ಅಥವಾ

ಒಟ್ಟು 55 ಕಡೆಗಳಲ್ಲಿ , 19 ವಚನಕಾರರು , 43 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ಮಲದೇಹಿಗಳ ಅಂಗದ ಮೇಲೆ ಲಿಂಗವಿದ್ದರೇನು ಅದು ಲಿಂಗವಲ್ಲ. ಅದೇನು ಕಾರಣವೆಂದರೆ, ಅವನು ಪ್ರಸಾದದೇಹಿ ಸಂಸ್ಕಾರಿದೇಹಿಯಲ್ಲ. ಅವನ ಸೋಂಕಿದ ಲಿಂಗವು ಕೆರೆಯ ಕಟ್ಟೆಯ ಶಿಲೆಯಂತಾಯಿತು. ಅವನು ಲಿಂಗಾಂಗಿ ಲಿಂಗಪ್ರಾಣಿಯಾಗದೆ ಅವನು ಮುಟ್ಟಿದ ಭಾಂಡ ಭಾಜನಂಗಳೆಲ್ಲ ಹೊರಮನೆ ಊರ ಅಗ್ಗವಣಿ ಎಂದೆನಿಸುವವು. ಅವನು ಮಲದೇಹಿ. ಅವನಂಗದಲ್ಲಿ ಗುರುವಿಲ್ಲ ಜಂಗಮವಿಲ್ಲ, ಪಾದೋದಕವಿಲ್ಲ ಪ್ರಸಾದವಿಲ್ಲ. ಅವನು ಅಶುದ್ಧ ಮಲದೇಹಿ. ಅವನ ಪೂಜಿಸಿದವಂಗೆ ರೌರವ ನರಕ ತಪ್ಪದೆಂದಾತ ನಿಮ್ಮ ಶರಣ ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ಬಾಲತ್ವದಲ್ಲಿ ತನ್ನ ಮಲಮೂತ್ರದೊಡನೆ ಹೊರಳಾಡಿ, ಯೌವನಪ್ರಾಯದಲ್ಲಿ ಮದಮತ್ಸರದಿಂದ ಹೋರಾಡಿ, ಕಾಮದಲ್ಲಿ ಕರಗಿ, ಕ್ರೋಧದಲ್ಲಿ ಕೊರದು, ಲೋಭ ಮೋಹದಿಂದ ಮಗ್ನರಾಗಿ, ಯೌವನಬಲಗುಂದಿ ಮುಪ್ಪುವರಿದು ಹಲ್ಲು ಬಿದ್ದು, ಕಣ್ಣು ಒಳನಟ್ಟು, ಬೆನ್ನು ಬಾಗಿ, ದಮ್ಮು ಹತ್ತಿ, ಗುರುಗೂರಿ ಗರಹತ್ತಿ, ಸಾಯುವ ಮನುಜರಿಗೆ, ವಿಭೂತಿ ವೀಳ್ಯೆ ಎಂದು ಮಾಡಿ, ಅವನ ಪಣೆಯಲ್ಲಿ ವಿಭೂತಿಯ ಧರಿಸಿ, ಸರ್ವಾಂಗದಲ್ಲಿ ವಿಭೂತಿ ಲೇಪನ ಮಾಡಿ, ಸ್ಥಾನಸ್ಥಾನಂಗಳಲ್ಲಿ ರುದ್ರಾಕ್ಷಿಯ ಧರಿಸಿ, ಅವನ ಮನೆಯಲ್ಲಿ ಶಿವಗಣಂಗಳು ಸಲಿಸಿ, ಅವನ ಮಸ್ತಕದ ಮೇಲೆ ಸಕಲ ಗಣಂಗಳು ತಮ್ಮ ಪಾದವನಿಟ್ಟು ಅವನ ಕೈಯಲ್ಲಿ ವಿಭೂತಿ ರುದ್ರಾಕ್ಷಿ ಬಿಲ್ವಪತ್ರಿ ಸುವರ್ಣ ಮೊದಲಾದ ಕಾಂಚನವ ಬ್ಥಿಕ್ಷವ ಕೊಂಡು ಅವನು ಸತ್ತುಹೋದ ಮೇಲೆ ಊರ ಹೊರಗಾಗಲಿ, ಊರೊಳಗಾಗಲಿ, ಲಿಂಗಸ್ಥಾಪನೆಯಿದ್ದ ಮಠಮಾನ್ಯದಲ್ಲಿ ಏಳುಪಾದ ನಿಡಿದು, ಏಳುಪಾದ ಉದ್ದ ಭೂಮಿಯ ಒಳಗೆ, ಐದುಪಾದ ಚೌಕು, ಮೂರುಪಾದ ಅಡ್ಡಗಲ, ಮೂರುಪಾದ ಒಳಯಕ್ಕೆ ತ್ರಿಕೋಣೆ. ಇಂತೀ ಕ್ರಮದಲ್ಲಿ ಕ್ರಿಯಾಸಮಾದ್ಥಿಯ ಮಾಡಿ, ಸುಣ್ಣ ಕೆಂಪುಮಣ್ಣಿನ ಸಾರಣೆಯ ಮಾಡಿ ರಂಗವಾಲಿಯ ತುಂಬಿ, ತಳಿರುತೋರಣವ ಕಟ್ಟಿ, ಕೋಣಿ ಕೋಣಿ ಸ್ಥಾನಕ್ಕೆ ಓಲೆಯ ಮೇಲೆ ಪ್ರಣಮವಂ ಬರೆದು ಆ ಸಮಾದ್ಥಿಯಲ್ಲಿ ಸಂಬಂದ್ಥಿಸಿ, ಮತ್ತಂ, ಅವನ ಶವಕ್ಕೆ ಹಾಗೆ ಪ್ರಣಮವಂ ಬರೆದು ಸಂಬಂದ್ಥಿಸಿ, ಸಂಚರಿಸಿ ಮೇಲೆ ಮೋಕ್ಷವಾಯಿತು ಎಂಬರಯ್ಯಾ; ಮೋಕ್ಷವಾಗಲರಿಯದು. ಅದೆಂತೆಂದಡೆ, ಇಂತಿವೆಲ್ಲವು ಹೊರಗಣ ಉಪಚಾರವು. ಈ ಉಪಚಾರದಿಂದ ಕರ್ಮದೋಷಗಳು ಹರಿದು ಪಿಶಾಚಿಯಾಗನು, ಭವ ಹಿಂಗದು. ಇಂತೀ ಕ್ರಮದಲ್ಲಿ, ಅಂತರಂಗದಲ್ಲಿ ಲಿಂಗಾಂಗಕ್ಕೆ ಸ್ವಾನುಭಾವಜ್ಞಾನಸೂತ್ರದಿಂ ಪ್ರಣವಸಂಬಂಧ ಮಾಡಿಕೊಂಡಡೆ ಅದೇ ಕ್ರಿಯಾಸಮಾದ್ಥಿ, ಗೋಮುಖಸಮಾದ್ಥಿ, ಮಹಾನಿಜ ಅಖಂಡ ಚಿದ್ಬಯಲಸಮಾದ್ಥಿ. ಇಂತಪ್ಪ ಸಮಾದ್ಥಿ ಉಳ್ಳವರಿಗೆ ಭವಬಂಧನ ಹಿಂಗಿ ಮುಂದೆ ಮೋಕ್ಷವಾಗುವದು ನೋಡೆಂದನಯ್ಯ ನಿಮ್ಮ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅವನು ಅವಳು ಅದು ನಾನೆಂಬ ಜ್ಯೋತಿ ಅಡಗಿತ್ತಾಗಿ ಕರ್ಮ ನಷ್ಟ. ರೂಪ ನಿರೂಪೆಂಬುದು ಕೆಟ್ಟುದಾಗಿ ಮಾಯೆ ನಷ್ಟ. ಅರಿವು ತಲೆದೋರಿತ್ತಾಗಿ ಆಣವ ನಷ್ಟ. ಶಿವಪ್ರಕಾಶವಾದ ಕಾರಣ ತಿರೋಧಾನಶಕ್ತಿ ನಷ್ಟ. ಫಲಪದವಿಗಳು ಬಯಕೆ ಹಿಂಗಿತ್ತಾಗಿ ಇಚ್ಛಾಶಕ್ತಿ ನಷ್ಟ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ನಾನು ಮಜ್ಜನವ ಮಾಡುವುದಕ್ಕೆ ಮುನ್ನವೆ ಜಂಗಮಕ್ಕೆ ಮಜ್ಜನವ ಮಾಡಿಸುವೆ. ನಾನು ಸೀರೆಯನುಡುವುದಕ್ಕೆ ಮುನ್ನವೆ ಜಂಗಮಕ್ಕೆ ದೇವಾಂಗವನುಡಿಸುವೆ. ನಾನು ಪರಿಮಳವ ಲೇಪಿಸುವುದಕ್ಕೆ ಮುನ್ನವೆ ಜಂಗಮಕ್ಕೆ ಸುಗಂಧದ್ರವ್ಯಂಗಳ ಲೇಪಿಸುವೆ. ನಾನು ಅಕ್ಷತೆಯನಿಡುವುದಕ್ಕೆ ಮುನ್ನವೆ ಜಂಗಮಕ್ಕೆ ಅಕ್ಷತೆಯನಿಡುವೆ. ನಾನು ಪುಷ್ಪವ ಮುಡಿವುದಕ್ಕೆ ಮುನ್ನವೆ ಜಂಗಮಕ್ಕೆ ಪರಿಮಳಪುಷ್ಪವ ಮುಡಿಸುವೆ. ನಾನು ಧೂಪವಾಸನೆಯ ಕೊಳ್ಳುವ ಮುನ್ನವೆ ಜಂಗಮಕ್ಕೆ ಧೂಪವಾಸನೆಯ ಕೊಡುವೆ. ನಾನು ದೀಪಾರತಿಯ ನೋಡುವ ಮುನ್ನವೆ ಜಂಗಮಕ್ಕೆ ಆರತಿಯ ನೋಡಿಸುವೆ. ನಾನು ಸಕಲ ಪದಾರ್ಥಂಗಳ ಸ್ವೀಕರಿಸುವ ಮುನ್ನವೆ ಜಂಗಮಕ್ಕೆ ಮೃಷ್ಟಾನ್ನವ ನೀಡುವೆ. ನಾನು ಪಾನಂಗಳ ಕೊಳ್ಳುವ ಮುನ್ನವೆ ಜಂಗಮಕ್ಕೆ ಅಮೃತಪಾನಂಗಳ ಕೊಡುವೆ. ನಾನು ಕೈಯ ತೊಳೆಯುವ ಮುನ್ನವೆ ಜಂಗಮಕ್ಕೆ ಹಸ್ತಪ್ರಕ್ಷಾಲನವ ಮಾಡಿಸುವೆ. ನಾನು ವೀಳೆಯವ ಮಾಡುವುದಕ್ಕೆ ಮುನ್ನವೆ ಜಂಗಮಕ್ಕೆ ತಾಂಬೂಲವ ಕೊಡುವೆ. ನಾನು ಗದ್ದುಗೆಯ ಮೇಲೆ ಕುಳ್ಳಿರುವುದಕ್ಕೆ ಮುನ್ನವೆ ಜಂಗಮಕ್ಕೆ ಉನ್ನತಾಸನವನಿಕ್ಕುವೆ. ನಾನು ಸುನಾದಂಗಳ ಕೇಳುವುದಕ್ಕೆ ಮುನ್ನವೆ ಜಂಗಮಕ್ಕೆ ಸುಗೀತ ವಾದ್ಯಂಗಳ ಕೇಳಿಸುವೆ. ನಾನು ಭೂಷಣಂಗಳ ತೊಡುವುದಕ್ಕೆ ಮುನ್ನವೆ ಜಂಗಮಕ್ಕೆ ಆಭರಣಂಗಳ ತೊಡಿಸುವೆ. ನಾನು ವಾಹನಂಗಳನೇರುವುದಕ್ಕೆ ಮುನ್ನವೆ ಜಂಗಮಕ್ಕೆ ವಾಹಂಗಳನೇರಿಸುವೆ. ನಾನು ಮನೆಯೊಳಗಿಹುದಕ್ಕೆ ಮುನ್ನವೆ ಜಂಗಮಕ್ಕೆ ಗೃಹವಕೊಡುವೆ. ಇಂತೀ ಹದಿನಾರು ತೆರದಭಕ್ತಿಯನು ಚರಲಿಂಗಕ್ಕೆ ಕೊಟ್ಟು ಆ ಚರಲಿಂಗಮೂರ್ತಿ ಭೋಗಿಸಿದ ಬಳಿಕ ನಾನು ಪ್ರಸಾದ ಮುಂತಾಗಿ ಭೋಗಿಸುವೆನಲ್ಲದೆ ಜಂಗಮವಿಲ್ಲದೆ ಇನಿತರೊಳೊಂದು ಭೋಗವನಾದಡೂ ನಾನು ಭೋಗಿಸಿದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ. ಇಂತೀ ಕ್ರಮದಲ್ಲಿ ನಡೆವಾತಂಗೆ ಗುರುವುಂಟು ಲಿಂಗವುಂಟು ಜಂಗಮವುಂಟು, ಪಾದೋದಕವುಂಟು ಪ್ರಸಾದವುಂಟು ಆಚಾರವುಂಟು ಭಕ್ತಿಯುಂಟು. ಈ ಕ್ರಮದಲ್ಲಿ ನಡೆಯದಾತಂಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲಾಚಾರವಿಲ್ಲ ಭಕ್ತಿಯಿಲ್ಲ. ಅವನ ಬಾಳುವೆ ಹಂದಿಯ ಬಾಳುವೆ. ಅವನ ಬಾಳುವೆ ನಾಯ ಬಾಳುವೆ. ಅವನ ಬಾಳುವೆ ಕತ್ತೆಯ ಬಾಳುವೆ. ಅವನು ಸುರೆಮಾಂಸ ಭುಂಜಕನು, ಅವನು ಸರ್ವ ಚಾಂಡಾಲನಯ್ಯಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಭಕ್ತ ಜಂಗಮಕ್ಕೆ, ಲೆತ್ತ ಪಗಡೆ ಚದುರಂಗ ಜೂಜು ಕಳವು ಪಾಪ, ಪರಿಹಾಸ ಸರಸ ವಿನೋದ ಕುತ್ಸಿತ ಕುಟಿಲ ಕುಹಕ ಅಟಮಟ ಸಟೆ ಸಂಕಲ್ಪ ಉದಾಸೀನ ನಿರ್ದಯ ದಾಕ್ಷಿಣ್ಯ ದಾಸಿ ವೇಶಿ ಪರಸತಿ ಪರಧನ ಪರದೈವ ಭವಿಸಂಗ_ಇಷ್ಟುಳ್ಳನ್ನಕ್ಕ, ಅವನು ನಾಯಡಗು ನರಮಾಂಸ ಕ್ರಿಮಿಮಲ ಭುಂಜಕನು ಸುರಾಪಾನಸೇವಕನಪ್ಪನಲ್ಲದೆ, ಭಕ್ತನಲ್ಲ, ಜಂಗಮನಲ್ಲ, ಅದೆಂತೆಂದಡೆ: ಅಕ್ಷದೂತವಿನೋದಶ್ಚ ನೃತ್ಯಗೀತೇಷು ಮೋಹನಂ ಅಪಶಬ್ದಪ್ರಯೋಗಶ್ಚ ಜ್ಞಾನಹೀನಸ್ಯಕಾರಣಂ ತಸ್ಕರಂ ಪಾರದಾರಂಚ ಅನ್ಯದೈವಮುಪಾಸಕಂ ಅನೃತಂ ನಿಂದಕಶ್ಚೈವ ತಸ್ತ್ಯತೇ ಸ್ಯುಶ್ಚಾಂಡಲವಂಶಜಾಃ ಎಂದುದಾಗಿ ಈತನು ಗುಣಾವಗುಣವನೊಡಗೂಡಿಕೊಂಡು ನಡೆದಡೆ ಭಕ್ತ ಜಂಗಮನಲ್ಲ ಕಾಣಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಆರು ನೆಲೆ ಮಂಟಪದ ಕೋಣೆಯಲ್ಲಿ ಆರು ಜ್ಯೋತಿಯ ಮುಟ್ಟಿಸಿ ಆ ಜ್ಯೋತಿಯ ಬೆಳಗಿನಲ್ಲಿ ಆರು ಲಿಂಗವ ನಿರ್ಮಿಸಿ ಆರು ಲಿಂಗದ ಪ್ರತುಮೆಯಲ್ಲಿ ಆರು ಹಂತದ ಸೋಪಾನದಲ್ಲಿ ಮಹಾ ನಿರ್ಮಳವೆಂಬ ದುರ್ಗಮಂ ನಿರ್ಮಿಸಿ ಆ ದುರ್ಗದಲ್ಲಿ ಅರಸಂಗೆ ಕಾಲಿಲ್ಲದಾಕೆಯ ಮದುವೆಯ ಮಾಡಿ ತೂತಿಲ್ಲದ ಭೋಗಕ್ಕೆ ಕೂಡಿ ಬಿಂದುವಿಲ್ಲದೆ ಮಕ್ಕಳಾದ ಪರಿಯ ನೋಡಾ. ತೊಟ್ಟಿಲಿಲ್ಲದೆ ಹಾಸಿ ಮಲಗಿಸಿ ನಿದ್ರೆಗೆಯ್ಸಿದ ಶರಣನಾಚರಣೆಯನೆಂತೆಂಬೆನು. ಇದ ಕಂಡು ನಡೆಯಲರಿಯದೆ, ತಮ್ಮ ಮನ ಬಂದಂತೆ ನಡೆವರು. ಶಿವಯೋಗಕ್ಕೆ ದೂರವಾದರು ನೋಡಾ. ಹೊನ್ನ ಕಟ್ಟಿ ವಿರಕ್ತನು ಬ್ಥಿಕ್ಷೆಯೆನಲಾಗದು. ಭಕ್ತನ ಗೃಹವೆಂದು ಜಂಗಮವು ಹೋದಲ್ಲಿ ಆ ಭಕ್ತನು ಎದ್ದು ನಮಸ್ಕರಿಸಿ ತನ್ನಲ್ಲಿರ್ದ ಪದಾರ್ಥವಂ ತಾನು ಸಹವಾಗಿ ಶಿವಾರ್ಪಣವ ಮಾಡ[ಬ]ಹುದಲ್ಲದೆ. ಇದಲ್ಲದೆ, ಜಂಗಮವ ಬೇರೆ ಕುಳ್ಳಿರಿಸಿ ಉಂಡನಾದರೆ ಅವನಿಗೆ ದೀಕ್ಷೆಯ ಕೊಟ್ಟ ಗುರುವಿಗೆ ತನ್ನ ಮಾರ್ಗವ ಬಿಟ್ಟು ಶಿವಭಕ್ತನಾದರೆ ಮೋಕ್ಷವಿಲ್ಲವಾಗಿ. ಕೋಳಿ ಒಂದು ಕುಟುಕ ಕಂಡರೆ ತನ್ನ ಮರಿಗೆ ತೋರದುಳಿವುದೆ? ಕಾಗೆ ಒಂದಗುಳ ಕಂಡರೆ ತನ್ನ ಬಳಗವ ಕರೆಯದುಳಿವುದೆ? ಶಿವಭಕ್ತನಾಗಿ ತನ್ನ ಲಿಂಗವ ಪೂಜಿಸಿ ಜಂಗಮವ ಮರೆದವನಾದರೆ ಸತ್ತ ದನವಿಗೆ ನರಿ ಹೋದಂತಾಯಿತ್ತು. ಆ ನರಿ ಹೋದ ನೆನಹಿನಲ್ಲಿ ನಾಯಿ ಹೋದಂತಾಯಿತ್ತು. ಇಷ್ಟಕ್ಕಿಂದ ಕರಕಷ್ಟವೆ ಶಿವಭಕ್ತರು? ಷಟ್ಚಕ್ರದ ಭಾವದಲ್ಲಿವೊಪ್ಪಿರುವ ಶಿವಶರಣರು ತಮ್ಮ ನಡೆ ನುಡಿಗಳ ಬಿಡದೆ ನಡೆವುದು. ಅದ ಕಂಡು ಕಣ್ದೆರೆದು ನೋಡಿದೆನಯ್ಯ. ಆವ ವರ್ತನೆಯಲ್ಲಿ ತಾನಿದ್ದರೇನು? ಆವ ಭಾವ ಹೇಂಗಿದ್ದರೇನು? ನಮ್ಮಾಚರಣೆ ನಮಗೆ ಶುದ್ಧ. ಗುರು ಕಲ್ಪಿತನಾದರು ಅವನು ಹಿಂದೆ ಸಂಬಂಧವಾದ ಕಾರಣ, ಅವನಿಗೆ ಬಂಧ ದೊರಕುವದಲ್ಲದೆ ನನಗೆ ದೊರಕದೆಂದು ತಾನು ನಿಶ್ಚೆಸಿದರೆ ತನಗೆ ದೊರಕಬಲ್ಲದೆ? ತಾನು ಪೂರ್ವದಲ್ಲಿ ತಾ ಪಡದುದು ತನಗೆ ತಪ್ಪುವದೆ? ಪ್ರಾಣಿಹಿಂಸೆಯ ಮಾಡುವಾತನಾದರೆಯು ಅವನಿಗೆ ಕಲ್ಪಿತವೇತಕ್ಕೆ? ಹಿಂದೆ ಅವನು ಶಿವನಪ್ಪಣೆವಿಡಿದು ಬಂದ ಕಾರಣ ಅವನಿಗೆ ಬಂದಿತಲ್ಲದೆ ಗಗನದ ಮಂಟಪದ ಮೇಲೆ ಊಧ್ರ್ವಮುಖದ ಗದ್ದುಗೆಯ ಮಾಡಿ ಮಹಾಪ್ರಕಾಶವೆಂಬ ಬೆಳಗಂ ತೋರಿ ಓಂಕಾರವೆಂಬ ಲಿಂಗವ ಮೂರ್ತಮಾಡಿಸಿ ಅದಕ್ಕೆ ಸದ್ಭಾವವೆಂಬ ಪುಷ್ಪವ ತಂದು ಜ್ಞಾನಪ್ರಕಾಶವೆಂಬ ಜ್ಯೋತಿಯಂ ಪೊತ್ತಿಸಿ ಸದ್ಭಕ್ತಿಯೆಂಬ ನೈವೇದ್ಯಮಂ ಮಾಡಿ ನಿರ್ಮಳವೆಂಬ ಪೂಜಾರಿಯಾಗಿರ್ಪನು. ಇದನರಿಯದೆ ತಮ್ಮ ಮನ ಬಂದಂತೆ ಇಪ್ಪವರ ಲಿಂಗಹೋದವನಾದರು ಅವನ ಕಣ್ಣಲ್ಲಿ ಕಂಡು ಅವನಷ್ಟಕ್ಕಲ್ಲದೆ ಅನ್ಯರ ಗೃಹವ ಬಿಡಲೇತಕ್ಕೇ? ಪಾಪವ ಮಾಡಿದನಾರು ಅವನ ಗೃಹಕ್ಕಲ್ಲದೆ ಅವನೊಂದಿಗೆ ಬೆರಸಿದವನಾದರು ಅವನಿಗೆ ಪಾಪ ಸಂಭವಿಸುವುದುಂಟೇ? ಇದ ಸಂಕಲ್ಪವ ಮಾಡಿ ಬಿಡಲೇತಕ್ಕೆ? ಒರ್ವಾನೊಬ್ಬನು ಭವಿಯ ಒಡನಾಡಲು ಅವನ ಪಾಪವು ಅವನಲ್ಲಿಪ್ಪುದಲ್ಲದೆ ಮಿಕ್ಕಿನ ಗೃಹಕ್ಕೆ ಸಂಬಂಧವೇನು? `ಮಾಡಿದವರನಲ್ಲದೆ ಮಿಕ್ಕಿನವರ ಸಂಕಲ್ಪವ ಮಾಡಲಾಗದು'ಯೆಂಬುದು ಗುರುವಚನ. ಹೆಣ್ಣು ಬಿಂದು ಸಂಬಂಧವಾಗಲು ಆ ಭೋಗಕ್ಕೆ ಶರಣನು ಅದನು ಮನದಲ್ಲಿ ಕಂಡು ಸಂತೋಷವಾಗಿಪ್ಪ. ಇಂತೀ ಭಾವಶುದ್ಧವುಳ್ಳಾತನು ಮತ್ರ್ಯಲೋಕಕ್ಕೆ ಮರಳಿ ಬಾರನೆಂಬುದು. ಶರಣ ಸಕಲವಿದ್ಯವ ಕಲಿತು ಫಲವೇನು? ನಿಂದ್ಯನೆ ದೊರಕೊಂಡಮೇಲೆ? ಹುಣ್ಣು ಹುಗಳು ಕೋಷ್ಠವಾಗಿರಲು, ಅವರ ಕಂಡು ಜರಿಯಲಾರದೆಂಬುದೆನ್ನ ಭಾಷೆ. ಇಂದ್ರಿಯಸುಖಕ್ಕೆ ಹೋಗಿ ಬಿದ್ದು ಶಿವಮಾಡಿದರಾಯಿತ್ತೆಂಬ ಅವಿಚಾರದ ನುಡಿಯ ಕೇಳಲಾಗದು. ತನ್ನ ಮನವು ಶುದ್ಧವಾದ ಮೇಲೆ, ಸಕಲ ಸುಖಂಗಳು ತನಗುಂಟಲ್ಲದೆ, ಜ್ಞಾನಿಗೆ ಕತ್ತಲೆಯಿಲ್ಲ. ಅಜ್ಞಾನಿಗೆ ಪಾಪವಿಲ್ಲ. ಇದನರಿದು, ಮುಂದುಗೊಂಡು ತಿರುಗುವ, ಅಣ್ಣಗಳ ಕಂಡು, ನಗುತಿರ್ಪರು ನಿಮ್ಮ ಶರಣರು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಸೋಮವಾರ ಮಂಗಳವಾರ ಹುಣ್ಣಿಮೆ ಸಂಕ್ರಾಂತಿ ಶಿವರಾತ್ರಿ_ ಮೊದಲಾದ ತಿಥಿವಾರಂಗಳಲ್ಲಿ ಏಕಭುಕ್ತೋಪವಾಸಿಯಾಗಿ ಆ ಕ್ಷುದ್ರ ತಿಥಿಗಳಲ್ಲಿ, ಮಾಡಿದ ನೀಚೋಚ್ಛಿಷ್ಟವಂ ತಂದು ತನ್ನ ಕರಸ್ಥಲದ ಇಷ್ಟಲಿಂಗಕ್ಕೆ ಕೊಟ್ಟು ಕೊಂಡು ಭಕ್ತನೆನಿಸಿಕೊಂಡೆನೆಂಬ ಅನಾಚಾರಿಯ ಮುಖವ ನೋಡಲಾಗದು ನೋಡಲಾಗದು. ಅದೇನು ಕಾರಣವೆಂದಡೆ: ದಿನ ಶ್ರೇಷ್ಠವೊ ? ಲಿಂಗ ಶ್ರೇಷ್ಠವೊ ? ದಿನ ಶ್ರೇಷ್ಠವೆಂದು ಮಾಡುವ ದುರಾಚಾರಿಯ ಮುಖವ ನೋಡಲಾಗದು, ನೋಡಲಾಗದು, ಅದೆಂತೆಂದಡೆ: ಆವ ದಿನ ಶ್ರೇಷ್ಠವೆಂದು ದಿನವೆ ದೈವವೆಂದು ಮಾಡುವನಾಗಿ, ಅವನು ದಿನದ ಭಕ್ತನು. ಅವನಂತಲ್ಲ ಕೇಳಿರಣ್ಣ ಸದ್ಭಕ್ತನು_ಲಿಂಗವೆ ಘನವೆಂದು ಜಂಗಮವೆ ಶ್ರೇಷ್ಠವೆಂದು ಆ ಲಿಂಗಜಂಗಮವೆ ಶ್ರೇಷ್ಠವೆಂದು ಆ ಲಿಂಗಜಂಗಮವೆ ದೈವವೆಂದು ಮಾಡುವನಾಗಿ ಆತ ಲಿಂಗಭಕ್ತನು. ಈ ಲಿಂಗಭಕ್ತಂಗೆ ದಿನದ ಭಕ್ತನ ತಂದು ಸರಿಯೆಂದು ಹೋಲಿಸಿ ನುಡಿವಂಗೆ, ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲ, ಅವ ಭಕ್ತನಲ್ಲ, ಅವಂಗೆ ಅಘೋರನರಕ. ಭವಿದಿನ_ತಿಥಿ_ವಾರಂಗಳಲ್ಲಿ ಕೂರ್ತುಮಾಡುವಾತ ಭಕ್ತನಲ್ಲ. ಅಲ್ಲಿ ಹೊಕ್ಕು ಲಿಂಗಾರ್ಚನೆಯ ಮಾಡುವಾತ ಜಂಗಮವಲ್ಲ. ಈ ಉಭಯರನು ಕೂಡಲಚೆನ್ನಸಂಗಯ್ಯ ಕುಂಭೀಪಾತಕ ನಾಯಕನರಕದಲ್ಲಿಕ್ಕುವನು
--------------
ಚನ್ನಬಸವಣ್ಣ
ಬಸವೇಶ್ವರದೇವರು ತೃಣಪುರುಷನ ಮಾಡಿ `ಮೀಮಾಂಸಕಂಗೆ ಉತ್ತರವ ಕೊಡು ಹೋಗು' ಎನಲು ಆ ತೃಣಪುರುಷನು ಮಹಾಪ್ರಸಾದವೆಂದು ಕೈಕೊಂಡು, ಮೀಮಾಂಸಕಂಗೆ ಉತ್ತರವ ಕೊಟ್ಟು ಶಿವವಿರಹಿತವಾದ ಕಾಳ್ಪುರಾಣವೆಲ್ಲವ ಬಯಲು ಮಾಡಿ ನುಡಿಯಲು ಆತಂಗೆ ಶಿವಜ್ಞಾನ ತಲೆದೋರಿ, ಆ ಬಸವೇಶಂಗೆ ವಂದನಂಗೈದು ಉಪದೇಶವ ಮಾಡಬೇಕೆನಲು, ಆತಂಗೆ ವೀರಶೈವದೀಕ್ಷೆಯ ಮಾಡಿ ಷಟ್‍ಸ್ಥಲಮಾರ್ಗ ಕ್ರೀಯ ನಿರೂಪಿಸಿ ತಿಳುಹಲು `ಎಲೆ ಬಸವೇಶ್ವರಾ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಟ್ಟುಕೊಳಬಹುದೆರಿಱ ಎಂದು ಕೇಳಲು, ಕೇಳೈ ಮೀಮಾಂಸಕಾ, ಪೂರ್ವದಲ್ಲಿ ಪರಮೇಶ್ವರನು ಸಮಸ್ತ ದೇವತೆಗಳು ಒಡ್ಡೋಲಗದಲ್ಲಿರಲು ಸೂತ್ರಿಕನೆಂಬ ಶೈವಾಚಾರ್ಯನು `` ಎಲೆ ಪರಮೇಶ್ವರಾ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಡಬಹುದೆರಿ' ಎನಲು `ಎಲೆ ಸೂತ್ರಿಕನೆ ಕೇಳು ನಾನೆಂದಡೆಯೂ ಜಂಗಮವೆಂದಡೆಯೂ ಬೇರಿಲ್ಲ ಅದು ಕಾರಣ ಜಂಗಮವೆ ಅಧಿಕ. ನೀನಾ ಜಂಗಮಲಿಂಗದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಡಬಾರದೆಂದು ನಿಂದಿಸಿ ನುಡಿದ ವಾಗ್ದೋಷಕ್ಕೆ ಮತ್ರ್ಯಕ್ಕೆ ಹೋಗಿ ಹೊಲೆಯನ ಮನೆಯ ಸೂಕರನ ಬಸುರಲ್ಲಿ ಹುಟ್ಟಿ ಹದಿನೆಂಟು ಜಾತಿಯ ಅಶುದ್ಧವನು ನಾಲಗೆಯಲಿ ಭುಂಜಿಸಿ ನರಕಜೀವಿಯಾಗಿರುಱಱ ಎಂದುದೆ ಸಾಕ್ಷಿ. ಇದನರಿದು ಮತ್ತೆ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಟ್ಟು ಕೊಳಲಾಗದೆಂಬ ಪಂಚಮಹಾಪಾತಕರ ಮಾತ ಕೇಳಲಾಗದು. ಅದೆಂತೆಂದಡೆ:ವೀರಾಗಮದಲ್ಲಿ, ಜಂಗಮಾನಾಮಹಂ ಪ್ರಾಣೋ ಮಮ ಪ್ರಾಣೋ ಹಿ ಜಂಗಮಃ ಜಂಗಮೇನ ತ್ವಹಂ ಪೂಜ್ಯೋ ಮಯಾ ಪೂಜ್ಯೋ ಹಿ ಜಂಗಮಃ ಪರಸ್ಪರಮಭೇದತ್ವಾಜ್ಜಂಗಮಸ್ಯ ಮಮಾಪಿ ಚ ಪಾದೋದಕಪ್ರಸಾದಾಭ್ಯಾಂ ವಿನಾ ತೃಪ್ತಿರ್ನ ಜಾಯತೇ ಇಂತೆಂಬ ಶಿವನ ವಾಕ್ಯವನರಿದು, ಜಂಗಮದ ಪಾದತೀರ್ಥವ ಲಿಂಗಕ್ಕೆ ಮಜ್ಜನಕ್ಕೆರೆದು ಪ್ರಸಾದವ ಲಿಂಗಕ್ಕೆ ನೈವೇದ್ಯವ ಸಮರ್ಪಿಸಿ ಭೋಗಿಸುವಾತನೆ ಸದ್ಭಕ್ತ, ಆತನೆ ಮಾಹೇಶ್ವರ, ಆತನೆ ಪ್ರಸಾದಿ, ಆತನೆ ಪ್ರಾಣಲಿಂಗಿ, ಆತನೆ ಶರಣ, ಆತನೆ ಐಕ್ಯನು. ಇಂತಪ್ಪ ಷಟ್‍ಸ್ಥಲಬ್ರಹ್ಮಿಗೆ ನಮೋ ನಮೋ ಎಂಬೆ. ಇಂತಲ್ಲದೆ ಜಂಗಮದ ಪಾದತೀರ್ಥಪ್ರಸಾದರಹಿತನಾಗಿ ಆವನಾನೊಬ್ಬನು ತನ್ನ ಇಷ್ಟಲಿಂಗಕ್ಕೆ ಅರ್ಷವಿಧಾರ್ಚನೆ ಷೋಡಶೋಪಚಾರಕ್ರೀಯಿಂದ ಪೂಜೆಯ ಮಾಡುವಲ್ಲಿ ಅವನು ಶುದ್ಧಶೈವನು, ಅವನಿಗೆ ಮುಕ್ತಿಯಿಲ್ಲ ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ವೇದ ಶಾಸ್ತ್ರ ಪುರಾಣಾಗಮಂಗಳಲ್ಲಿ ತಾನೆ ಪ್ರಸಿದ್ಧವಾಗಿ, ಕೊಂಡಾಡಿಸಿಕೊಳ್ಳಲ್ಪಟ್ಟ ಶ್ರೀ ಮಹಾಭಸಿತವ ಧರಿಸಿದಾತನೆ ಸದ್ಬ್ರಾಹ್ಮಣ. ಇಂತಪ್ಪ ಮಹಾಭಸಿತವ ಬಿಟ್ಟು ಅಜ್ಞಾನಮತದಿಂದ ವೇದ ಶಾಸ್ತ್ರಾಗಮಪುರಾಣಂಗಳಲ್ಲಿ ವಿರುದ್ಧವಾದ ಮಟ್ಟಿಮಸಿಗಳ ಹಣೆಯಲ್ಲಿಟ್ಟುಕೊಂಡನಾದಡೆ, ಅವನು ಬ್ರಾಹ್ಮಣನಲ್ಲ, ಅವನು ಪಂಚಮಹಾಪಾತಕ, ಆತ ಶ್ವಪಚನೆಂದು ಪುರಾಣಪ್ರಸಿದ್ಧ. ಅದೆಂತೆಂದಡೆ, ಗರುಡಪುರಾಣದಲ್ಲಿ: ``ಶ್ರುತಯಃ ಸ್ಮೃತಯಸ್ಸರ್ವೇ ಪುರಾಣಾನ್ಯಖಿಲಾನಿ ಚ ವದಂತಿ ಭೂತಿಮಹಾತ್ಮ್ಯಂ ತತಸ್ತಂ ಧಾರಯೇದ್ದ್ವಿಜಃ ತದಭಾವೇ ತಥಾ ವಿಪ್ರೋ ಲೌಕಿಕಾಗ್ನಿಂ ಸಮಾಹರೇತ್ ಭಸ್ಮನೈವ ಪ್ರಕುರ್ವೀತ ನ ಕುರ್ಯಾನ್ಮೃತ್ತಿಕಾದಿಭಿಃ ಗೋಪೀಚಂದನಧಾರೀ ತು ಶಿವಂ ಸ್ಪೃಶತಿ ಯೋ ದ್ವಿಜಃ ಶತೈಕವಿಂಶತಿಕುಲಂ ಸೋ[s]ಕ್ಷಯಂ ನರಕಂ ವ್ರಜೇತ್ ಮತ್ತಂ ಕೂರ್ಮಪುರಾಣದಲ್ಲಿ: ತ್ರಿಪುಂಡ್ರಂ ಬ್ರಾಹ್ಮಣೋ ವಿದ್ವಾನ್ ಮನಸಾ[s]ಪಿ ಲಂಘಯೇತ್ ಶ್ರುತ್ಯಾ ವಿಧೀಯತೇ ತಸ್ಮಾತ್ತ್ಯಾಗೀ ತು ಪತಿತೋ ಭವೇತ್ ಎಂದುದಾಗಿ ನಮ್ಮ ಕೂಡಲಚೆನ್ನಸಂಗಮದೇವರಲ್ಲಿ, ಶ್ರುತಿಸ್ಮೃತಿ ಪ್ರಸಿದ್ಧವಾದ ಶ್ರೀಮಹಾವಿಭೂತಿಯನಿಟ್ಟಾತನೆ ಸದ್ಬ್ರಾಹ್ಮಣ. ಈ ಮಹಾವಿಭೂತಿಯ ಬಿಟ್ಟು ಮಣ್ಣು ಮಸಿ ಮರದ ರಸಂಗಳ ಹಣೆಯಲ್ಲಿ ಬರೆದುಕೊಂಡನಾದಡೆ ಆವ ವಿಪ್ರನಲ್ಲ; ಆವ ಪಾಪಿ, ಶುದ್ಧ ಶ್ವಪಚ ಕಾಣಿಭೋ
--------------
ಚನ್ನಬಸವಣ್ಣ
ಉದಯಕಾಲ ಮಧ್ಯಾಹ್ನಕಾಲ ಅಸ್ತಮಯಕಾಲದಲ್ಲಿ, ತನ್ನ ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡುವಾತನೆ ಸದ್ಭಕ್ತನು. ಇಂತೀ ತ್ರಿಕಾಲದಲ್ಲಿ ಲಿಂಗಾರ್ಚನೆಯ ಮಾಡುವಲ್ಲಿ, ಹಿಂದಣ ಕ್ರೀಯಿಂದ ಮಾಡಬೇಕು. ಅಂತಲ್ಲದೆ ಸುಮ್ಮನೆ ಲಿಂಗಾರ್ಚನೆಯ ಮಾಡುವಾತ, ಭಕ್ತನಲ್ಲ, ಮಾಹೇಶ್ವರನಲ್ಲ, ಪ್ರಸಾದಿಯಲ್ಲ, ಪ್ರಾಣಲಿಂಗಿಯಲ್ಲ, ಶರಣನಲ್ಲ ಐಕ್ಯನಲ್ಲ. ಅವನು ಶ್ರೀಗುರುವಿನಾಜ್ಞೆಯ ಮೀರಿದವನು, ಪಂಚಮಹಾಪಾತಕನು, ಲಿಂಗಚೋರಕನು. ಇದನರಿದು ತ್ರಿಸಂಧ್ಯಾಕಾಲದಲ್ಲಿ ತನ್ನ ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ ಹಿಂದಣ ಕ್ರೀವಿಡಿದು ಮಾಡುವ ಸದ್ಭಕ್ತಂಗೆ ನಮೋ ನಮೋ ಎನುತಿರ್ದೆನಯ್ಯಾ, ಬಸವಪ್ರಿಯ ಕೂಡಲಚೆನ್ನಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ಎಲೆ ಅಯ್ಯಾ, ಅವರ ಗುಣಕ್ಕೆ ಮುನಿವೆನಲ್ಲದೆ ಅವರ ರೂಪಿಂಗೆ ಮುನಿವೆನೆ? ಇಲ್ಲಿಲ್ಲ. ಅವನು ಅನಾಚಾರದಲ್ಲಿ ಆಚರಿಸಿದಡೆ, ತಂದೆ ಸದಾಚಾರಕ್ಕೆ ತರಬೇಕೆಂದು [ಮುನಿವನಲ್ಲದೆ] ಆತನ ಮೇಲೆ ಮುನಿವನೆ ? ಇಲ್ಲಿಲ್ಲ. ನಾನು ಅಂತಾಗಬೇಕೆಂದು ಮುನಿವೆನಲ್ಲದೆ ಜಂಗಮಕ್ಕೆ ಮುನಿವೆನೆ? ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಭೂಮಿಯಲ್ಲಿ ಹುಟ್ಟಿದ ಕಲ್ಲು ತಂದು ಲಿಂಗವೆಂದು ಹೆಸರಿಟ್ಟು, ಶುಕ್ಲ ಶೋಣಿತಾತ್ಮಸಂಬಂಧವಾದ ಮಾತಾಪಿತರ ಸಂಯೋಗದಿಂದ ಪುಟ್ಟಿದ ಮನುಜರಿಗೆ ಭಕ್ತನೆಂದು ಹೆಸರಿಟ್ಟು, ಇಂತಪ್ಪ ಭಕ್ತಂಗೆ ಅಂತಪ್ಪ ಲಿಂಗವನು ವೇಧಾ, ಮಂತ್ರ, ಕ್ರಿಯೆ ಎಂಬ ತ್ರಿವಿಧ ದೀಕ್ಷೆಯಿಂದ ಮೂರೇಳು ಪೂಜೆಯ ಮಾಡಿ, ಅಂಗದ ಮೇಲೆ ಲಿಂಗಧಾರಣವ ಮಾಡಿದಡೆ, ಅದು ಲಿಂಗವಲ್ಲ, ಅವನು ಭಕ್ತನಲ್ಲ. ಅದೇನು ಕಾರಣವೆಂದಡೆ: ಅವನು ಮರಣಕ್ಕೆ ಒಳಗಾಗಿ ಹೋಗುವಲ್ಲಿ ಪೃಥ್ವಿಯ ಕಲ್ಲು ಪೃಥ್ವಿಯಲ್ಲಿ ಉಳಿಯಿತು. ಭಕ್ತಿ ಭ್ರಷ್ಟವಾಗಿ ಹೋಯಿತು ಬಿಡಾ ಮರುಳೆ. ಇದು ಲಿಂಗಾಂಗಸ್ವಾಯುತವಲ್ಲ. ಲಿಂಗಾಂಗದ ಭೇದವ ಹೇಳ್ವೆ ಲಾಲಿಸಯ್ಯಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ವೇದವನೋದಿದಡೇನು ? ಶಾಸ್ತ್ರಪುರಾಣಾಗಮಂಗಳ ಕೇಳಿದಡೇನು ? ಗುರುಕಾರುಣ್ಯವಿಲ್ಲದವನು ಲಿಂಗವ ಮುಟ್ಟಿ ಪೂಜಿಸಲಾಗದು. ಜಪತಪಧ್ಯಾನ ವಿಭೂತಿ ರುದ್ರಾಕ್ಷಿಯ ಧರಿಸಿದಡೇನು ? ಅವನು ಪಂಚಮಹಾಪಾತಕನು, ಅವನ ಮುಖವ ನೋಡಲಾಗದು. ಇದನರಿದು ಗುರುಕರುಣವಿಡಿದು ಮಾಡುವ ಪೂಜೆಯೇ ಶಿವಂಗೆ ಪ್ರೀತಿ. ಇದನರಿಯದೆ ಗುರುಕರುಣವಿಲ್ಲದವ ಶಿವಲಿಂಗಪೂಜೆಯ ಮಾಡಿದನಾದಡೆ, ಅಘೋರನರಕ ತಪ್ಪದು, ಮಹಾಲಿಂಗ ಕಲ್ಲೇಶ್ವರಾ.
--------------
ಹಾವಿನಹಾಳ ಕಲ್ಲಯ್ಯ
ಶಿವಲಿಂಗಾಂಗಿ ಲಿಂಗಪ್ರೇಮಿ ನಡೆಲಿಂಗ ನುಡಿಲಿಂಗ ಮುಖಲಿಂಗ ಭಾವಲಿಂಗ ಸರ್ವಾಂಗಲಿಂಗ ಚೈತನ್ಯಾತ್ಮಕ ಶರಣನರಿಯದೆ ವೇಷಧಾರಿಗಳು ನುಡಿವರು. ಲಿಂಗ ಬೇರೆ ಅಂಗ ಬೇರೆ ಇಂತೆಂದು ನುಡಿವ ಚಾರ್ವಾಕರ ಅಂಗದ ಮೇಲೆ ಹೊಂದಿದ ಲಿಂಗವೆಲ್ಲ ಶಿಲೆಯು. ಅವನು ನುಡಿಯುವ ಮಾತು ಹೆಂಡ ಕುಡಿವವರ ಬೊಗಳಾಟ. ಅವರು ಕೊಂಬುವುದೆಲ್ಲ ಅಶುದ್ಧವಲ್ಲದೆ ಪ್ರಸಾದವಲ್ಲ. ಅವರು ವಿಭೂತಿ ರುದ್ರಾಕ್ಷಿ ಲಿಂಗವ ಧರಿಸಿದರೇನು ಯಮದರ್ಶನ ಚೋರದರ್ಶನ. ಲಿಂಗಾಂಗಿ ಲಿಂಗಪ್ರಾಣಿಗಳ ನಿಂದಿಸುವ ವೇಷಧಾರಿಗಳು ಜಂಗಮವೆಂದು ಪೂಜಿಸುವ ಭಕ್ತಂಗೆ ಎಕ್ಕಲಜನ್ಮ ಬಿಡದೆಂದ ನಿಮ್ಮ ಶರಣ, ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ಇನ್ನಷ್ಟು ... -->