅಂಶ, ದೇಹ ಕನಸ ಕಾಣುತಿಹುದು. ಪೀತವರ್ಣದ ಧಾತು ವಾಯು ಅಂಶ, ದೇಹವತ್ತರ ಒತ್ತುತ್ತಿಹುದು. ಕಪ್ಪವರ್ಣದ ಧಾತು ಆಕಾಶದ ಅಂಶ, ಎತ್ತರ ತತ್ತರಗೆಡಹುತಿಹುದು. ಶ್ವೇತವರ್ಣದ ಧಾತು ಚಂದ್ರನ ಅಂಶ, ದೇಹ ಕಳವಳಿಸುತಿಹುದು. ಗೌರವರ್ಣದ ಧಾತು ಸೂರ್ಯನ ಅಂಶ, ಶರೀರ ಸಂಚಲಿಸುತಿಹುದು. ಇಂತೀ ಸಪ್ತಧಾತುಗಳ ಸ್ವಸ್ಥಾನವಂ ಮಾಡಿ ಲಿಂಗಾರ್ಚನೆಯ ಮಾಡಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಶರಣನೆನಿಸುತಿಹನು
--------------
ಚನ್ನಬಸವಣ್ಣ
ಬಿತ್ತಿದ ಬಿತ್ತು, ಪೃಥ್ವಿಯ ಕೂಟ ಅಪ್ಪುವಿನ ದ್ರವದಿಂದ ಮಸ್ತಕ ಒಡೆವುದಲ್ಲದೆ, ಉಷ್ಣದ ಡಾವರಕ್ಕೆ, ಬೆಂಕಿಯ ಬೇಗೆಗೆ ಮಸ್ತಕ ಒಡೆವುದುಂಟೆ ? ಲಿಂಗವು ಭಕ್ತಿಯ ಶ್ರದ್ಧೆಗೆ, ವಿಶ್ವಾಸದ ಸುಸಂಗಿಗೆ, ನಿಶ್ಚಯವಪ್ಪ ಲಿಂಗಿಗೆ ದೃಷ್ಟವಪ್ಪುದಲ್ಲದೆ, ಉನ್ಮತ್ತವಪ್ಪ ವಿಶ್ವಾಸಘಾತಕಂಗೆ, ವಂದಿಸಿ ನಿಂದಿಸುವಂಗೆ, ಹಿಂದೆ ಮುಂದೆ ಬಂದುದ ಬಾಯ್ಗಿಡುವವಂಗೆ ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನ ಸಂಧಿಸನವಗೆ
--------------
ಮೋಳಿಗೆ ಮಹಾದೇವಿ
ಇನ್ನಷ್ಟು ... -->