ಅಥವಾ

ಒಟ್ಟು 293 ಕಡೆಗಳಲ್ಲಿ , 69 ವಚನಕಾರರು , 255 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ಗುರುವಿಂಗೆ ಜೀವಪ್ರಸಾದ, ಚರಕ್ಕೆ ಭಾವಪ್ರಸಾದ. ಜೀವಭಾವದಲ್ಲಿ ಕೂಡಲಿಕ್ಕಾಗಿ ಪರಮಪ್ರಸಾದ. ಆ ಪರಮಪ್ರಸಾದ ವ್ಯತಿರಿಕ್ತವಾಗಿ ಕಾಣಿಸಿಕೊಂಡಲ್ಲಿ ಪ್ರಸಾದವಾಯಿತ್ತು. ಆ ಲಿಂಗಪ್ರಸಾದ ತನಗಾಗಲಾಗಿ ಸ್ವಯಪ್ರಸಾದವಾಯಿತ್ತು. ಇಂತೀ ಪ್ರಸಾದಿಸ್ಥಲ ವಿವರಂಗಳ ತಿಳಿದು ಲಿಂಗಕ್ಕೆ ಕೊಟ್ಟು ಕೊಳಬೇಕು. ದಹನ ಚಂಡಿಕೇಶ್ವರಲಿಂಗಕ್ಕೆ ಅರಿದು ಅರ್ಪಿಸಬೇಕು.
--------------
ಪ್ರಸಾದಿ ಲೆಂಕಬಂಕಣ್ಣ
ರೂಪು ಕುರೂಪುಗಳನು, ಲಿಂಗ ನೋಡಿದಡೆ ನೋಡುವನು, ಲಿಂಗ ನೂಕಿದಡೆ ತಾ ನೂಕುವನು. ಶಬ್ದಾಪಶಬ್ದಂಗಳನು ಲಿಂಗ ಕೇಳಿದಡೆ ಕೇಳುವನು, ಲಿಂಗ ತಾ ನೂಕಿದಡೆ ನೂಕುವನು. ಸುರಸ ಕುರಸಂಗಳನು ಲಿಂಗ ಸವಿದಡೆ ಸವಿವನು, ಲಿಂಗ ನೂಕಿದಡೆ ತಾ ನೂಕುವನು. ಗಂಧ ದುರ್ಗಂಧಗಳನು ಲಿಂಗ ವಾಸಿಸಿದಡೆ ವಾಸಿಸುವ, ಲಿಂಗ ನೂಕಿದಡೆ ತಾ ನೂಕುವನು. ಮೃದು ಕಠಿಣ ಶೀತೋಷ್ಣಂಗಳನು ಲಿಂಗ ಸೋಂಕಿದಡೆ ಸೋಂಕುವನು. ಲಿಂಗ ನೂಕಿದಡೆ ತಾ ನೂಕುವನು. ಲಿಂಗಮಧ್ಯಪ್ರಸಾದಿಯಾದ ಕಾರಣ ಲಿಂಗದೊಡನೆ ಕೂಡಿ ಅರಿದು ಭೋಗಿಸಿ ಸುಖಿಸುವನು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ ನಿಮ್ಮ ಪ್ರಸಾದಿ.
--------------
ಸ್ವತಂತ್ರ ಸಿದ್ಧಲಿಂಗ
ಪೃಥ್ವಿಯನರಿಯಲುಬಾರದು ನಕಾರ, ಅಪ್ಪುವನರಿಯಲುಬಾರದು ಮಕಾರ, ಅಗ್ನಿಯನರಿಯಲುಬಾರದು ಶಿಕಾರ, ವಾತವನರಿಯಲುಬಾರದು ವಕಾರ, ಅಂಬರವನರಿಯಲುಬಾರದು ಯಕಾರ, ಭಾವವನರಿಯಲುಬಾರದು ಓಂಕಾರ. ಇದು ಕಾರಣ ಷಡ್ಬ್ರಹ್ಮರೂಪ ಚನ್ನಬಸವಲಿಂಗ ಅರಿದು ಅರಿಯದಿರಲುಬೇಕು ಭಕ್ತ.
--------------
ದೇಶಿಕೇಂದ್ರ ಸಂಗನಬಸವಯ್ಯ
ಅರ್ಪಿತವಲ್ಲದುದ ಕಲಸಿದ ಕೈ, ಉಂಡ ಬಾಯಿ, ತುಂಬಿದ ಘಟ, ಅರಿದು ಕೊಂಡ ಆತ್ಮ ಇವ ಹಿಡಿದಡೆ ಭಂಗ. ಸಡಗರಿಸಿ ತುಂಬಿದ ಗರಳ ಘಟವನೊಡೆದು ಕಿತ್ತು ಆಸೆಯ ನುರಿಚಿ ಹಾಕಿ ಮತ್ತಾ ಅಂಗವನೊಡಗೂಡಿಹೆನೆಂಬ ಚಿತ್ತದ ಹಂಗು ಬೇಡ ಮತ್ತಾ ತಪ್ಪ ಕಂಡು ಎನ್ನಂಗವನೊಡಗೂಡುವ ಮನಕ್ಕೆ ಮನೋಹರ ಶಂಕೇಶ್ವರ ಲಿಂಗವೆ ಬೇಡಾ.
--------------
ಕರುಳ ಕೇತಯ್ಯ
ವೀರಶೈವಸಂಪನ್ನರಾದ ಸದ್ಭಕ್ತ ಶರಣಗಣಂಗಳಾದಡೆಯೂ ವೀರಮಾಹೇಶ್ವರರಾದಡೆಯೂ ಕ್ರಿಯಾಪಾದೋದಕ ಮಾಡಬೇಕಾದಡೆ, ತನ್ನ ಎರಡು ಅಂಗುಲಗಳಿಂದ, ಆ ಮಾಹೇಶ್ವರರ ಅಂಗುಷ್ಠ ಎಂಟು ಅಂಗುಲಗಳಲ್ಲಿ ತರ್ಜನಿ ಬೆರಳಿನಿಂದ ಬಲದ ಪಾದಾಂಗುಷ್ಠದ ಮೇಲೆ ಮೂರು ವೇಳೆ ಸ್ಪರ್ಶನವ ಮಾಡಿ, ನಾಲ್ಕನೆಯ ವೇಳೆಗೆ ಅದೇ ಬಲಪಾದದ ನಾಲ್ಕು ಬೆರಳುಗಳನ್ನು ಒಂದು ವೇಳೆ ಸ್ಪರ್ಶನ ಮಾಡಿದಡೆ ಗುರುಪಾದೋದಕವೆನಿಸುವುದು. ಇದೇ ರೀತಿಯಲ್ಲಿ ಎಡದ ಪಾದವ ಮಾಡಿದಡೆ ಲಿಂಗೋದಕವೆನಿಸುವುದು. ಈ ಎರಡರ ಕೂಟವೆ ಜಂಗಮಪಾದೋದಕವೆನಿಸುವುದು. ತನ್ನ ಹಸ್ತದಿಂದ ಪಾದವ ಮುಟ್ಟಿ ಮಾಡಿದಂತಹದೆ ಸ್ಪರ್ಶನೋದಕವೆನಿಸುವುದು. ಆ ಪಾದದ ಮೇಲಣ ದ್ರವವ ತೆಗೆದಂತಹದೆ ಅವಧಾನೋದಕವೆನಿಸುವುದು. ಅದರ ಮೇಲಣ ಅಪೇಕ್ಷೆ ಮುಂದುಗೊಂಡು ತಾನು ಮಾಡಿಕೊಂಡಂತಹದೆ ಅಪ್ಯಾಯನೋದಕವೆನಿಸುವುದು. ಹಸ್ತದಿಂದ ಮುಟ್ಟಿ ಮಾಡಿದಂತಹದೆ ಹಸ್ತೋದಕವೆನಿಸುವುದು. ಆ ಭಾಜನವ ತನ್ನ ಕೈಯಲ್ಲಿ ತೆಗೆದುಕೊಂಡು ಆ ಜಂಗಮಕ್ಕೆ ನಮಸ್ಕರಿಸುವಂತಹದೆ ನಿರ್ಣಾಮೋದಕವೆನಿಸುವುದು. ಆ ಜಂಗಮಕ್ಕೆ ನಮಸ್ಕರಿಸಿ ಆ ಭಾಜನವನ್ನು ತನ್ನ ಕ್ರಿಯೆಗೆ ಇಟ್ಟುಕೊಂಡಂತಹುದೆ ಸತ್ಯೋದಕವೆನಿಸುವುದು_ ಈ ಪ್ರಕಾರದಲ್ಲಿ ಹತ್ತು ಪಾದೋದಕವು, ಶಿಕ್ಷಾಪಾದೋದಕದಲ್ಲಿ ಆಗುವುದೆಂದು ಅರಿದು ಆಚರಿಸುವುದು. ಆಚರಿಸಲಾಗದೆಂಬ ಹಚ್ಚಮಾನವರನೇನೆಂಬೆನಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅರಿದು ಲಿಂಗಸಂಗವಾದಲ್ಲಿ ಕಾಯವಳಿದರೇನು ? ಕಾಯವುಳಿದು ಕೈಲಾಸಕ್ಕೆ ಹೋಗಬೇಕೆಂಬುದು, ಜೀವನ ಉಪಾದ್ಥಿಕೆ. ಘಟಮಟಪಟನ್ಯಾಯ ಇವೆಲ್ಲವು ಬಯಲೊಳಗು. ಅರ್ಕೇಶ್ವರಲಿಂಗವನರಿದು ಕೂಡಿದ ಮತ್ತೆ, ಅಂಗ ಸಿಕ್ಕುವುದಕ್ಕೆ ಠಾವಿಲ್ಲ.
--------------
ಮಧುವಯ್ಯ
ಶ್ರೀಗುರು ಲಿಂಗ ಜಂಗಮ ಪ್ರಸಾದ ಒಂದೇ ಪರಶಿವಮೂರ್ತಿ ಮಹಾವಸ್ತುಗಳು ಕೇಳಿರಣ್ಣಾ. ಅರಿದು ಧ್ಯಾನಿಸಿ ಪೂಜಿಸಿ ಸೇವಿಸಿ ಅರ್ಚಿಸಿ ಅರ್ಪಿಸಿ ಧರಿಸಿ, ಧರ್ಮ ಅರ್ಥ ಕಾಮ ಮೋಕ್ಷ ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯ ಈ ಚತುರ್ವಿಧ ಪದವಿಯನೂ ಕೂಡುವರೆ, ಗುರು ಲಿಂಗ ಜಂಗಮ ಪ್ರಸಾದವ ನಂಬುವುದು. ಇದು ಸತ್ಯ, ಶಿವನಾಣೆ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಂಗಭಾವದಿಂದ ಲಿಂಗಮುಖವನು ಅಂಗಮುಖವನು ಅರಿದು ಜಂಗಮ ಮುಖವನು ಅರಿದಡೆ ಸಂಸಾರವೆಂಬ ಬಂಧನವಿಲ್ಲವಯ್ಯ. ಜಂಗಮವೆಂದರೆ ಸಾಕ್ಷಾತ್ ಪರವಸ್ತು ತಾನೆ ನೋಡಾ. ಅದೇನು ಕಾರಣವೆಂದಡೆ: ಅಂಗವಾರಕ್ಕೆ ಲಿಂಗವಾರಕ್ಕೆ ಮೇಲಾಗಿ ಆ ಅಂಗವನು ಲಿಂಗವನು ತನ್ನಲ್ಲಿ ಏಕೀಕರಿಸಿಕೊಂಡು ತಾನು ಪರಮ ಚೈತನ್ಯನಾದ ಕಾರಣ. ಆ ಪರವಸ್ತುವಿನ ಪ್ರಸನ್ನ ಪ್ರಸಾದಮುಖವನರಿದು ಇಹ ಪರವ ನಿಶ್ಚೆ ೈಸೂದಿಲ್ಲ ನೋಡಾ. ಅದೇನು ಕಾರಣವೆಂದಡೆ: ಇಹ ಪರಕ್ಕೆ ಹೊರಗಾಗಿ ಪರಮ ಪದದಲ್ಲಿ ಪರಿಣಾಮಿಯಾದನಾಗಿ ಈ ತ್ರಿವಿಧವು ಒಂದೆಯೆಂದರಿದಾತನೆ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭು ತಾನೆ ಕಾಣಿರೋ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಮನವಿಕಾರದಲ್ಲಿ ತೋರುವ ಸುಳುಹು ತನುವಿಕಾರದಲ್ಲಿ ಕಾಣಿಸಿಕೊಂಡ ಮತ್ತೆ ಅರಿವಿನ ಭೇದ ಎಲ್ಲಿ ಅಡಗಿತ್ತು ? ಅರಿದು ತೋರದ ಮತ್ತೆ ನೆರೆ ಮುಟ್ಟಬಲ್ಲುದೆ ತ್ರಿವಿಧದ ಗೊತ್ತ ? ಇಂತೀ ಭಗಧ್ಯಾನರನೊಪ್ಪ ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವು.
--------------
ಪ್ರಸಾದಿ ಭೋಗಣ್ಣ
ನಡೆದು ಕಂಡವರೆಂದು ನುಡಿದು ಸಿಲುಕಿ ಬಿದ್ದು ಹೋಗುವ ಪಾತಕರು ಒಡೆಯನವಸರವನವರೆತ್ತ ಬಲ್ಲರೋ ! ಮಾಂಸಕ್ಕೆ ಬಿದ್ದ ಶುನಿಭಾವದಂತೆ ಕೊಡುಕೊಳ್ಳೆ ಬೆಳೆಯುಂಟು ಕಾಲನಲ್ಲಿ, ಅರಿದು ಮರೆದವರಂತಲ್ಲ ಕೊಡುಕೊಳ್ಳೆ ಬೆಳೆಯುಂಟು ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಆದಿ ಮಧ್ಯ ಅವಸಾನವರಿಯಬೇಕೆಂಬರು, ಆದಿಯಲ್ಲಿ ನಿಂದು, ಮಧ್ಯದಲ್ಲಿ ಕಂಡು, ಅವಸಾನದಲ್ಲಿ ಅರಿದು ಇರಬೇಕೆಂಬರು. ಅರಿವುದು ಒಂದೊ ಮೂರೊ ಎಂದಲ್ಲಿ ನಿಂದಿತ್ತು. ನಿಂದುದ ಕಳೆದು ಸಂದ ಹರಿ, ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ಅರಿದು ಮಾಡದ ಭಕ್ತಿ ಭವಕ್ಕೆ ತಂದಿತ್ತು. ಅದೆಂತೆಂದಡೆ, ಫಲಭೋಗಂಗಳ ಬಯಸುವನಾಗಿ ಫಲವನುಂಡು ಮರಳಿ ಭವಕ್ಕೆ ಬಹನಾಗಿ. ಇದು ಕಾರಣ, ಅರಿದು ಮುಕ್ತಿಯ ಹಡೆವಡೆ ಅನುಭವವೇ ಬೇಕು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಮೊದಲಿಗೆ ಮರ ನೀರನೆರೆದಡೆ ಎಳಕುವುದಲ್ಲದೆ, ಕಡೆ ಕಿಗ್ಗೊಂಬಿಗೆರೆದವರುಂಟೆ ? ಅರಿದು ಪೂಜಿಸುವಲ್ಲಿ ಹರಿವುದು ಮನಪಾಶ. ಅರಿದು ಅರ್ಪಿಸುವಲ್ಲಿ ಲಿಂಗದ ಒಡಲೆಲ್ಲ ತೃಪ್ತಿ. ತನ್ನನರಿದಲ್ಲಿ ಸಕಲಜೀವವೆಲ್ಲ ಮುಕ್ತಿ. ತನ್ನ ಸುಖದುಃಖ ಇದಿರಿಗೂ ಸರಿಯೆಂದಲ್ಲಿ, ಅನ್ನಬ್ಥಿನ್ನವಿಲ್ಲ, ಮನಸಂದಿತ್ತು ಮಾರೇಶ್ವರಾ.
--------------
ಮನಸಂದ ಮಾರಿತಂದೆ
ತ್ಯಾಗಾಂಗನಾಗಿ ಕೊಡುತ್ತಿದ್ದಲ್ಲಿ ಭೋಗಾಂಗನಾಗಿ ಸುಖಿಸುತ್ತಿದ್ದಲ್ಲಿ ಯೋಗಾಂಗನಾಗಿ ವಾಯುದ್ವಾರ ಭೇದಂಗಳನರಿತು ಧ್ಯಾನ ಧಾರಣ ಸಮಾದ್ಥಿಗಳಲ್ಲಿದ್ದಡೂ ಒಂದು ಕುರಿತು ಲಕ್ಷಸಿ ವಸ್ತು ಇದೇನೆಂದು ವಿಶ್ವಾಸದಿಂದಲ್ಲದಾಗದು. ಹಿಂದಕ್ಕಾದ ದೇವಪದವಂತರು ಮುಂದಕ್ಕೆ ಅರಿದು ಕೂಡುವ ಅರುಹಿರಿಯ ಶರಣತತಿಗಳೆಲ್ಲರು ವಿಶ್ವಾಸದಿಂದಲ್ಲದೆ ದೃಷ್ಟವ ಕಾಣರು. ಇದು ಕಾರಣ, ಬಾಹ್ಯಕರ್ಮ ಅಂತರಂಗ ಶುದ್ಧ ನಿರವಯವೆಂಬುದೊಂದು ಕುರುಹಿನ ನೆಮ್ಮುಗೆ ಉಂಟಹನ್ನಕ್ಕ ವಿಶ್ವಾಸಬೇಕು. ಇದು ಸಂಗನಬಸವಣ್ಣ ಕೊಂಡು ಬಂದ ಲಿಂಗದ ಬಟ್ಟೆ. ಬ್ರಹ್ಮೇಶ್ವರಲಿಂಗವೆಂಬ ವಸ್ತುವ ಕೂಡುವ ದೃಷ್ಟ.
--------------
ಬಾಹೂರ ಬೊಮ್ಮಣ್ಣ
ಇನ್ನಷ್ಟು ... -->