ಅಥವಾ

ಒಟ್ಟು 8701 ಕಡೆಗಳಲ್ಲಿ , 142 ವಚನಕಾರರು , 3906 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೊಲ್ಲಿಗೆ ಒಂದು ಖಂಡುಗ ನವಣೆ ನುಂಗಿತ್ತಯ್ಯಾ. ಆ ನವಣೆಯ ಹೊಯ್ದಳೆಯಬೇಕೆಂದಡೆ ಸ್ಥಲ ಸಾಲದಯ್ಯಾ- ಹಲಬರು ಛಲವಿಡಿದುವಿಡಿದು ಹೊಲಬುಗೇಡಿಯಾದರು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಅಯ್ಯಾ ಆರೂ ಇಲ್ಲದ ಅರಣ್ಯದಲ್ಲಿ, ನಾನಡಿಯಿಟ್ಟು ನಡವುತ್ತಿರ್ದೆನಯ್ಯಾ. ಮುಂದೆ ಬರೆಬರೆ ಮಹಾಸರೋವರವ ಕಂಡೆ. ಸರೋವರದೊಳಗೊಂದು ಹಿರಿಯ ಮೃಗವ ಕಂಡೆ. ಆ ಮೃಗಕ್ಕೆ ಕೊಂಬುಂಟು ತಲೆಯಿಲ್ಲ, ಬಾಯುಂಟು ಕಣ್ಣಿಲ್ಲ, ಕೈಯುಂಟು ಹಸ್ತವಿಲ್ಲ, ಕಾಲುಂಟು ಹೆಜ್ಜೆಯಿಲ್ಲ, ಒಡಲುಂಟು ಪ್ರಾಣವಿಲ್ಲ. ಇದ ಕಂಡು ನಾ ಹೆದರಿ, ಹವ್ವನೆ ಹಾರಿ, ಬೆದರಿ ಬಿದ್ದೆನಯ್ಯಾ. ಆಗೆನ್ನ ಹೆತ್ತತಾಯಿ ಬಂದು ಎತ್ತಿ ಕುಳ್ಳಿರಿಸಿ, ಚಿತ್ತಮೂಲಾಗ್ನಿಯ ಒತ್ತಿ ಉರುಹಿದರೆ, ಇವೆಲ್ಲವು ಸುಟ್ಟು ಬಟ್ಟಬಯಲಾದವು. ಆ ಬಟ್ಟಬಯಲೊಳಗೆ ಅಡಿಯಿಟ್ಟು ನಡೆವಾಗ, ಮುಂದೆ ಇಟ್ಟಡಿಯ ಬಾಗಿಲೊಳಗೆ ಮತ್ತೊಂದು ಮೃಗವ ಕಂಡೆ. ಆ ಮೃಗಕ್ಕೆ ತಲೆಯುಂಟು ಕೊಂಬಿಲ್ಲ, ಕಣ್ಣುಂಟು ಬಾಯಿಲ್ಲ, ಹಸ್ತವುಂಟು ಕೈಯಿಲ್ಲ, ಹೆಜ್ಜೆಯುಂಟು ಕಾಲಿಲ್ಲ, ಪ್ರಾಣವುಂಟು ಒಡಲಿಲ್ಲ. ಇದ ಕಂಡು ನಾ ಅಪ್ಪಿಕೊಳಹೋದಡೆ, ಮುಟ್ಟದ ಮುನ್ನವೆ ಎನ್ನನೆ ನುಂಗಿತ್ತು. ನುಂಗಿದ ಮೃಗ ಮಹಾಲಿಂಗದಲ್ಲಿಯೆ ಅಡಗಿತ್ತು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಆವ ವ್ರತ ನೇಮವ ಹಿಡಿದಡೂ ಆ ವ್ರತ ನೇಮದ ಭಾವಶುದ್ಧವಾಗಿರಬೇಕು. ಅಸಿ ಕೃಷಿ ಯಾಚಕ ವಾಣಿಜ್ಯತ್ವದಿಂದ ಬಂದ ದ್ರವ್ಯಂಗಳಲ್ಲಿ ಬಾಹ್ಯದ ಬಳಕೆ ಅಂತರಂಗದ ನಿರಿಗೆ ಉಭಯ ಶುದ್ಧವಾಗಿಪ್ಪ ಭಕ್ತನಂಗವೆ ಏಲೇಶ್ವರಲಿಂಗದಂಗ.
--------------
ಏಲೇಶ್ವರ ಕೇತಯ್ಯ
ಶ್ರೀಶೈಲದ ಮಧ್ಯದಲ್ಲಿ ಒಂದು ಪರುಷರಸದ ಬಾವಿ ಹುಟ್ಟಿತ್ತು, ಆ ಬಾವಿಯೊಳಗೆ ಕಬ್ಬುನದ ಅದಿರು ಹುಟ್ಟಿ ಸಿದ್ಧರಸವ ನುಂಗಿತ್ತು. ಇದ್ದವನ ಸುದ್ದಿಯ ಸತ್ತವ ಹೇಳಿ, ಕಾಣದವ ಕೇಳಿ ಹೋದ, ಸದಾಶಿವಮೂರ್ತಿಲಿಂಗ ಬಚ್ಚಬರಿಯ ಬಯಲು.
--------------
ಅರಿವಿನ ಮಾರಿತಂದೆ
ವಾಯುವ ಹಿಡಿದು, ದಂಡವ ಕೊಂಡು, ಸಾವರ ಹಿಡಿದು, ಸಂಕಲೆಯನಿಕ್ಕಿ, ಈ ವಿದ್ಥಿಯಲ್ಲಿ ಸಯಸಗೊಳ್ಳದೆ, ಭಾವವಾಡಿದಂತೆ ಭ್ರಮೆಗೊಳಗಾಗದೆ, ಮತ್ತಿವನೇನನೂ ಎನ್ನದಿರ್ಪುದೆ, ಸರ್ವಜ್ಞಾನದೊಳಗು. ಆ ನಿಜವಸ್ತು, ತಾನು ತಾನೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಸಾಸಿರದಳಕಮಲವೆಂದಡೆ ಸೂಸಿಕೊಂಡಿರುವ ಮನ. ಪವನವೆಂದಡೆ ಎಲ್ಲೆಡೆಯಲ್ಲಿ ಸೂಸಿ ಆಡುವಂತಹದು. ಬಿಂದುವೆಂದಡೆ ಆಗುಮಾಡುವಂತಹದು. ಈ ಮನ ಪವನ ಬಿಂದು ಮೂರನು ಒಡಗೂಡಿ ನೋಡಲು, ಪರಂಜ್ಯೋತಿಪ್ರಕಾಶದಂತಹ ಬೆಳಗೆ ಎನ್ನ ಕಂಗಳ ಮುಂದೆ ನಿಂದಿತ್ತು. ಆ ಮಹಾಬೆಳಗನೆ ಕಂಗಳಲ್ಲಿ ಹೆರೆಹಿಂಗದೆ ನೋಡಿದಡೆ, ಎನ್ನಂಗದ ಒಳಹೊರಗೆ ಪರಿಪೂರ್ಣವಾಗಿದ್ದಿತ್ತು ಕಾಣಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ, ನಿಮ್ಮ ಪಾದಕರುಣದಿಂದ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಆ ಅಕ್ಷರವನು ಆರೈದು ತೋರಿರಿ ಓರಂತೆ ಎನ್ನ ಸದುಹೃದಯನೆನಿಸಿ ನಾದ ಕಳೆಗಳನೆನ್ನ ಆಕರದೊಳಗಿಟ್ಟು ಅಭೇದ್ಯ ಪರಮಾನಂದ ಸತ್ಯರೂಪ ನಿತ್ಯಾನಂದ ಶ್ರೀ ಗುರು ಚೆನ್ನಬಸವಣ್ಣನುನ್ನತವನಾರು ಬಲ್ಲರು ಹೇಳಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಸಮಯೋಚಿತದಲ್ಲಿ ಲಿಂಗಾರ್ಚನೆಯ ಮಾಡುತಿಪ್ಪನಾ ಭಕ್ತನು. ಮಾಡಿದಡೆ ಮಾಡಲಿ, ಮಾಡಿದಡೆ ತಪ್ಪೇನು ಆ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದುಡುಕಿದಡೆ ಅದು ಪ್ರಸಾದವಲ್ಲ, ಕಿಲ್ಬಿಷ. ಆ ಸಮಯೋಚಿತದಲ್ಲಿ ಬಂದ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದೆಗೆದಡೆ, ಅದು ಲಿಂಗಕ್ಕೆ ಬೋನ. ಇದು ಕಾರಣ, ಕೂಡಲಸಂಗಮದೇವಾ, ಇಂತಪ್ಪ ಸದಾಚಾರಿಗಳನೆನಗೆ ತೋರಾ 400
--------------
ಬಸವಣ್ಣ
ಲಿಂಗಪ್ರಸಾದಿಗಳೆಂಬರು ಬಲ್ಲರೆ ನೀವು ಹೇಳರೋ! ಸಜ್ಜನಶುದ್ಧಶಿವಾಚಾರಸಂಪನ್ನರಪ್ಪ ಸದ್ಭಕ್ತರು ತಮ್ಮ ಲಿಂಗಕ್ಕೆ ಗುರುಮಂತ್ರೋಪದೇಶದಿಂದ ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಿ, ಸಕಲ ಪದಾರ್ಥವೆಲ್ಲವ ಪ್ರಮಾಣಿನಲ್ಲಿ ಭರಿತವಾಗಿ ಗಡಣಿಸಿ, ತನು ಕರಗಿ ಮನ ಕರಗಿ ನಿರ್ವಾಹ ನಿಷ್ಪತ್ತಿಯಲಿ ಗಟ್ಟಿಗೊಂಡು ತಟ್ಟುವ ಮುಟ್ಟುವ ಭೇದದಲ್ಲಿಯೇ ಚಿತ್ತವಾಗಿ ಲಿಂಗಾರ್ಪಿತವ ಮಾಡೂದು ಆ ಪ್ರಸಾದವ ತನ್ನ ಪಂಚೇಂದ್ರಿಯ ಸಪ್ತಧಾತು ತೃಪ್ತವಾಗಿ ಭೋಗಿಸೂದು. ಲಿಂಗಪ್ರಸಾದ ಗ್ರಾಹಕನ ಪರಿಯಿದು, ಕೊಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಸಹಜದಿಂದ ನಿರಾಲಂಬವಾಯಿತ್ತು, ನಿರಾಲಂಬದಿಂದ ನಿರಾಳವಾಯಿತ್ತು. ನಿರಾಳದಿಂದ ನಿರವಯವಾಯಿತ್ತು, ನಿರವಯದಿಂದ ಅನಾದಿಯಾಗಿತ್ತು. ಅನಾದಿಯಲ್ಲಿ ಮೂರ್ತಿಯಾದನೊಬ್ಬ ಶರಣ. ಆ ಶರಣನ ಮೂರ್ತಿಯಿಂದ ಸದಾಶಿವನಾದ, ಆ ಸದಾಶಿವನ ಮೂರ್ತಿಯಿಂದ ಶಿವನಾದ, ಆ ಶಿವನ ಮೂರ್ತಿಯಿಂದ ರುದ್ರನಾದ, ಆ ರುದ್ರನ ಮೂರ್ತಿಯಿಂದ ವಿಷ್ಣುವಾದ. ಆ ವಿಷ್ಣುವಿನ ಮೂರ್ತಿಯಿಂದ ಬ್ರಹ್ಮನಾದ. ಆ ಬ್ರಹ್ಮನ ಮೂರ್ತಿಯಿಂದಾದವು ಸಕಲ ಜಗತ್ತುಗಳೆಲ್ಲಾ_ ಇವರೆಲ್ಲ ನಮ್ಮ ಗುಹೇಶ್ವರನ ಕರಸ್ಥಲದ ಹಂಗಿನಲ್ಲಿ ಹುಟ್ಟಿ ಬೆಳೆದರು
--------------
ಅಲ್ಲಮಪ್ರಭುದೇವರು
ನೀವು ನಿಮ್ಮ ಸ್ವಲೀಲೆಯಿಂದೆ ಜಗದಲೀಲಾ ವೈಭವಂಗಳ ನಟಿಸಬೇಕೆಂದು ನಿಮ್ಮಲ್ಲಿ ನೆನಹುದೋರಲು, ಆ ನೆನಹು ನಿರ್ಧರಿಸಿ, ಚಿತ್ತೆನಿಸಿತ್ತು. ಆ ಚಿತ್ತಿನಿಂದೆ ಚಿನ್ನಾದ ಚಿದ್ಬಿಂದು ಚಿತ್ಕಳೆಗಳೊಗೆದವು. ಆ ಚಿನ್ನಾದ ಚಿದ್ಬಿಂದು ಚಿತ್ಕಳೆ ಆ ಮೂಲಚಿತ್ತು ಸಹವಾಗಿ ಗಟ್ಟಿಗೊಂಡು ಅಖಂಡ ಗೋಳಕಾಕಾರ ತೇಜೋಮೂರ್ತಿಯಪ್ಪ ಮಹಾಲಿಂಗವಾಯಿತ್ತು. ಆ ಮಹಾಲಿಂಗವೇ ಪಂಚಮುಖವನೈದಿಹ ಸದಾಶಿವನೆಂದೆನಿಸಿತ್ತು. ಆ ಸದಾಶಿವನಿಂದೆ ಬ್ರಹ್ಮ-ವಿಷ್ಣು-ರುದ್ರರೆಂಬ ತ್ರೈಮೂರ್ತಿಗಳುದಿಸಿದರು. ಆ ತ್ರೈಮೂರ್ತಿಗಳಿಂದೆ ಸ್ವರ್ಗ-ಮತ್ರ್ಯ-ಪಾತಾಳಂಗಳೆಂಬ ತ್ರೈಲೋಕಂಗಳು ಜನಿಸಿದವು. ಆ ತ್ರೈಲೋಕಂಗಳ ಮಧ್ಯದಲ್ಲಿ ಸಚರಾಚರ ಹೆಣ್ಣುಗಂಡು ನಾಮ ರೂಪ ಕ್ರಿಯಾದಿ ಸಕಲ ವಿಸ್ತಾರವಾಯಿತ್ತು. ಇಂತಿವೆಲ್ಲವೂ ನಿಮ್ಮ ನೆನಹುಮಾತ್ರದಿಂದಾದವಯ್ಯ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಊರ್ವಸಿ ಕರ್ಪೂರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮಚ್ಚುವರಲ್ಲದೆ, ಹಂದಿ ಕರ್ಪೂರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮಚ್ಚುವರೆ, ಹುಡುಹುಡು ಎಂದಟ್ಟುವರಲ್ಲದೆ ? ನಡೆನುಡಿ ಶುದ್ಧವುಳ್ಳವರು ಪುರಾತನರ ವಚನವ ಓದಿದಡೆ ಅನುಭಾವವ ಮಾಡಿದಡೆ ಮಚ್ಚುವರಲ್ಲದೆ, ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ ಅನುಭಾವವ ಮಾಡಿದಡೆ ಮಚ್ಚುವರೆ ? ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ ಆ ಹಂದಿಗಿಂದ ಕರಕಷ್ಟ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ.
--------------
ಮೋಳಿಗೆ ಮಹಾದೇವಿ
ಓಂಕಾರವೇ ನಾದಮಯ. ಓಂಕಾರವೇ ಮಂತ್ರಮಯ. ಓಂಕಾರವೇ ಪರಿಪೂರ್ಣವಾಗಿ ಸರ್ವವ್ಯಾಪಕತ್ವವನ್ನುಳ್ಳುದು ನೋಡಾ. ಪ್ರಣವವೇ ಪರಮಾತ್ಮ ಸ್ವರೂಪವಾಗಿ ಪರಮೇಶ್ವರನ ಗೌಪ್ಯಮುಖ ನೋಡಾ. ಪ್ರಣವವೆ ಶಿವಶರಣರ ಹೃದಯಾದ್ಥಿಪತಿ ಇದು ಕಾರಣ, ಹೃದಯಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವಧ್ಯಾನದಲ್ಲಿ ತರಹರವಾಗಿ ಪ್ರಣವಸ್ವರೂಪನಾಗಿದ್ದೆನಯ್ಯ. ಪಂಚಾಕ್ಷರವೆ ಪಂಚಬ್ರಹ್ಮಮಯವಾಗಿ ಆ ಪಂಚಾಕ್ಷರಿಮಂತ್ರವೆ ಶರೀರವಾಗಿರ್ದೆನು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಬಹಳ ಬಹಳ ಕಂಡೆನೆಂದು ನುಡಿವ, ಬಿಸಿಲು ಮಧ್ಯಾಹ್ನದಲ್ಲಿ ಚಂದ್ರಬಿಂಬ ಉದಯವಾದ ಪ್ರತ್ಯಕ್ಷವಾಯಿತ್ತೆಂದು ಹೊರಗೆ ಕಂಡು ಒಳಗೆ ಕಂಡನಲ್ಲದೆ ಏನು ಅಪ್ಪುದು ಕಾಣಾ. ಎರಡೂ ಒಂದೇ. ಮುಂದೆ ಮೀರಿ ಮನಸಮಾದ್ಥಿ ಮಾಡಿದಡೆ ಮುಕ್ತಿಯೆಂದು ಹೇಳುವರು. ಮನ ಮುಳುಗಿದುದೆ ಲಿಂಗವೆಂದೆಂಬರು. ಆ ಲಿಂಗ ಮುಳುಗುವುದು ಸಮಾದ್ಥಿ ಕಾಣಾ, ತಾನಳಿದ ಮೇಲೆ ಮುಕ್ತಿ ಯಾರಿಗೆ ಹೇಳಾ ? ಲಿಂಗಕ್ಕೆ ಅಳಿವು ಬೆಳವುಂಟೆ ಕಾಣಾ ? ಚಿಂತಿಸಿ ಮುಳುಗಿದವರೆಲ್ಲ ಕಡೆಯಿಲ್ಲ ಮೊದಲಿಲ್ಲ ನೋಡಾ. ಇನ್ನು ಉಳಿದದ್ದು ಘನವು. ಉಳಿಯೆ ಹೇಳಾ ನಿಜಕೆಲ್ಲ. ಲಯವಿಲ್ಲ ಭಯವಿಲ್ಲದಾಡಿದ ವಿದೇಹ ತಾನಾದ ವರನಾಗನ ಗುರುವೀರನೆ ಪರಂಜ್ಯೋತಿ ಮಹಾವಿರಕ್ತಿ.
--------------
ಪರಂಜ್ಯೋತಿ
ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ಇನ್ನಷ್ಟು ... -->