ಅಥವಾ

ಒಟ್ಟು 55 ಕಡೆಗಳಲ್ಲಿ , 31 ವಚನಕಾರರು , 52 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದಿರ ಹಳಿದು ತನ್ನ ಬಣ್ಣಿಸುವನ್ನಕ್ಕರ ಶಿವಜಾÕನಿ ಎಂತಪ್ಪನಯ್ಯಾ ? ಹಮ್ಮು ಬಿಮ್ಮು ಹೆಮ್ಮೆ ಹಿರಿತನವುಳ್ಳನ್ನಕ್ಕರ ಶಿವಜಾÕನಿ ಎಂತಪ್ಪನಯ್ಯಾ ? ಉದಮದ ಗರ್ವ ಅಹಂಕಾರ ಮಮಕಾರವುಳ್ಳನ್ನಕ್ಕರ ಶಿವಜಾÕನಿ ಎಂತಪ್ಪನಯ್ಯಾ ? ಆಸೆ ಆಮಿಷ ಕ್ಲೇಶ ತಾಮಸವುಳ್ಳನ್ನಕ್ಕರ ಶಿವಜಾÕನಿ ಎಂತಪ್ಪನಯ್ಯಾ ? ಇಂತೀ ಗುಣಂಗಳುಳ್ಳನ್ನಕ್ಕರ ಶಿವಾನುಭಾವಿಯೆಂತಪ್ಪನಯ್ಯಾ ಅಖಂಡೇಶ್ವರಾ ?
--------------
ಷಣ್ಮುಖಸ್ವಾಮಿ
ನೀರೊಳಗಣ ಕಿಚ್ಚು ತಾಯಲ್ಲಿ ಅಡಗಿತ್ತು. ಶಿಲೆಯೊಳಗಣ ಕಿಚ್ಚು ತಾಯನುಳುಹಿ, ಇದಿರ ಸುಟ್ಟಿತ್ತು. ಮರದೊಳಗಣ ಕಿಚ್ಚು ಮರನನೂ ಸುಟ್ಚು, ಇದಿರನೂ ಸುಟ್ಟು, ಪರಿಸ್ಪಂದಕ್ಕೆ ಹರಿಯಿತ್ತು. ಇಂತೀ ತ್ರಿವಿಧಭೇದದಿಂದ, ಜ್ಞಾನದ ಭೇದವನರಿ ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.
--------------
ಮೆರೆಮಿಂಡಯ್ಯ
ಅಜ್ಞಾನಿಯಾದವಂಗೆ ಅರಿವು ತಾನೆಲ್ಲಿಯದೊ ? ಸುಜ್ಞಾನಿಯಾದವಂಗೆ ಮರಹು ತಾನೆಲ್ಲಿಯದೊ ? ನಾನರಿದೆನೆಂಬಾತ ಇದಿರ ಕೇಳಲುಂಟೆ ? ಭ್ರಾಂತಿನ ಭ್ರಮೆಯೊಳಗೆ ಬಳಲುತ್ತಿರಲು ಮಾತಿನ ಮಾತಿನೊಳಗೆ ಅರಿವೆಂಬುದುಂಟೆ ? ಸೂತಕ ಹಿಂಗದೆ ಸಂದೇಹವಳಿಯದೆ, ಮುಂದಣ ಸೂಕ್ಷ್ಮವ ಕಾಬ ಪರಿಯೆಂತೊ? ಜ್ಯೋತಿಯ ಬಸಿರೊಳಗೆ ಜನಿಸಿದ ಕಾಂತಿಯೂಥ(ಯುತ?) ಬೆಳಗು ಗುಹೇಶ್ವರಾ ನಿಮ್ಮ ಶರಣ !
--------------
ಅಲ್ಲಮಪ್ರಭುದೇವರು
ವ್ರತಾಚಾರವೆಂಬುದು ತನಗೊ, ತನ್ನ ಸತಿಗೊ, ಇದಿರ ಭೂತಹಿತಕೊ ? ತಾನರಿಯದೆ ತನಗೆ ವ್ರತ ಉಂಟೆ ? ವ್ರತಾಚಾರಿಗಳ ಗರ್ಭದಿಂದ ಬಂದ ಶಿಶುವ ಅನ್ಯರಿಗೆ ಕೊಡಬಹುದೆ ? ವ್ರತಾಚಾರವಿಲ್ಲದವರಲ್ಲಿ ತಂದು ವ್ರತವ ಮಾಡಬಹುದೆ ? ಇಂತೀ ತಮ್ಮ ಕ್ರೀವಂತರಲ್ಲಿಯೆ ತಂದು ಕ್ರೀವಂತರಲ್ಲಿಯೆ ಕೊಟ್ಟು ಉಭಯ ಬ್ಥಿನ್ನವಿಲ್ಲದೆ ಇಪ್ಪುದೆ ಸಜ್ಜನವ್ರತ, ಸದಾತ್ಮ ಯುಕ್ತಿ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ಮುಕ್ತಿ.
--------------
ಅಕ್ಕಮ್ಮ
ತನ್ನ ವಿಚಾರಿಸಲೊಲ್ಲದು, ಇದಿರ ವಿಚಾರಿಸಹೋಹುದೀ ಮನವು. ಏನ ಮಾಡುವೆನೀ ಮನವನು, ಎಂತು ಮಾಡುವೆನೀ ಮನವನು. ಕೂಡಲಸಂಗಮದೇವನ ಶರಣರ ನಚ್ಚದ ಮಚ್ಚದ ಬೆಂದ ಮನವನು. 38
--------------
ಬಸವಣ್ಣ
ಇಚ್ಛಾ ಜ್ಞಾನ ಕ್ರಿಯಾ ಶಕ್ತಿ ನಿಮ್ಮಿಚ್ಛೆ ಎಂಬುದಂ ಬಲ್ಲೆ. ಸರ್ವವೂ ಶಿವನಾಜ್ಞೆಯೆಂಬುದಂ ಬಲ್ಲೆ. ಸರ್ವವೂ ಶಿವನಾಜ್ಞೆಯೆಂದು ನಿಮ್ಮಡಿಗಳು ಬೆಸಸಿದ ಸರ್ವಶ್ರುತಿಗಳಂ ಕೇಳಿ ಬಲ್ಲೆನು. ಈ ಹೀಂಗೆಂದರಿದು ಮನ ಮರಳಿ ಬಿದ್ದು ಗುರುಲಿಂಗಜಂಗಮಕ್ಕೆ ನಾನೂ ಮಾಡಿದೆನೆಂಬ ಅವಿಚಾರದ ಮನದ ಮರವೆಯ ನೋಡಾ. ಇದಿರ ಬೇಡಿದಡೆ ಕೊಡರೆಂಬ ಮನದ ಘಸಣಿಯ ನೋಡಾ. ಶಿವ ಶಿವ ಮಹಾದೇವ, ಮನೋನಾಥ ಮನೋಮಯ, ಎನ್ನ ಮನವ ಸಂತವ ಮಾಡಿ ನಿಮ್ಮಲ್ಲಿ ಬೆರಸು, ಬೆರಸದಿದ್ದಡೆ ನಿಮಗೆ ಮಹಾಗಣಂಗಳಾಣೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಪರಬ್ರಹ್ಮವ ನುಡಿವರೆಲ್ಲಾ ಬ್ರಹ್ಮನ ಬಾಯಾಟ, ಹಿಂಗಿದಲ್ಲಿ ಹೋಯಿತ್ತು. ಬೊಮ್ಮ ಬಾಯೆಂಬ ಬಾಗಿಲಮುಂದೆ ಸುಳಿಯದಿರೆ, ಅನ್ನ ಆತ್ಮಂಗೆ ಅರಿವೆ ಪ್ರಾಣ ವಿರಕ್ತಂಗೆ. ಇಂತೀ ಗುಣಕ್ಕೆ ಇದಿರ ಕೇಳಲಿಲ್ಲ, ತನ್ನ ಮರೆಯಲಿಲ್ಲ, ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಒಂದ ಹಿಡಿವಲ್ಲಿ ಸತ್ತಿಗೆಯವ, ಇದಿರ ಉಭಯದ ಸಂದ ಕಡಿವಲ್ಲಿ ಕೊಡಲಿಯವ. ಹಿಂದುಮುಂದಣ ತಮವನೊಂದುಗೂಡಿ, ಕೆಡಿಸುವುದಕ್ಕೆ ಪಂಜಿನವ. ಇದು ಅಂದು ಬಂದ ಬೆಸದ ಕಾಯಕ, ಐಘಂಟೇಶ್ವರಲಿಂಗವಿದ್ದಲ್ಲಿಯೆ ಬೆಸನಿಲ್ಲದಿರಬೇಕು.
--------------
ಸತ್ತಿಗೆ ಕಾಯಕದ ಮಾರಯ್ಯ
ಶಿವ ಶಿವ! ಮಹಾದೇವ, ಎನ್ನ ಗುಣಾವಗುಣವರಿಯದೆ ಇದಿರ ಗುಣವ ವಿಚಾರಿಸುವೆ. ಅವರು ವಂಚಿಸಿಹರೆಂದು ಕೊಡರೆಂದು ನಿಂದಿಸಿಹರೆಂದು ಮಾತಾಪಿತ ಸತಿಸುತರುಗಳಿಗೆ ಸ್ನೇಹಿಸಿಹರೆಂದು ಶಿವ ಶಿವಾ! ಬುದ್ಧಿಯನರಿಯದೆ ನಾ ನಿಮಗೆ ವಂಚನೆಯಿಲ್ಲದೆ ಒಲಿದೆನಾದಡೆ ನೀವೆನಗೆ ಒಳ್ಳಿದರು. `ಸತ್ಯಭಾವಿ ಮಹತ್ಸತ್ಯಂ' ಎಂಬುದಾಗಿ, ನಿಮ್ಮಡಿಗಳ ಸ್ನೇಹಿತರು, ಎನಗೆ ಒಳ್ಳಿದರು. ಸ್ನೇಹ ತಾತ್ಪರ್ಯವ ಮಾಡಿ ಬೇಡಿತ್ತನಿತ್ತು ದೇವಾ ಎನುತಿಪ್ಪರು. ಒಳ್ಳಿತ್ತು ಹೊಲ್ಲೆಹ ಎನ್ನಲ್ಲಿ, ಇದಿರಿಂಗೆ ಅದು ಸ್ವಭಾವ ಗುಣ. ಎನ್ನ ದುರ್ಗುಣಂಗಳ ಕಳದು ಸದ್ಗುಣವ ಮಾಡಿ ನಿನ್ನೊಳಗು ಮಾಡಿಕೊಳ್ಳಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ನಿಧಾನವ ಸಾಧಿಸಿದವರಿಗೆ ವಿಗುರ್ಬಣೆ ಕಾಡುವುದು. ಅದಕ್ಕಂಜಲಾಗದು ಬೆಚ್ಚಲಾಗದು ಬೆದರಲಾಗದು. ಹೊನ್ನು ಹೆಣ್ಣು ಮಣ್ಣು ಈ ತ್ರಿವಿಧಮಾಯವ ತೋರಿ, ಹೆರತೆಗೆಸುವನಾಗಿ ! ಸತಿಪುರುಷಸಂಯೋಗದ ವೇಳೆಯಲ್ಲಿ ಜೀವಧನ ಬಿಟ್ಟುಕೊಂಡು ಮಡಕೆಯನೂಕುವುದು. ಇದಿರ ಜೀವಧನ ಬಿಟ್ಟುಕೊಂಡು ಮನೆಯ ಹಿಂದನುಚ್ಚುವುದು. ಬೆಕ್ಕು ನೆಲಹಿಗೆ ತುಡುಕುವುದು. ನಾಯಿ ಮನೆಯ ಹೊರಗ ಹೊಂಚಿಕೊಂಡಿಹುದು. ಮಗುವು ಮೊಲೆಗೆ ಅಳುವುದ ಕೇಳಿ_ ಇವೆಲ್ಲವ ಸಂತವಿಟ್ಟು ಬಂದು ಪುರುಷನ ನೆರೆವಳು, [ಇದು ಸಜ್ಜನಸ್ತ್ರೀಯ ಲಕ್ಷಣವು ! ಇಂತಪ್ಪ ಆ ತವಕ ನಿನಗಳವಟ್ಟಿತ್ತು ಬಸವಾ ಆ ಗುಹೇಶ್ವರನ ಸಂಯೋಗದ ವೇಳೆಯಲ್ಲಿ !
--------------
ಅಲ್ಲಮಪ್ರಭುದೇವರು
ಈ ಸಕಲದೊಳಗೆ ಒಂದು ಸಯವಿಲ್ಲದೆ ನಾವು ಹಿರಿಯರು ನಾವು ಲಿಂಗವಂತರೆಂಬರು. ಇದಿರ ಕೈಯಲ್ಲಿ ಎನಿಸಿಕೊಳ್ಳುತ್ತಿಹರು ಮನ ನಾಚದೆ. ಇಂಥ ಮೂಗುನಾಚಿಗಳ ಮೆಚ್ಚುವನೆ ಮಹಾಲಿಂಗ ಗಜೇಶ್ವರನಲ್ಲಿ ಎನ್ನ ಹೆತ್ತ ತಂದೆ ಪೂರ್ವಾಚಾರ್ಯ ಸಂಗನಬಸವಣ
--------------
ಗಜೇಶ ಮಸಣಯ್ಯ
ಘನಗಂಭೀರವಾರುದ್ಥಿಯೊಳಗೆ ತೋರುವ ವೀಚಿಗಳು ಆ ವಾರುದ್ಥಿಯ ಬಿಟ್ಟು ತೋರಬಲ್ಲವೆ ತೋರಿದಡೆ ಆ ವಾರುದ್ಥಿ ತನ್ನ ತಾ ಜರೆದುಕೊಂಬುದೆ ನಿಮ್ಮೊಳಡಗಿದ ಪ್ರಮಥರೆಲ್ಲರ ಗುಣಾದಿಗುಣಂಗಳೆಲ್ಲವನು ನಿಮ್ಮಡಿಗಳೆತ್ತಲುಂಟೆ ಜಗದೊಳಗೆ ಕೂಡಿ ಪರಿಪೂರ್ಣನಾದ ಬಳಿಕ, ಇದಿರ ನೋಡಿ ಜರೆದು ನುಡಿವಠಾವಾವುದು ಹೇಳಯ್ಯಾ ಕೂಡಲಸಂಗಮದೇವಯ್ಯಾ, ನಿಮ್ಮ ನೀವು ಪರಿಣಾಮಿಸಿಕೊಂಬುದಲ್ಲದೆ ಬ್ಥಿನ್ನವ ಮಾಡಲುಂಟೆ
--------------
ಬಸವಣ್ಣ
ವೇದವನೋದಿ ಕೇಳಿದಡೇನು? ವೇದಜ್ಞನಪ್ಪನಲ್ಲದೆ ಭಕ್ತನಲ್ಲ. ಶಾಸ್ತ್ರಗಳನೋದಿ ಕೇಳಿದಡೇನು? ಮಹಾಶಾಸ್ತ್ರಜ್ಞನಪ್ಪನಲ್ಲದೆ ಭಕ್ತನಲ್ಲ. ಪುರಾಣವನೋದಿ ಕೇಳಿದಡೇನು? ಪುರಾಣಿಕನಪ್ಪನಲ್ಲದೆ ಭಕ್ತನಲ್ಲ. ಆಗಮಂಗಳನೋದಿ ಕೇಳಿದಡೇನು? ಆಗಮಿಕನಪ್ಪನಲ್ಲದೆ ಭಕ್ತನಲ್ಲ. ಇಂತೀ ಸರ್ವವಿದ್ಯೆಂಗಳನೋದಿ ಕೇಳಿದಡೇನು? ಇದಿರ ಬೋದ್ಥಿಸಿ ಉದರವ ಹೊರೆವ ಉದರಪೋಷಕನಪ್ಪನಲ್ಲದೆ ಭಕ್ತನಲ್ಲ. ಯಮಬಾಧೆಗಂಜಿ ಧರ್ಮವ ಮಾಡಿದಡೆ ಧರ್ಮಿಯಪ್ಪನಲ್ಲದೆ ಭಕ್ತನಲ್ಲ. ಸ್ವರ್ಗಭೋಗಿಯಪ್ಪನಲ್ಲದೆ ಭಕ್ತನಲ್ಲ. ಇದು ಕಾರಣ, ಶ್ರೀಗುರು ಲಿಂಗ ಜಂಗಮಕ್ಕೆ ತನು ಮನ ಧನವನರ್ಪಿಸುವ ಭಕ್ತಿವುಳ್ಳಡೆ ಭಕ್ತದೇಹಿಕ ದೇವ ಪರಶಿವನು, `ಭಕ್ತಕಾಯ ಮಮಕಾಯ' ಎಂದುದಾಗಿ. `ಲಿಂಗಾಲಿಂಗೀ ಮಹಾಜೀವೀ' ಎಂದುದಾಗಿ ಇಂತಪ್ಪ ಮಹಾಭಕ್ತಿಯುಳ್ಳ ಭಕ್ತನ ಸತ್ಯನೆಂಬೆ, ಮುಕ್ತನೆಂಬೆ, ಜಂಗಮವೆಂಬೆ, ಪ್ರಸಾದಿಯೆಂಬೆ, ಪರಮಸುಖಿಯೆಂಬೆನು. ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಲಿಂಗ ಜಂಗಮ, ಜಂಗಮ ಲಿಂಗವೆಂಬುದನಾರು ಬಲ್ಲರು ? ಬಸವಣ್ಣನಲ್ಲದೆ. ಲಿಂಗಕ್ಕೆ ಆಧಾರವಿಲ್ಲವೆಂದು ಮತ್ರ್ಯಲೋಕಕ್ಕೆ ಬಂದು, ಅವತರಿಸಿದನಯ್ಯಾ ಬಸವಣ್ಣನು. ಲಿಂಗಮುಖ ಜಂಗಮವೆಂದರಿದು, ತನ್ನನರ್ಪಿಸಿ, ಇದಿರ ತಪ್ಪಿಸಿ ಇರಬಲ್ಲನಯ್ಯಾ ಬಸವಣ್ಣನು. ಅಂಗಮುಖವೆಲ್ಲ ನಷ್ಟವಾಗಿ, ಭೃತ್ಯಾಚಾರವೆ ತನುವಾಗಿರಬಲ್ಲನಯ್ಯಾ ಬಸವಣ್ಣನು. ಪ್ರಾಣನ ಕಳೆಯರತು ಜಂಗಮವೇ ಪ್ರಾಣವಾಗಿರಬಲ್ಲನಯ್ಯಾ ಬಸವಣ್ಣನು. ಬಸವಪ್ರಿಯ ಕೂಡಲಚೆನ್ನಸಂಗಯ್ಯನಲ್ಲಿ, ಆಚಾರವೇ ಪ್ರಾಣವಾಗಿಪ್ಪ ಸಂಗನಬಸವಣ್ಣನೆ ನಿಮಗೆ ಭಕ್ತನಯ್ಯಾ ಪ್ರಭುವೆ.
--------------
ಸಂಗಮೇಶ್ವರದ ಅಪ್ಪಣ್ಣ
ಅನ್ಯರ ದ್ರವ್ಯವ ಅಪಹರಿಸಿಕೊಂಡಲ್ಲಿ ಅದು ತನಗೆ ಅನ್ಯದೈವ. ತನ್ನ ಕ್ರೀಯಲ್ಲದಲ್ಲಿ ಮನ ಮುಟ್ಟಿ ನೆನೆದಾಗವೆ ಅದು ಅನ್ಯಾಹಾರ. ಇದಿರ ಉಪಚರಿಯಕ್ಕೆ ನಾನೊಂದು ವ್ರತವ ಹಿಡಿದು ನಡೆದೆಹೆನೆಂಬುದೆ ಪರಪಾಕದ ಪಾಕುಳ. ಇಂತಿವರಲ್ಲಿ ಮನ ಹೇಸಿ, ತನು ಕರಗಿ, ಪಕ್ಷಪಾತವೆಂಬ ಪಾತಕವ ಬಿಟ್ಟು, ನಿಶ್ಚಯದಲ್ಲಿ ನಿಂದ ವ್ರತಾಂಗಲಿಂಗಿ ಮತ್ರ್ಯರ ಸುಗುಣ ದುರ್ಗುಣವನೊಲ್ಲ, ನಿತ್ಯಾನಿತ್ಯವ ಮುಟ್ಟಿ ಮತ್ರ್ಯರ ಕರ್ಕಶವನೊಲ್ಲ. ಭಕ್ತಿಯಲ್ಲಿ ತಿಳಿದು, ಜ್ಞಾನದಲ್ಲಿ ನಿಂದು, ವೈರಾಗ್ಯದಲ್ಲಿ ಸಲೆಸಂದು- ಇಂತೀ ತ್ರಿವಿಧದಲ್ಲಿ ನಿಧಾನಿಸಿ ನಿಂದು, ಕ್ರೀಯೇ ಘಟವಾಗಿ, ಆಚಾರವೇ ಆತ್ಮವಾಗಿ, ಅನುಸರಣೆಯಿಲ್ಲದ ನಿಶ್ಚಯವೇ ನಿಜತತ್ವಕೂಟವಾಗಿ ತೊಳಗಿ ಬೆಳಗುತ್ತಿರಬೇಕು, ಏಲೇಶ್ವರಲಿಂಗದಲ್ಲಿ.
--------------
ಏಲೇಶ್ವರ ಕೇತಯ್ಯ
ಇನ್ನಷ್ಟು ... -->