ಅಥವಾ

ಒಟ್ಟು 66 ಕಡೆಗಳಲ್ಲಿ , 31 ವಚನಕಾರರು , 58 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯಾ, ನಿಮ್ಮ ಶರಣರ ಚರಣದ ಭಕ್ತಿಯೇ ಎನಗೆ ಸಾಲೋಕ್ಯಪದವಯ್ಯಾ. ನಿಮ್ಮ ಶರಣರ ಅರ್ಚನೆ ಪೂಜೆಯೇ ಎನಗೆ ಸಾಮೀಪ್ಯಪದವಯ್ಯಾ. ಅಯ್ಯಾ, ನಿಮ್ಮ ಗಣಂಗಳ ಧ್ಯಾನವೇ ಎನಗೆ ಸಾರೂಪ್ಯಪದವಯ್ಯಾ. ಅಯ್ಯಾ, ನಿಮ್ಮ ಪುರಾತನರ ಜ್ಞಾನಾನುಭಾವ ಸಮರಸಾನಂದವೇ ಎನಗೆ ಸಾಯುಜ್ಯಪದವಯ್ಯಾ. ಇಂತೀ ಚತುರ್ವಿಧಪದಂಗಳನಲ್ಲದೆ ಅನ್ಯವ ನಾನರಿಯೆನಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಇಷ್ಟಲಿಂಗದ ಪೂಜೆಯಾವುದು, ಪ್ರಾಣಲಿಂಗದ ಪೂಜೆಯಾವುದು, ಭಾವಲಿಂಗದ ಪೂಡೆಯಾವುದುಯೆಂದರೆ ಹೇಳಿಹೆ ಕೇಳಿರಯ್ಯ. ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆಯ ಮಾಡುವುದು, ಅದು ಇಷ್ಟಲಿಂಗದ ಪೂಜೆ. ಆ ಲಿಂಗವನು ಮನಸ್ಸಿನಲ್ಲಿ ಧ್ಯಾನಿಸಿ ಮನೋಮಧ್ಯದಲಿಪ್ಪ ನಿಃಕಲ ಬ್ರಹ್ಮವನು ಧ್ಯಾನವೆಂಬ ಹಸ್ತದಲ್ಲಿ ಹಿಡಿದು ಕರಸ್ಥಲದಲ್ಲಿಪ್ಪ ಲಿಂಗದ ಗೊತ್ತಿನಲ್ಲಿ ಕಟ್ಟಿ ನೆರೆವುದೀಗ ಪ್ರಾಣಲಿಂಗದ ಪೂಜೆಯೆಂದು ಹೇಳಲ್ಪಟ್ಟಿತ್ತಯ್ಯ. ಮನಸು ಲಿಂಗದಲ್ಲಿ ತಲ್ಲೀಯವಾಗಿ ನಚ್ಚಿ ಮಚ್ಚಿ ಅಚ್ಚೊತ್ತಿ ಅಪ್ಪಿ ಅಗಲದಿಪ್ಪುದೇ ಭಾವಲಿಂಗದ ಪೂಜೆಯೆಂದು ಹೇಳಲ್ಪಟ್ಟಿತ್ತಯ್ಯ. ಇವು ಮೂರು ಲಿಂಗದ ಅರ್ಚನೆ. ಮೂರು ಲಿಂಗದ ಉಪಚಾರ. ಶಿವಾರ್ಥಿಗಳಾದ ವೀರಶೈವರುಗಳು ಮಾಡುವ ಲಿಂಗಾರ್ಚನೆಯ ಕ್ರಮವೆಂದು ಹೇಳಲ್ಪಟ್ಟಿತ್ತಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಎರಡು ಒಂದಾದ ಬಳಿಕ ಅರ್ಚನೆ ಹಿಂಗಿತ್ತು. ಎರಡು ಒಂದಾದ ಬಳಿಕ ಅರ್ಪಿತ ಹಿಂಗಿತ್ತು. ಎರಡು ಒಂದಾದ ಬಳಿಕ ಆಚಾರ ಹಿಂಗಿತ್ತು. ಎರಡು ಒಂದಾದ ಬಳಿಕ ಅವಧಾನ ಹಿಂಗಿತ್ತು. ಎರಡು ಒಂದಾದ ಬಳಿಕ ಶಬ್ದಕ್ಕೆ ಇಂಬಿಲ್ಲ ರೂಹಿಸಲೆಡೆಯುಂಟೆ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ಕವಡೆ ಕಟಕವ ನುಂಗಿತ್ತು, ಕುಡಿಕೆ ಹಿರಿದಪ್ಪ ಮಡಕೆಯ ನುಂಗಿತ್ತು. ಅಡಕೆ ಮರನ ನುಂಗಿದ ಮತ್ತೆ ಫಲವುಂಟೆ? ಅರ್ಚನೆ ಭಕ್ತಿಯಲಡಗಿ, ಭಕ್ತಿ ಮುಕ್ತಿಯಲಡಗಿ, ಮುಕ್ತಿ ಜ್ಞಾನದಲಡಗಿ, ಜ್ಞಾನ ನಾನೆಂಬಲ್ಲಿ ಅಡಗಿದ ಮತ್ತೆ ಲಿಂಗೈಕ್ಯ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಅನುವನರಿವನ್ನಕ್ಕ ಅರ್ಚನೆ, ಪುಣ್ಯವನರಿವನ್ನಕ್ಕ ಪೂಜೆ, ಶರೀರವುಳ್ಳನ್ನಕ್ಕ ಸುಖದುಃಖವ ಸಂತಾಪಿಸಬೇಕು. ತೆಪ್ಪದಲ್ಲಿ ನಿಂದು ಒತ್ತಿ ಹೊಳೆಯ ದಾಟುವಂತೆ. ಕ್ರೀಶುದ್ಧವಾದಲ್ಲಿ ಜ್ಞಾನದ ಗೊತ್ತು, ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ಬೀಜ ಕೊಳೆತಾಗ ಅಂಕುರ ನಷ್ಟವಾಯಿತ್ತು. ಸಸಿಯಿಲ್ಲದ ಫಲವುಂಟೆ ಅಯ್ಯಾ ? ಇಷ್ಟದ ಅರ್ಚನೆ ಅರತು, ಚಿತ್ತ ದೃಷ್ಟವ ಕಾಬುದಕ್ಕೆ ಗೊತ್ತಾವುದು ಹೇಳಯ್ಯಾ ? ಅದು ಮುಟ್ಟಿದ ಮುಟ್ಟಿನಲ್ಲಿ ಒದಗು, ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
--------------
ಮೆರೆಮಿಂಡಯ್ಯ
ಪ್ರಾಣಲಿಂಗ, ಲಿಂಗಪ್ರಾಣ `ಇಷ್ಟಂ ಪ್ರಾಣಸ್ತಥಾ ಭಾವಸ್ತ್ರಿಧಾ ಚೈಕಂ ಎಂದುದಾಗಿ ಪಂಚಭೂತಕಾಯವಳಿದು ಪ್ರಸಾದಕಾಯವ ಮಾಡಿ ಭಕ್ತದೇಹಿಕನೆನಿಸಿದನು. ಈ ಸತ್ಕ್ರೀಯನು ಶ್ರೀಗುರು ಕರುಣಿಸಿ ಮಾಡಿದನಾಗಿ ಪ್ರಾಣಲಿಂಗ, ಕಾಯಭಕ್ತನು ಇದೂ ಸ್ವಭಾವ. ದಾಸೋಹಿಯಾಗಿ ಅರ್ಚನೆ ಪೂಜನೆ ಸರ್ವದ್ರವ್ಯ ಸಕಲಭೋಗವನೂ ಅರ್ಪಿತವ ಮಾಡುತ್ತಿಹನು, ಪ್ರಸಾದವ ಭೋಗಿಸುತ್ತಿಹನು. ಸತ್ಕ್ರೀಯಲ್ಲಿ ಲಿಂಗಕ್ಕೆ ಕಾಯಶೂನ್ಯನಾಗಿ ಭಕ್ತಕಾಯ ಮಮಕಾಯನೆಂದು ಅವಗ್ರಹಿಸಿಕೊಂಡ ಭಕ್ತಂಗೆ ಬೇರೆ ಪ್ರಾಣವಿಲ್ಲಾಗಿ ಪ್ರಾಣವೆಂದು ಅವಗ್ರಹಿಸಿಕೊಂಡ. ಇಂತಹ ಪ್ರಾಣಲಿಂಗವು, ಕಾಯಭಕ್ತನು ತನ್ನೊಳಗೆ ತಾನೇ ಐಕ್ಯವಾಯಿತ್ತು. ಭಕ್ತನೇ ಲಿಂಗ, ಲಿಂಗವೇ ಭಕ್ತನು, ದಾಸೋಹಕ್ರೀಯೆ ಸೋಹಕ್ರೀ, ಸೋಹಕ್ರೀಯೆ ದಾಸೋಹಕ್ರೀ. ಈ ಕ್ರೀಯನು ಅದ್ವೈತವೆನ್ನಿ, ಸೋಹವೆನ್ನಿ, ದಾಸೋಹವೆನ್ನಿ ಬಲ್ಲವರುಗಳು ಬಲ್ಲಂತೆ ನಿಮ್ಮ ನಿಮ್ಮ ಅರಿವಿನ ಹವಣಿಂಗೆ ನುಡಿಯಿರಿ. ಆ ಲಿಂಗಾಯತವ, ಆ ಲಿಂಗದ ಮರ್ಮವ ಅರ್ಪಿತದ ಮರ್ಮವ, ಪ್ರಸಾದದ ಮಹಿಮೆಯ ಮಹಾಪರಿಣಾಮದ ಕ್ರೀಯು ಸಾಮಾನ್ಯರಿಗೆ ಅರಿಯಬಾರದು. ಈ ಮಹಾ ಕ್ರೀ ವಾಙ್ಮನೋತೀತ. ಈ ಮಹಾಕುಳವ ಮಹಾನುಭಾವರೇ ಬಲ್ಲರು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಲಿಂಗಪೂಜೆಯ ಮಾಡುವಲ್ಲಿ ಮನ ಗುರಿಯ ತಾಗಿದ ಕೋಲಿನಂತಿರಬೇಕು. ಶಿವಲಿಂಗಪೂಜೆಯ ಮಾಡುವಲ್ಲಿ ಶ್ರವಕ್ಕೆ ಸಂಜೀವನ ಹುಟ್ಟಿದಂತಿರಬೇಕು. ಹೀಗಲ್ಲದೆ ಪೂಜೆಯಲ್ಲ. ಒಳಗಣ ಹುಳುಕು ಮೇಲಕ್ಕೆ ನಯವುಂಟೆ, ಆ ತರು ಒಣಗುವವಲ್ಲದೆ? ಇಂತೀ ಬರುಬರ ಅರ್ಚನೆ ಹುರಿಯ ಬೊಂಬೆಯಂತೆ. ಇಂತೀ ಅರಿಗುರಿಗಳ ಪೂಜೆ ಬರುಕಟೆಯಂತೆ ನಾರಾಯಣಪ್ರಿಯ ರಾಮನಾಥಾ.
--------------
ಗುಪ್ತ ಮಂಚಣ್ಣ
ಅನುವನರಿವನ್ನಕ್ಕ ಅರ್ಚನೆ ಬೇಕು. ಪುಣ್ಯವನರಿವನ್ನಕ್ಕ ಪೂಜೆ ಬೇಕು. ನಾ ನೀನೆಂಬುದನರಿವನ್ನಕ್ಕ ಎಲ್ಲಾ ನೇಮವ ಭಾವಿಸಬೇಕು. ಕಾಲಕರ್ಮಜ್ಞಾನಭಾವ ತಾನುಳ್ಳನ್ನಕ್ಕ ಭಾವಿಸಬೇಕು. ತನ್ನನರಿದು ವಸ್ತುವ ಕುರಿತು ನಿಂದ ಮತ್ತೆ ಬತ್ತಲೆ ಹೋಹವಂಗೆತ್ತಲೂ ಭಯವಿಲ್ಲ ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಕೇಳಾ ಹೇಳುವೆನು: ಮಹಾಘನಲಿಂಗಭಕ್ತನು ಆಚರಿಸುವ ಸದ್ವರ್ತನನಿರ್ಣಯವ, ಅದು ಪರಶಿವಲಿಂಗದ ನಿತ್ಯಪದದ ಮಾರ್ಗ: ಗೌರವಂ ಲೈಂಗಿಕಂ ಚಾರಂ ಪ್ರಸಾದಂ ಚರಣಾಂಬುಕಂ ಭೌಕ್ತಿಕಂ ಚ ಮಯಾ ಪ್ರೋಕ್ತಂ ಷಡ್ವಿಧಂ ವ್ರತಮಾಚರೇತ್ ಗುರುದೇವಃ ಶಿವಃ ಸಾಕ್ಷಾತ್ ತಚ್ಚಿಷ್ಯೋ ಜ್ಞಾನಸಾರವಿತ್ ತ್ರಿವಿಧಂ ಹೃದಿ ಸಂಭಾವ್ಯ, ಕೀರ್ತಿತಂ ಗೌರವಂ ವ್ರತಂ ಗುರುಣಾ ಚಾರ್ಪಿತಂ ಲಿಂಗಂ ಪ್ರಾಣಲಿಂಗಂ ಪ್ರಕಥ್ಯತೇ ತಥೈವ ಭಾವನಾದ್ವೈತಂ ತದ್ವ್ರತಂ ಲೈಂಗಿಕಂ ಸ್ಮøತಂ ಗುರುಲಿಂಗಚರಾಧೀನಂ ನಿರ್ಮಾಲ್ಯಂ ಭೋಜನಾದಿಕಂ ತಸ್ಯಾನುಭಾವನಂ ದೇವಿ ತತ್ಪರಂ ವ್ರತಮುತ್ತಮಂ ಗುರುಪಾದಾಬ್ಜಸಂಭೂತಂ ಉಜ್ಜಲಂ ಲೋಕಪಾವನಂ ತಜ್ಜಲಸ್ನಾನಪಾನಾದಿ ತದ್ವ್ರತಂ Z್ಪರಣಾಂಬುಕಂ|| ಗುರುಲಿಂಗಚರಾಣಾಂ ಚ ಪ್ರಸಾದಂ ಪಾದವಾರುಣಂ| ಪರ್ಯಾಯಭಜನಂ ಭಕ್ತ್ಯಾ ತದ್ವ್ರತಂ ಸ್ಮøತಂ|| ಕ್ರಿಯಾದ್ವೈತಂ ನ ಕರ್ತವ್ಯಂ ಭಾವಾದ್ವೈತಂ ಸಮಾಚರೇತ್| ಕ್ರಿಯಾಂ ನಿರ್ವಹತೇ ಯಸ್ತು ಭಾವಶುದ್ದಂ ತು ಶಾಂಕರಿ|| ಎಚಿದುದಾಗಿ, ಪೂಜಿತೈಃ ಶಿವಭಕ್ತೈಶ್ಚ ಪರಕರ್ಮ ಪ್ರಪಚಿಚಿತಂ| ಪುಣ್ಯಸ್ಸಶಿವಧರ್ಮಃ ಸ್ಯಾತ್ ವಜ್ರಸ್ರಚಿಸ್ಸಮಬ್ರವೀತ್|| ಪಾತ್ರಶಾಸನಯೋರ್ಮಧ್ಯೇ ಶಾಸನಂ ತು ವಿಶಿಷ್ಯತೇ| ತಸ್ಮಾತ್ ಶಾಸನಮೇವಾದೌ ಪೂಜ್ಯತೇ ಚ ಶವೋ ಯಥಾ|| ಗುಣವತ್ಪಾತ್ರಪ್ರಜಾಯಾಂ ವರಂ ಶಾಸನಪೂಜನಂ| ಶಾಸನಂ ಪೂಜಾಯೇತ್ತಸ್ಮಾಸವಿZ್ಫರಂ ಶಿವಾಜÐಯಾ|| ಸ ನರೋ ಭೃತ್ಯಸದ್ಭಕ್ತಃ ಪತಿಕರ್ಮಾ ಚ ಜಂಗಮಃ| ರೂಪಂ ಚ ಗುಣಶೀಲಂ ಚ ಅವಿZ್ಫರಂ ಶುಭಂ ಭವೇತ್|| ಗುಣೋಗುಣಶ್ಚ ರೂಪಂ ಚ ಅರೂಪಂ ಚ ನ ವಿದ್ಯತೇ ಪಶ್ಶತ್ಯಮೋಹಭಾವೇನ ಸ ನರಃ ಸುಖಮೇಧತೇ ದುಶ್ಶೀಲಃ ಶೀಲಸರ್ವಜ್ಞಂ ಮೂರ್ಖಭಾವೇನ ಪಶ್ಯತಿ ಪಶ್ಯಂತಿ ಲಿಂಗಭಾವೇನ ಸದ್ಭಕ್ತಾ ಮೋಕ್ಷಭಾವನಾಃ ಯಥಾ ಲಿಂಗಂ ತಥಾ ಭಾವಃ ಸತ್ಯಂ ಸತ್ಯಂ ನ ಸಂಶಯಃ ಯಥಾ ಭಕ್ತಿಸ್ತಥಾ ಸಿದ್ಧಿಃ ಸತ್ಯಂ ಸತ್ಯಂ ನ ಸಂಶಯಃ ಸತ್ಯಭಾವಿ ಮಹಾಸತ್ಯಂ ಸತ್ಯಂ ಸ್ಯಾಚ್ಚಿವಲಕ್ಷಣಂ ಮಿಥ್ಯಭಾವೀತ್ವಹಂ ಮಿಥ್ಯಾ ಸತ್ಯಂ ಸ್ಯಾಚ್ಚಿವಲಕ್ಷಣಂ ದಕ್ಷಿಣೇ ತು ಮಹಾದೇವೇ ಪದಾರ್ಥೇ ಕಿಂ ಪ್ರಯೋಜನಂ ಅದಕ್ಷೇ ತು ಮಹಾದೇವೇ ಪದಾರ್ಥೇ ಕಿಂ ಪ್ರಯೋಜನಂ ಅರಿರ್ಮಿತ್ರಂ ವಿಷಂ ಪಥ್ಯಂ ಅಧರ್ಮೋ ಧರ್ಮವದ್ಭವೇತ್ ಪ್ರಸನ್ನ ಏವ ದೇವೇ ತು ವಿಪರೀತಂ ಭವೇದ್ಧೃವಂ ಸ್ಥಾವರಂ ಜಂಗಮಶ್ಚೈವ ದ್ವಿವಿಧಂ ಲಿಂಗಮುಚ್ಚ್ಯತೆ ಜಂಗಮಸ್ಯಾವಮಾನೇನ ಸ್ಥಾವರಂ ನಿಷ್ಪಲಂ ಭವೇತ್ ನ ಮೇ ಪ್ರಿಯಶ್ಚತುರ್ವೇದೀ ಮದ್ಭಕ್ತಃ ಶ್ವಪಚೋ[s]ಪಿ ವಾ ತಸ್ಮೈ ದೇಯಂ ತತೋ ಗ್ರಾಹ್ಯಂ ಸಃ ಪೂಜ್ಯಶ್ಚ ಯಥಾ ಹ್ಯಹಂ ಸದ್ಗುರುರ್ಭಾವಲಿಂಗಂ ಚ ತಲ್ಲಿಂಗಂ ಚಿತ್ಸ್ವರೂಪಕಂ ತದ್ಭಾವಶುದ್ಧಿಸಿದ್ಧಸ್ಯ ಸದ್ಯೋನ್ಮುಕ್ತಿಃ ಸುಖಂ ಭವೇತ್ ಗುರುಃ ಪರಶಿವಶ್ಚೈವ ಜಂಗಮೋ ಲಿಂಗಮೇವ ಚ ತದ್ಭಾವಶುದ್ಧಿಸಿದ್ಧಸ್ಯ ಸದ್ಯೋನ್ಮುಕ್ತಿಃ ಸುಖಂ ಭವೇತ್ ಲಿಂಗಾಂಗೀ ಗುರುರ್ಲಿಂಗಂ ತ್ರಿವಿಧಂ ಲಿಂಗಮುಚ್ಯತೇ .................................................................. ತತ್ತ್ವದೀಪಿಕಾಯಾಂ ಪ್ರಸಾದೋ ಮುಕ್ತಿಮೂಲಂ ಚ ತತ್ಪ್ರಸಾದಸ್ತ್ರಿಧಾ ಮತಃ ಶಿವಃ ಸರ್ವಾಧಿದೇವಃ ಸ್ಯಾತ್ ಸರ್ವಕರ್ಮ ಶಿವಾಜ್ಞಯಾ ತತ್ತ್ವದೀಪಿಕಾಯಾಂ ಮಾಹೇಶ್ವರಸ್ಯ ಸಂಗಾದ್ಧಿ ಶಿವಯೋಗಂ ಲಭೇನ್ನರಃ ಪ್ರಸಾದಂ ತ್ರಿವಿಧಂ ಗ್ರಾಹ್ಯಂ ಮಹಾಪಾಪವಿನಾಶಕಂ ತತ್ತ್ವದೀಪಿಕಾಯಾಂ ಧನಪುತ್ರಕಲತ್ರಾದಿಮೋಹಂ ಸಂತ್ಯಜ್ಯ ಯೋ ನರಃ ಶಿವಭಾವೇನ ವರ್ತೇತ ಸದ್ಯೋನ್ಮುಕ್ತಸ್ಸುಖೀ ಭವೇತ್ ಪ್ರಾಣಲಿಂಗೇತ್ವವಿಶ್ವಾಸಾತ್ ಭಕ್ತಿಮುಕ್ತಿದ್ವಯಂ ನ ಚ ಪ್ರಾಣಲಿಂಗಸ್ಯ ವಿಶ್ವಾಸಾತ್ ಸಿದ್ದಿಃ ಸ್ಯಾತ್ ಭಕ್ತಿಮುಕ್ತಿದಾ ಪ್ರಾಣಲಿಂಗಮವಿಶ್ವಸ್ಯ ತೀರ್ಥಲಿಂಗಮುಪಾಸತೇ ಸ ನರಃ ಸ್ವರ್ಗಮಾಪ್ನೋತಿ ಗಣತ್ವಂ ನ ಪ್ರಯುಜ್ಯತೇ ಪ್ರಾಣಲಿಂಗಸಮಾಯುಕ್ತಃ ಪರಹಸ್ತಸಮರ್ಚನಾತ್ ತತ್ಪೂಜಾ ನಿಷ್ಫಲಾ ದೇವಿ ರೌರವಂ ನರಕಂ ವ್ರಜೇತ್ ಪ್ರಾಣಲಿಂಗಸಮಾಯುಕ್ತಃ ಪರಹಸ್ತೇ ದದಾತಿ ಚೇತ್ ನಿಮಿಷಾರ್ಧವಿಯೋಗೇನ ವಿಶೇಷಂ ಪಾತಕಂ ಭವೇತ್ ಪ್ರಾಣಲಿಂಗಸಮಾಯುಕ್ತ ಏಕಭುಕ್ತೋಪವಾಸತಃ ಗುರುಲಂಘನಮಾತ್ರೇಣ ಪೂಜಾ ಯಾ ನಿಷ್ಪಲಾ ಭವೇತ್ ಇಷ್ಟಲಿಂಗಂ ಸಮುತ್ಸೃಜ್ಯ ಅನ್ಯಲಿಂಗಸ್ಯ ಪೂಜನಾತ್ ಸ್ವೇಷ್ಟಂ ನ ಲಭತೇ ಮತ್ರ್ಯಃ ಪರಂ ತತ್ತ್ವಂ ನಿಹತ್ಯಸೌ ಅತ್ಯಂತಮಹಿಮಾರೂಢಂ ಶಿವಮಾಹಾತ್ಮ್ಯವಿಸ್ತರಂ ಯೋ[s]ಪಿ ದೃಷ್ಟ್ವಾಪ್ಯವಿಶ್ವಾಸೀ ಸ ಭಕ್ತೋ ನರಕಂ ವ್ರಜೇತ್ ಅಥ ಯೋ ಯಾದವ ಶ್ಚೈವ ರಾಜಾನಶ್ಯವೋ ಗ್ರಹಾ ನೈವ ಪೀಡ್ಯಸ್ತು ಯತ್ಕೃತ್ವಾ ನರಂ ಹಾರಪರಾಯಣಂ ಹಿರಣ್ಯರೂಪದೇಹಸ್ತಂ ಹಿರಣ್ಯಪತಿಪ್ರಾಣಿನಾಂ ಆಶಾದನ್ಯಂ ಹಿರಣ್ಯಂ ಚ ತದ್ದೇಹಂ ಲಿಂಗವರ್ಜಯೇತ್ ಘೃಣಾಮೂರ್ತಿರ್ಮಹಾದೇವೋ ಹಿರಣ್ಯೋದ್ಭಾಹು ಶಂಕರಃ ವರದಾಭಯ ಮತ್ಸ್ವಾಮಿನ್ ಯೇ ಆಶಾದನ್ಯಂ ವಿವರ್ಜಯೇತ್ ಆಶಾ ಚ ನರಕಂ ಚೈವ ನಿರಾಶಾ ಮುಕ್ತಿರೇವ ಹಿ ಆಶಾನಿರಾಶಯೋರ್ನಾಸ್ತಿ ತತ್ಸುಖಸ್ಯ ಸಮಂ ಪರಂ ಶಿವರಹಸ್ಯೇ ಜಪಶ್ರಾಂತಃ ಪುನಧ್ರ್ಯಾಯೇತ್ ಧ್ಯಾನಶ್ರಾಂತಃ ಪುನರ್ಜಪೇತ್ ಜಪಧ್ಯಾನಾದಿಯೋಗೇನ ಶಿವಃ ಕ್ಷಿಪ್ರಂ ಪ್ರಸೀದತಿ ಗಚ್ಚನ್ ತಿಷ*ನ್ ಸ್ವಪನ್ ಜಾಗ್ರನ್ ಉನ್ಮಿಷನ್ ನಿಮಿಷನ್ನಪಿ ಶುಚಿರ್ವಾಪ್ಯಶುಚಿರ್ವಾಪಿ ಶಿವಂ ಸರ್ವತ್ರ ಚಿಂತಯೇತ್ ಅಪವಿತ್ರಃ ಪವಿತ್ರೋ ವಾ ಸರ್ವಾವಸ್ಥಾಂ ಗತೋ[s]ಪಿ ವಾ ಯಸ್ಸ್ಮರೇತ್ ಸತತಂ ರುದ್ರಂ ಸ ಬಾಹ್ಯಾಭ್ಯಂತರಃ ಶುಚಿಃ ದುರ್ಲಭಂ ಮಾನುಷಂ ಜನ್ಮ ವಿವೇಕಸ್ತ್ವತಿದುರ್ಲಭಃ ದುರ್ಲಭಾ ಚ ಶಿವೇ ಭಕ್ತಿಃ ಶಿವಜ್ಞಾನಂ ತು ದುರ್ಲಭಂ ಇಂ್ರಯಪ್ರೀತಿದಾತಾರಃ ಪುಮಾಂಸೋ ಬಹವಃ ಕಿಲ ಶಿವಜ್ಞಾನಾರ್ಥದಾತಾರಃ ಪುಮಾಂಸೋ ಲೋಕದುರ್ಲಭಾಃ ಲಿಂಗಭಕ್ತ್ಯಾ ಮನಃ ಪೂತಂ ಅಂಗಂ ಪೂತಂ ತು ದೇಶಿಕಾತ್ ಭಾವಸ್ತು ಜಂಗಮಾತ್ ಪೂತಸ್ತ್ರಿವಿಧಾ ಭಕ್ತಿರುತ್ತಮಾ ಅಷ್ಟವಿಧಾರ್ಚನಂ ಲಿಂಗೇ ಅಷ್ಟಭೋಗಸ್ತು ಜಂಗಮೇ ಲಿಂಗೇ ಷೋಡಶೋಪಚಾರಾಃ ಸರ್ವೇ ತಾತ್ಪರ್ಯಜಂಗಮೇ ಮನೋ ಲೀನಂ ಮಹಾಲಿಂಗೇ ದ್ರವ್ಯಂ ಲೀನಂ ತು ಜಂಗಮೇ ತನುರ್ಲೀನೋ ಗುರೌ ಲಿಂಗೇ ಇತಿ ಭಕ್ತಸ್ಯ ವೈ ಧೃವಂ ಸಕಲಂ ಭಕ್ತರೂಪಂ ಚ ನಿಷ್ಕಲಂ ಶಿವರೂಪಕಂ ಸಕಲಂ ನಿಷ್ಕಲಂ ಮಿಶ್ರಂ ಚರರೂಪಂ ವಿಧೀಯತೇ ಸತ್ಕ್ರಿಯಾಂ ಪೂಜಯೇತ್ಪ್ರಾತರ್ಮಧ್ಯಾಹ್ನೇ ಭೋಜನಾವಧಿಂ ಸಾಯಂಕಾಲೇ ಮಹಾಪೂಜಾಂ ತತ್ಕ್ರಮಸ್ತು ವಿಶಿಷ್ಯತೇ ಮನಃಪೂತಾರ್ಚನಂ ಭಕ್ತ್ಯಾ ಪ್ರಾತಃಕಾಲವಿಧಿಕ್ರಮಃ ಸುಜಲಂ ಸುರಸಂ ಚೈವ ಯಥಾಸಂಭವದ್ರವ್ಯಕಂ ಅರ್ಪಯೇಚ್ಚರಲಿಂಗಾಯ ಮಧ್ಯಾಹ್ನೇ ಪೂಜನಕ್ರಮಃ ಗಂಧಂ ಪುಷ್ಪಂ ಚ ಕರ್ಪೂರಂ ಚಂದನಂ ಲೇಪನಂ ತಥಾ ಅರ್ಪಯೇತ್ ಫಲತಾಂಬೂಲಂ ಸಂಧ್ಯಾಪೂಜಾರ್ಚನಾವಿಧಿಕ್ರಮಃ ಧೂಪಮುಷ್ಣಾಧಿಕಂ ಸರ್ವಂ ಪ್ರಾತಃಕಾಲಾರ್ಚನಾವಿಧಿಃ ಪೂಜೋಪಚಾರಸ್ಸರ್ವೇಷಾಂ ಶೈತ್ಯಂ ಮಧ್ಯಾಹ್ನಸಂಧಿಷು ತ್ರಿಸಂಧ್ಯಾ ತ್ರಿಷು ಕಾಲೇಷು ಉಷ್ಣಂ ನೈವೇದ್ಯಮುತ್ತಮಂ ಯಥಾಸಂಭವಂ ಸಂಧ್ಯಾಯಾಂ ನಾದಾದೀನಿ ವಿಧಿಕ್ರಮಾತ್ ಶರಸಂಯುಕ್ತಪೂಜಾಯಾಂ ಕೇವಲಂ ನರಕಂ ಭವೇತ್ ನಿಶ್ಶಠಃ ಪೂಜಕಶ್ಚೈವ ಕೇವಲಂ ಮುಕ್ತಿಕಾರಣಂ ಅಷ್ಟಾದಶಾನಾಂ ಜಾತೀನಾಂ ಶಠಕರ್ಮಸ್ವಭಾವತಃ ನಿಶ್ಯಠಾಃ ಕುಲಮರ್ಯಾದಾಃ ಸದ್ಭಕ್ತಾಶ್ಚ ಶಿವಪ್ರಿಯಾಃ ಲಿಂಗಧಾರೀ ಮಹಾಲಿಂಗಂ ನ ಭೇದೋ ತತ್ರ ದೃಶ್ಯತೇ ಸದ್ವೈತ್ತೋ ಭೃತ್ಯರೂಪಶ್ಚ ಸತ್ಯಂ ಸತ್ಯಂ ಸಮೋ ನ ಚ ಕರ್ತೃಭೃತ್ಯಸ್ಯ ಸನ್ಮಾರ್ಗದುರ್ಮಾರ್ಗಸಮಭಾವತಃ ಅಹಂಕಾರೋ ಮಹಾಪಾಪಂ..... ಜನ್ಮಾಂತರಸಹಸ್ರೇಷು ತಪೋಧ್ಯಾನಪರಾಯಣೈಃ ನರಾಣಾಂ ಕ್ಷೀಣಪಾಪಾನಾಂ ಶಿವೇ ಭಕ್ತಿಃ ಪ್ರಜಾಯತೇ ತತೋ ವಿಷಯವೈರಾಗ್ಯಂ ವೈರಾಗ್ಯಾತ್ ಜ್ಞಾನಸಂಭವಃ ಜ್ಞಾನೇನ ತು ಪರಾ ಭಕ್ತಿಃ ಪ್ರಸಾದಸ್ತದನಂತರಂ ಪ್ರಸಾದಾನ್ಮುಚ್ಯತೇ ಜಂತುರ್ಮುಕ್ತಃ ಶಿವಸಮೋ ಭವೇತ್ ಅಸಾರೇ ದಗ್ಧಸಂಸಾರೇ ಸಾರಂ ದೇವಿ ಶಿವಾರ್ಚನಂ ಸತ್ಯಂ ವಚ್ಮಿ ಹಿತಂ ವಚ್ಮಿ ವಚ್ಮಿ ಪಥ್ಯಂ ಪುನಃ ಪುನಃ ಉಪಾಧಿಃ ಸ್ಯಾನ್ಮಹಾಭಕ್ತಿರುಪಾಧಿಸ್ಯಾತ್ಪ್ರಸಾದಕಃ ಉಪಾಧಿಃ ಸ್ಯಾತ್ಕ್ರಿಯಾಸ್ಸರ್ವಾಶ್ಯಿವಸ್ಯಾಸ್ಯಾ[s] ಪ್ರಸಾದತಃ ನಿುಪಾಧಿಕಮದ್ಭಕ್ತಿರ್ನಿರುಪಾಧಿಕಪ್ರಸಾದತಃ ನಿರೂಪಾಧಿಕ್ರಿಯಾಸ್ಸರ್ವಾಃ ಶಿವಃ ಶೀಘ್ರಂ ಪ್ರಸೀದತಿ ದಿನೇ ದಿನೇ ವಿಶೇಷಂ ಚ ಮಾಸೇ ಮಾಸೇ ಮಹಾದ್ಭುತಂ ವತ್ಸರೇ ವತ್ಸರೇ ಚೋದ್ಯಂ ಸದ್ಭಕ್ತಸ್ಯಾಭಿವರ್ಧನಂ ದಿನೇ ದಿನೇ ವಿಶೇಷಂ ಚ ಮಾಸೇ ಮಾಸೇ ಹಿ ದೃಶ್ಯತಾಂ ವತ್ಸರೇ ವತ್ಸರೇ ನಷ್ಟಾ ಮಹಾವಾಸಕ್ರಿಯಾಸ್ತಥಾ ದಾಸೋ[s]ಹಂ ಚ ಮಹಾಖ್ಯಾತಿರ್ದಾಸೋ[s]ಹಂ ಲಾಭ ಏವ ಚ ದಾಸೋ[s]ಹಂ ಚ ಮಹತ್ಪೂಜ್ಯಂ ದಾಸೋ[s]ಹಂ ಸತ್ಯಮುಕ್ತಿದಂ ಸದ್ಭಕ್ತಸಂಗಸಿದ್ಧಿಃ ಸ್ಯಾತ್ ಸರ್ವಸಿದ್ಧಿರ್ನ ಸಂಶಯಃ ಭಕ್ತಿಜ್ರ್ಞಾನಂ ಚ ವೈರಾಗ್ಯಂ ವರ್ಧತಾಂ ಚ ದಿನೇ ದಿನೇ ಮಹತ್ಸುಖಂ ಮಹಾತೋಷೋ ಲಿಂಗಭಕ್ತ್ಯಾ ಯಥಾ ಶಿವೇ ಪ್ರಾಣಲಿಂಗಪ್ರತೀಕಾರಂ ಕುರ್ವಂತೀಹ ದುರಾತ್ಮನಃ ಅತ್ಯುಗ್ರನರಕಂ ಯಾಂತಿ ಯುಗಾನಾಂ ಸಪ್ತವಿಂಶತಿ ಹುತಭುಗ್ಪತಿತಾಂಭೋಜಗತಿಃ ಪಾತಕಿನಾಂ ಭವೇತ್ ಸುಜ್ಞಾನ ಸದ್ಭಕ್ತಿ ಪರಮವೈರಾಗ್ಯಕ್ಕೆ ಶಿವನೊಲಿವನಲ್ಲದೆ ಸಾಮಾನ್ಯ ತಟ್ಟು ಮುಟ್ಟು ತಾಗು ನಿರೋಧದಲ್ಲಿ ಅನುಸರಿಸಿದಡೆ ಶಿವ ಮೆಚ್ಚುವನೆ ? ಸತ್ಯಶುದ್ಧ ನಿತ್ಯಮುಕ್ತ ಶರಣರು ಮೆಚ್ಚುವರೆ? ಶಿವನೊಲವು ಶರಣರೊಲವು ಸೂರೆಯೇ? ದೇವದಾನವ ಮಾನವರಂತೆ ಶಿವನಲ್ಲಿ ಭಕ್ತಿಯನು ಅನುಸರಿಸಿ ನಡೆವುದು ಭಕ್ತಿಯೇ ಅಲ್ಲ. ತಾಮಸ ರಾಜಸ ಉಳ್ಳುದು ಭಕ್ತಿಯ ಕುಳವಲ್ಲ, ಸದ್ಭಕ್ತಿಗೆ ಸಲ್ಲದು. ಗುರು ಲಿಂಗ ಜಂಗಮಕ್ಕೆ ಮರುಗಿ ತ್ರಿವಿಧಪದಾರ್ಥವ ಮನೋವಾಕ್ಕಾಯದಲ್ಲಿ ವಂಚನೆಯಿಲ್ಲದೆ ಮನ ಧನವನರ್ಪಿಸಿ ಮನ ಮುಟ್ಟಿದಡೆ ಗುರು ಲಿಂಗ ಜಂಗಮದ ಘನಮಹಿಮೆಯ ವೇದಪುರಾಣಾಗಮಂಗಳಿಂ ಗುರುವಾಕ್ಯದಿಂ ಪುರಾತನರ ಮತದಿಂದರಿದು ಮರೆವುದು ಜ್ಞಾನವಲ್ಲ. ಅರಿದು ಮರೆವುದು ಶ್ವಾನಜ್ಞಾನವಲ್ಲದೆ ಇಂತಪ್ಪ ಅಜ್ಞಾನಕ್ಕೆ ಒಲಿವನೇ ಶಿವನು? ಮೆಚ್ಚುವರೇ ಶರಣರು? ಶ್ರೀಗುರುಲಿಂಗಜಂಗಮವೊಂದೆಂಬರಿವು ಕರಿಗೊಂಡು ಸದ್ಭಾವದಿಂ ಭಾವಿಸಿ ಭಾವಶುದ್ಧಿಯಾದುದು ಸುಜ್ಞಾನ. ಗುರುಲಿಂಗಜಂಗಮದ ಅರ್ಚನೆ ಪೂಜನೆ ಅರ್ಪಿತ ದಾಸೋಹಕ್ರೀವಿಡಿದು ಸಂಸಾರಕ್ರೀ ಪರಧನ ಪರಸ್ತ್ರೀ ಅನ್ಯದೈವ ಭವಿಯನು ಅನುಸರಿಸಿ ಹಿಡಿದುದು ವೈರಾಗ್ಯವೇ ? ಅಲ್ಲ, ಅದು ಮರ್ಕಟ ವೈರಾಗ್ಯ. ಇವ ಬಿಟ್ಟು ಸದ್ಭಕ್ತಿ ಸಮ್ಯಗ್‍ಜ್ಞಾನ ಪರಮವೈರಾಗ್ಯಯುತನಾಗಿ ಗುರುಲಿಂಗಜಂಗಮಕ್ಕೊಲಿದು ಒಲಿಸುವುದು, ಸದ್ಭಕ್ತಿಪ್ರಸಾದಮುಕ್ತಿಯ ಹಡೆವುದು. ಈ ಸತ್ಕ್ರಿಯಾಭಕ್ತಿಯುಳ್ಳಡೆ ಲೇಸು, ಅಲ್ಲದಿದ್ದಡೆ ಸಾವುದೇ ಲೇಸಯ್ಯ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಧರೆಯ ಕೃಷಿ ಶುದ್ಧವಾಗಿಯಲ್ಲದೆ, ಸಸಿ ಶುದ್ಧವಿಲ್ಲ. ಅರ್ಚನೆ ಅರ್ಪಿತ ಮೂರ್ತಿಧ್ಯಾನದಿಂದಲ್ಲದೆ, ಚಿತ್ತ ಶುದ್ಧವಿಲ್ಲ. ಇದು ನಿಶ್ಚಯ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವನರಿವುದಕ್ಕೆ.
--------------
ಶಿವಲೆಂಕ ಮಂಚಣ್ಣ
ಸಮಯವಿರೋಧವಾದೀತೆಂದು ಪಾದಾರ್ಚನೆಯ ಮಾಡುವರಯ್ಯಾ. ಲಿಂಗಜಂಗಮಕ್ಕೆ ಪಾದವಾವುದು ? ಅರ್ಚನೆ ಯಾವುದು ? ಎಂಬ ತುದಿ ಮೊದಲನರಿಯರು. ಉದಾಸೀನದಿಂದ ಪಾದಾರ್ಚನೆಯ ಮಾಡಿ, ಪಾದೋದಕ ಧರಿಸಿದಡೆ ಅದೇ ಪ್ರಳಯಕಾಲಜಲ. ವರ್ಮವನರಿದು ಕೊಂಡಡೆ ತನ್ನ ಭವಕ್ಕೆ ಪ್ರಳಯಕಾಲಜಲ ! ಈ ಉಭಯವ ಭೇದಿಸಿ ಸಂಸಾರಮಲಿನವ ತೊಳೆವಡೆ ಕೂಡಲಚೆನ್ನಸಂಗಾ ಈ ಅನುವ ನಿಮ್ಮ ಶರಣ ಬಲ್ಲ.
--------------
ಚನ್ನಬಸವಣ್ಣ
ಅಹಿ ಕ್ರೂರಮೃಗಂಗಳೆಲ್ಲಕ್ಕೂ ಬಾಯಿಕಟ್ಟಿಂದ ಕಚ್ಚವು ಫಲಂಗಳ, ಹೊಲದಲ್ಲಿದ್ದಡೂ ಆ ಹೊಲದ ಸೀಮೆಯ ಫಲವನೊಲ್ಲದ ತೆರದಿಂದ ಕಡೆಯೆ ನಿಮ್ಮ ಹೊಲಬಿನ ಹೊಲ ? ಗುರುಭಕ್ತನಾದಡೆ ಗುರು ಆಜ್ಞೆ ತಪ್ಪದೆ ಲಿಂಗಭಕ್ತನಾದಡೆ ಅರ್ಚನೆ, ಪೂಜನೆ, ನಿತ್ಯ ನೇಮ ಕೃತ್ಯಂಗಳು ತಪ್ಪಡೆ, ಜಂಗಮಭಕ್ತನಾದಡೆ ಆಪ್ಯಾಯನದ ಅನುವಿಷಯದ ಡಾವರ ಆಶೆಯ ಪಾಶದ ಪರಿಭ್ರಮಣವನರಿತು ಸುಖಿಯಲ್ಲದೆ, ದುಃಖಿಯಲ್ಲದೆ ಬಂದಂತೆ ಬಾಯಿಗರೆಯದೆ, ಕಂಡುದ ಬೇಡದೆ, ನಿಂದೆಗೆಡೆಗೊಡದೆ ನಿಜಲಿಂಗಾಂಗಿಯನರಿದು ಭಕ್ತಿಗೆ ಊಣಿಯವಿಲ್ಲದೆ ಅವರವರ ಒಪ್ಪಕ್ಕೆ ತಕ್ಕ ಚಿತ್ತವಿದ್ದು ಮಾಡುತ್ತಿಪ್ಪ ಭಕ್ತನ ಬಾಗಿಲೆ ಸದ್ಯೋಜಾತಲಿಂಗವ ಕಾಬುದಕ್ಕೆ ಕಾಹಿಲ್ಲದ ಪಥ.
--------------
ಅವಸರದ ರೇಕಣ್ಣ
ಅಂಗಲಿಂಗ ಸಂಬಂಧವನುಳ್ಳ ನಿಜವೀರಶೈವ ದೀಕ್ಷೆಯನು ಗುರು ತನ್ನ ಶಿಷ್ಯಂಗೆ ಉಪದೇಶಿಸಿ ಮತ್ತೆ ಆ ಲಿಂಗದಲ್ಲಿ ಮಾಡುವ ಜಪ ಧ್ಯಾನ ಅರ್ಚನೆ ಉಪಚರಿಯ ಅರ್ಪಿತ ಪ್ರಸಾದಭೋಗವಾದಿಯಾದ ವೀರಶೈವರ ಸಾವಧಾನ ಸತ್ಕಿೃಯಾಚಾರಂಗಳ ಹೊಲಬನರಿಯದೆ ಭವಿಶೈವ ಭಿನ್ನಕರ್ಮಿಗಳಂತೆ ಆಂಗನ್ಯಾಸ ಕರನ್ಯಾಸ ಪಂಚಮಶುದ್ಧಿ ಪಂಚಾಮೃತಾಭಿಷೇಕ ಶ್ರೀರುದ್ರ ಪಂಚಬ್ರಹ್ಮಸ್ಥಲಾದಿ ಶೈವಪಂಚಪಂಚಾಕ್ಷರ ಭೂತಾದಿ ದೇವತಾದಿ ಗಣಿಕಾಜನನಿಕರ ಗಣನಾಕೃತ ಪರಿಪೂರಿತ ಅಕ್ಷಮಣಿ ಭವಮಾಲಿಕಾ ಜಪೋಪಚರಿಯಂಗಳಾದಿಯಾದ ಶೈವ ಪಾಷಂಡಕೃತ ಕರ್ಮಮಯವಪ್ಪ ಭವಿಮಾಟಕೂಟಂಗ?ನುಪದೇಶಿಸಿ ಭವಹರನಪ್ಪ ಘನವೀರಶೈವಲಿಂಗದಲ್ಲಿ ಮಾಡಿ ಕೂಡಿ ನಡೆಸಿಹನೆಂಬ ಕಡುಸ್ವಾಮಿದ್ರೋಹಿಗೆ ಆ ನಿಜದೀಕ್ಷೆಗೆಟ್ಟು ಗುರುಶಿಷ್ಯರಿರ್ವರು ನರಕಭಾಜನರಪ್ಪುದು ತಪ್ಪುದು ಅದೆಂತೆಂದೊಡೆ ``ನಾಮಧಾರಕಶಿಷ್ಯಾನಾಂ ನಾಮಧಾರೀ ಗುರುಸ್ತಥಾ ಅಂಧಕೋ[s]ಂಧಕರಾಬದ್ಧೋ ದ್ವಿವಿಧಂ ಪಾತಕಂ ಭವೇತ್' ಎಂದುದಾಗಿ ಇದು ಕಾರಣ ಗುರುಚರಪರಕರ್ತೃವಹ ಅರುಹು ಆಚಾರ ಶರಣಸದ್ಭಾವಸಂಪದವನುಳ್ಳು ಘನಗುರುರೂಪರಪ್ಪ ಪರಮಾರಾಧ್ಯರಲ್ಲಿ ಶರಣುವೊಕ್ಕು ಅಜಡಮತಿಗಳಪ್ಪ ಗುರುಶಿಷ್ಯರಿಬ್ಬರು ತಮ್ಮ ಹೊದ್ದಿದ ಅಬದ್ಧವಪ್ಪ ಭವಿಮಾಟಕೂಟಂಗಳ ಪರಿಹರಿಸಿಕೊಂಡು ನಿಜವಿಡಿದು ನಡೆದು ಕೃತಾರ್ಥರಾಗಲರಿಯದೆ ಅಜ್ಞಾನದಿಂದಲಹಂಕರಿಸಿ ಗುರುವಿಡಿದು ಬಂದುದ ಬಿಡಬಾರದೆಂದು ಕಡುಮೂರ್ಖತನದಿಂ ಗುರುವಚನವನುಲ್ಲಂಘಿಸಿ ಶರಣ ಸತ್ಕ್ರಿಯಾಚಾರಂಗಳನು ಕಡೆಮೆಟ್ಟಿಸಲವ ತನ್ನ ಕರಸ್ಥಲದ ನಿಜವೀರಶೈವಲಿಂಗದಲ್ಲಿ ಸಲ್ಲದ ಭವಿಶೈವ ಮಾಟಕೂಟಂಗ? ಮಾಡಿಕೊಂಡು ನಡೆವ ನರಕಜೀವಿಗಳು ಗುರುಮಾರ್ಗಕ್ಕೆ ಹೊರಗು. ಅವರು ಕೊಂಬುದು ಸುರೆ ಮಾಂಸವಲ್ಲದೆ ಅವರ್ಗೆ ಪ್ರಸಾದವಿಲ್ಲ. ಇದು ಕಾರಣ ಈ ಉಭಯರನ್ನು ಕೂಡಲಚೆನ್ನಸಂಗಯ್ಯ ಸೂರ್ಯಚಂದ್ರರುಳ್ಳನ್ನಕ್ಕ ನಾಯಕನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಅರ್ಚನೆ ಪೂಜನೆ ನೇಮವಲ್ಲ; ಮಂತ್ರತಂತ್ರ ನೇಮವಲ್ಲ; ಧೂಪ ದೀಪಾರತಿ ನೇಮವಲ್ಲ; ಪರಧನ ಪರಸ್ತ್ರೀ ಪರದೈವಂಗಳಿಗೆರಗದಿಪ್ಪುದೆ ನೇಮ. ಶಂಭುಜಕ್ಕೇಶ್ವರನಲ್ಲಿ ಇವು ಕಾಣಿರಣ್ಣಾ ನಿತ್ಯನೇಮ
--------------
ಸತ್ಯಕ್ಕ
ಇನ್ನಷ್ಟು ... -->