ಅಥವಾ

ಒಟ್ಟು 62 ಕಡೆಗಳಲ್ಲಿ , 26 ವಚನಕಾರರು , 56 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತರ್ಕವ ನುಡಿವುದಕ್ಕೆ ಪರಸಮಯಿಯಲ್ಲ. ಕೃತ್ರಿಮ ನುಡಿವುದಕ್ಕೆ ಅಕೃತ್ಯನಲ್ಲ. ಮತ್ತೆ ಇವರ ನಿಂದಿಸುವುದಕ್ಕೆ ಬಂಧ ಮೋಕ್ಷದವನಲ್ಲ. ಇವರುವ ಅಂದಚಂದವ ಅಂತಿಂತೆಂಬುದಕ್ಕೆ ಉಭಯದ ಗೊಂದಳದವನಲ್ಲ. ಎನ್ನ ಅಂದದ ಇರವ ಕೇಳಲಿಕ್ಕೆ ನಿಮ್ಮಂಗವ ಹೇಳಿದೆನೈಸೆ. ಎನಗೆ ಎನ್ನಂಗೆ ನಿರುಪಮನ ಸಂಗ ಇನ್ನೆಂದಿಗೆ, ಎನ್ನ ಗೂಡಿನ ಒಡೆಯ ಗುಮ್ಮಟನಾಥ ಅಗಮ್ಯೇಶ್ವರಲಿಂಗ ?
--------------
ಮನುಮುನಿ ಗುಮ್ಮಟದೇವ
ಕರ್ಮೇಂದ್ರಿಯಂಗಳೈದರ ತಿರುಳನುರುಹಿ ತನ್ನನರಿಯಬಲ್ಲಾತನೇ ಶರಣ. ವಿಷಯಂಗಳೈದರ ತಿರುಳನುರುಹಿ ತನ್ನನರಿಯಬಲ್ಲಾತನೇ ಶರಣ. ಜ್ಞಾನೇಂದ್ರಿಯಗಳೈದರ ತಿರುಳನುರುಹಿ ತನ್ನನರಿಯಬಲ್ಲಾತನೇ ಶರಣ. ವಾಯುಪಂಚಕಂಗಳ ತಿರುಳನುರುಹಿ ತನ್ನನರಿಯಬಲ್ಲಾತನೇ ಶರಣ. ಕರಣ ನಾಲ್ಕೊಂದರ ತಿರುಳನುರುಹಿ ತನ್ನನರಿಯಬಲ್ಲಾತನೇ ಶರಣ. ಇಂತಲ್ಲದೆ ಇವರ ತಿರುಳಿನೊಳು ಮರುಳುಗೊಂಡುರುಳುವ ಮಾನವರು ತಾವು ಶರಣರೆಂದು ನುಡಿದು ನಡೆವ ಸಡಗರವ ಕಂಡು ನಾಚಿತ್ತೆನ್ನ ಮನವು ಗುರುನಿರಂಜನ ಚನ್ನಬಸವಲಿಂಗದಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ತೂಬರದ ಕೊಳ್ಳಿಯಂತೆ ಉರಿವಾತ ಭಕ್ತನೆ ? ಹುಸಿದು ತಂದು ಮಾಡುವಾತ ಭಕ್ತನೆ ? ಭಕ್ತರ ಕುಲವನೆತ್ತಿ ನಿಂದಿಸುವಾತ ಭಕ್ತನೆ ? ನಿಂದಯಾ ಶಿವಭಕ್ತಾನಾಂ ಕೋಟಿ ಜನ್ಮನಿ ಸೂಕರಃ | ಸಪ್ತಜನ್ಮನಿ ಭವೇತ್ ಕುಷ್ಠೀ ದಾಸೀಗರ್ಭೇಷು ಜಾಯತೇ ||' ಎಂದುದಾಗಿ, ತನ್ನ ಪ್ರಾಣದ ಮೇಲೆ ಬಂದಡೂ ಬರಲಿ, ಇವರ ಬಿಡಬೇಕು. ಬಿಡದಿರಲು ಉರಿಲಿಂಗಪೆದ್ದಿಗಳರಸನೊಲ್ಲನವ್ವಾ.
--------------
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ
ಆಗಿಲ್ಲದ ಸಿರಿ, ಆಯುಷ್ಯವಿಲ್ಲದ ಬದುಕು. ಸುಖವಿಲ್ಲದ ಸಂಸಾರ. ಎಳತಟೆಗೊಂಬ ಕಾಯದ ಸಂಗ. ಬಳಲಿಸುವ ಜೀವಭಾವ. ಇವರ ಕಳವಳವಳಿದಲ್ಲದೆ ಮಳುಬಾವಿಯ ಸೋಮನ ತಿಳಿಯಬಾರದು.
--------------
ಮಳುಬಾವಿಯ ಸೋಮಣ್ಣ
ಆಗರದಲ್ಲಿ ಅಡಕೆ ಸಣ್ಣಾದಾಗ ತೋಟದ ಎಲೆ ಉದುರಿತ್ತು. ಉದುರುವುದಕ್ಕೆ ಮೊದಲೆ ಸುಣ್ಣವ ಸುಡುವವ ಸತ್ತ. ಇವರ ಮೂವರ ಹಂಗಿಗತನ ಬಿಟ್ಟಿತ್ತು, ಬಾಯ ಹಂಬಲಿಲ್ಲದೆ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗವು ಮೂರರ ಹಂಗ ಬಿಟ್ಟ ಕಾರಣ.
--------------
ಸಗರದ ಬೊಮ್ಮಣ್ಣ
ದೂರ್ವೆಯದಳನ ಮೇಯಬಂದ ಮೊಲನ ಉರ್ವಿಯ ಕರಡಿ ತೊಡರಿಗೊಂಡಿಪ್ಪುದಯ್ಯ. ಕರಡಿಯ ಹಿಡಿದ ಬೇಡನ ಕಯ್ಯ ಕಾಡು ನಾಯಿಗಳು ನಾಡನೆಲ್ಲವ ಹರಿದು ತಿನುತಿಪ್ಪವು; ಇವರ ಗಾಢವನೇನೆಂಬೆನಯ್ಯ. ಇವರ ಗಾಢ ಗಮಕವ ಮುರಿದಾತನಲ್ಲದೆ ಲಿಂಗೈಕ್ಯನಲ್ಲ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ತುಂಬಿ ಪರಿಮಳವನುಂಡಿತೊ, ಪರಿಮಳ ತುಂಬಿಯ ನುಂಡಿತೊ ? ಲಿಂಗ ಪ್ರಾಣವಾಯಿತೊ ? ಪ್ರಾಣ ಲಿಂಗವಾಯಿತೊ ? ಗುಹೇಶ್ವರಾ, ಇವರ ಈ ಉಭಯದ ಭೇದವ ನೀನೆ ಬಲೆ
--------------
ಅಲ್ಲಮಪ್ರಭುದೇವರು
ಮಡುವಿನೊಳು ನಿಂದು ಹರಿವ ನೀರ ಮುಟ್ಟಿ ಬೇರೊಬ್ಬನ ಕೂಡ ಹಾದರವ ಮಾಡುವಳ ಕಂಡು, ಬಯಲೊಳಗೆ ನಿಂದು ಎಲ್ಲಗಳು ಅಹುದೆಂದು ಕೆಟ್ಟ ಕಣ್ಣಿನಿಂದ ಜರಿಯುತಿರ್ದನೊಬ್ಬ ಸುಳ್ಳ. ಗಾಳಿ ಮೊಟ್ಟೆಯ ಕಟ್ಟಿ ಕಾಳೋರಗನ ಹೆಡೆಯನೆತ್ತಿ ಮನೆ ಮನೆ ತಿರಿದುಂಡು ಹೋಗಿ ಬರುವನೊಬ್ಬ ಭ್ರಾಂತ. ಹೆಂಗಸು ಗಂಡಸು ಕಷ್ಟಿಗನು ಇವರ ಕಂಡು ನಗುತ ಮಾಡಿಕೊಂಡಿರ್ದ ಗುರುನಿರಂಜನ ಚನ್ನಬಸವಲಿಂಗದಲ್ಲಿ ಅಬ್ಥಿನ್ನ ಭಕ್ತ.
--------------
ದೇಶಿಕೇಂದ್ರ ಸಂಗನಬಸವಯ್ಯ
ಅಂತರಂಗದ ಅಷ್ಟಮದ ಅವಾವೆಂದರೆ ಹೇಳುವೆ ಕೇಳಿರಣ್ಣಾ : ಪೃಥ್ವಿಮದ ಸಲಿಲಮದ ಪಾವಕಮದ ಪವನಮದ ಅಂಬರಮದ ರವಿಮದ ಶಶಿಮದ ಆತ್ಮಮದವೆಂಬ ಅಷ್ಟಮೂರ್ತಿಯ ಮದಂಗಳು. ಇವರ ಗುಣಧರ್ಮಕರ್ಮವೆಂತೆಂದಡೆ, ಅದಕ್ಕೆ ವಿವರ ; ಪೃಥ್ವಿಮದವೆತ್ತಿದಲ್ಲಿ ತನುಗುಣಭರಿತನಾಗಿ, ಆಭರಣ ಅನುಲೇಪನ ತಾಂಬೂಲವಂ ಬಯಸುತ್ತಿಹನು. ಸಲಿಲಮದವೆತ್ತಿದಲ್ಲಿ ಸಂಸಾರಭರಿತನಾಗಿ, ಎನಗೆ ಬೇಕು, ಮನೆಗೆ ಬೇಕು, ಮಕ್ಕಳಿಗೆ ಬೇಕು ಎನುತಿಹನು. ಪಾವಕಮದವೆತ್ತಿದಲ್ಲಿ ಕಾಮರಸಭರಿತನಾಗಿ, ಕರಸಬೇಕು ನುಡಿಸಬೇಕು ಆಲಿಂಗಿಸಬೇಕು ಎನುತಿಹನು. ಪವನಮದವೆತ್ತಿದಲ್ಲಿ ಕೋಪಾಗ್ನಿಭರಿತನಾಗಿ, ಕೊಂದೇನು ತಿಂದೇನು ಸಾದ್ಥಿಸೇನು ಭೇದಿಸೇನು [ಎನುತಿಹನು]. ಶಶಿಮದವೆತ್ತಿದಲ್ಲಿ ಚಿಂತಾಭರಿತನಾಗಿ, ಆದೀತೊ ಆಗದೊ, ಇದ್ದೀತೊ ಇಲ್ಲವೊ ಎನುತಿಹನು. ಆತ್ಮಮದವೆತ್ತಿದಲ್ಲಿ ಅಹಂಕಾರಭರಿತನಾಗಿ, ಎನಗಿಂದು ಅದ್ಥಿಕರಿಲ್ಲ, ಎನಗಿಂದು ಇದಿರಿಲ್ಲವೆಂದು ಅಹಂಭಾವದಿಂದ ಅಹಂಕರಿಸುತ್ತಿಹನು. ಇಂತೀ ಅಷ್ಟಮೂರ್ತಿಮದಂಗಳ ಭ್ರಾಂತಿನ ಬಲೆಯೊಳಿಟ್ಟೆನ್ನನಗಲದಿರು ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಕಾಗೆಯ ತಿಂದವ ಕಮ್ಮಾರ, ಎಮ್ಮೆಯ ತಿಂದವ ಸಮಗಾರ, ಹಸುವ ತಿಂದವ ಪಶುಪತಿಯ ಶರಣ; ಇವರ ಮೂವರ ತಿಂದ ಅಂದವ ನೋಡಾ! ಇದರ ಸಂಗವಾರಿಗೂ ಅರಿದು, ನಿಸ್ಸಂಗ ನಿರ್ಲೇಪ ನಾರಾಯಣಪ್ರಿಯ ರಾಮನಾಥ.
--------------
ಗುಪ್ತ ಮಂಚಣ್ಣ
ತಾವು ಬಲ್ಲವರಾದೆವೆಂದು ಗೆಲ್ಲಸೋಲಕ್ಕೆ ಹೋರುತಿಪ್ಪರು. ಇದೆಲ್ಲವನತಿಗಳೆದ ಮತ್ತೆ ಗೆಲ್ಲಸೋಲಕ್ಕೆ ಹೋರಲೇಕೋ ? ಗೆಲ್ಲುವಂಗೆ ಸೋಲುವದೆ ಧರ್ಮ, ಸೋತ ಮತ್ತೆ ಒಲವರವಿಲ್ಲವಾಗಿ. ಜಲನದಿಯಲ್ಲಿ ಹೋಹ ಬಲುಮರನಂತೆ, ಇವರ ನೆಲೆ ಇಲ್ಲವೆಂದೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ರುದ್ರ ದೈವವಾದಡೆ ಕಪಾಲವ ಹೊತ್ತು ತಿರುಗಲೇಕೆ? ವಿಷ್ಣು ದೈವವಾದಡೆ ದಶಾವತಾರಕ್ಕೊಳಗಾಗಲೇಕೆ? ಬ್ರಹ್ಮ ದೈವವಾದಡೆ ಶಿರವ ಹೋಗಾಡಲೇಕೆ? ಇಂತೀ ಮೂರು ಅಳಿವಿಂಗೊಳಗು. ಅನಾದಿ ಚಿಚ್ಛಕ್ತಿಯ ಅಂಶೀಭೂತ ಮಾಯಿಕ ಸಂಬಂಧ ದೇಹಿಕರು; ಅವತಾರಮೂರ್ತಿಗಳಾದ ರಣಜಗದ ದೈವಂಗಳಿವರು. ಇವರ ಭೇದ ದರ್ಪಣದ ಒಳ ಹೊರಗಿನಂತಪ್ಪ ಭೇದ. ನಿಶ್ಚಯವಂತರು ತಿಳಿದು ನೋಡಿರಣ್ಣಾ, ತಿಳಿದಡೆ ಇರವು ಉದಕದೊಳಗಣ ವಿಕಾರದಂತೆ ಬಯಲೊಳಗಣ ಮರೀಚಿಯಂತೆ ಹಿಂಗದ ವಸ್ತು ನಾರಾಯಣಪ್ರಿಯ ರಾಮನಾಥನಲ್ಲಿ ಗುಣವಿರಹಿತ ಶರಣಂಗೆ.
--------------
ಗುಪ್ತ ಮಂಚಣ್ಣ
ಗುರುವಿನಲ್ಲಿ ಗುಣವನರಸಿ ಕಡಿದುಹಾಕಿದಲ್ಲಿ ಎನಗೆ ಶುದ್ಧಪ್ರಸಾದ ಸಾಧ್ಯವಾಯಿತ್ತು. ಲಿಂಗದಲ್ಲಿ ಶಿಲೆಯನರಸಿ ಸುಟ್ಟು ಬಿಸಾಟಿದಲ್ಲಿ ಎನಗೆ ಸಿದ್ಧಪ್ರಸಾದ ಸಾಧ್ಯವಾಯಿತ್ತು. ಜಂಗಮದಲ್ಲಿ ಕುಲವನರಸಿ ಕೊಂದು ಹಾಕಿದಲ್ಲಿ ಎನಗೆ ಪ್ರಸಿದ್ಧಪ್ರಸಾದ ಸಾಧ್ಯವಾಯಿತ್ತು. ಇಂತು ಇವರ ದುರ್ಗುಣ ಕಠಿಣ ಅಕುಲವನರಸದೆ ಕೊಡುಕೊಳ್ಳೆ ಸಮರಸದೊಳಿರ್ದೆನಾದಡೆ ಕಡೆಯಿಲ್ಲದ ನರಕವೆಂಬ ಶ್ರುತಿ ಗುರುಸ್ವಾನುಭಾವದಿಂದರಿದು ನೂಂಕಿ ಗುರುನಿರಂಜನ ಚನ್ನಬಸವಲಿಂಗದಲ್ಲಿ ಸಮರಸಪ್ರಸಾದಿಯಾಗಿರ್ದೆನಯ್ಯಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಲಿಂಗ ಜಂಗಮ ಪ್ರಸಾದವೆಂಬರು, ಲಿಂಗವೆಂದಡೆ ಅಂಗದೊಳಗಾಯಿತ್ತು, ಜಂಗಮವೆಂದಡೆ ಆಸೆಗೊ?ಗಾಯಿತ್ತು, ಪ್ರಸಾದವೆಂದಡೆ ವಿಷಯಕ್ಕೊಳಗಾಯಿತ್ತು_ ಇಂತೀ ತ್ರಿವಿಧವು ನಷ್ಟ ಇವರ ಮೇಲಣ ಅಂಕುರಿತವ ಬಲ್ಲ ಜಂಗಮವ ತೋರಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ನುಡಿದ ನುಡಿಗೆ ನಡೆ ಇಲ್ಲದಿದ್ದರೆ, ಮೃಡನ ಶರಣರು ಕಡೆನುಡಿದಲ್ಲದೆ ಮಾಣರು. ಎಮ್ಮ ಶರಣರು ಮತ್ತೆ ಹೊಡೆಗೆಡೆದು ಎನ್ನ ನುಡಿದು, ಹೊಡೆದು, ರಕ್ಷಿಸಿದಿರಲ್ಲ. ಎನ್ನ ಒಡೆಯರು ನೀವಹುದೆಂದು ಬಿಡದೆ ಅವರ ಬೇಡಿಕೊಂಬೆ. ಇದೀಗ ನಮ್ಮ ಶರಣರ ನಡೆನುಡಿ. ಅದಂತಿರಲಿ. ಅದಕೆ ನಮೋ ನಮೋ ಎಂಬೆ. ಈ ಪೊಡವಿಯೊಳು ಹುಟ್ಟಿದ ಮನುಜರೆಲ್ಲರು ಒಡೆಯರೆಂದು ಪೂಜೆಯಮಾಡಿ,ತುಡುಗುಣಿನಾಯಿಯಂತೆ ಒಕ್ಕುದ ಮಿಕ್ಕುದ ನೆಕ್ಕಿ, ತಮ್ಮ ಇಚ್ಛೆಗೆ ನುಡಿದರೆ ಒಳ್ಳಿದನೆಂಬರು. ಸತ್ಯವ ನುಡಿದರೆ ಸಾಯಲವನೆಲ್ಲಿಯ ಶರಣ ? ಇವನೆಲ್ಲಿಯ ಜಂಗಮ? ಇವರ ಕೂಡಿದ ಮನೆ ಹಾಳೆಂದು, ಕಂಡ ಕಂಡವರ ಕೂಡ ಹೇಳಿಯಾಡುವ, ಈ ಕಾಳುಮನುಜರನು ಲಿಂಗ ಜಂಗಮವೆಂದು ನುಡಿದು ಕೂಡಿಕೊಂಡು ಹೋದರೆ, ತನ್ನ ತನ್ನ ಪದಾರ್ಥವ ಹಿಡಿದರೆ, ಒಡೆಯನೆ ಬದುಕಿದೆ, ತ್ರಾಹಿ ಎಂಬ ಮೃಡಶರಣನು ಈ ಅಡ[ಗು] ಕಚ್ಚಿಕೊಂಡಿರುವ, ಹಡಿಕಿಮನುಜರನು ಸರಿಗಂಡಡೆ, ನಾಯಕ ನರಕದಲ್ಲಿಕ್ಕುವ, ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಇನ್ನಷ್ಟು ... -->