ಅಥವಾ

ಒಟ್ಟು 132 ಕಡೆಗಳಲ್ಲಿ , 16 ವಚನಕಾರರು , 86 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುನ್ನ ಮಾಡಿದ ದೇಹ ನಿರ್ವಯಲಾದಡೆ, ಧರಿಸುವುದೇಕೋ ಕಲ್ಲು ಲಿಂಗವ, ಎಲೆ ಅಯ್ಯಾ? ಅಂಗಗುಣ ಲಿಂಗಕ್ಕಾಯಿತ್ತು ; ಲಿಂಗಗುಣ ಅಂಗಕ್ಕಾಯಿತ್ತು. ಇವೆಲ್ಲ ಭಾವಸಂಕಲ್ಪವಿಕಲ್ಪವು. ಅಂಗ ಲಿಂಗವೆಂಬುದು ಪಳಮಾತು. `ಲಿಂಗಮಧ್ಯೇ ಜಗತ್ಸರ್ವಂ' ಎಂಬುದು ಅಖಂಡಲಿಂಗ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಕೆಯಿ ಬೆಳೆವಲ್ಲಿ ಸದೆಗೆ ಮುನಿವರಲ್ಲದೆ ಬೆಳೆಗೆ ಮುನಿದವರುಂಟೆ ಅಯ್ಯಾ? ಅರಿದಂಗವ ತಾಳಿದವರಲ್ಲಿ ಮರವೆಗೆ ಮುನಿವರಲ್ಲದೆ ಅರಿವಿಗೆ ಮುನಿವರುಂಟೆ ಅಯ್ಯಾ? ಕೊಲ್ಲಿ ಆವಿಂಗೆ ಕಾಲ ಕಟ್ಟುವರಲ್ಲದೆ ಮೊಲೆಯ ಕಟ್ಟಿದರುಂಟೆ ಅಯ್ಯಾ? ಗುರುವಾದಡೂ ಆಗಲಿ, ಲಿಂಗವಾದಡೂ ಆಗಲಿ, ಜಂಗಮವಾದಡೂ ಆಗಲಿ ಅರಿವಿಂಗೆ ಶರಣು ಮರವಿಂಗೆ ಮಥನವ ಮಾಡಿದಲ್ಲದೆ ಇರೆ. ಇದು ನೀವು ಕೊಟ್ಟ ಅರಿವಿನ ಮಾರನ ಇರವು, ಸದಾಶಿವಮೂರ್ತಿಲಿಂಗದ ಬರವು.
--------------
ಅರಿವಿನ ಮಾರಿತಂದೆ
ಇಂದ್ರಿಯನಿಗ್ರಹ ಮಾಡಿದಡೇನಯ್ಯಾ, ಚಂದ್ರಧಾರಿಯಾಗಬಲ್ಲನೆ? ಇಂದ್ರಿಯ ಕಟ್ಟಿದ ಕುದುರೆ ಇಂದ್ರನ ಉಚ್ಚೆ ೈಶ್ರವವಹುದೆ ಅಯ್ಯಾ? ಇಂ್ರಯಂಗಳೆಂಬುದು ಮಾಯಾಜಾಲವು ತಾನೆ. `ನ ಸತೀ' ಎಂಬ ಶ್ರುತಿಯದು ಪ್ರಸಿದ್ಧ. ಂಗವೆಂಬುದ ತಿಳಿಯಬಲ್ಲಾತನೆ ಜಗದ್ವಂದ್ಯ ಜಂಗಮವೆಂಬೆ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಸಿಂಹ ಮದಕರಿಯ ಮೇಲೆ ಹಾರುವುದಲ್ಲದೆ, ಮದಮಹಿಷಿಯ ಮೇಲೆ ಹಾರುವುದೆ ಅಯ್ಯಾ? ಪಕ್ಷಿ ಆಕಾಶದಲ್ಲಿ ಹಾರುವುದಲ್ಲದೆ, ಪಂಜರದಲ್ಲಿ ಹಾರದು ನೋಡಯ್ಯಾ. ನಮ್ಮ ಕಪಿಲಸಿದ್ಧಮಲ್ಲೇಶನನರಿವವರು ಜಾÐನದ ಮೇಲೆ ಹಾರುವರಲ್ಲದೆ ಅಜಾÐನದಲ್ಲಿ ಹಾರರು.
--------------
ಸಿದ್ಧರಾಮೇಶ್ವರ
ಲಿಂಗ ಹೊರತೆಯಾಗಿ, ವಿಭೂತಿ ರುದ್ರಾಕ್ಷಿಯ ಕೊಟ್ಟು, ಗುರುವಾಗಬಹುದೆ ಅಯ್ಯಾ? ಬೀಜವಿಲ್ಲದೆ ಅಂಕುರವಾಗಬಲ್ಲುದೆ? ಗಂಡನಿಲ್ಲದ ಮುಂಡೆಗೆ ಗರ್ಭನಿಂದಡೆ ಅವಳಾರಿಗೆ ಯೋಗ್ಯ? ಉಭಯವು ಕೇಡಾಯಿತ್ತು. ಇದನರಿತು ಮಾಡಿ, ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ಕರ್ಮಿಯ ಕರ್ಮ ನಿಷ್ಕರ್ಮವಲ್ಲೆಂದು ನಂಬಬಾರದಯ್ಯಾ. ಮುಮುಕ್ಷುವಿನ ಮೋಕ್ಷ ಮೂರರಲ್ಲೆಂದು ನಂಬಬಾರದಯ್ಯಾ. ಅಭ್ಯಾಸಿಯ ಮೋಕ್ಷ ಜನ್ಮದ್ವಯದಲ್ಲೆಂದು ನಂಬಬಾರದಯ್ಯಾ. ಅನುಭಾವಿಯ ಮೋಕ್ಷ ಜನ್ಮ ಒಂದರಲ್ಲೆಂದು ನಂಬಬಹುದೆ ಅಯ್ಯಾ? ಆರೂಢನ ಜನ್ಮ ಕಪಿಲಸಿದ್ಧಮಲ್ಲಿಕಾರ್ಜುನನ ಜನ್ಮವೆಂದು ನಂಬಲೇಬೇಕು, ಹಾವಿನಹಾಳ ಕಲ್ಲಯ್ಯಾ.
--------------
ಸಿದ್ಧರಾಮೇಶ್ವರ
ಮುಕ್ತಿಯ ಕೂಟಕ್ಕೆ ಮೂಗ ನೀನೆ ಬಸವಾ. ಭಕ್ತಿಯ ತನುಸಂಬಂದ್ಥಿ ನೀನೆ ಬಸವಾ. ಎನಿತೆನಿತು ಜರಿದಡೂ `ಬಸವಾ' ಎಂಬುದ ಮಾಣುವೆನೆ ಅಯ್ಯಾ? ಎನಿತೆನಿತು ಕಡಿದಡೂ `ಬಸವಾ' ಎಂಬುದ ಮಾಣುವೆನೆ ಅಯ್ಯಾ? ಕಪಿಲಸಿದ್ಧಮಲ್ಲಿನಾಥಯ್ಯಾ.
--------------
ಸಿದ್ಧರಾಮೇಶ್ವರ
ಕೊರಡು ಕೊನರಾಗಬಲ್ಲುದೇ? ಬರಡು ಹಯನಾಗಬಲ್ಲುದೇ ಅಯ್ಯಾ? ಕುರುಡಗೆ ಕನ್ನಡಿಯ ತೋರಿದಡೆ ನೋಡಬಲ್ಲನೆ? ಮೂಗಗೆ ರಾಗವ ಹೇಳಿದರೆ ಹಾಡಬಲ್ಲನೆ ಅಯ್ಯ? ಹೇಗ ಬುದ್ಧಿಯ ಬಲ್ಲನೇ ಅಯ್ಯ? ಲೋಗರಿಗೆ ಉಪದೇಶವ ಹೇಳಿದರೆ ಶಿವಸತ್ಪಥದ ಹಾದಿಯ ಬಲ್ಲರೇ ಅಯ್ಯ?. ಇದು ಕಾರಣ, ಶಿವ ಸತ್ಪಥದ ಆಗೆಂಬುದು ಶಿವಜ್ಞಾನಸಂಪನ್ನಂಗಲ್ಲದೆ ಸಾಧ್ಯವಲ್ಲ ಕಾಣ. ಅಸಾಧ್ಯವಸ್ತುವಿನೊಳಗಣ ಐಕ್ಯ ಅವಿವೇಕಗಳಿಗೆ ಅಳವಡುವುದೇ ನಮ್ಮವರಿಗಲ್ಲದೆ?, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕುಲಾಕುಲ ಅನುಭವಕ್ಕಲ್ಲದೆ ಸಮರಸಕ್ಕೇನೋ ಅಯ್ಯಾ? ವಾದವಿವಾದವೆಂಬುದು ಶಾಸ್ತ್ರದಲ್ಲಲ್ಲದೆ ಸಭೆಯಲ್ಲೇ£ ಅಯ್ಯಾ? ಹಾಸ್ಯಾಹಾಸ್ಯ ನುಡಿಗಡಣದಲ್ಲಲ್ಲದೆ ನುಡಿಯುವ ಕಾಯದಲ್ಲೇನೋ ಅಯ್ಯಾ? ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ತ್ರಿವಿಧಮೂರ್ತಿಯು ಕೂಡಿ ಭಕ್ತನ ಅಂಗದಲ್ಲಿ ನಿಂದು, ತಮ್ಮ ಸಂದನಳಿವುದಕ್ಕೆ ಮಂದಿರವ ಕಟ್ಟಿದ ಅಂದವನರಿಯದೆ, ಕರ್ತೃ ಭೃತ್ಯನೆಂದು ಕೊಂಡಾಡಲೇತಕ್ಕೆ? ಕಾಯ ಜೀವಕ್ಕೆ ಹಂಗುಂಟೆ ಅಯ್ಯಾ? ಭಕ್ತನ ಸತ್ಯ ಸದಾಶಿವಮೂರ್ತಿಲಿಂಗದ ಕೃತ್ಯ.
--------------
ಅರಿವಿನ ಮಾರಿತಂದೆ
ಗಂಧವೃಕ್ಷವ ಕಡಿದಲ್ಲಿ ನೊಂದೆನೆಂದು ಗಂಧವ ಬಿಟ್ಟಿತ್ತೆ ಅಯ್ಯಾ? ಚಂದದ ಸುವರ್ಣವ ತಂದು ಕಾಸಿ ಬಡಿದಡೆ, ನೊಂದನೆಂದು ಕಳಂಕ ಹಿಡಿಯಿತ್ತೆ ಅಯ್ಯಾ? ಸಂದು ಸಂದು ಕಡಿದ ಕಬ್ಬು ಯಂತ್ರದಲ್ಲಿಟ್ಟು ತಿರುಹಿ ಕಾಸಿದಡೆ, ನೊಂದೆನೆಂದು ಸಿಹಿಯಾಗುವುದ ಬಿಟ್ಟಿತ್ತೆ ಅಯ್ಯಾ? ತಂದು ತಂದು ಭವಕಟ್ಟಿಬಿಟ್ಟಡೆ, ನಿಮ್ಮರಿವು ಬಿಟ್ಟೆನೆ ಅಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಬಯ್ಚಿಟ್ಟ ಬಯ್ಕೆಯ ಒಡೆಯ ಕೊಂಡುಹೋದಲ್ಲಿ ನೆಲ ಉಮ್ಮಳಿಸಿದರುಂಟೆ ಅಯ್ಯಾ? ತನ್ನ ವಿಶ್ವಾಸಕ್ಕೆ ಗುರುವೆಂದು ಕಂಡಡೆ, ನಿನ್ನಯ ಗುರುತನದ ಹರವರಿಯೆಂತಯ್ಯಾ? ಅಮೃತವ ಹೊಯಿದಿದ್ದ ಕುಡಿಕೆಯಂತಾಗಬೇಡ ಗುರುತನವಳಿದು ಸ್ವಯಗುರುವಾಗು, ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ಸದ್ಭಕ್ತನ ಆಚರಣೆಯ ಕ್ರೀಯೆಂತುಂಟೆಂದಡೆ: ಜಂಗಮದ ಪಾದೋದಕ ಲಿಂಗಕ್ಕೆ ಮಜ್ಜನವ ಮಾಡುವಲ್ಲಿ ಜಂಗಮದ ಕುಂದು ನಿಂದೆಯ ಕೇಳಬಾರದು. ಜಂಗಮಪ್ರಸಾದವ ಲಿಂಗಕ್ಕೆ ಕೊಡುವಲ್ಲಿ ಅರ್ಥ ಪ್ರಾಣ ಅಬ್ಥಿಮಾನವ ಮುಟ್ಟಿದಲ್ಲಿ ಚಿತ್ತದಲ್ಲಿ ಹೆಚ್ಚು ಕುಂದು ತೋರಿದಾಗಲೆ ಪ್ರಸಾದಕ್ಕೆ ದೂರ. ಇದು ಕಾರಣ, ದೇಹಭಾವವಳಿದವಂಗಲ್ಲದೆ ಪಾದೋದಕ ಪ್ರಸಾದವಿಲ್ಲಾ ಎಂದೆ. ವಿಶ್ವಾಸವುಂಟಾದಲ್ಲಿ ಕುರುಹಿನ ಮುದ್ರೆಯ ಬಯಕೆ ಉಂಟೆ ಅಯ್ಯಾ? ಅವಿಶ್ವಾಸವುಳ್ಳವಂಗೆ ಗುರುಚರದ ಮಾರ್ಗವಿಲ್ಲಾಯೆಂದೆ. ಸದಾಶಿವಮೂರ್ತಿಲಿಂಗವ ಹೀಗರಿವುದಕ್ಕೆಠಾವ ಕಾಣೆ.
--------------
ಅರಿವಿನ ಮಾರಿತಂದೆ
ಅಂಬುಜಾತ ದ್ವಾರವಳಿವೆಳವಾದಡೆ, ನಾದಕ್ಕೆ ಸಿಕ್ಕುಂಟೆ ಅಯ್ಯಾ? ಶರೀರ ಸಂಪದದಲ್ಲಿದ್ದಡೆ, ಅರಿವು ಮಹದಲ್ಲಿ ನಿಂದು, ನೆರೆ ವಸ್ತು ತಾನಾದಲ್ಲಿ, ಬೇರೊಂದೆಡೆಯುಂಟೆ? ಕರಣಂಗಳ ಹಿಂಡಿಗೆ ಉರಿಯೆದ್ದ ನೆಲೆ, ನಷ್ಟವಾಗಿಯಲ್ಲದೆ ಬೇರೊಂದ ಹಿಡಿಯಲಿಲ್ಲ. ಅದು ಘಟಿಸಿ ನಿಂದಲ್ಲಿ, ಐಘಟದೂರ ರಾಮೇಶ್ವರಲಿಂಗ ತಾನೆ.
--------------
ಮೆರೆಮಿಂಡಯ್ಯ
ತನ್ನಯ ಬಾಯ ಶೇಷವ ಲಿಂಗಕ್ಕೆ ತೋರಿ, ಲಿಂಗದ ಶೇಷವ ತಾ ಕೊಂಡೆನೆಂದು ಕೊಂಡುದು ಪ್ರಸಾದ. ಇದ್ದುದು ಸಯಿದಾನವೆಂದು ಉಂಡು ಉಂಡು ಲಿಂಗಕ್ಕೆ ಕೊಡಬಹುದೆ ಅಯ್ಯಾ? ಅದು ಮುನ್ನವೆ ಲಿಂಗಾರ್ಪಿತ. ತನ್ನಯ ಸಂದೇಹಕ್ಕೆ ಕೊಟ್ಟುಕೊಂಡೆನೆಂಬ ಭೇದವಲ್ಲದೆ, ಇಂತೀ ಗುಣ ಸದಾಶಿವಮೂರ್ತಿಲಿಂಗಕ್ಕೆ ಹೊರಗು.
--------------
ಅರಿವಿನ ಮಾರಿತಂದೆ
ಇನ್ನಷ್ಟು ... -->