ಅಥವಾ

ಒಟ್ಟು 204 ಕಡೆಗಳಲ್ಲಿ , 48 ವಚನಕಾರರು , 159 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ಭವಬಂಧನಂಗಳ ಹಿಂಗಿಸಬೇಕೆಂಬಣ್ಣಗಳು ನೀವು ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಶ್ರೀಗುರುಪುತ್ರನಾಗಿ ಅವರು ತಮ್ಮ ಅಂತಃಕರಣ ಕೃಪೆಯಿಂದ ಪೇಳಿದ ಪ್ರಸಾದವಾಕ್ಯವನು ಅವರ ದಯದಿಂದ ಪೇಳುತಿರ್ದೆನು ಕೇಳಿರಯ್ಯ. ಅದೆಂತೆಂದಡೆ : ಆಶೆ ಆಮಿಷ ತಾಮಸದೊಡನೆ ಕೂಡಿ ಕ್ಲೇಶಪಡುತಿರ್ದಂತೆ ಗುರುಗಳಲ್ಲಿ ಅಥವಾ ಜಂಗಮಲಿಂಗಿಗಳಲ್ಲಿ ಇಂತೀ ಉಭಯ ಪಾಶಬದ್ಧರ ಕೈಯಿಂದ ಅಹಂಕಾರ ಮಮಕಾರದಲ್ಲಿ ಆಣವಮಲ, ಮಾಯಾಮಲ, ಕಾರ್ಮಿಕಮಲವೆಂಬ ಮಲತ್ರಯಂಗಳ ಕಚ್ಚಿ, ಸಂಸಾರವಿಷಯದಲ್ಲಿ ಲಂಪಟರಾದ ಭಕ್ತಜನಂಗಳು ಅಥವಾ ಶಿಷ್ಯೋತ್ತಮನಾದಂಥವರು ಇಂತಪ್ಪವರು ಲಿಂಗವ ಪಡೆದು, ಉಪದೇಶವ ಹಡದು, ಆಚರಿಸುವರ ಆಚರಣೆಯೆಂತಾಯಿತ್ತೆಂದಡೆ, ತಲೆಯಿಲ್ಲದ ಪುರುಷನ ಸಂಗ, ಕಣ್ಣಿಲ್ಲದ ಸ್ತ್ರೀ ಸಂಯೋಗವ ಮಾಡಿ, ಜೀವವಿಲ್ಲದೊಂದು ಮಗನ ಹಡದಂತಾಯಿತ್ತಯ್ಯ. ಅಂತಪ್ಪ ದೇವ ಭಕ್ತ ಗುರು ಶಿಷ್ಯರೆಂಬ ಈ ಚತುರ್ವಿಧ ಪುರುಷರಿಗೆ ಭವಹಿಂಗದು, ಮುಕ್ತಿ ಎಂದಿಗೂ ತೋರದು. ಅದೇನು ಕಾರಣವೆಂದಡೆ : ತಾವ್ಯಾರು, ತಮ್ಮ ಸ್ವರೂಪವಾವುದು ಎಂಬ ನಿಲುಕಡೆಯ ತಿಳಿಯದ ಕಾರಣ. ಮತ್ತಂ ಪೇಳ್ವೆ : ತಮ್ಮ ನಿಜವ ತಾವರಿದು, ಸರ್ವಾಚಾರಸಂಪತ್ತು ಅಳವಟ್ಟು, ಸರ್ವಾಂಗಲಿಂಗಮಯವಾಗಿರುವಂಥ ನಿಃಕಲ ಸದ್ರೂಪಸ್ವರೂಪರಾದ ಆಚಾರ್ಯಂಗಳಲ್ಲಾಗಲಿ, ಅಥವಾ ಸತ್ತುಚಿತ್ತಾನಂದ ನಿತ್ಯಪರಿಪೂರ್ಣಭರಿತನಾದ ನಿಃಕಲಪರಮಾನಂದಸ್ವರೂಪರಾದ ನಿರಂಜನಜಂಗಮದಲ್ಲಾಗಲಿ ಇಂತೀ ಉಭಯ ಪರಮೂರ್ತಿಗಳ ಕರುಣಕೃಪೆಯಿಂದ ಶಿವಜ್ಞಾನೋದಯವಾಗಿ ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ ಲಿಂಗಾಂಗಸಮರಸದನುಭವವಳವಟ್ಟು ತ್ರಿವಿಧ ವಂಚನೆಯಿಲ್ಲದೆ ಕ್ಷಮೆ, ದಮೆ, ಶಾಂತಿ, ಸೈರಣೆ ಗುಣವುಳ್ಳಂಥ ಸದ್ಭಕ್ತ ಶರಣಜನಂಗಳಲ್ಲಾಗಲಿ ಅಥವಾ ಶಿಷ್ಯೋತ್ತಮನಾದಂಥವರುಗಳಲ್ಲಾಗಲಿ ಇಂತೀ ಉಭಯ ಭಕ್ತಗಣಂಗಳು ಚಿದ್ಘನಮಹಾಲಿಂಗವೆಂಬ ಇಷ್ಟಲಿಂಗವ ಕರಸ್ಥಲಕ್ಕೆ ಪಡಕೊಂಡು, ತಾರಕಮಂತ್ರವೆಂಬ ಮಂತ್ರೋಪದೇಶವ ಹಡಕೊಂಡು, ಆಚರಿಸುವ ಸದ್ಭಕ್ತ ಶರಣಜನಂಗಳ ಆಚರಣೆಯೆಂತಾಯಿತ್ತಯ್ಯಯೆಂದಡೆ: ಸೂರ್ಯಪ್ರಕಾಶವನುಳ್ಳಂಥ ಕನ್ಯಕುಮಾರ ರಾಜನಸಂಗ ಚಂದ್ರಕಾಂತಿಪ್ರಕಾಶವನುಳ್ಳಂಥ ಕನ್ಯಸ್ತ್ರೀಯಳು ಸಂಯೋಗವ ಮಾಡಿ ಅಗ್ನಿಕಾಂತಿಪ್ರಕಾಶವನುಳ್ಳಂಥ ಪುತ್ರನ ಹಡೆದಂತಾಯಿತ್ತಯ್ಯ. ಇಂತಪ್ಪ ಆಚಾರವನುಳ್ಳ ಗುರು ಶಿಷ್ಯರು ದೇವ ಭಕ್ತರೆಂಬ ಈ ನಾಲ್ಕು ಪರಪುರುಷರಿಗೆ ಭವಹಿಂಗುವುದು. ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಮತ್ತಂ, ಲಿಂಗಾಂಗಸಂಬಂದ್ಥಿಯಾಗಿ ಸರ್ವಾಚಾರ ನೆಲೆಗೊಂಡು ಸರ್ವಾಗಲಿಂಗಿಯಾದಂಥ ವೀರಮಾಹೇಶ್ವರರಾಗಲಿ, ಅಥವಾ ಗುರುಗಳಾಗಲಿ, ಸದ್ಭಕ್ತ ಶರಣಜನಂಗಳಾಗಲಿ, ಇಂತಪ್ಪ ತ್ರಿವಿಧಶಿವಜ್ಞಾನಿಗಳ ಚರಣಕಮಲಕ್ಕೆ ದೀರ್ಘದಂಡನಮಸ್ಕಾರಮಂ ಮಾಡಿ ಸುಜ್ಞಾನೋದಯವಾಗಿ ಮೋಕ್ಷವ ಹಡೆಯಬೇಕೆಂಬ ಜ್ಞಾನಕಲಾತ್ಮರಾದಂಥವರು ಲಿಂಗಾಂಗಸಮರಸದನುಭಾವವ ವಿಚಾರಿಸಿಕೊಳ್ಳಬೇಕು. ಅಂತಪ್ಪ ಪರಶಿವಮೂರ್ತಿಗಳಾದ ಗುರುಗಳಲ್ಲಾಗಲಿ, ಅಥವಾ ಜಂಗಮಲಿಂಗಿಗಳಲ್ಲಾಗಲಿ, ಅಥವಾ ಇಂತಹ ಶಿವಜ್ಞಾನಿಗಳಾದ ಭಕ್ತರಲ್ಲಾಗಲಿ, ಶಿಷ್ಯೋತ್ತಮರಲ್ಲಾಗಲಿ, ಇಂತಪ್ಪವರಿಗೆ ಲಿಂಗಾಂಗಸಮರಸವ ತೋರಬೇಕು, ತೋರದಿದ್ದರೆ ಪ್ರಮಥರು ಮೆಚ್ಚರು. ಇಂತಪ್ಪ ತ್ರಿಮೂರ್ತಿಗಳು ಹೇಳಿದ ಹಾಂಗೆ ಕೇಳಿ ವಿಶ್ವಾಸದಿಂದ ಆಚರಿಸದಿದ್ದರೆ ಭವಹಿಂಗದು ಮುಕ್ತಿಯೆಂಬುದು ಎಂದೆಂದಿಗೂ ತೋರದು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಂಗದ ಮೇಲೆ ಲಿಂಗವಿಲ್ಲದವರು ಲಿಂಗಕ್ಕೆ ಬೋನವ ಮಾಡಲಾಗದು. ಮಾಡಿದರೆ [ಮಾಡಲಿ] ಅವರು ಮಾಡಿದ ಬೋನವ ಲಿಂಗಕ್ಕೆ ಕೊಟ್ಟು ಪ್ರಸಾದವೆಂದು ಕೊಂಡರೆ, ಕುಂಭೀಪಾಕ ನಾಯಕನರಕ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಭಕ್ತ ಮಹೇಶ್ವರರು ಆರಾದರೂ ಆಗಲಿ ಶಿವಗಣಂಗಳಲ್ಲಿ ಕುಲವನರಸಿದರೆ ಅವರು ಕುಲಸೂತಕರೆಂದು ಶಿವನು ಯಮನ ಕೈಯಲ್ಲಿ ಕೊಟ್ಟು ಅಘೋರ ನರಕದೊಳು ಹಾಕೆಂದನು ಕಾಣಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಶೈವಸಿದ್ಧಾಂತಿಗಳಪ್ಪ ಕರ್ಮಕಾಂಡಿಗಳು ಸ್ಥಾವರಲಿಂಗದೆಡೆಯಲ್ಲಿ, ಹವನ ಹೋಮಾದಿ ಪವಿತ್ರಕಾರ್ಯವ ಕೈಕೊಂಡೆಡೆಯಲ್ಲಿ, ಉಚ್ಛಿಷ್ಟಾದಿ ಪಂಚಸೂತಕಗಳಂಟಿದಡೆ ಅವರು ಆ ಸೂತಕವ ಮಾನಿಸದೆ ಪರಿಶುದ್ಧಭಾವದಿಂದಿರ್ಪರು. ದೇವದೇವನಪ್ಪ ಮಹಾದೇವನನು ಲಿಂಗರೂಪದಿಂದ ಅಂಗದಲ್ಲಿ ಧರಿಸಿ ಪರಿಶುದ್ಧರಾದೆವೆಂದು ತಿಳಿಯದೆ ಸೂತಕವನಾಚರಿಸುವ ವ್ರತಗೇಡಿಗಳ ಎನಗೆ ತೋರದಿರಯ್ಯಾ_ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಶಿವಶಿವಾ, ಈ ಮಾಯಾಸಂಸಾರಯುಕ್ತವಾದ ದೇಹದ ಸುಖ ಹೇಳಲಂಜುವೆ. ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಈ ದೇಹದ ವಿಸ್ತಾರ ಪೇಳ್ವೆ, ಎಲೆ ಮರುಳ ಮಾನವರಿರಾ, ಲಾಲಿಸಿ ಕೇಳಿರಿ, ಎಲುವಿನ ಕಂಬ, ಎಲುವಿನ ತೊಲೆಗಳು, ಸಂದೆಲವುಗಳೆ ಬಿಗಿ ಮೊಳೆಗಳು, ಕರುಳಜಾಳಿಗೆ ಬಿಗಿಜಂತಿಗಳು, ಬರುಕಿ ಎಲವುಗಳೆ ಜಂತಿಗಳು, ಬೆರಳೆಲವುಗಳೆ ಚಿಲಿಕೆಗಳು. ಇಂತೀ ಗೃಹಕ್ಕೆ ಮಾಂಸದ ಮೇಲುಮುದ್ದೆಗಳು, ರಕ್ತದ ಸಾರಣೆಗಳು, ಮಜ್ಜದ ಮಡುಗಳು, ಕೀವಿನ ಕುಣಿಗಳು, ಪಿತ್ತದ ಕೊಂಡಗಳು, ಶೋಣಿತದ ಕಾವಲಿಗಳು, ಮೂತ್ರದ ಹಳ್ಳಗಳು, ಅಮೇಧ್ಯದ ಹುತ್ತಗಳು, ಹುಳುವಿನ ಡೋಣಿಗಳು, ಜಂತಿನ ಬಣವೆಗಳು-ಇಂತಪ್ಪ ಮನಗೆ ಎಂಟು ಗವಾಕ್ಷಗಳು. ಬಾಯಿ ಎಂಬುದೊಂದು ದೊಡ್ಡ ದರವಾಜು. ಇಂತೀ ದುರಾಚಾರಯುಕ್ತವಾದ ದೇಹವೆಂಬ ಗೃಹಕ್ಕೆ ಮೂವರು ಕರ್ತೃಗಳಾಗಿಹರು. ಅವರು ಆರಾರೆಂದಡೆ: ಹೊನ್ನೊಂದು ಭೂತ, ಹೆಣ್ಣೊಂದು ಭೂತ, ಮಣ್ಣೊಂದು ಭೂತ. ಇಂತೀ ತ್ರಿವಿಧ ಭೂತಸ್ವರೂಪರಾದ ಬ್ರಹ್ಮ ವಿಷ್ಣು ರುದ್ರರೆಂಬ ತ್ರಿವಿಧದೇವತೆಗಳು. ಅದೆಂತೆಂದಡೆ: ಹೊನ್ನು ರುದ್ರನಹಂಗು, ಹೆಣ್ಣು ವಿಷ್ಣುವಿನಹಂಗು, ಮಣ್ಣು ಬ್ರಹ್ಮನಹಂಗು, ಇಂತಪ್ಪ ತ್ರಿಮೂರ್ತಿಗಳ ಹಂಗಿನಿಂದಾದ ದೇಹವು ಮಿಥೆಯೆಂದು ತಿಳಿದು ವಿಸರ್ಜಿಸಲರಿಯದೆ, ಆ ಅನಿತ್ಯದೇಹದ ಸುಖವನು ಮೆಚ್ಚಿ ಮರುಳಾಗಿ, ಬಿಡಲಾರದೆ, ಈ ಹೇಸಿಕಿ ಹೊಲೆಸಂಸಾರದಲ್ಲಿ ಶಿಲ್ಕಿ ಮಲತ್ರಯದಾಶೆಗೆ ಹೊಡದಾಡಿ ಹೊತ್ತುಗಳೆದು ಸತ್ತುಹೋಗುವ ಕತ್ತೆಗಳಿಗಿನ್ನೆತ್ತಣ ಮುಕ್ತಿ ಹೇಳಾ ! ಮುಂದೆ ಹೊಲೆಮಾದಿಗರ ಮನೆಯಲ್ಲಿ ಶುನಿ ಶೂಕರ ಕುಕ್ಕುಟನ ಬಸುರಲ್ಲಿ ಹುಟ್ಟಿಸದೆ ಬಿಡನೆಂದಾತ ನಿಮ್ಮ ಶರಣ ವೀರಾದ್ಥಿವೀರ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕಲ್ಲಮರದ ಕೋಡಗದ ತಲೆಯೆಂಟು ಸ್ಥಾನವ ಮೆಟ್ಟಿ ತಿರಗುವ ತಲೆ ಕಾಲು ಪಕ್ಕವಿಲ್ಲದ ವಿಹಂಗನ ನಡುನೆತ್ತಿ ಸುಳಿಯೊಳು ನಿಲ್ಲಿಸಲು, ಹಾಲುಬಿಟ್ಟು ಹಾಲು ಬೇಡುವದು. ಈ ಭೇದವ ತಿಳಿಯಬಲ್ಲಡೆ ಅವರು ಲಿಂಗಸಂಬಂದ್ಥಿ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಲ್ಲಲ್ಲಿಗೆ ತಕ್ಕ ಹಾಗೆ ಎಲ್ಲರಿಗೂ ಬೋದ್ಥಿಸಲಾಗದು. ಬಲ್ಲವರಲ್ಲಿ ನುಡಿದು, ಅರಿಯದವರಲ್ಲಿ ಗೆಲ್ಲ ಸೋಲಕ್ಕೆ ನುಡಿದಡೆ, ಅವರು ಕಲ್ಲೆದೆಯವನೆಂಬರು. ಒಳ್ಳಿತು ಹೊಲ್ಲವೆನಬೇಡ ಆರಿಗೂ. ತನ್ನಲ್ಲಿಯೆ ಅರಿಕೆಯೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಹವಣಿಲ್ಲದ ಶಾಖೆಯ ಕಪಿ ಕೈವಿಡಿಯಲೊಲ್ಲದು, ಗಮನವಿಲ್ಲದೆ ಪಿಕಶಿಶು ನುಡಿಯಲೊಲ್ಲದು, ಪ್ರಭಾವಿಸಿದಲ್ಲದೆ ಉಲಿಯದು ಕುಕ್ಕುಟ. ಈ ತ್ರಿವಿಧದ ಭೇದವ ನೋಡಿರೆ ಭಕ್ತರಪ್ಪರೆಲ್ಲ. ಹೂ ಮಿಡಿಯ ಹರಿದಡೆ ಹಣ್ಣಪ್ಪುದೆ ? ಹಸಿವು ತೃಷೆ ನಿದ್ರೆ ಆಲಸ್ಯವುಳ್ಳನ್ನಕ್ಕರ ಅದ್ವೈತವುಂಟೆ ಜಗದೊಳಗೆ ? ತನ್ನ ಮರೆದು ಲಿಂಗವ ಮರೆವುದು, ತನ್ನ ಮರೆಯದೆ ಲಿಂಗವ ಮರೆವ ಯೋಗವೆಂಥದೋ ? ಸುಡು ಸುಡು ಅವರು ಗುರುದ್ರೋಹಿಗಳು, ಆಚಾರಭ್ರಷ್ಟರು. ಉಭಯ ತನುಗುಣನಾಸ್ತಿಯಾಗದನ್ನಕ್ಕರ ಕೂಡಲಚೆನ್ನಸಂಗಯ್ಯನೆಂತೊಲಿವನು ?
--------------
ಚನ್ನಬಸವಣ್ಣ
ಕರ್ಮಿಗಳು ಶಿವಪಥಕ್ಕೆ ಬಪ್ಪಾಗಳವರ ಕರ್ಮ ಬೆಂಬತ್ತಿ ಕಾಡುವದಯ್ಯಾ. ಲಿಂಗಾರಾಧನೆಯ ಮಾಡಲೀಯದು. ಸಂದೇಹವನೆ ತೋರಿಸಿ ಕೆಡಿಸುವದಯ್ಯಾ. ಏಕೆ? ಅವರು ಮಾಡಿದ ಕರ್ಮವನುಣಬೇಕಾಗಿ! ಇದನರಿದು ನಿಮ್ಮ ನೆರೆನಂಬಿ ಪೂಜಿಸೆ ಹರಿವುದು ಕರ್ಮ, ಕಪಿಲಸಿದ್ಧಮಲ್ಲಿಕಾರ್ಜುನ, ದೇವರ ದೇವಾ.
--------------
ಸಿದ್ಧರಾಮೇಶ್ವರ
ಹೊರಗೆ ವೇಷದ ಸೊಂಪು ಒಳಗೆ ರೋಷದ ಮೊಟ್ಟೆಯಯ್ಯ. ಅಶನವನಿಕ್ಕಿ ಹಣವ ಕೊಡದವರ ಕಂಡರೆ ಶಾಪಿಸಿ ಕೋಪಿಸಿ ಪಾಪಿಗಳೆಂಬಿರಯ್ಯ. ನಿಮ್ಮ ಕಿಚ್ಚಿಗೆ ಸಾಪಿಸಿ ಕೋಪಿಸಿ ಹೊಯಿದು ಕುತಾಪಿಸುವವರು ನೀವು ಪಾಪಿಗಳಲ್ಲದೆ, ಅವರು ಪಾಪಿಗಳೇ ತಿಳಿದು ನೋಡಿರಯ್ಯ. ಜಗದ ಕರ್ತನ ವೇಷಧರಿಸಿ ಕರ್ತೃ ನೀವಾದ ಬಳಿಕ ಮಾನವರು ಕೊಟ್ಟಾರು ಕೊಂಡಾರು ಎಂಬ ಭ್ರಾಂತಿಯೇಕೆ? ಅರೆಮರುಳಗಳಿರಾ, ಕೊಡುವಾತ ಶಿವನೆಂದರಿಯದ ಉದರ ಘಾತಕ ಖುಲ್ಲರನೊಲ್ಲ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಸುಗಂಧದ ಮೂಲದ ಬೇರಿನ ಗಂಧ ಎಲೆ ಬಳ್ಳಿಯನೇತಕ್ಕೆ ವೇಧಿಸದು ? ಕುಸುಮದ ಸುವಾಸನೆ ತನ್ನಯ ತೊಟ್ಟು ಎಲೆ ಕೊನರು ಬೇರುವನೇಕೆ ವೇಧಿಸದು ? ಇದು ಇಷ್ಟ ಪ್ರಾಣಯೋಗದ ಭೇದ. ಗಿಡುಗಿಡುವಿಗೆ ಕುರುಹಲ್ಲದೆ ಗಂಧ ಗಂಧ ಕೂಡಿದಲ್ಲಿ ದ್ವಂದ್ವವಾಗಿ ಬೆರೆದಲ್ಲಿ, ಕದಂಬಗಂಧವಲ್ಲದೆ ಒಂದರ ಗಂಧವೆಂದು ಸಂಧಿಸಿ ತೆಗೆಯಲಿಲ್ಲ. ಅವರು ನಿಂದ ನಿಂದ ಸ್ಥಲಕ್ಕೆ ಸಂಬಂಧವಾಗಿಪ್ಪರು. ಇದು ದೃಷ್ಟಾನುಭಾವಸಿದ್ಧಿ, ಸರ್ವಸ್ಥಲಭೇದ, ವಿಶ್ವತೋಮುಖರೂಪು. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನು ತತ್ವಭಿತ್ತಿಸ್ವರೂಪನು.
--------------
ಮೋಳಿಗೆ ಮಹಾದೇವಿ
ಅನಾದಿ ಪರಶಿವನಿಂದಾಕಾರವಾದ ಆದಿಬಿಂದು ಅನಾದಿಬಿಂದು ಚಿದ್ಬಿಂದು ಪರಬಿಂದುವೆ ಜಗದ ಮಧ್ಯದಲ್ಲಿ ಸ್ವಯ, ಚರ, ಪರ, ಭಕ್ತ, ಮಹೇಶ್ವರ, ಪ್ರಸಾದಿ ಪೂಜ್ಯ ಪೂಜಕತ್ವದಿಂದ ಚರಿಸುತ್ತಿರಲು, ಆ ಸಮಯದಲ್ಲಿ ಪ್ರಮಾದವಶದಿಂದ ಲಿಂಗಾಂಗಕ್ಕೆ ಸುಯಿಧಾನ ತಪ್ಪಿ ವಿಘ್ನಾದಿಗಳು ಬಂದು ತಟ್ಟಿ ಶಂಕೆ ಬಂದಲ್ಲಿ ಭಕ್ತ ಮಹೇಶ್ವರ ಶರಣಗಣಂಗಳು ವಿಚಾರಿಸಿ ನೋಡಿದಲ್ಲಿ ಸ್ಥೂಲವಾದಡೆ ಸದಾಚಾರಕ್ಕೆ ಹೊರಗು ಸೂಕ್ಷ್ಮವಾದಡೆ ಶರಣಗಣಂಗಳ ಸಮೂಹಮಧ್ಯದಲ್ಲಿ ಭೃತ್ಯಭಾವದಿಂದ ಹತ್ತು ಹನ್ನೊಂದ ಕೊಳತಕ್ಕುದಲ್ಲ ನೋಡಾ (ಕೊಳತಕ್ಕುದಲ್ಲದೆ?) ಕರ್ತೃತ್ವದಿಂದ ಹತ್ತು ಹನ್ನೊಂದ ಕೊಡತಕ್ಕುದಲ್ಲ ನೋಡಾ ! ಸ್ಥೂಲ ಸೂಕ್ಷ್ಮದ ವಿಚಾರವೆಂತೆಂದಡೆ: ಪರಶಿವಸ್ವರೂಪವಾದ ಇಷ್ಟಲಿಂಗದ ಷಟ್‍ಸ್ಥಾನದೊಳಗೆ ಆವ ಮುಖದಿಂದಾದಡೆಯು ಸುಯಿಧಾನ ತಪ್ಪಿ ಪೆಟ್ಟುಹತ್ತಿ ಭಿನ್ನವಾದಡೆ, ಭಕ್ತ ಮಹೇಶ್ವರ ಶರಣಗಣಂಗಳು ವಿಚಾರಿಸಿ ನೋಡಿ ಸ್ಥೂಲ ಸೂಕ್ಷ್ಮಕ್ಕೆ ತಕ್ಕ ಹರಗುರುವಚನ ವಿಚಾರಿಸಿರಿ ಸ್ಥೂಲ ಸೂಕ್ಷ್ಮಕ್ಕೆ ತಕ್ಕ ಪ್ರತಿಜ್ಞೆಯ ಮಾಡುವುದು, ಶಕ್ತಿ ಸ್ವರೂಪವಾದ ಅಂಗದ ಅವಯವಂಗಳಿಗೆ ಶಿವಾನುಕೂಲದಿಂದ ವ್ಯಾಘ್ರ ಭಲ್ಲೂಕ ದಂಷ್ಟ್ರ ಕರ್ಕಟ ವಾಜಿ ಮಹಿಷ ಸಾಗರದುಪ್ಪಿ ಗಜ ಶುನಿ ಶೂಕರ ಮಾರ್ಜಾಲ ಹೆಗ್ಗಣ ಉರಗ ಮೊದಲಾದ ಮಲಮಾಂಸಭಕ್ಷಕ ಪ್ರಾಣಿಗಳು ಮೋಸದಿಂದ ಪಾದ ಪಾಣಿ ಗುದ ಗುಹ್ಯ ದೇಹವ ಕಚ್ಚಿದಡೆ ಸ್ಥೂಲವೆನಿಸುವುದಯ್ಯಾ ! ಅದರಿಂದ ಮೇಲೆ ಜಿಹ್ವೆ ನಾಸಿಕ ನೇತ್ರ ಲಲಾಟ ಶ್ರೋತ್ರಂಗಳ ಕಚ್ಚಿದಡೆ ಸೂಕ್ಷ್ಮವೆನಿಸುವುದಯ್ಯಾ ! ಈ ಪ್ರಕಾರದಲ್ಲಿ ಲಿಂಗಾಂಗಕ್ಕೆ ಅಪಮೃತ್ಯು ಬಂದು ತಟ್ಟಿದಲ್ಲಿ ಆಚಾರಕ್ಕೆ ಹೊರಗಾದವರು ಗಣಮಧ್ಯದಲ್ಲಿ ಪ್ರಾಣವ ಬಿಡುವುದಯ್ಯಾ, ಇಂತಪ್ಪ ಆಚಾರಕ್ರಿಯಾನಿಷ್ಠನ ಭಕ್ತ ಮಹೇಶ್ವರ ಶರಣಗಣಂಗಳು ಜಂಗಮದ ಪಾದದಲ್ಲಿ ಸಮಾಧಿಯ ಮಾಡುವುದಯ್ಯಾ ಪ್ರಾಣತ್ಯಾಗವ ಮಾಡಲಾರದಿರ್ದಡೆ, ಭಕ್ತ ಮಹೇಶ್ವರ ಶರಣಗಣಂಗಳ ಮಹಾನೈಷ್ಠೆಯಿಂದ ಸಾಕ್ಷಾತ್ಪ್ರಭುವೆಂದು ನಂಬಿ ಅವರು ತೋರಿದ ಸೇವೆಯ ಮಾಡಿ, ಅವರು ಕೊಟ್ಟ ಧಾನ್ಯಾದಿಗಳ ಸ್ವಪಾಕವ ಮಾಡಿ ಮಹಾಪ್ರಸಾದವೆಂದು ಭಾವಿಸಿ ಪಾತಕಸೂತಕಂಗಳ ಹೊದ್ದದೆ ಆಚರಿಸಿದಾತಂಗೆ ಅವಸಾನಕಾಲದಲ್ಲಿ ಮಹಾಗಣಂಗಳು ಲಿಂಗಮುದ್ರಾಭೂಮಿಯಲ್ಲಿ ಪಾದದಳತೆಯಿಲ್ಲದೆ ನೋಟಮಾತ್ರ ಪ್ರಮಾಣಿಸಿ ಸಹಜಸಮಾಧಿಯ ಮಾಡಿ ಲಿಂಗಾಕೃತಿಪ್ರಣವಸಂಬಂಧವಾದ ತಗಡ ಸಂಬಂಧ ಮಾಡದೆ ಪುಷ್ಪಾಂಜಲಿಯ ಮಾಡದೆ, ಆ ನಿಕ್ಷೇಪ ಸ್ಥಾನದಲ್ಲಿ ಜಂಗಮದ ಪಾದವಿಟ್ಟು ಆ ಮರಣಸನ್ನದ್ಧನ ನಿಕ್ಷೇಪನ ಮಾಡುವುದಯ್ಯಾ. ಈ ರೀತಿಯಿಂದಾಚರಿಸಿದಡೆ ಮರಳಿ ಗುರುಕರಜಾತನಾಗಿ ಸದ್ಭಕ್ತಿ ಜ್ಞಾನಾಚಾರ ಕ್ರೀಯಲ್ಲಿ ನಡೆನುಡಿಸಂಪನ್ನನಾಗಿ ಷಟ್‍ಸ್ಥಲದ ಬ್ರಹ್ಮವ ಕೂಡಿ ಘನಸಾರದಂತೆ ಸರ್ವಾಂಗವೆಲ್ಲ ಜ್ಯೋತಿರ್ಮಯಲಿಂಗದಲ್ಲಿ ನಿರವಯವಪ್ಪುದು ನೋಡಾ ! ಇಂತು ಗುರುಮಾರ್ಗಾಚಾರವ ಮೀರಿ, ಅವಧೂತಮಾರ್ಗದಲ್ಲಿ ನಡೆದಡೆ, ಇರುವೆ ಮೊದಲಾನೆ ಕಡೆಯಾದ ಸಮಸ್ತ ಯೋನಿಯಲ್ಲಿ ಜನಿಸಿ, ಸುಖ-ದುಃಖ, ಪುಣ್ಯ-ಪಾಪ, ಸ್ವರ್ಗ-ನರಕವನನುಭವಿಸಿ ಕಾಲಕಾಮಾದಿಗೊಳಗಾಗಿ ಗುರುಮಾರ್ಗಾಚಾರಕ್ಕೆ ಹೊರಗಾಗಿ ಹೋಹರು ನೋಡಾ, ಕೂಡಲಚೆನ್ನಸಂಗಮದೇವಾ !
--------------
ಚನ್ನಬಸವಣ್ಣ
ಮನಶುದ್ಧವಾಗಿ ಮಜ್ಜನಕ್ಕೆರೆದರೆ ಭಾವ ಮತ್ತೇಕಯ್ಯಾ ? ಪತ್ರ ಪುಷ್ಪ ರಂಗವಲ್ಲಿಯನಿಕ್ಕಲೇನು, ಭಿತ್ತಿಯ ಚಿತ್ತಾರವೆ ? ಅವರು ಕಾಣಬೇಕು, ಇವರು ಕಾಣಬೇಕೆಂಬ ಭ್ರಮೆಯ ಭ್ರಮಿತರು ಅಂಗಹೀನರು. ಮನದಂಗವನಗಲರು, ಲಿಂಗ ಮತ್ತೆಲ್ಲಿಯದೋ ? ಸದಮದವಳಿದು ನಿಜವನರಿದಡೆ ಲಿಂಗಕ್ಕೆ ಪೂಜೆ ಕಂಡಾ, ಕೂಡಲಚೆನ್ನಸಂಗಯ್ಯ ಸಾಹಿತ್ಯನಾಗಿಹನು.
--------------
ಚನ್ನಬಸವಣ್ಣ
ಫಲಪದಾದಿಗಳ ಭಕ್ತರಿಗೆ ಕೊಟ್ಟೆನೆಂದೆಂಬೆ; ಅವರವನೊಲ್ಲರು! ಅವರು ನಿನಗೆ ನಿನ್ನ ರೂಪಿಂಗೆ ತನುಮನಧನಾದಿಗಳ ಕೊಡುವರು. ಎಲೆ ವಂಚಕನಾದ ಶಿವನೆ, ನಿರ್ವಂಚಕರೆಮ್ಮವರು! ನಿನ್ನನೇನ ಬೇಡುವರವರು? ನೀನೇನನವರಿಗೆ ಕೊಡುವೆ? ನಿನ್ನ ಕೊಡನೆಮ್ಮವರೊಲ್ಲರು ಕಾಣಾ, ಕೊಡು, ಕೊಡದೆ ಹೋಗು, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->