ಅಥವಾ

ಒಟ್ಟು 109 ಕಡೆಗಳಲ್ಲಿ , 14 ವಚನಕಾರರು , 30 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನು ವಿಶ್ವಾದ್ಥಿಕ ಮಹಾರುದ್ರನುತ್ಪತ್ಯವೆಂತೆಂದಡೆ : ಅನಂತ ಬ್ರಹ್ಮಾಂಡ ಅನಂತ ಕೋಟಿ ಲೋಕಧರನಾದ ಪರಾಪರನಾದ ಮಹಾಸದಾಶಿವನಾದವನು ತನ್ನ ನಿಜಜಾÕನ ಹಿರಿಣ್ಯಗರ್ಭದಲ್ಲಿ ವಿಶ್ವಾದ್ಥಿಕ ಮಹಾರುದ್ರನಂ ನಿರ್ಮಿಸಿ ತನ್ನ ಪಂಚಮುಖದಿಂದ ಪೃಥ್ವಿ ತೇಜ ವಾಯುವಾಕಾಶವೆಂಬ ಮಹಾಭೂತ ಬ್ರಹ್ಮಾಂಡದೊಳು ಚತುರ್ದಶ ಭುವನಂಗಳು, ಸಪ್ತ ಕುಲಪರ್ವತಂಗಳು ಮೊದಲಾದ ಅನಂತ ಗಿರಿ ಗಹ್ವರಂಗಳಂ, ಸಮಸ್ತ ಗ್ರಹರಾಶಿ ತಾರಾಪಥಂಗಳಂ ಗಬ್ರ್ಥೀಕರಿಸಿಕೊಂಡು ನಿರ್ಮಿಸೆಂದು ಬೆಸನಂ ಕೊಟ್ಟು ಕಳುಹಲು, ಮಹಾಪ್ರಸಾದವೆಂದು ಕೈಕೊಂಡು ಆ ಭೂತಬ್ರಹ್ಮಾಂಡದೊಳು ನಿರ್ಮಿಸಿದನೆಂತೆಂದಡೆ : ಜಲದ ಮೇಲೆ ಕಮಠನ ನಿರ್ಮಿಸಿದ. ಆ ಕಮಠನ ಮೇಲೆ ಮಹಾವಾಸುಗಿಯಂ ನಿರ್ಮಿಸಿದ. ಆ ಮಹಾವಾಸುಗಿಯ ಮೇಲೆ ಅಷ್ಟದಿಗ್ಗಜಂಗಳ ನಿರ್ಮಿಸಿದನು ಆ ವಿಶ್ವಾದ್ಥಿಕ ಮಹಾರುದ್ರನು. ಆ ಅಷ್ಟದಿಗ್ಗಜಂಗಳ ಮೇಲೆ ಸಕಲವಾದ ಜೀವಂಗಳಿಗೂ ಸಕಲವಾದ ಪದಾರ್ಥಂಗಳಿಗೂ ಇಹಂತಾಗಿ ಮಹಾಪೃಥ್ವಿಯಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಮಹಾಮೇರುಪರ್ವತದ ತಾವರೆಯ ನಡುವಣ ಪೀಠಿಕೆಯ ಕ್ರಮದಲ್ಲಿ ನಡೆಯ ಪ್ರಮಾಣು ಹದಿನಾರು ಸಾವಿರದ ಯೋಜನ ಪ್ರಮಾಣು. ಉದ್ದ ಎಂಬತ್ನಾಲ್ಕು ಸಾವಿರ ಯೋಜನದುದ್ದ. ವಿಸ್ತೀರ್ಣ ಮೂವತ್ತೆರಡು ಸಾವಿರಯೋಜನ ಪ್ರಮಾಣು ಉಂಟಾಗಿಹಂತಾಗಿ ಮೇರುತನಕ ಸುತಾಳ ತಾಳ, ಪಂಚಾಶತಕೋಟಿ ಸೋಪಾನಂಗಳುಂಟಾಗಿ ದಿವ್ಯರೂಪಾಗಿ ನಿರ್ಮಿಸಿದನು. ಆ ಮೇರುವಿನ ಪೂರ್ವದೆಸೆಯಲ್ಲಿ ಪದ್ಮರಾಗವು, ಆಗ್ನೆಯಲ್ಲಿ ವಜ್ರ, ದಕ್ಷಿಣದಲ್ಲಿ ಮೌಕ್ತಿಕ, ನೈರುತ್ಯಭಾಗದಲ್ಲಿ ನೀಲ, ಪಶ್ಚಿಮದ ದೆಸೆಯ ವಿಭಾಗದಲ್ಲಿ ವೈಡೂರ್ಯ, ವಾಯುವ್ಯದಲ್ಲಿ ಚಿಂತಾಮಣಿ, ಉತ್ತರದಲ್ಲಿ ರತ್ನಕನಕ, ಈಶಾನ್ಯದಲ್ಲಿ ತಾಮ್ರ, ಮೇರುವಿನ ಮಧ್ಯದಲ್ಲಿ ಪುಷ್ಯರಾಗ ಜಾÕನ ದೃಷ್ಟಿಗಳುಂಟಾಗಿ ಪರಿಪೂರಿತಗಳಿಹಂತಾಗಿ ಗಿರಿಯ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮೇರುವಿನ ಮೇಲುಳ್ಳ ವೃಕ್ಷಂಗಳೆಲ್ಲ ಕಲ್ಪವೃಕ್ಷಂಗಳು. ಆ ಮೇರುವಿನ ಮೇಲುಳ್ಳ ಮೃಗಂಗಳೆಲ್ಲ ಅಚಾಮಚರಿತ್ರಂಗಳು. ಆ ಮೇರುವಿನ ಮೇಲುಳ್ಳ ಗೋವೆಲ್ಲ ಕಾಮಧೇನುಗಳು. ಅಲ್ಲಿದ್ದ ಮನುಷ್ಯರೆಲ್ಲ ಪರಮಾತ್ಮರು. ಅಲ್ಲಿದ್ದ ಸ್ತ್ರೀಯರೆಲ್ಲ ದೇವಸ್ತ್ರೀಯರು. ಆಹಾರಂಗಳೆಲ್ಲ ಅಮೃತಾಹಾರ, ನೀರೆಲ್ಲ ರಜಸ್ತಳೇಯ ; ಅಲ್ಲಿಯ ಮಣ್ಣೆಲ್ಲ ಕಸ್ತೂರಿ ಕುಂಕುಮಾದಿಗಳೆನಿಸಿಕೊಂಬುದು. ಅಲ್ಲಿಯ ಕಾಷ್ಠಂಗಳೆಲ್ಲ ಸುಗಂಧಂಗಳು. ಆ ಮೇರುವಿನ ದೇವತೆಗಳಿಗೂ ಮುನಿಗಳಿಗೂ ಅನಂತ ಸಿದ್ಧರಿಗೂ ಅನಂತ ಯೋಗಿಗಳಿಗೂ ಜೋಗಿಗಳಿಗೂ ಪುರಂಗಳು ಗೃಹಂಗಳು ಗುಡಿಗಳು ಬಿಲದ್ವಾರಂಗಳುಂಟಾಗಿ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮಹಾಮೇರುವಿಗೆ ನಾಲ್ಕು ಬಾಗಿಲು, ಎಂಟು ಸ್ವರ್ಣಕಂಡಿಗಳು, ಹದಿನಾರು ಮಕರತೋರಣಗಳು, ಮೂವತ್ತೆರಡು ಸೋಮವೀದಿಗಳು, ಅರವತ್ನಾಲ್ಕು ಸಂದುಗಳುಂಟಾಗಿ ಸರ್ವಸಂಪೂರ್ಣವಾಗಿ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮಹಾಮೇರುವಿನ ಮಧ್ಯದಲ್ಲಿ ಶ್ರೀ ಮಹಾದೇವರಿಗೆ ಶಿವಪುರಮಂ ನಿರ್ಮಿಸಿದನು. ಪಂಚಸಹಸ್ರಯೋಜನ ಚತುಃಚಕ್ರಾಕಾರವಾಗಿ, ನವರತ್ನಖಚಿತವಾಗಿ, ಅಷ್ಟದಳವೇಷ್ಟಿತವಾಗಿ, ಅಷ್ಟಧ್ವಾನಂಗಳುಂಟಾಗಿ, ಶತಸಹಸ್ರಕೋಟಿ ಕನಕಗೃಹಂಗಳುಂಟಾಗಿ. ಪ್ರಮಥಗಣಂಗಳು, ನಂದಿ, ಮಹಾನಂದಿಕೇಶ್ವರ ಮಹಾಗಣಂಗಳು ಅಷ್ಟದಿಕ್ಪಾಲರು, ಏಕಾದಶರುದ್ರರು, ದ್ವಾದಶಾದಿತ್ಯರು, ನವಗ್ರಹಂಗಳು, ಬ್ರಹ್ಮ ವಿಷ್ಣು ನಾರದ ಸುಖದಲ್ಲಿಪ್ಪಂತಾಗಿ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮೇರುವಿನ ಬಲದ ದೆಸೆಯಲ್ಲಿ ಬ್ರಹ್ಮಪುರವು ತ್ರಿಕೋಣಾಕಾರವಾಗಿ ಅನಿಲಪ್ರಕಾರವೇಷ್ಟಿತವಾಗಿ, ಅಷ್ಟದ್ವಾರಂಗಳುಂಟಾಗಿ ಐನೂರು ಕೋಟಿ ಕನಕಗೃಹಂಗಳು ಅಸಂಖ್ಯಾತಕೋಟಿ ಮಹಾಋಷಿಗಳು ಒಡ್ಡೋಲಂಗಗೊಟ್ಟು, ನಾಲ್ಕು ವೇದಂಗಳು ಮೂರ್ತಿಬಾಂಧವರಾಗಿ ಸರಸ್ವತಿಸಮೇತವಾಗಿ ಬ್ರಹ್ಮದೇವರು ಪರಮಾನಂದಸುಖದೊಳಿಪ್ಪಂತಾಗಿ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮೇರುವಿನ ವಾಮಭಾಗದಲ್ಲಿ ವಿಷ್ಣುವಿಂಗೆ ವೈಕುಂಠವೆಂಬ ಪುರ ಚಕ್ರಾಕಾರವಾಗಿ ಪದ್ಮರಾಗಪ್ರಕಾಶವೇಷ್ಟಿತವಾಗಿ ಅಷ್ಟದ್ವಾರಂಗಳು ಹತ್ತುನೂರುಕೋಟಿ ಕನಕಗೃಹಂಗಳುಂಟಾಗಿ ಅನಂತಕೋಟಿ ಶಂಕ ಚಕ್ರ ಗದಾಹಸ್ತನಾಗಿ ವೇದ ಓಲೈಸಲಾಗಿ ಶ್ರೀಲಕ್ಷ್ಮೀ ಸಮೇತನಾಗಿ ವಿಷ್ಣು ಪರಮಾನಂದಸುಖದಲ್ಲಿಪ್ಪಂತೆ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಮೇರುವಿನ ಪೂರ್ವದೆಸೆಯಲ್ಲಿ ದೇವೇಂದ್ರಂಗೆ ಅಮರಾವತಿಯ ಪುರಮಂ ನಿರ್ಮಿಸಿದನು. ಆಗ್ನೇಯ ದೆಸೆಯಲ್ಲಿ ಅಗ್ನಿದೇವಂಗೆ ತೇಜೋವತಿಪುರಮಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ದಕ್ಷಿಣದಿಶಾಭಾಗದಲ್ಲಿ ಯಮದೇವಂಗೆ ಸಿಂಹಾವತಿಯ ಪುರಮಂ ನಿರ್ಮಿಸಿದನು. ನೈಋತ್ಯ ದಿಶಾಭಾಗದಲ್ಲಿ ನೈಋತ್ಯಂಗೆ ಕೃಷ್ಣವತಿಪುರಮಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಪಶ್ಚಿಮ ದಿಶಾಭಾಗದಲ್ಲಿ ವರುಣಂಗೆ ಜಂಜನಿತಪುರಮಂ ನಿರ್ಮಿಸಿದನು. ವಾಯುವ್ಯದಲ್ಲಿ ವಾಯುವಿಂಗೆ ಗಂಗಾವತಿಯಪುರಮಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಉತ್ತರದೆಶೆಯಲ್ಲಿ ಕುಬೇರಂಗೆ ಅಳಕಾಪುರಮಂ ನಿರ್ಮಿಸಿದನು. ಈಶಾನ್ಯದಿಶಾಭಾಗದಲ್ಲಿ ಈಶಾನ್ಯದೇವಂಗೆ ಧವಳಾವತಿಪುರಮಂ ಮೊದಲಾಗಿ ಸಮಸ್ತವಾದ ಪುರಗಳಂ ನಿರ್ಮಿಸಿದನು ವಿಶ್ವಾದ್ಥಿಯಕಮಹಾರುದ್ರನು. ಆ ಮಹಾಮೇರುವಿಂಗೆ ವಳಯಾಕೃತವಾಗಿ ಲವಣ ಇಕ್ಷು ಸುರೆ ಘೃತ ದದ್ಥಿ ಕ್ಷೀರ ಶುದ್ಧಜಲಂಗಳೆಂಬ ಸಪ್ತಸಮುದ್ರಂಗಳಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಸಮುದ್ರಂಗಳ ನಡುವೆ ಜಂಬೂದ್ವೀಪ, ಪ್ಲಕ್ಷದ್ವೀಪ, ಶುಕ್ಲದ್ವೀಪ, ಕುಶದ್ವೀಪ, ಶಾಕದ್ವೀಪ, ಶಾಲ್ಮಲೀದ್ವೀಪ, ಪುಷ್ಕರದ್ವೀಪ, ಕ್ರೌಂಚದ್ವೀಪವೆಂಬ ಸಪ್ತದ್ವೀಪಂಗಳ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ದ್ವೀಪಂಗಳಿಗೆ ವಳಯಾಕೃತವಾಗಿ ಮಲಯಜಪರ್ವತ, ನೀಲಪರ್ವತ, ಶ್ವೇತಪರ್ವತ, ಋಕ್ಷಪರ್ವತ, ರಮ್ಯಪರ್ವತ, ಉತ್ತರಕುರುಪರ್ವತ, ಸುಗಂಧಪರ್ವತ, ನಿರಾಕಾರಪರ್ವತ, ಉದಾರಪರ್ವತ, ಮಣಿಶಿಖರಪರ್ವತ, ಅರ್ಧಚಂದ್ರಪರ್ವತ, ಮಧುರಪರ್ವತ, ಮಣಿನಾಗಪರ್ವತ, ಮೈನಾಕಪರ್ವತ, ಉದಯಾದ್ರಿಪರ್ವತ, ತ್ರಿಪುರಾಂತಕಪರ್ವತ, ಶ್ರೀರಾಮಪರ್ವತ, ಮಾಲ್ಯವಂತಪರ್ವತ, ನಿಷಧಪರ್ವತ, ಹೇಮಕೂಟಪರ್ವತ, ನಿರಾಚಲಪರ್ವತ, ಗಂಧಾಚಲಪರ್ವತ, ನೀಲಾಚಲಪರ್ವತ, ಮಂದಾಚಲಪರ್ವತ, ಮೇರುಮಂದಿರಪರ್ವತ, ಶುಬರೀಶ್ವರಪರ್ವತ, ಕುಮುದಉದಯಾದ್ರಿ, ದೇವಕೂಟ, ವಿಂಧ್ಯಾಚಲ, ಪವನಾಚಲ, ಪರಿಯಾಚಲ, ಚಂದ್ರಾಚಲ, ಧಾರಾಚಲ, ಷಡುಲಕ್ಷ್ಮಿಗಿರಿ, ಮಾನಸಾಂತಗಿರಿ, ತಮಂಧಗಿರಿ, ಚಂದ್ರಗಿರಿ, ನಾಗಗಿರಿ, ಲಘುಗಿರಿ, ಮಕರಗಿರಿ, ದ್ರೋಣಗಿರಿ, ಅನಂತವಜ್ರಗಿರಿ, ಕಪಿಲಗಿರಿ, ನೀಲಗಿರಿ, ಪರಗಿರಿ, ತ್ರಿಪುರಗಿರಿ, ಸಿಂಹಗಿರಿ, ಶ್ರೀಕಂಠಗಿರಿ, ಚಕ್ರವಾಳಗಿರಿಪರ್ವತ, ಇಂದ್ರಗಿರಿಪರ್ವತ, ಲೋಕಪರ್ವತಂಗಳು ಮೊದಲಾದ ಪರ್ವತಂಗಳೆಲ್ಲವಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಇದಕ್ಕೆ ದೇಶಂಗಳಾಗಬೇಕೆಂದು ಪಾಂಚಾಲ, ಬರ್ಬರ, ಮತ್ಸ್ಯ, ಮಗಧ, ಮಲೆಯಾಳ, ತೆಲುಂಗ, ಕಳಿಂಗ, ಕುಕರ, ಕೊಂಕಣ, ತ್ರಿಕರರಾಷ್ಟ್ರ, ಶ್ವಾಸಿನಿ, ಕಂಠರಹಿತ, ಕುತಿಷ್ಟ, ದಶಾರ್ಣ, ಕುರು, ಮುಖಸರ, ಕೌಸಯಿವರ್ಣ, ಆವಂತಿ, ಲಾಳ, ಮಹೇಂದ್ರ, ಪಾಂಡ್ಯ, ಸರ್ವೇಶ್ವರ, ವಿಷ್ಣು, ಶಾಂತಕ, ತುರಾದ್ರ, ಮಗಧಾದ್ರ, ವಿದೇಹ, ಮಗಧ, ದ್ರವಿಳ, ಕಿರಾಂತ, ಕುಂತಳ, ಕಾಮೀರ, ಗಾಂಧಾರ, ಕಾಂಭೋಜ, ಕೀಳುಗುಜ್ಜರ, ಅತಿದೃಷ್ಟ, ನೇಪಾಳ, ಬಂಗಾಳ, ಪುಳಿಂದ್ರ, ಜಾಳೇಂದ್ರ, ಕಲ್ವರ-ಇಂಥಾ ದೇಶಂಗಳೆಲ್ಲವಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಇನ್ನು ಭೂಮಿಯಿಂದಂ ಮೇಲೆ ಮೇಘಮಂಡಲ ಮೊದಲಾಗಿ ಶಿವಾಂಡ ಚಿದ್ಬ ್ರಹ್ಮಾಂಡ ಕಡೆಯಾಗಿ ಎಲ್ಲಾ ಲೋಕಂಗಳಂ ನಿರ್ಮಿಸಿ, ಸಪ್ತಪಾತಾಳವ ನಿರ್ಮಿಸಿದನದೆಂತೆಂದಡೆ: ಅಲ್ಲಿ ಪೃಥ್ವಿಯ ಕೆಳಗೆ ಶತಕಯೋಜನದಲ್ಲಿ ಅತಳಲೋಕದಲ್ಲಿ ಇಶಿತಮಂಡಲಮಂ ನಿರ್ಮಿಸಿದನು. ಅತಳಲೋಕದಿಂದಂ ಕೆಳಗೆ ಕೋಟಿಯೋಜನದುದ್ದದಲ್ಲಿ ವಿತಳಲೋಕದಲ್ಲಿ ಸ್ವರ್ಣ ನಾಗಮಂಡಲಮಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ವಿತಳಲೋಕದಿಂದಲು ಕೆಳಗೆ ದ್ವಿಕೋಟಿ ಯೋಜನದುದ್ದದಲ್ಲಿ ಸುತಳತೋಲಕದಲ್ಲಿ ಕೃಷ್ಣನಾಗಮಂಡಲಮಂ ನಿರ್ಮಿಸಿದನು. ಆ ಸುತಳಲೋಕದಿಂದಲು ಕೆಳಗೆ ರಸಾತಳಲೋಕದಲ್ಲಿ ರತ್ನನಾಗಮಂಡಲಮಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ರಸಾತಳಲೋಕದಿಂದಲು ಕೆಳಗೆ ಚತುಃಕೋಟಿ ಯೋಜನದುದ್ದದಲ್ಲಿ ಮಹಾತಳಲೋಕದಿಂದಲು ಕೆಳಗೆ ಶತಕೋಟಿ ಯೋಜನದುದ್ದದಲ್ಲಿ ಪಾತಾಳಲೋಕದಲ್ಲಿ ಅವಿಷ್ಟಕೆ ಆಧಾರವಾಗಿ ಕಮಠನಂ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ಕಮಠನ ಮೇಲೆ ಜಲಂಗಳಂ, ಕಮಲಂಗಳಂ, ಮಹಾಪೃಥ್ವಿಯಂ, ಮೇರುಪರ್ವತ ಸಮಸ್ತದೇವಾಸುರಂಗಳಂ ಮಹಾಪೃಥ್ವಿಯು ಸಮಸ್ತ ಸಪ್ತಸಮುದ್ರಂಗಳಂ, ಸಪ್ತದ್ವೀಪಂಗಳಂ ಮೊದಲಾದ ಲೋಕಾದಿಲೋಕ ಪರ್ವತಂಗಳ ನಿರ್ಮಿಸಿದನು ವಿಶ್ವಾದ್ಥಿಕಮಹಾರುದ್ರನು. ಆ ವಿತಳಲೋಕದಿಂದಲೂ ಕೆಳಗೆ ದ್ವಿಕೋಟಿ ಯೋಜನದುದ್ದದಲ್ಲಿ ಅತಳ ವಿತಳ ಸುತಳ ರಸಾತಳ ತಳಾತಳ ಮಹಾತಳ ಪಾತಾಳ ಭೂಲೋಕ, ಭುವರ್ಲೋಕ, ಸ್ವರ್ಲೋಕ, ಮಹರ್ಲೋಕ, ಜನರ್ಲೋಕ, ತಪರ್ಲೋಕ, ಸತ್ಯರ್ಲೋಕ-ಇಂಥ ಲೋಕಂಗಳೆಂಬ ಹದಿನಾಲ್ಕು ಲೋಕಂಗಳಂ ನಿರ್ಮಿಸಿ ಮತ್ತೆ ಸ್ವರ್ಗ-ಮತ್ರ್ಯ-ಪಾತಾಳಗಳ ವಿವರಿಸಿ ನೋಡಿ ಆ ಲೋಕದವರಿಗೆ ವೇದಶಾಸ್ತ್ರಂಗಳಂ ನಿರ್ಮಿಸಿದನದೆಂತೆಂದಡೆ : ವೇದ ವೇದಾಂಗ, ಮಂತ್ರಶಾಸ್ತ್ರ, ತರ್ಕಶಾಸ್ತ್ರ, ಯೋಗಶಾಸ್ತ್ರ, ಜ್ಯೋತಿಷ್ಯಶಾಸ್ತ್ರ, ವೈದ್ಯಶಾಸ್ತ್ರ, ನೀತಿಶಾಸ್ತ್ರ, ಧರ್ಮಶಾಸ್ತ್ರ, ಶಕುನಶಾಸ್ತ್ರ, ಶಸ್ತ್ರಶಾಸ್ತ್ರ, ಶಿಲ್ಪಶಾಸ್ತ್ರ, ಜಲಶಾಸ್ತ್ರ, ಸಾಮುದ್ರಿಕಶಾಸ್ತ್ರ, ನೃಪತಿಶಾಸ್ತ್ರ, ಅಂಜನಶಾಸ್ತ್ರ, ರಸವೈದ್ಯಶಾಸ್ತ್ರ, ಬಿಲ್ಲುಶಾಸ್ತ್ರ, ಗೋಪಶಾಸ್ತ್ರ, ಮನುಷ್ಯಶಾಸ್ತ್ರ, ರಥಿಕಶಾಸ್ತ್ರ, ಅಂಗುಲಿಶಾಸ್ತ್ರ, ಶ್ರವಣಶಾಸ್ತ್ರ, ಗಂಧಪಾದ್ಯಶಾಸ್ತ್ರ, ಭುಜಗಶಾಸ್ತ್ರ, ಯೋಗಿಣಿಶಾಸ್ತ್ರ, ಯಕ್ಷಿಣಿಶಾಸ್ತ್ರ, ಶಬ್ದನೀತಿಶಾಸ್ತ್ರ, ಅಲಂಕಾರಶಾಸ್ತ್ರ, ವಿಶ್ವಶಾಸ್ತ್ರ, ಗಂಡಶಾಸ್ತ್ರ, ವ್ಯಾದ್ಥಿಶಾಸ್ತ್ರ, ಯುದ್ಧಶಾಸ್ತ್ರ, ಹಸರಶಾಸ್ತ್ರ, ಶುಂಭನಶಾಸ್ತ್ರ, ಮುಖಶಾಸ್ತ್ರ, ಬಂಧಶಾಸ್ತ್ರ, ಜಲಸ್ತಂಭಶಾಸ್ತ್ರ, ಅಗ್ನಿಶಾಸ್ತ್ರ, ಕರ್ಮಶಾಸ್ತ್ರ, ಪುರಾಣಿಕಶಾಸ್ತ್ರ, ಇಂಗಶಾಸ್ತ್ರ, ವೈದ್ಯಶಾಸ್ತ್ರ, ಇಂದ್ರಜಾಲ, ಮಹೇಂದ್ರಜಾಲ ಶಾಸ್ತ್ರಂಗಳು ಮೊದಲಾದ ಚೌಷಷ್ಠಿ ವಿದ್ಯಂಗಳ ನಿರ್ಮಿಸಿದನು ನೋಡಾ [ಅಪ್ರಮಾಣ] ಕೂಡಲಸಂಗಯ್ಯನ ಶರಣ ವಿಶ್ವಾದ್ಥಿಕಮಹಾರುದ್ರನು.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಖಂಡಿತವಿಲ್ಲಾಗಿ ಸರ್ವಾಂಗವೂ ನಾಸಿಕವಾಯಿತ್ತು. ತಾನಲ್ಲದೆ ಅನ್ಯವಾಸನೆಯಿಲ್ಲಾಗಿ, ಅಲ್ಲಿಯೆ ಮಹತ್ತಪ್ಪ ಪೃಥ್ವಿಯಡಗಿತ್ತು. ಖಂಡತವಿಲ್ಲಾಗಿ ಸರ್ವಾಂಗವೂ ಜಿಹ್ವೆಯಾಯಿತ್ತು. ತಾನಲ್ಲದೆ ಅನ್ಯ ರುಚಿಯಿಲ್ಲಾಗಿ, ಅಲ್ಲಿಯೆ ಮಹತ್ತಪ್ಪ ಅಪ್ಪುವಡಗಿತ್ತು. ಖಂಡಿತವಿಲ್ಲಾಗಿ ಸರ್ವಾಂಗವೂ ನೇತ್ರವಾಯಿತ್ತು. ತಾನಲ್ಲದೆ ಅನ್ಯ ರೂಪಿಲ್ಲಾಗಿ, ಅಲ್ಲಿಯೆ ಮಹತ್ತಪ್ಪ ಅಗ್ನಿಯಡಗಿತ್ತು. ಖಂಡಿತವಿಲ್ಲಾಗಿ ಸರ್ವಾಂಗವೂ ಮಹಾತ್ವಕ್ಕಾಯಿತ್ತು. ತಾನಲ್ಲದೆ ಅನ್ಯಸ್ಪರ್ಶವಿಲ್ಲಾಗಿ, ಅಲ್ಲಿಯೆ ಮಹತ್ತಪ್ಪ ವಾಯುವಡಗಿತ್ತು ಖಂಡಿತವಿಲ್ಲಾಗಿ ಸರ್ವಾಂಗವೂ ಶ್ರೋತ್ರವಾಯಿತ್ತು ತಾನಲ್ಲದೆ ಅನ್ಯ ಶಬ್ದವಿಲ್ಲಾಗಿ ಅಲ್ಲಿಯ ಮಹತ್ತಪ್ಪ ಆಕಾಶವಡಗಿತ್ತು. ಇಂತು ಬ್ರಹ್ಮಾಂಡವೆ ಪಂಚಭೂತಮಯವಾದಡೆ, ಶರಣನ ಸರ್ವಾಂಗದಲ್ಲಿ ಪಂಚಬ್ರಹ್ಮಮಯವಡಗಿತ್ತು. ಅದೆ ಪಂಚವರ್ಣಾತೀತವಾದ ಮಹಾಬಯಲೊಳಗೆ ನಿಂದ ಭೇದವು. ಅದರಲ್ಲಿ ಜಗತ್ತು ಅಡಗಿದ ಭೇದವ, ಮಹತ್ತು ಮಹತ್ತನೊಳಕೊಂಡ ಭೇದವ ಏನೆಂದುಪಮಿಸುವೆನಯ್ಯಾ, ಕೂಡಲಚೆನ್ನಸಂಗಯ್ಯಾ !
--------------
ಚನ್ನಬಸವಣ್ಣ
ನೆಲ್ಲುದ್ದ ಮರನನೇರಿ ಇಳಿಯಲರಿಯದೆ ತ್ರೆ ೈಜಗವೆಲ್ಲಾ ತಲ್ಲಣಿಸುತ್ತಿದೆ ನೋಡಾ. ಅಲ್ಲಿಯ ಫಲವ ಬಯಸಿದ ಹಿರಿಯರೆಲ್ಲ ಹಳ್ಳದಲ್ಲಿ ಕೆಡೆದರೆ ಇದ ಕಂಡು ಹೇಸಿ, ಕಡೆಗೆ ತೊಲಗಿದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಶಿವತತ್ವದ ವಾಯುವಿನ ಮೇಲೆ ನಿರಾಳ ಅನಾಹತಚಕ್ರ. ಅಲ್ಲಿಯ ಪದ್ಮ ಇನ್ನೂರಾ ಎಪ್ಪತ್ತು ದಳದ ಪದ್ಮ. ಆ ಪದ್ಮ ವರ್ಣವಿಲ್ಲದೆ ಅಪ್ರಮಾಣ ಅಗೋಚರವಾಗಿಹುದು. ಅಲ್ಲಿಯ ಅಕ್ಷರ ಇನ್ನೂರಾ ಎಪ್ಪತ್ತಕ್ಷರ ; ಆ ಅಕ್ಷರ ನಿರೂಪಾತೀತವಾಗಿಹುದು. ಅಲ್ಲಿಯ ಶಕ್ತಿ ನಿರಾಳ ಉಪಮಾಶಕ್ತಿ. ಅಮಲಾನಂದಬ್ರಹ್ಮವೇ ಅದ್ಥಿದೇವತೆ. ಅಲ್ಲಿಯ ನಾದ ಸುನಾದ. ಅಲ್ಲಿಯ ಬೀಜಾಕ್ಷರ ಆದಿಪ್ರಣವ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಕೈಲಾಸ ಮರ್ತ್ಯಲೋಕ ಎಂಬರು. ಕೈಲಾಸವೆಂದಡೇನೊ, ಮರ್ತ್ಯಲೋಕವೆಂದಡೇನೊ ? ಅಲ್ಲಿಯ ನಡೆಯೂ ಒಂದೆ, ಇಲ್ಲಿಯ ನಡೆಯೂ ಒಂದೆ. ಅಲ್ಲಿಯ ನುಡಿಯೂ ಒಂದೆ, ಇಲ್ಲಿಯ ನುಡಿಯೂ ಒಂದೆ ಕಾಣಿರಯ್ಯಾ ಎಂಬರು. ಕೈಲಾಸದವರೆ ದೇವರ್ಕಳೆಂಬರು; ಸುರಲೋಕದೊಳಗೆ ಸಾಸಿರಕಾಲಕ್ಕಲ್ಲದೆ ಅಳಿದಿಲ್ಲವೆಂಬರು. ನರಲೋಕದೊಳಗೆ ಸತ್ತು ಸತ್ತು ಹುಟ್ಟುತಿಹರೆಂಬರು. ಇದ ಕಂಡು ನಮ್ಮ ಶರಣರು ಸುರಲೋಕವನು ನರಲೋಕವನು ತೃಣವೆಂದು ಭಾವಿಸಿ, ಭವವ ದಾಂಟಿ ತಮ್ಮ ತಮ್ಮ ಹುಟ್ಟನರಿದು, ಮಹಾಬೆಳಗನೆ ಕೂಡಿ, ಬೆಳಗಿನಲ್ಲಿ ಬಯಲಾದರಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಪರತತ್ತ್ವದ ವಾಯುವಿನ ಮೇಲೆ ನಿರಂಜನ ಅನಾಹತಚಕ್ರ. ಅಲ್ಲಿಯ ಪದ್ಮ ಇನ್ನೂರ ಎಪ್ಪತ್ತುದಳದಪದ್ಮ. ಆ ಪದ್ಮದ ವರ್ಣ ತೊಂಬತ್ತುಸಾವಿರದಾರುನೂರುಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶದ ವರ್ಣ. ಅಲ್ಲಿಯ ಅಕ್ಷರ ಇನ್ನೂರ ಎಪ್ಪತ್ತಕ್ಷರ : ಆ ಅಕ್ಷರ ತತ್ತಾ ್ವತೀತವಾಗಿಹುದು. ಅಲ್ಲಿಯ ಶಕ್ತಿ ನಿರಾಮಯಾನಂದವೆಂಬ ಮಹಾಶಕ್ತಿ. ವಿಮಲಾನಂದಬ್ರಹ್ಮವೆ ಅದ್ಥಿದೇವತೆ. ಅಲ್ಲಿಯ ನಾದ ನಿರಾಳನಾದ. ಅಲ್ಲಿಯ ಬೀಜಾಕ್ಷರ ಕಲಾಪ್ರಣವ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಶಿವತತ್ವದ ತೇಜದ ಮೇಲೆ ನಿರಾಳ ಮಣಿಪೂರ ಚಕ್ರ. ಅಲ್ಲಿಯ ಪದ್ಮ ಮುನ್ನೂರರುವತ್ತು ದಳದ ಪದ್ಮ ; ಆ ಪದ್ಮದ ವರ್ಣ ಉಪಮಾತೀತವು. ಅಲ್ಲಿಯ ಅಕ್ಷರ ಮುನ್ನೂರರುವತ್ತಕ್ಷರ ; ಆ ಅಕ್ಷರ ರೂಪಾತೀತವಾಗಿಹುದು. ಅಲ್ಲಿಯ ಶಕ್ತಿ ನಿರಾಳಶಿವಶಕ್ತಿ. ನಿರಂಜನಬ್ರಹ್ಮವೇ ಅದ್ಥಿದೇವತೆ. ಅಲ್ಲಿಯ ನಾದ ಬ್ರಹ್ಮನಾದ. ಅಲ್ಲಿಯ ಬೀಜಾಕ್ಷರ ಮಕಾರ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಹಾಲೋಗರವನುಂಡು ಬಾಲೆಯರ ತೋಳಮೇಲೊರಗಿದಡೆ ಬಾರದ ಭವದಲ್ಲಿ ಬಪ್ಪುದು ತಪ್ಪದು ಕಾಣಿರಣ್ಣ. ಅಲ್ಲಿಯ ಆಲಿಂಗನ ವಿಷ, ಚುಂಬನ ನಂಜು, ನೋಟ ಸರಳು, ಸವಿನುಡಿ ಕಠಾರಿ ನೋಡಾ. ಅಲ್ಲಿಯ ನೆನಹು ಆಜ್ಞಾನ ನೋಡಾ. ಅದು ತನ್ನ ಹಿತಶತ್ರುತನದಿಂದ ಭ್ರಾಂತುಭಾವನೆಯ ಹುಟ್ಟಿಸಿ ಕೊಲುವದಾಗಿ, ಆ ಸಂಸಾರ ನಿನಗೆ ಹಗೆಯೆಂದು ತಿಳಿಯ, ಮರುಳುಮಾನವ. ಇದುಕಾರಣ, ಸಂಸಾರಸುಖವನುಣ್ಣಲೊಲ್ಲದೆ, ಬಾಲೇಂದುಮೌಳಿಯ ಜ್ಞಾನಪ್ರಸಾದವನುಂಡು ನಾನು ಬದುಕಿದೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪರತತ್ತ್ವದ ಹೃದಯದ ಮೇಲೆ ನಿರಂಜನ ಆಜ್ಞಾಚಕ್ರ. ಅಲ್ಲಿಯ ಪದ್ಮ ವಿಶ್ವತೋದಳಪದ್ಮ. ಆ ಪದ್ಮದ ವರ್ಣ ಅನಂತಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶದ ವರ್ಣ. ಅಲ್ಲಿಯ ಅಕ್ಷರಂಗಳು ವಿಶ್ವತೋ ಅಕ್ಷರಂಗಳು. ಆ ಅಕ್ಷರಂಗಳು ವಿಶ್ವಾತೀತವಾಗಿಹುದು. ಅಲ್ಲಿಯ ಶಕ್ತಿ ನಿರಾಮಯಾನಂದಾತೀತವೆಂಬ ಮಹಾಶಕ್ತಿ. ನಿರಂಜನಾತೀತವೆಂಬ ಮಹಾಘನಲಿಂಗವೆ ಅಧಿದೇವತೆ. ಅಲ್ಲಿಯ ನಾದ ಮಹಾಗುಹ್ಯನಾದ. ಅಲ್ಲಿಯ ಬೀಜಾಕ್ಷರ ನಿರಂಜನಪ್ರಣವ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಶಿವತತ್ತ್ವದ ಹೃದಯದ ಮೇಲೆ ನಿರಾಳ ಆಜ್ಞಾಚಕ್ರ. ಅಲ್ಲಿಯ ಪದ್ಮ ಅನೇಕ ಕೋಟಿದಳಪದ್ಮ. ಆ ಪದ್ಮದ ವರ್ಣ ಅಂಥಾದಿಂಥಾದೆಂದು ಉಪಮೆ ಇಲ್ಲದ ಉಪಮಾತೀತವಾಗಿಹುದು. ಅಲ್ಲಿಯ ಅಕ್ಷರ ಅನೇಕ ಕೋಟಿ ಅಕ್ಷರ ; ಆ ಅಕ್ಷರ ಸರ್ವಾತೀತವಾಗಿಹುದು. ಅಲ್ಲಿಯ ಶಕ್ತಿ ನಿರಾಳಪ್ರಣವವೆಂಬ ಮಹಾಶಕ್ತಿ. ನಿರಾಳಾತೀತವೆಂಬ ಮಹಾಘನಲಿಂಗವೆ ಅಧಿದೇವತೆ. ಅಲ್ಲಿಯ ನಾದ ಪರಮಾನಂದವೆಂಬ ಮಹಾನಾದ. ಅಲ್ಲಿ ಬೀಜಾಕ್ಷರ ಕಲಾಪ್ರಣವ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಒಂದು ರಾಷ್ಟ್ರದಲ್ಲಿ ಒಂಬತ್ತು ಅಗಸಿಯನುಳ್ಳ ಮೂರು ಸುತ್ತಿನಾ ಕೋಟಿಯ ಗಡಹವಿರ್ಪುದು. ಆ ಗಡಹವ ನೋಡ ಹೋಗಲು, ಆ ಗಡಹದ ನವದ್ವಾರವು ತೆರೆದಿರಲು, ಅಲ್ಲಿ ಒಳಹೊಕ್ಕು ನೋಡಲು ಎತ್ತ ನೋಡಿದರತ್ತ ವಜೀರ, ಉಮರಾವತ, ಅರಣ್ಯ, ಠಾಣ್ಯ ಮೊದಲಾದ ಅನಂತ ಪರಿವಾರ ಆರೈಸಿರುವದು. ಅಲ್ಲಿ ವೇದ ಆಗಮ ಪುರಾಣ ಮೊದಲಾದ ನೃತ್ಯ ಹಾಸ್ಯ ಗಾಯನ ಅನಂತ ಉತ್ಸಹವಿರ್ಪುದು. ಅಲ್ಲಿ ದೀವಟಿಗೆಯು ಬಿರಸು ಚಂದ್ರಜ್ಯೋತಿ ದೀಪ ಮೊದಲಾದ ಅನಂತ ಪ್ರಕಾಶವಿರ್ಪುದು. ಅಲ್ಲಿ ಭೇರಿ, ನಗಾರಿ, ತಮ್ಮಟೆ, ಕಾಳಿ, ಕರ್ಣಿ ಮೊದಲಾದ ಅನಂತ ನಾದವಿರ್ಪುದು. ಮತ್ತಲ್ಲಿ ಒಳಹೊಕ್ಕು ನೋಡಲು ಮುಂದೆ ಚಿತ್ರವಿಚಿತ್ರವಾದ ಮಂಟಪವಿರ್ಪುದು. ಆ ಮಂಟಪದ ಸುತ್ತ ಅರವಿಂದ ನೀಲೋತ್ಪಲ ಸಂಪಿಗಿ ಇರವಂತಿಗೆ ಶ್ಯಾವಂತಿಗಿ ಮೊಲ್ಲೆ ಮಲ್ಲಿಗಿ ಮೊದಲಾದ ಅನಂತ ಪುಷ್ಪಮಾಲೆಗಳಿರ್ಪುವು. ಬಹುವರ್ಣದ ರಂಗವಾಲಿಯ ನೆಲಗಟ್ಟಿರ್ಪುದು. ಅದರೊಳಗೆ ನೋಡಬೇಕೆಂದು ಹೋಗಲು ಮುಂದೆ ನವರತ್ನಖಚಿತವಾದ ಸಿಂಹಾಸನವಿರ್ಪುದು. ಆ ಸಿಂಹಾಸನದ ಮೇಲೆ ಅಧಿಪತಿಯಾಗಿ ಇರುವಾತ ಎಂಥಾತ ಆತನ ಆತುರದಿ ನೋಡಬೇಕೆಂದು ಆ ಸಿಂಹಾಸನವೇರಲು ಅಲ್ಲಿಯ ಅಧಿಪತಿ ತಾನೇ ಆಗಿರ್ದ. ಇದೇನು ಸೋಜಿಗವೋ, ತಾ ನೋಡ ಬಂದವನೆಂಬ ಅರವಿಲ್ಲ. ಅಲ್ಲಿ ಅರಸನ್ಯಾವನೆಂಬ ಸಂಶಯವಿಲ್ಲದೆ ಅಲ್ಲಿಯ ಸರ್ವಕ್ಕೆ ತಾನೇ ಅಧಿಪತಿಯಾಗಿ ಇದ್ದಾಗ್ಯೂ ಆವಾಗಲೂ ಅಲ್ಲೇ ಇರ್ದಂತೆ ಇರುತಿರ್ದೆನೋ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಪರತತ್ತ್ವದ ಅಪ್ಪುವಿನ ಮೇಲೆ ನಿರಂಜನ ಸ್ವಾಧಿಷಾ*ನಚಕ್ರ. ಅಲ್ಲಿಯ ಪದ್ಮ ನಾನೂರಐವತ್ತು ದಳದಪದ್ಮ. ಆ ಪದ್ಮದ ವರ್ಣ ಎಪ್ಪತ್ತುಸಾವಿರದಾರುನೂರುಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶದ ವರ್ಣ. ಅಲ್ಲಿಯ ಅಕ್ಷರ ನಾನೂರಐವತ್ತಕ್ಷರ, ಆ ಅಕ್ಷರ ಮನಾತೀತವಾಗಿಹುದು. ಅಲ್ಲಿಯ ಶಕ್ತಿ ಆನಂದಶಕ್ತಿ , ಅಚಲಾನಂದ ಬ್ರಹ್ಮವೇ ಅಧಿದೇವತೆ. ಅಲ್ಲಿಯ ನಾದ ಪರನಾದ. ಅಲ್ಲಿಯ ಬೀಜಾಕ್ಷರ ಪರಬ್ರಹ್ಮಸ್ವರೂಪವಾಗಿಹ ಪರಮೋಂಕಾರ ನೋಡಾ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಕುಂಭದ ಅಪ್ಪುವಿನ ಸಂಗದಲ್ಲಿ ತಂಡುಲವ ಹಾಕಿ ಅಗ್ನಿಘಟದಿಂದ ಬೇಯಿಸಲಿಕ್ಕಾಗಿ, ಒಂದೊಂದು ತಂಡುಲ ಹಿಂಗಿ ಬೆಂದಿತ್ತೆ? ಆ ಅಪ್ಪು ಬೇರೆ ಬೇರೆ ಸಂಗವ ಮಾಡಿತ್ತೆ? ಆ ಅಗ್ನಿ ತಂಡುಲಕ್ಕೊಂದೊಂದು ಬಾರಿ ಉರಿಯಿತ್ತೆ? ಇಂತೀ ವಿವರಂಗಳ ಭೇದವನರಿತು ಅಂಗದಲ್ಲಿ ಆರು ಸ್ಥಲವನಂಗೀಕರಿಸಿದಲ್ಲಿ ಬೇರೊಂದೊಂದರಲ್ಲಿ ಹಿಂಗಿ ನೋಡಿಹೆನೆಂದಡೆ ಮೂರಕ್ಕಾರು ಆರಕ್ಕೆ ಮೂವತ್ತಾರು ಮತ್ತಿವರೊಳಗಾದ ಗುಣ ನಾಮಾತೀತಕ್ಕೆ ಅತೀತವಾಗಿಪ್ಪುದು. ಇಂತೀ ಸ್ಥಲಂಗಳನಹುದೆಂದೊಪ್ಪದೆ, ಅಲ್ಲಾ ಎಂದು ಬಿಡದೆ, ಅಲ್ಲಿಯ ಸ್ಥಲವಲ್ಲಿಯೆ ಏಕೀಕರಿಸಿ, ಅಲ್ಲಿಯ ಭಾವವ ತೋರಿದಲ್ಲಿಯೆ ಲೇಪಮಾಡಿ, ಹಿಡಿದಡೆ ಹಿಡಿತೆಗೆ ಬಾರದೆ, ಬಿಟ್ಟಡೆ ಹರವರಿಯಲ್ಲಿ ಹರಿಯದೆ, ವಸ್ತುಕದಲ್ಲಿ ವರ್ಣಕ ತೋರಿ ಆ ವರ್ಣಕಕ್ಕೆ ವಸ್ತುಕ ಅಧೀನವಾಗಿಪ್ಪ ಉಭಯಸ್ಥಲವನರಿದಲ್ಲಿ ವಿಶ್ವಸ್ಥಲ ನಾಶವಾಗಿ ಸದ್ಯೋಜಾತಲಿಂಗ ವಿನಾಶನವಾಗಬೇಕು.
--------------
ಅವಸರದ ರೇಕಣ್ಣ
ಅರಿವುದೊಂದು ವಾಯು, ಮರೆವುದೊಂದು ವಾಯು. ಉಭಯದಿಂ ತೋರುವ ವಾಯು ಒಂದೆಯಾಗಿ, ವಾಳುಕದ ಒಳ ಹೊರಗಿನ ನೀರಿನಂತೆ ವೆಗ್ಗಳಿಸಿದಡೆ ನಿಂದು ತೆಗೆದಡೆ ಅಲ್ಲಿಯ ಅಡಗುವಂತೆ, ಅರಿದು ನುಡಿದು ನಡೆದಡೆ ಜ್ಞಾನಿ, ನುಡಿದ ನುಡಿಗೆ ನಡೆಯಡಗೆ ಆತನೆ ಜೀವಭಾವಿ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಇಷ್ಟಲಿಂಗಕ್ಕೆ ದೃಷ್ಟಪದಾರ್ಥಂಗಳ ಅರ್ಪಿಸುವಲ್ಲಿ ಕಟ್ಟಳೆವುಂಟು, ತನ್ನ ಘಟದ ಲಕ್ಷಣವುಂಟು. ಇಂತೀ ಉಭಯವ ಪ್ರಮಾಣಿಸಿಕೊಂಡು ಅರ್ಪಣದಿಂದ ಅರ್ಪಿಸುವಲ್ಲಿ ತೃಪ್ತಿಯ ಅಭಿಲಾಷೆಯಿಂದ ಸತ್ಯ ಸದೈವರ ಸಹಪಙ್ಞ್ತಯಲ್ಲಿ ಕ್ಷುತ್ತಿನ ಅಪೇಕ್ಷಕ್ಕಾಗಿ ಮತ್ತೆ ಪುನರಪಿಯಾಗಿ ಇಕ್ಕು ತಾಯೆಂದಡೆ, ಅದು ತನ್ನ ಕ್ಷುತ್ತಿನ ಭೇದವೊ ? ಭರಿತಾರ್ಪಣದ ಯುಕ್ತಿಯ ಭಿತ್ತಿಯೊ? ಭರಿತಾರ್ಪಣವೆಂಬಲ್ಲಿ ಲಿಂಗಕ್ಕೆ ಕೊಟ್ಟಲ್ಲದೆ ಮುಟ್ಟೆನೆಂಬ ಕಟ್ಟೊ ? ಅಲ್ಲಾ, ಸಾಧಕಾಂಗಿಗಳ ಸಂಗದ ಗುಣದಿಂದ ಬಂದ ಮುಟ್ಟೊ ? ಇಂತಿವ ತಿಳಿದು, ಮನವಚನಕಾಯ ಕರಣೇಂದ್ರಿಯಂಗಳು ಮುಂತಾದ ಭೇದಂಗಳಲ್ಲಿ ಒಮ್ಮೆಗೊಮ್ಮೆ ತುತ್ತನಿಡುವಲ್ಲಿ, ಸವಿಯಾದ ರಸಾನ್ನಗಳ ಚಪ್ಪಿರಿವಲ್ಲಿ, ಅಲ್ಲಿಗಲ್ಲಿಗೆ ಉಭಯವಳಿದ ಭರಿತಾರ್ಪಣದ ತೆರನ ಕಂಡು, ಈ ಗುಣ ಜಿಹ್ವೇಂದ್ರಿಯದ ಭರಿತಾರ್ಪಣ. ಇಂತೀ ಭರಿತಾರ್ಪಣವನಂಗೀಕರಿಸಿದ ಸರ್ವವ್ಯವಧಾನಿಯ ಎಚ್ಚರಿಕೆಯ ಮುಟ್ಟು, ಮುಂದೆ ಗುಹ್ಯೇಂದ್ರಿಯಕ್ಕೆ ಸಿಕ್ಕು. ಇಂತೀ ವಿಷಯ ವ್ಯಸನಾದಿಗಳಲ್ಲಿ ಭರಿತಾರ್ಪಣದಿಂದ ಕೂಡುವ ಪರಿಯಿನ್ನೆಂತೊ ? ಇಂದ್ರಿಯ ಬಿಡುವನ್ನಕ್ಕ ಪುನರಪಿಯಾಗಿ ಅಂಗೀಕರಿಸಿಯಲ್ಲದೆ ಚಲನೆಯ ಗುಣ ಹೆರೆಹಿಂಗದು. ಅಲ್ಲಿಯ ಭರಿತಾರ್ಪಣದ ಪರಿಯ ಬಲ್ಲವನಾದಡೆ ಸರ್ವ ಎಲ್ಲಾ ಗುಣದಲ್ಲಿ ಭರಿತಾರ್ಪಣ, ಲಿಂಗಾಂಗ ಪರಿಪೂರ್ಣನೆಂಬೆ. ಇಂತೀ ಗುಣವನರಿಯದೆ ಕಂಡಕಂಡವರ ಕಂಡು ಕೈಕೊಂಡು ಈ ವ್ರತವನಂಗೀಕರಿಸಿದನಾದಡೆ ಗುರುವಿಂಗೆ ದೂರ, ಲಿಂಗ ಅವಂಗಿಲ್ಲ, ಚರಪ್ರಸಾದ ಸಲ್ಲ. ಇಂತಿವನರಿಯದೆ, ಗೆಲ್ಲಸೋಲಕ್ಕೆ ಹೋರಿಹೆನೆಂದಡೆ ಚೆನ್ನಬಸವಣ್ಣನ ಕೋರಡಿಯ ಕೊಡುವೆ. ಸಂಗನಬಸವಣ್ಣನ ಮೆಚ್ಚಿಸುವೆ. ಪ್ರಭು ನಿಜಗುಣದೇವರ ತಲೆದೂಗಿಸುವೆ. ಇದಕ್ಕೆ ಹಾಕಿದೆ ಮುಂಡಿಗೆ, ವರ್ಮದ ತಲೆಸುತ್ತು, ಎನ್ನೊಡೆಯ ಚೆನ್ನ ಚೆನ್ನಕೂಡಲ ರಾಮೇಶ್ವರಲಿಂಗ ಸಾಕ್ಷಿಯಾಗಿ.
--------------
ಭರಿತಾರ್ಪಣದ ಚೆನ್ನಬಸವಣ್ಣ
ಇನ್ನಷ್ಟು ... -->