ಅಥವಾ

ಒಟ್ಟು 29 ಕಡೆಗಳಲ್ಲಿ , 10 ವಚನಕಾರರು , 24 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುದಸ್ಥಾನದಲ್ಲಿ ಆಧಾರಚಕ್ರ, ಅಲ್ಲಿಗೆ ಪೃಥ್ವಿಯೆಂಬ ಮಹಾಭೂತ, ಸದ್ಯೋಜಾತವಕ್ತ್ರ, ಬ್ರಹ್ಮ ಪೂಜಾರಿ, ಸುವರ್ಣದ ತೇಜ, ಬಾಲರವಿಕೋಟಿ ಪ್ರಕಾಶ, ನಾಲ್ಕೆಸಳಿನ ತಾವರೆಯ ಮಧ್ಯದಲ್ಲಿ ಸುವರ್ಣಮಯಲಿಂಗ - ಅದು ಆಚಾರಲಿಂಗ, ಅದಕ್ಕೆ ಬೀಜಾಕ್ಷಾರ ಓಂ ನಾಂ ನಾಂ ನಾಂ ಎಂಬ ನಾದಘೋಷ. ಎಸಳು ನಾಲ್ಕರಲ್ಲಿ ವ, ಶ, ಷ, ಸ ಎಂಬ ನಾಲ್ಕಕ್ಷರ. ಅದು ದೇವರಿಗೂ ತಮಗೂ ಪಶ್ಚಿಮಮುಖ- ಸದ್ಯೋಜಾತ ವಕ್ತ್ರ, ಆಧಾರಚಕ್ರ. ಲಿಂಗಸ್ಥಾನದಲ್ಲಿ ಸ್ವಾದಿಷ್ಠಾನಚಕ್ರ, ಅಲ್ಲಿಗೆ ಅಪ್ಪುವೆಂಬ ಮಹಾಭೂತ, ವಾಮದೇವವಕ್ತ್ರ, ವಿಷ್ಣು ಪೂಜಾರಿ, ನೀಲದ ತೇಜ, ಬಾಲದ್ವಿಕೋಟಿ ಸೂರ್ಯಪ್ರಕಾಶ, ಅರೆಸಳಿನ ತಾವರೆಯ ಮಧ್ಯದಲ್ಲಿ ಗೋಕ್ಷೀರದ ಹಾಗೆ ಧವಳ ವರ್ಣದ ಲಿಂಗ - ಅದು ಗುರುಲಿಂಗ; ಅದಕ್ಕೆ ಬೀಜಾಕ್ಷರ ಓಂ ಮಾಂ ಮಾಂ ಮಾಂ ಎಂಬ ನಾದಘೋಷ. ಎಸಳು ಆರರಲ್ಲಿ ಬ ಭ ಮ ಯ ರ ಲ ಎಂಬ ಷಡಕ್ಷರ ಅದು ದೇವರಿಗೂ ತಮಗೂ ಉತ್ತರಮುಖ-ವಾಮದೇವವಕ್ತ್ರ, ಸ್ವಾದಿಷ್ಠಾನಚಕ್ರ. ನಾಭಿಸ್ಥಾನದಲ್ಲಿ ಮಣಿಪೂರಕಚಕ್ರ, ಅಲ್ಲಿಗೆ ಅಗ್ನಿಯೆಂಬ ಮಹಾಭೂತ, ಅಘೋರವಕ್ತ್ರ ರುದ್ರ ಪೂಜಾರಿ, ಮಾಣಿಕ್ಯತೇಜ, ಬಾಲತ್ರಿಕೋಟಿಸೂರ್ಯಪ್ರಕಾಶ, ಹತ್ತೆಸಳಿನ ತಾವರೆಯ ಮಧ್ಯದಲ್ಲಿ ಮಾಣಿಕ್ಯವರ್ಣದ ಲಿಂಗ-ಅದು ಶಿವಲಿಂಗ, ಅದಕ್ಕೆ ಬೀಜಾಕ್ಷರ ಓಂ ಶಿಂ ಶಿಂ ಶಿಂ ಎಂಬ ನಾದಘೋಷ. ಎಸಳು ಹತ್ತರಲ್ಲಿ ಡ, ಢ, ಣ, ತ, ಥ, ದ, ಧ, ನ, ಪ, ಫ ಎಂಬ ದಶಾಕ್ಷರ. ಅದು ದೇವರಿಗೂ ತಮಗೂ ದಕ್ಷಿಣಮುಖ - ಅಘೋರವಕ್ತ್ರ, ಮಣಿಪೂರಕಚಕ್ರ. ಹೃದಯ ಸ್ಥಾನದಲ್ಲಿ ಅನಾಹತಚಕ್ರ, ಅಲ್ಲಿಗೆ ವಾಯುವೆಂಬ ಮಹಾಭೂತ, ತತ್ಪುರುಷವಕ್ತ್ರ, ಈಶ್ವರ ಪೂಜಾರಿ ಕಪೋತವರ್ಣದ ತೇಜ, ಬಾಲಚತುಷ್ಕೋಟಿ ಸೂರ್ಯಪ್ರಕಾಶ, ಹನ್ನೆರಡೆಸಳಿನ ತಾವರೆಯ ಮಧ್ಯದಲ್ಲಿ ಶುದ್ಧ ಪಚ್ಚವರ್ಣದಲಿಂಗ-ಅದು ಜಂಗಮಲಿಂಗ, ಅದಕ್ಕೆ ಬೀಜಾಕ್ಷರ ಓಂ ವಾಂ ವಾಂ ವಾಂ ಎಂಬ ನಾದಘೋಷ. ಎಸಳು ಹನ್ನೆರಡರಲ್ಲಿ ಕ ಖ ಗ ಘ ಙ ಚ ಛ ಜ ಝ ಞ ಟಂಠ ಎಂಬ ದ್ವಾದಶಾಕ್ಷರ ಅದು ದೇವರಿಗೂ ತಮಗೂ ಪೂರ್ವಮುಖ-ತತ್ಪುರುಷ ವಕ್ತ್ರ, ಅನಾಹತ ಚಕ್ರ. ಕÀಠಸ್ಥಾನದಲ್ಲಿ ವಿಶುದ್ಧಿಚಕ್ರ, ಅಲ್ಲಿಗೆ ಆಕಾಶವೆಂಬ ಮಹಾಭೂತ, ಈಶಾನವಕ್ತ್ರ, ಸದಾಶಿವ ಪೂಜಾರಿ, ವಿದ್ಯುಲ್ಲತೆಯ ತೇಜ, ಬಾಲಪಂಚಕೋಟಿ ಸೂರ್ಯಪ್ರಕಾಶ, ಹದಿನಾರೆಸಳಿನ ತಾವರೆಯ ಮಧ್ಯದಲ್ಲಿ ಅನಂತಕೋಟಿ ಮಿಂಚುಗಳ ವರ್ಣದ ಲಿಂಗ_ ಅದು ಪ್ರಸಾದಲಿಂಗ, [ಓಂ ಯಾಂ ಯಾಂ ಯಾಂ ಎಂಬ ನಾದಘೋಷ]. ಎಸಳು ಹದಿನಾರರಲ್ಲಿ ಅ ಆ ಇ ಈ ಉ ಊ ಋ Iೂ ಏ ಐ ಓ ಔ ಅಂ ಅಃ ಎಂಬ ಷೋಡಶಾಕ್ಷರ. ಅದು ದೇವರಿಗೂ ತಮಗೂ ಊಧ್ರ್ವಮುಖ_ ಈಶಾನವಕ್ತ್ರ, ವಿಶುದ್ಧಿಚಕ್ರ. ಭ್ರೂಮಧ್ಯದಲ್ಲಿ ಆಜ್ಞಾಚಕ್ರ, ಅಲ್ಲಿಗೆ ಮನವೆಂಬ ಮಹಾಭೂತ, ಶ್ರೀಗುರುವೆ ವಕ್ತ್ರ ಮಾಹೇಶ್ವರ ಪೂಜಾರಿ, ಜ್ಯೋತಿರ್ವರ್ಣದ ತೇಜ. ಬಾಲಷಟ್ಕೋಟಿ ಸೂರ್ಯಪ್ರಕಾಶ ಎರಡೆಸಳಿನ ತಾವರೆಯ ಮಧ್ಯದಲ್ಲಿ ಶ್ರೀಗುರುವಿನ ಶ್ರೀಪಾದದ ವರ್ಣದ ಲಿಂಗ ಎಡಗಡೆಯ ಪಾದ ಕೆಂಪು ವರ್ಣ, ಬಲಗಡೆಯ ಪಾದ ಶ್ವೇತವರ್ಣ-ಅದು ಮಹಾಲಿಂಗ. ಅದಕ್ಕೆ ಬೀಜಾಕ್ಷರ `ಓಂಕಾರನಾದ ಘೋಷ. ಎಸಳೆರಡರಲ್ಲಿ ಅಕ್ಷರ ಹಂ ಸಂ ಎಂಬ [ಎರಡಕ್ಷರ] ಅದು ದೇವರಿಗೂ ತನಗೂ ಗಂಭೀರ ಮುಖ-ಶ್ರೀಗುರುವಕ್ತ್ರ, ಆಜ್ಞಾಚಕ್ರ. ಅಲ್ಲಿಂದತ್ತ ಬ್ರಹ್ಮರಂಧ್ರದಲ್ಲಿ ಬ್ರಹ್ಮಚಕ್ರ ಅಲ್ಲಿಗೆ ಚಂದ್ರನೆಂಬ ಮಹಾಭೂತ, ಲಿಂಗವಕ್ತ್ರ ಪರಮೇಶ್ವರ ಪೂಜಾರಿ, ಮಹಾಜ್ಯೋತಿರ್ವರ್ಣದ ತೇಜ, ಬಾಲ ಅನಂತಕೋಟಿಸೂರ್ಯಪ್ರಕಾಶ ಒಂದುನೂರ ಎಂಟು ಸಾವಿರೆಸಳಿನ ತಾವರೆಯ ಮಧ್ಯದಲ್ಲಿ ಮಹಾಜ್ಯೋತಿರ್ವರ್ಣದ ಲಿಂಗ. ಅದು ನಿರಾಮಯ ಲಿಂಗ, ಅದಕ್ಕೆ ಬೀಜಾಕ್ಷರ ಪ್ರಣವ ನಾದ ಘೋಷ, ಎಸಳೊಂದುನೂರ ಎಂಟು ಸಾವಿರದಲ್ಲಿ, ಒಂದನೂರ ಎಂಟು ಸಾವಿರ ಅಕ್ಷರ_ ಪ್ರೇತಾಸನ ವಿಶ್ವತೋಮುಖೋ ಬ್ರಹ್ಮಚಕ್ರ. ವಿಶ್ವತಶ್ಚಕ್ಷುರುತ ವಿಶ್ವತೋ ಮುಖೋ ವಿಶ್ವತೋ ಬಾಹುರುತ ವಿಶ್ವತಃ ಪಾತ್ ಸಂ ಬಾಹ್ಯಭ್ಯಾಂ ಧಮತಿ ಸಂಪತತ್ರೈ ದ್ರ್ಯಾವಾ ಭೂಮೀ ಜನಯನ್ ದೇವ ಏಕಃ ಇಂತೀ ಗುರುವಿನ ಬೆಳಗು ವಿಶ್ವವನ್ನಪಹರಿಸಿ, ತಾನು ತಾನೆ ಸೋಹಂ ಪ್ರಕಾಶ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಆಧಾರಾದಿ ಷಡುಚಕ್ರಂಗಳು ಇವಕ್ಕೆ ವಿವರ: ಆಧಾರಸ್ಥಾನದಲ್ಲಿ ಚತುರ್ದಳ ಪದ್ಮವಿಹುದು ಅದು ಸುವರ್ಣವರ್ಣ ಅದಕ್ಕೆ ಅಕ್ಷರ ವಶಷಸ ಎಂಬ ನಾಲ್ಕಕ್ಷರ, ಅಧಿದೈವ ಬ್ರಹ್ಮನು. ಸ್ವಾಧಿಷ್ಠಾನ ಸ್ಥಾನದಲ್ಲಿ ಷಡ್ದಳ ಪದ್ಮವಿಹುದು, ಅದು ಕಪ್ಪುವರ್ಣ ಅದಕ್ಕೆ ಅಕ್ಷರ ಬಭಮಯರಲ ಎಂಬ ಷಡಕ್ಷರ, ವಿಷ್ಣು ಅಧಿದೈವ. ಮಣಿಪೂರದ ಸ್ಥಾನದಲ್ಲಿ ದಶದಳ ಪದ್ಮವಿಹುದು, ಅದು ಕೆಂಪುವರ್ಣ ಅದಕ್ಕೆ ಅಕ್ಷರ ಡಢಣ ತಥದಧನ ಪಫ ಎಂಬ ದಶ ಅಕ್ಷರ, ರುದ್ರನಧಿದೈವ. ಅನಾಹತಸ್ಥಾನದಲ್ಲಿ ದ್ವಾದಶದಳದ ಪದ್ಮವಿಹುದು, ಅದು ನೀಲವರ್ಣ, ಅದಕ್ಕೆ ಅಕ್ಷರ ಕಖಗಘಙ ಚ ಛ ಜಝಞ ಠ ಎಂಬ ದ್ವಾದಶ ಅಕ್ಷರ ಅದಕ್ಕೆ ಮಹೇಶ್ವರ ಅಧಿದೈವ. ವಿಶುದ್ಧಿಸ್ಥಾನದಲ್ಲಿ ಷೋಡಶದಳ ಪದ್ಮವಿಹುದು, ಅದು ಸ್ಪಟಿಕವರ್ಣ ಅದಕ್ಕೆ ಅಕ್ಷರ ಅ ಆ ಇ ಈ ಉ ಊ ಋ ಋೂ ಎ ಏ ಐ ಒ ಓ ಔ ಅಂ ಅಃ ಎಂಬ ಷೋಡಶಾಕ್ಷರ, ಅದಕ್ಕೆ ಸದಾಶಿವ ಅಧಿದೈವ. ಆಜ್ಞಾಸ್ಥಾನದಲ್ಲಿ ದ್ವಿದಳದ ಪದ್ಮವಿಹುದು. ಅದು ಮಾಣಿಕ್ಯವರ್ಣ, ಅದಕ್ಕೆ ಅಕ್ಷರ `ಹಕ್ಷ ಎಂಬ ದ್ವಯಾಕ್ಷರ. ಅದಕ್ಕೆ ಮಹಾಶ್ರೀಗುರು ಅಧಿದೈವ. ಅಲ್ಲಿಂದ ಮೇಲೆ ಬ್ರಹ್ಮರಂಧ್ರಸ್ಥಾನದಲ್ಲಿ ಸಹಸ್ರದಳ ಪದ್ಮವಿಹುದು. ಅದು ಹೇಮವರ್ಣ ಅಲ್ಲಿಗೆ ಓಂಕಾರವೆಂಬ ಅಕ್ಷರ ಪರಂಜ್ಯೋತಿ ಪರಬ್ರಹ್ಮ ಅದು ಅನಂತಕೋಟಿ ಸೂರ್ಯಪ್ರಕಾಶವಾಗಿ ಬೆಳಗುತ್ತಿಹುದು. ಅಲ್ಲಿಗೆ ಅಧಿದೈವ ಶ್ರೀಗುರು ಮೂರ್ತಿಯೇ ಕರ್ತನು. ಇಂತೀ ಷಟ್ ಚಕ್ರಂಗಳಂ ತಿಳಿದು ಪರತತ್ವದಲ್ಲಿ ಇರಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಶರಣನೆನಿಸುವನು.
--------------
ಚನ್ನಬಸವಣ್ಣ
ಹೋಗುವ ಬನ್ನಿರಯ್ಯ ; ಶಕ್ತಿಪಾತವಾದ ಶಿವಯೋಗೀಶ್ವರರು ಶಿವಭಕ್ತರು ಹೋಗುವ ಬನ್ನಿರಯ್ಯ. ಸುಕ್ಷೇತ್ರದಲ್ಲಿರ್ಪ ಮಹಲಿಂಗದರುಶನಕೆ ಹೋಗುವ ಬನ್ನಿರಯ್ಯ. ಜೀವಸಂಚಾರವೆಂಬ ಪ್ರಾಕೃತವೆನಿಸುವ ಅಧೋಕುಂಡಲಿಸ್ವರೂಪಮಾದ ಅಹಂ ಎಂಬ ಹೆಬ್ಬಟ್ಟೆಯಂ ಬಿಟ್ಟು, ಸಜ್ಜೀವವೆಂಬ ವೈಕೃತವೆನಿಸುವ ಮಧ್ಯಕುಂಡಲಿಸ್ವರೂಪಮಾದ ಸೋಹಮೆಂಬ ಸಣ್ಣಬಟ್ಟೆಯ ಹಿಡಿದು ಹೋಗುವ ಬನ್ನಿರಯ್ಯ ಮಹಲಿಂಗದರುಶನಕೆ. ಕೇವಲ ಶಿವಯೋಗವೆಂಬ ಏಕವೆನಿಸುವ ಊಧ್ರ್ವಕುಂಡಲಿಸ್ವರೂಪಮಾದ ಓಂ ಎಂಬ ನುಸುಳುಗಂಡಿಯಂ ನುಸಿದು ಹೋಗುವ ಬನ್ನಿರಯ್ಯ ಮಹಲಿಂಗದರುಶನಕೆ. ದ್ವಯಮಂಡಲವ ಭ್ರೂಮಧ್ಯವೆಂಬ ಮಹಾಮೇರುವ ಮಧ್ಯದಲ್ಲಿ ಏಕಮಂಡಲಾಕಾರ ಮಾಡಿ, ಆ ಕಮಲಮಧ್ಯದಲ್ಲಿ ಮೂರ್ತಿಗೊಂಡಿಪ್ಪ ಮಹಾಲಿಂಗದಲ್ಲಿ ಜೀವಪರಮರಿಬ್ಬರನೇಕಾರ್ಥವಂ ಮಾಡಿ, ಶಾಂಭವೀಮುದ್ರಾನುಸಂಧಾನದಿಂದೆ ಅಧೋಮುಖಕಮಲವೆಲ್ಲ ಊಧ್ರ್ವಮುಖವಾಗಿ, ಆ ಮಹಾಲಿಂಗವ ನೋಡುತಿರಲು ಆ ಕಮಲಸೂತ್ರವಿಡಿದಿಹ ಷಡಾಧಾರಚಕ್ರಂಗಳ ಊಧ್ರ್ವಮುಖವಾಗಿ ಆ ಕಮಲದಲ್ಲಿ ಅಡಗಿ, ಆ ಕಮಲದ ಎಸಳು ಐವತ್ತೆರಡಾಗಿ ಎಸೆವುತಿರ್ಪವು. ಪರಿಪೂರ್ಣ ಜ್ಞಾನದೃಷ್ಟಿಯಿಂ ಆ ಮಹಾಲಿಂಗಮಂ ನಿರೀಕ್ಷಿಸಲು ಆ ಕಮಲದಲ್ಲಿ ಮಹಾಲಿಂಗಸ್ವರೂಪಮಾಗಿ ಸಕಲ ಕರಣೇಂದ್ರಿಯಂಗಳು ಆ ಮಹಾಲಿಂಗದಲ್ಲಿಯೆ ಅಡಗಿ, ಸುನಾದಬ್ರಹ್ಮವೆಂಬ ಇಷ್ಟವೆ ಮಹಾಲಿಂಗವೆಂದರಿದು ನೋಡುತ್ತಿರಲು, ಜ್ಯೋತಿರ್ಮಯವಾಗಿ ಕಾಣಿಸುತಿಪ್ಪುದು. ಅದೇ ಜೀವಪರಮರೈಕ್ಯವು ; ಅದೇ ಲಿಂಗಾಂಗಸಂಬಂಧವು. ಆ ಮಹಾಲಿಂಗದ ಕಿರಣಂಗಳೆ ಕರಣಂಗಳಾಗಿ ಆ ಕಮಲವು ಅಧೋಮುಖವಾಗಿ ಆ ಮಹಾಲಿಂಗವು ತನ್ನ ನಿಜನಿವಾಸವೆನಿಸುವ `ಅಂತರೇಣ ತಾಲುಕೇ' ಎಂಬ ಶ್ರುತಿ ಪ್ರಮಾಣದಿ ತಾಲುಮೂಲದ್ವಾದಶಾಂತವೆಂಬ ಬ್ರಹ್ಮರಂಧ್ರದ ಮಧ್ಯದಲ್ಲಿ ಪ್ರಕಾಶಿಸುತ್ತಿರ್ಪುದೊಂದು ಶಿವಚಕ್ರವು. ಆ ಶಿವಚಕ್ರವೆ ಶಿವಲೋಕವೆನಿಸುವುದು. ಆ ಶಿವಲೋಕವೆ ಶಾಂಭವಲೋಕವೆನಿಸುವುದು. ಶಾಂಭವಲೋಕವೆ ಶಾಂಭವಚಕ್ರವೆನಿಸುವುದು. ಆ ಶಾಂಭವಚಕ್ರದಲ್ಲಿ ಆಧಾರವಾದಿ ಪಶ್ಚಿಮಾಂತ್ಯವಾದ ನವಚಕ್ರಂಗಳು ಸಂಬಂಧವಾಗಿರುತಿರ್ಪವು. ಅದು ಹೇಗೆಂದೊಡೆ ; ಆ ಶಾಂಭವಚಕ್ರಮಧ್ಯದ ಚತುರ್ದಳಾಗ್ರದಲ್ಲಿ ಅಗ್ನಿಮಂಡಲದಲ್ಲಿ ಅಷ್ಟದಳ ಇರ್ಪುವು. ಆ ಅಷ್ಟದಳ ಚತುರ್ದಳದಲ್ಲಿ `ವಶಷಸ' ಎಂಬ ನಾಲ್ಕಕ್ಷರಯುಕ್ತವಾದ ಆಧಾರಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿ `ನ' ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ತಾರಕಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಗ್ನಿಮಂಡಲದ ಚತುರ್ದಳದ ಈಶಾನ್ಯ ದಳದಲ್ಲಿ `ಬ ಭ ಮ ಯ ರ ಲ' ಎಂಬ ಆರಕ್ಷರಯುಕ್ತವಾದ ಸ್ವಾದ್ಥಿಷ್ಠಾನಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಮ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದಂಡಕಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಷ್ಟದಳಾಗ್ರದಲ್ಲಿ ಸೂರ್ಯಮಂಡಲವಿರ್ಪುದು. ಆ ಸೂರ್ಯಮಂಡಲದಲ್ಲಿ `ಡಢಣ ತಥದಧನ ಪಫ' ಎಂಬ ದಶಾಕ್ಷರಯುಕ್ತವಾದ ಮಣಿಪೂರಕಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಶಿ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ಕುಂಡಲಾಕೃತಿಯಲ್ಲಿ ಸಂಬಂಧವಾಗಿರ್ಪುದು. `ಕಖಗಘಙ ಚಛಜಝಞ ಟಠ' ಎಂಬ ದ್ವಾದಶಾಕ್ಷರಯುಕ್ತವಾದ ಅನಾಹತಚಕ್ರವು ಸೂರ್ಯಮಂಡಲದಲ್ಲಿ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ವ'ಕಾರವು ಆ ಮಹಾಲಿಂಗಸ್ವರೂಪವಾದಪ್ರಣವದ ಅರ್ಧಚಂದ್ರಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಅಷ್ಟದಳದಮಧ್ಯದಲ್ಲಿ ಚಂದ್ರಮಂಡಲವಿರ್ಪುದು. ಆ ಚಂದ್ರಮಂಡಲದಲ್ಲಿ- `ಅ ಆ ಇ ಈ ಉ ಊ ಋ Iೂ ಲೃ ಲೂೃ ಏ ಐ ಓ ಔ ಅಂ ಅಃ' ಎಂಬ ಷೋಡಶಾಕ್ಷರಯುಕ್ತವಾದ ವಿಶುದ್ಧಿಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಯ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದರ್ಪಣಾಕೃತಿಯಲ್ಲಿ ಸಂಬಂಧವಾಗಿರ್ಪುದು. ಆ ಮಹಾಲಿಂಗಕ್ಕೆ ಪೀಠಮಾಗಿರ್ದ ಬಿಂದುಯುಕ್ತಮಾದ ಪ್ರಣವವು ಆ ಮಹಾಲಿಂಗದ ಮುಂದಿರ್ದ `ಹಂ ಳಂ ಹಂ ಕ್ಷಂ' ಎಂಬ ಚುತವರ್ಣಾಕ್ಷರಯುಕ್ತವಾದ ಆಜ್ಞಾಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ ಓಂಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ಜ್ಯೋತಿರಾಕೃತಿಯಲ್ಲಿ ಸಂಬಂಧವಾಗಿರ್ಪುದು. ಚತುರ್ದಳವು ತ್ರಿದಳದಲ್ಲಿ ಕ್ಷ ಉ ಸ ಎಂಬ ತ್ರಯಕ್ಷರಯುಕ್ತವಾದ ಶಿಖಾಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿ `ಕ್ಷ' ಕಾರವು ಆ ಮಹಾಲಿಂಗಸ್ವರೂಪವಾದ ಕುಂಡಲಾಕೃತಿ ಅರ್ಧಚಂದ್ರಾಕೃತಿಗಳಲ್ಲಿ ಸಂಬಂಧವಾಗಿರ್ಪುದು. ಆ ಚತುರ್ದಳದ ಮಧ್ಯದಲ್ಲಿ ಬಟುವೆ ಏಕದಳವೆನಿಸಿಕೊಂಬುದು. ಆ ಏಕದಳದಲ್ಲಿ ಪಶ್ಚಿಮಚಕ್ರ ಸಂಬಂಧವಾಗಿರ್ಪುದು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ `ಹ್ರಾಂ'ಕಾರವು ಆ ಮಹಾಲಿಂಗಸ್ವರೂಪವಾದ ಪ್ರಣವದ ದರ್ಪಣಾಕೃತಿ ಜ್ಯೋತಿರಾಕೃತಿಗಳಲ್ಲಿ ಸಂಬಂಧವಾಗಿರ್ಪುದು. ಹೀಂಗೆ ಅಷ್ಟಚಕ್ರಂಗಳ ತನ್ನೊಳಗೆ ಗಬ್ರ್ಥೀಕರಿಸಿಕೊಂಡು ಬೆಳಗುತ್ತಿರ್ಪುದೊಂದು ಬ್ರಹ್ಮರಂಧ್ರಚಕ್ರವು. ಆ ಚಕ್ರದ ಕರ್ಣಿಕಾಮಧ್ಯದಲ್ಲಿರ್ಪ ಹ್ರೀಂ ಕಾರಗಳು. ಆ ಹರದನಹಳ್ಳಿಯ ಪ್ರಭುಲಿಂಗಗುರುಸ್ವಾಮಿಯ ಶಿಷ್ಯರು ನಿಜಾನಂದ ಗುರುಚೆನ್ನಯ್ಯನವರು. ಆ ನಿಜಾನಂದ ಗುರುವಿನ [ಶಿಷ್ಯರು] ಗುರುಸಿದ್ಧವೀರೇಶ್ವರದೇವರು. ಆ ಸಿದ್ಧವೀರೇಶ್ವರದೇವರ ಕರಕಮಲದಲ್ಲಿ ಉದಯವಾದ ಬಾಲಸಂಗಯ್ಯನು ನಾನು. ಆ ನಿರಂಜನ ಗುರುವೆ ತಮ್ಮ ಕೃಪೆಯಿಂದ ತಮ್ಮಂತರಂಗದಲ್ಲಿರ್ದ ಅತಿರಹಸ್ಯವಾದ ಶಾಂಭವಶಿವಯೋಗವೆಂಬ ಮಹಾಜ್ಞಾನೋಪದೇಶಮಂ ಹರಗುರು ವಾಕ್ಯಪ್ರಮಾಣಿನಿಂ ಎನ್ನ ಹೃದಯಕಮಲದಲ್ಲಿ ಕರತಳಾಮಳಕದಂತೆ ತೋರಿ, ಆ ಹೃದಯಕಮಲಕರ್ಣಿಕಾಮಧ್ಯದಲ್ಲಿರ್ಪ ನಿರಂಜನಗುರುವೆ ನಿರಂಜನಮಹಾಲಿಂಗವೆಂದರಿದು ಆ ನಿರಂಜನಮಹಾಲಿಂಗವೆ ಕರಸ್ಥಲದಲ್ಲಿರ್ಪ ಸುನಾದಬ್ರಹ್ಮವೆಂಬ ಇಷ್ಟಲಿಂಗವೆಂದರಿದು, ಆ ಕರಸ್ಥಲದಲ್ಲಿರ್ಪ ಇಷ್ಟಲಿಂಗವೆ ತಾನೆಂದರಿದು ``ಮಂತ್ರಮಧ್ಯೇ ಭವೇತ್‍ಲಿಂಗಂ ಲಿಂಗಮಧ್ಯೇ ಭವೇತ್‍ಮಂತ್ರಂ | ಮಂತ್ರಲಿಂಗದ್ವಯಾದೇಕಂ ಇಷ್ಟಲಿಂಗಂತು ಶಾಂಕರಿ ||' ಎಂದುದಾಗಿ, ಎನ್ನ ಹೃತ್ಕಮಲಕರ್ಣಿಕಾಮಧ್ಯದಲ್ಲಿ ಶಾಂಭವೀಮುದ್ರಾನುಸಂಧಾನದಿಂದ ಆ ಲಿಂಗವೆ ಮಂತ್ರ, ಮಂತ್ರವೆ ಲಿಂಗವೆಂದರಿದು ಓಂ ಓಂ ಎಂದು ಶಿವಸಮಾದ್ಥಿಯ ಜಪಮಂ ಜಪಿಸುತ್ತ ಜ್ಯೋತಿರ್ಲಿಂಗಮಂ ಕೇಳುತ, ಜ್ಯೋತಿರ್ಲಿಂಗದೊಳು ಮುಳುಗಾಡುತ್ತಿರ್ದೆನಯ್ಯಾ ಬಸವಣ್ಣಪ್ರಿಯ ಚೆನ್ನಸಂಗಯ್ಯನೆಂಬ ಗುರುವಿನ ಕೃಪೆಯಿಂದ, ನಿಮ್ಮ ಶರಣರ ಪಡುಗ ಪಾದರಕ್ಷೆಯ ಹಿಡಿವುದಕ್ಕೆ ಯೋಗ್ಯನಾದೆನಯ್ಯ ನಿಮ್ಮ ಕೃಪೆಯಿಂದ.
--------------
ಭಿಕ್ಷದ ಸಂಗಯ್ಯ
ಇನ್ನು ಆ ಆದಿ ಉಕಾರ ಪ್ರಣವ, ಆದಿ ಮಕಾರ ಪ್ರಣವ, ಆದಿ ಅಕಾರಪ್ರಣವ- ಈ ಮೂರು ಪ್ರಣವಂಗಳು ಸಂಯುಕ್ತವಾಗಿ, ಅಖಂಡ ಮಹಾಜ್ಯೋತಿರ್ಮಯವಾಗಿಹ ಪರಮೋಂಕಾರ ಉತ್ಪತ್ಯವಾಯಿತ್ತು. ಅದೆಂತೆಂದೊಡೆ : ಆ ಆದಿ ಉಕಾರಪ್ರಣವ, ಆದಿ ಮಕಾರಪ್ರಣವ, ಆದಿ ಅಕಾರಪ್ರಣವ-ಈ ಮೂರು ಬೀಜಾಕ್ಷರ. ಆದಿ ಉಕಾರಪ್ರಣವವೇ ಆದಿ ಬಿಂದುಪ್ರಣವ. ಆದಿ ಮಕಾರಪ್ರಣವವೇ ಆದಿ ಕಲಾಪ್ರಣವ. ಆದಿ ಅಕಾರಪ್ರಣವವೇ ಆದಿ ನಾದಪ್ರಣವ. ಆದಿ ಉಕಾರಪ್ರಣವವೇ ಸ್ವಯಂಭುಲಿಂಗ. ಆದಿ ಮಕಾರಪ್ರಣವವೇ ಶಿವತತ್ವ. ಆದಿ ಅಕಾರಪ್ರಣವವೇ ಗುರುತತ್ವ. ಇದಕ್ಕೆ ಈಶ್ವರ ಉವಾಚ : ``ಅಕಾರಂ ಗುರುತತ್ವಂ ಚ ಉಕಾರಂ ಲಿಂಗತತ್ವಕಂ | ಮಕಾರಂ ಶಿವತತ್ವಂ ಚ ಇತಿ ಭೇದೋ ವರಾನನೇ || '' ಇಂತೆಂದುದಾಗಿ, ಆ ಆದಿ ಉಕಾರಪ್ರಣವಕ್ಕೆ ಆದಿ ಬಿಂದುಪ್ರಣವವೇ ಆಧಾರ. ಆದಿ ಮಕಾರಪ್ರಣವಕ್ಕೆ ಆದಿ ಕಲಾಪ್ರಣವವೇ ಆಧಾರ. ಆದಿ ಅಕಾರಪ್ರಣವಕ್ಕೆ ಆದಿ ನಾದಪ್ರಣವವೇ ಆಧಾರ. ಆ ಆದಿ ಬಿಂದುಪ್ರಣವ, ಆದಿ ಕಲಾಪ್ರಣವ, ಆದಿ ನಾದಪ್ರಣವಕ್ಕೆ ಆ ಆದಿ ಪ್ರಕೃತಿಪ್ರಣವಕ್ಕೆ ಆ ಆದಿ ಪ್ರಾಣಮಾತ್ರೆಪ್ರಣವವೆ ಆಧಾರ. ಆ ಪ್ರಾಣಮಾತ್ರೆಪ್ರಣವಕ್ಕೆ ಅಖಂಡ ಮಹಾಜ್ಯೋತಿರ್ಮಯ ಲಿಂಗವೇ ಆಧಾರ. ಉ ಎಂಬ ಆದಿಬಿಂದುಪ್ರಣವವು, ಮ ಎಂಬ ಆದಿಕಲಾಪ್ರಣವವು [ಅಎಂಬ ಆದಿ ನಾದಪ್ರಣವವು] ಸಂಯುಕ್ತವಾಗಿ ಅಖಂಡ ಮಹಾಜ್ಯೋತಿರ್ಮಯವಾಗಿಹ ಪರಮೋಂಕಾರವಾಯಿತ್ತು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಮತ್ತಮೀ ಷೋಡಶ ಸ್ವರಮೂರ್ತಿ ವಿವರಮೆಂ[ತೆ]ನೆ- ಅ ಶ್ರೀಕಂಠಂ, ಆ ಅನಂತಂ,[ಇ] ಸೂಕ್ಷ್ಮಂ, ಈ ತ್ರಿಮೂರ್ತಿ, ಉ ಅಮರೇಶ್ವರಂ, ಊ ದಿರ್ಘೇಶಂ, ಋ ಭಾರಭೂತಿ, Iೂ ಅತಿದೇಶಂ ಒ ಸ್ಥಾಣುಕಂ, ಓ ಧರಂ, ಏ ಝಂಡೇಶ, ಐ ಜಾತಕ. ಓ ಸದ್ಯೋಜಾತಂ, ಔ ಅನುಗ್ರಹೇಶ್ವರಂ, ಅಂ ಅಕ್ರೂರಂ, ಅಃ ಮಹಾಸೇನಂ. ಇಂತೀ ಮಹಾಲಿಂಗದೂಧ್ರ್ವಪಟ್ಟಿಕಾಖ್ಯ ವಿಶುದ್ಧಿ ಚಕ್ರಕೋಷ*ದಳ ನ್ಯಸ್ತ ಷೋಡಶಸ್ವರ ವಾಚ್ಯರಾದ ರುದ್ರರಿವರೆಂದು ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಆದಿ ಅಕಾರ ಪ್ರಣವಕ್ಕೆ ಆದಿ ನಾದಪ್ರಣವವೇ ಆಧಾರ. ಆದಿ ಉಕಾರಪ್ರಣವಕ್ಕೆ ಆದಿ ಬಿಂದುಪ್ರಣವವೇ ಆಧಾರ. ಆದಿ ಮಕಾರಪ್ರಣವಕ್ಕೆ ಆದಿ ಕಲಾಪ್ರಣವವೇ ಆಧಾರ. ಆ ಆದಿ ನಾದಬಿಂದುಕಲಾಪ್ರಣವಣಕ್ಕೆ ಆ ಆದಿ ಪ್ರಕೃತಿಪ್ರಣವವೇ ಆಧಾರ. ಆ ಆದಿ ಪ್ರಕೃತಿಪ್ರಣವಕ್ಕೆ ಆ ಆದಿ ಪ್ರಾಣಮಾತ್ರೆಯ ಪ್ರಣವವೇ ಆಧಾರ. ಆ ಆದಿ ಪ್ರಾಣಮಾತ್ರೆಯ ಪ್ರಣವಕ್ಕೆ ಆ ಅಖಂಡಜ್ಯೋತಿರ್ಮಯಲಿಂಗವೇ ಆಧಾರ. ಆದಿ ಅ ಎಂದರೆ ಆದಿ ಅನಾಹತಪ್ರಣವ, ಆದಿ ಉ ಎಂದರೆ ಆದಿ ನಾದ ಪ್ರಣವವಳಿಯಿತ್ತು. ಆದಿ ಮ ಎಂಬ ಪ್ರಣವದಲ್ಲಿ ಆದಿ ಬಿಂದುಪ್ರಣವ ಬಂದು ಕೂಡಲು ಅಖಂಡ ಜ್ಯೋತಿರ್ಮಯವಾಗಿಹ ಗೋಳಕಾಕಾರಪ್ರಣವವಾಯಿತ್ತು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಮತ್ತಂ ಶಿವಷಟ್ಚಕ್ರನಿರೂಪಣಾನಂತರದಲ್ಲಿ ಶಕ್ತಿ ಷಟ್ಚಕ್ರಗಳೆಂತನೆ- ಪಿಂದಣೈವತ್ತೊಂದು ರುದ್ರವಾಚ್ಯಬೀಜಂಗಳೆ ಶಕ್ತಿ ಬೀಜಂಗಳಿವಕ್ಕೆ ವಿವರಂ. ಆ ಪೂರ್ಣೋದರಿ ಆ ರಿಜೆ ಇ ಶಾಲ್ಮಲಿ ಈ ಲೋಲಾಕ್ಷಿ ಉ ವರ್ತುಲಾಕ್ಷಿ ಊ ದೀರ್ಘಘೋಣೆ ಋ ದೀರ್ಘಮುಖಿ Iೂ ಗೋಮುಖಿ ಒ ದೀರ್ಘಜಿಹ್ವಾ ಓ ಕುಂಡೋದರಿ ಏ ಊಧ್ರ್ವಕೇಶಿ ಐ ವಿಕೃತಮುಖಿ ಓ ಜ್ವಾಲಾಮುಖಿ ಔ ಉಲ್ಕಮುಖಿ ಅಂ ಶ್ರೀಮುಖಿ ಅಃ ವಿದ್ಯಾಮುಖಿ ಇಂತೀ ಮಹಾಲಿಂಗದ ಶಕ್ತಿಯೂಧ್ರ್ವಪಟ್ಟಿಕಾಖ್ಯ ವಿಶುದ್ಧಿಚಕ್ರದ ಷೋಡಶಕೋಷ*ದಳ ನ್ಯಸ್ತ ಷೋಡಶರುದ್ರಶಕ್ತಿಯರಂ ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಬಳಿಕ್ಕಮೀ ಚಕ್ರಸ್ಥ ವರ್ನಂಗಳ್ಗೆ ವರ್ಗಭೇದಮುಂಟದೆಂತೆನೆ- ಸ್ಥಿತಿವರ್ಗ ಸೃಷ್ಟಿವರ್ಗ ಸಂಹಾರವರ್ಗಂಗಳೆಂಬೀ ವರ್ಗಂಗಳವರಲ್ಲಿ ಮೊದಲ ಸ್ಥಿತಿವರ್ಗವೊಂದರೊಳಗೆ ಸಾತ್ವಿಕವರ್ಗ ರಾಜಸವರ್ಗ ತಾಮಸವರ್ಗಂಗಳಕ್ಕುಮಿವಕ್ಕೆ ವಿವರಂ. ಪೂರ್ವಾದೀಶಾನಾಂತಮಾಗಿ ಅಗ್ನಿ ಚಂದ್ರ ಸೂರ್ಯಮಂಡಲದಳ ನ್ಯಸ್ತಾಕ್ಷರಗಳೆಲ್ಲಂ ಸ್ಥಿತಿವರ್ಗ- ವಿವರೊಳ್ಸಾತ್ವಿಕವರ್ಗ ರಾಜಸವರ್ಗ ತಾಮಸವರ್ಗಗಳೆಂದು ತ್ರಿವಿಧಮಪ್ಪವರಲ್ಲಿ ಮೊದಲಗ್ನಿಮಂಡಲದೆಂಟು ದಳಂಗಳಲ್ಲಿಯ ಸ ಷ ಶ ವ ಲ ರ ಯ ಮ ಗಳೆಂಬಿವೆಂಟು ಸಾತ್ವಿಕಂಗಳೆನಿಪ- ವದರಾಚೆಯ ಚಂದ್ರಮಂಡಲದ ದಳೋಪದಳಂಗಳಲ್ಲಿ ಪೂರ್ವಾದೀಶಾನಾಂತಮಾಗಿ ನ್ಯಸ್ತವಾದ ಅ ಆ ಇ ಈ ಉ ಊ ಒ ಓ ಏ ಐ ಓ ಔ ಅಂ ಆಃ ಎಂಬೀ ಪದಿನಾರೆ ರಾಜಸಂಜ್ಞೆಂಗಳೆನಿಪ ವದರಾಚೆಯ ಸೂರ್ಯಮಂಡಲದ ಮೂವತ್ತೆರಡು ದಳಂಗಳೊಳಗ- ಣೆಂಟಕ್ಕರಂಗಳಗ್ನಿ ಮಂಡಲದೆಂಟುದಳಂಗಳಲ್ಲಿ ನ್ಯಸ್ತವಾಗಿರ್ದಪವವರ, ಶೂನ್ಯದಳಂಗಳೆಂಟಂ ಬಿಟ್ಟುಳಿದಿರ್ಪತ್ತು ನಾಲ್ಕು ದಳಂಗಳಲಿ ನ್ಯಸ್ತವಾದ ಕಖಗಘಙ ಚಛರುsುಜಞ ಟಠಡಢಣ ತಥದಧನ ಪಫಬಭಂಗಳೆಂಬಿರ್ಪತ್ತನಾಲ್ಕೆ ತಾಮಸಂಗಳೆನಿಪವೀ ವರ್ಗತ್ರಯಂ ಸ್ಥಿತಿವರ್ಗಗತವಾದುದೀ ಮೂರ್ಮೂರ್ವರ್ಗಾಕ್ಷರಂಗಳ ಸಂಜ್ಞೆಯಿಂದೆ ಮಂತ್ರಗಳನುದ್ಧರಿಪು ದಿನ್ನುಂ ಶುದ್ಧಪ್ರಸಾದ ಮೂಲಪ್ರಸಾದ ತತ್ವಪ್ರಸಾದ ಆದಿಪ್ರಸಾದ ಆತ್ಮಪ್ರಸಾದಂಗಳೆಂಬ ಪಂಚಪ್ರಸಾದ ಮಂತ್ರಗಳನೀ ಚಕ್ರಸ್ಥಾಕ್ಷರ ಸ್ಥಿತಿವರ್ಗದಿಂದುದ್ಧರಿಸಿ ಭಾವಿಪುದೆಂದೆಯಯ್ಯಾ, ಪರಮ ಶಿವಲಿಂಗೇಶ್ವರ ಸುಧಾಕರ ಶೇಖರಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಇಷ್ಟಲಿಂಗಕ್ಕೆ ಅರ್ಪಿಸುವಾಗ, ಇಷ್ಟಲಿಂಗದಲ್ಲಿ ಮೂಲಮಂತ್ರವ ಧ್ಯಾನಿಸುವ ಕ್ರಮವು: ಓಂ ಹ್ರಾಂ ನಾಂ ಸದ್ಯೋಜಾತ ಆಚಾರಲಿಂಗಾಯನಮಃ ಇಷ್ಟಲಿಂಗದ ಶಕ್ತಿ ಪೀಠದ ಹಿಂದೆಸೆಯಲ್ಲಿ ಸಂಬಂಧ. ಓಂ ಹ್ರೀಂ ಮಾಂ ವಾಮದೇವ ಗುರುಲಿಂಗಾಯನಮಃ ಇಷ್ಟಲಿಂಗದ ಎಡದ ಕೈಯಲ್ಲಿ ಸಂಬಂಧ. ಓಂ ಹ್ರೂಂ ಸಿಂ ಅಘೋರ ಶಿವಲಿಂಗಾಯನಮಃ ಇಷ್ಟಲಿಂಗದ ಬಲಭಾಗದ ವರ್ತುಳದ ಸಂಧಿಲಿ ಸಂಬಂಧ. ಓಂ ಹ್ರೈಂ ವಾಂ ತತ್ಪುರುಷ ಜಂಗಮಲಿಂಗಾಯನಮಃ ಇಷ್ಟಲಿಂಗದ ಎಡದ ಭಾಗದ ಗೋಮುಖದಲ್ಲಿ ಸಂಬಂಧ. ಓಂ ಹ್ರೌಂ ಯಾಂ ಈಶಾನ್ಯ ಪ್ರಸಾದಲಿಂಗಾಯನಮಃ ಇಷ್ಟಲಿಂಗದ ನಾಳದಲ್ಲಿ ಸಂಬಂಧ. ಓಂ ಹ್ರಃ ಓಂ ಗೋಪ್ಯಮುಖ ಮಹಾಲಿಂಗಾಯನಮಃ ಇಷ್ಟಲಿಂಗದ ಗೋಳಕದಲ್ಲಿ ಸಂಬಂಧ. ಓಂ ಬಾಂ ಅಂ ಇಷ್ಟಲಿಂಗಾಯನಮಃ ಇಷ್ಟಲಿಂಗದ ಮಸ್ತಕದಲ್ಲಿ ಸಂಬಂಧ. ಓಂ ಸಾಂ ಉಂ ಪ್ರಾಣಲಿಂಗಾಯ ನಮಃ ಇಷ್ಟಲಿಂಗದ ಬಲಭಾಗದ ವರ್ತುಳದಲ್ಲಿ ಸಂಬಂಧ. ಓಂ ವಾಂ ಮಾಂ ಭಾವಲಿಂಗಾಯ ನಮಃ ಇಷ್ಟಲಿಂಗದ ಬಲಭಾಗದ ಗೋಮುಖದ ತುದಿಯಲ್ಲಿ ಸಂಬಂಧ ಶಾಂತಕೂಡಲಸಂಗಮದೇವಾ.
--------------
ಗಣದಾಸಿ ವೀರಣ್ಣ
ಈ ಪ್ರಕಾರದಲ್ಲಿ ಗುರುವಿನ ಹಸ್ತದಲ್ಲಿ ಹುಟ್ಟಿ ಲಿಂಗದೇಹಿಯೆನಿಸಿಕೊಂಡ ಜ್ಞಾನಿಪುರುಷನು ತನ್ನ ಜ್ಞಾನಸ್ವರೂಪವನರಿಯಬೇಕಯ್ಯ. ಆ ಜ್ಞಾನವೇ ಆರುತೆರನಾಗಿಪ್ಪುದು. ಅವಾವವೆಂದಡೆ: ಆಚಾರಲಿಂಗ, ಗುರುಲಿಂಗ, ಶಿವಲಿಂಗ, ಜಂಗಮಲಿಂಗ, ಪ್ರಸಾದಲಿಂಗ, ಮಹಾಲಿಂಗವೆಂದು ಇಂತೀ ಆರುತೆರನಾಗಿಪ್ಪುದು. ಈ ಷಡ್ವಿಧವ್ರತವನರಿದು ಆಚರಿಸುವ ಕ್ರಮವೆಂತುಟಯ್ಯಯೆಂದಡೆ: ಆಧಾರಚಕ್ರಸ್ಥಾನದಲ್ಲಿ ನಾಲ್ಕೆಸಳಕಮಲದ ವ ಶ ಷ ಸಯೆಂಬ ನಾಲ್ಕು ಬೀಜಾಕ್ಷರದ ಪೃಥ್ವಿತತ್ವದ ಕೆಂಪುವರ್ಣದ ನೆಲೆಯನರಿಯಬೇಕಯ್ಯ. ಸ್ವಾಧಿಷಾ*ನಚಕ್ರದಲ್ಲಿ ಆರೆಸಳಕಮಲದ ಬ ಭ ಮ ಯ ರ ಲಯೆಂಬ ಆರು ಬೀಜಾಕ್ಷರ ಯುಕ್ತವಾದ ಅಪ್ಪುತತ್ವದ ನೀಲವರ್ಣದ ನೆಲೆಯನರಿಯಬೇಕಯ್ಯ. ಮಣಿಪೂರಕಚಕ್ರಸ್ಥಾನದಲ್ಲಿ ಹತ್ತೆಸಳಕಮಲದ ಡ ಢ ಣ ತ ಥ ದ ಧ ನ ಪ ಫ ಯೆಂಬ ಹತ್ತು ಬೀಜಾಕ್ಷರ ಸ್ವಾಯತವಾಗಿಪ್ಪ ಅಗ್ನಿತತ್ವದ ಕುಂಕುಮವರ್ಣದ ನೆಲೆಯನರಿಯಬೇಕಯ್ಯ. ಅನಾಹತಚತ್ರಸ್ಥಾನದಲ್ಲಿ ಹನ್ನೆರಡೆಸಳಕಮಲದ ಕ ಖ ಗ ಘ ಙ ಚ ಛ ಜ ರುsು ಞ ಟ ಠಯೆಂಬ ಹನ್ನೆರಡು ಬೀಜಾಕ್ಷರಯುಕ್ತವಾಗಿರ್ಪ ವಾಯುತತ್ವದ ಶ್ವೇತವರ್ಣದ ನೆಲೆಯನರಿಯಬೇಕಯ್ಯ. ವಿಶುದ್ಧಿಚಕ್ರಸ್ಥಾನದಲ್ಲಿ ಹದಿನಾರೆಸಳಕಮಲದ ಅ ಆ ಇ ಈ ಉ ಊ ಋ ಋೂ ಎ ಏ ಐ ಒ ಓ ಔ ಅಂ ಅಃ ಎಂಬ ಹದಿನಾರು ಬೀಜಾಕ್ಷರ ಸ್ವಾಯತವಾಗಿಪ್ಪ ಆಕಾಶತತ್ವದ ಸ್ಫಟಿಕವರ್ಣದ ನೆಲೆಯನರಿಯಬೇಕಯ್ಯ. ಆಜ್ಞಾಚಕ್ರಸ್ಥಾನದಲ್ಲಿ ಎರಡೆಸಳಕಮಲದ ಹಂ ಸ ಯೆಂಬ ಎರಡು ಬೀಜಾಕ್ಷರಯುಕ್ತವಾಗಿಪ್ಪ ಆತ್ಮತತ್ವದ ಮಾಣಿಕ್ಯವರ್ಣದ ನೆಲೆಯನರಿಯಬೇಕಯ್ಯ. ಇವೆಲ್ಲವಕ್ಕೂ ಮೇಲಣತತ್ವವೆನಿಸುವ ಬ್ರಹ್ಮರಂದ್ರದಲ್ಲಿ ಸಾವಿರೆಸಳಕಮಲದ, ಸಾವಿರ ಬೀಜಾಕ್ಷರ ಸರ್ವತೋಮುಖವಾಗಿಪ್ಪ ಭೇದವನರಿಯಬೇಕಯ್ಯ. ಇನ್ನೀ ಚಕ್ರಂಗಳಿಗೆ ಲಿಂಗಸ್ವಾಯತಯುಕ್ತವಾಗಿಪ್ಪ ಭೇದವ ಹೇಳಿಹೆನು: ಆಧಾರಚಕ್ರದ ನಾಲ್ಕೆಸಳಕಮಲದ ಮಧ್ಯದಲ್ಲಿ ಆಚಾರಲಿಂಗವ ಸ್ವಾಯತವ ಮಾಡಿ ಸ್ವಾಧಿಷಾ*ನಚಕ್ರದ ಆರೆಸಳಕಮಲದ ಮಧ್ಯದಲ್ಲಿ ಗುರುಲಿಂಗವ ಮೂರ್ತಿಗೊಳಿಸಿ ಮಣಿಪೂರಕಚಕ್ರದ ಹತ್ತೆಸಳಕಮಲದ ಮಧ್ಯದಲ್ಲಿ ಶಿವಲಿಂಗವ ಸಂಬಂಧಿಸಿ ಅನಾಹತಚಕ್ರದ ಹನ್ನೆರಡೆಸಳಕಮಲದ ಮಧ್ಯದಲ್ಲಿ ಪ್ರಸಾದಲಿಂಗವ ಮೂರ್ತಿಗೊಳಿಸಿ ಆಜ್ಞಾಚಕ್ರದ ಎರಡೆಸಳಕಮಲದ ಮಧ್ಯದಲ್ಲಿ ಮಹಾಲಿಂಗವ ನೆಲೆಗೊಳಿಸಿ ಪ್ರಾಣದಲ್ಲಿ ಆಚಾರಲಿಂಗವ ಸಂಬಂಧಿಸಿ ಜಿಹ್ವೆಯಲ್ಲಿ ಗುರುಲಿಂಗವ ಸ್ವಾಯತವಮಾಡಿ ನೇತ್ರದಲ್ಲಿ ಶಿವಲಿಂಗವ ಮೂರ್ತಿಗೊಳಿಸಿ ತ್ವಕ್ಕಿನಲ್ಲಿ ಜಂಗಮಲಿಂಗವ ನೆಲೆಗೊಳಿಸಿ ಶ್ರೋತ್ರದಲ್ಲಿ ಪ್ರಸಾದಲಿಂಗವ ಸಂಬಂಧಿಸಿ ಭಾವದಲ್ಲಿ ಮಹಾಲಿಂಗವ ನೆಲೆಗೊಳಿಸಿ ಬ್ರಹ್ಮರಂಧ್ರದಲ್ಲಿರ್ಪ ಪರಿಪೂರ್ಣಲಿಂಗವು ಸರ್ವಾಂಗದಲ್ಲಿಯು ಸ್ವಾಯತವಾಗಲು ಅಂಗಸಂಗಗಳೆಲ್ಲವು ಲಿಂಗಸಂಗಗಳಾಗಿ ಲಿಂಗ ದೃಕ್ಕೇ ನಿರಂತರ ಪ್ರಕಾಶಿಸುತಿಪ್ಪುದಯ್ಯ. ಲಿಂಗಪ್ರಭೆಯೊಳಗೆ ಶಿವಶಿವಾಯೆನುತಿರ್ದೆನಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಇನ್ನು ಆ ಆದಿ ಮಕಾರಪ್ರಣವ, ಆದಿ ಅಕಾರಪ್ರಣವ, ಆದಿ ಉಕಾರಪ್ರಣವ-ಈ ಮೂರೂ ಪ್ರಣವಂಗಳು ಬೀಜಸಂಯುಕ್ತವಾಗಿ ಅಖಂಡ ಮಹದೋಂಕಾರವಾಯಿತ್ತು. ಅದೆಂತೆಂದಡೆ : ಆ ಆದಿ ಮಕಾರಪ್ರಣವ, ಆದಿ ಅಕಾರಪ್ರಣವ, ಆದಿ ಉಕಾರಪ್ರಣವ-ಈ ಮೂರೂ ಪ್ರಣವಂಗಳು ಬೀಜಾಕ್ಷರ. ಆದಿ ಮಕಾರವೇ ಆದಿ ಕಲಾಪ್ರಣವ, ಆದಿ ಅಕಾರವೆ ಆದಿ ನಾದಪ್ರಣವ. ಆದಿ ಉಕಾರವೆ ಆದಿ ಬಿಂದುಪ್ರಣವ. ಆದಿ ಮಕಾರಪ್ರಣವವೇ ಸರ್ವಾತ್ಮನು. ಆದಿ ಅಕಾರಪ್ರಣವವೇ ಪರಮಾತ್ಮನು. ಆದಿ ಉಕಾರಪ್ರಣವವೇ ಶಿವಾತ್ಮನು. ಇದಕ್ಕೆ ಮಹಾದೇವ ಉವಾಚ: ``ಅಕಾರಂ ಪರಮಾತ್ಮಾ ಚ ಉಕಾರಃ ಶಿವಾತ್ಮಾ ಭವೇತ್ | ಮಕಾರಂ ಸರ್ವಾತ್ಮಾ ಚ ಇತಿ ಭೇದಂ ವರಾನನೇ ||'' ಇಂತೆಂದುದಾಗಿ, ಆದಿ ಮಕಾರಕ್ಕೆ ಆದಿ ಕಲಾಪ್ರಣವವೆ ಆಧಾರ. ಆದಿ ಅಕಾರಕ್ಕೆ ಆದಿ ನಾದಪ್ರಣವವೆ ಆಧಾರ. ಆದಿ ಉಕಾರಕ್ಕೆ ಆದಿ ಬಿಂದುಪ್ರಣವವೆ ಆಧಾರ. ಆದಿ ಪ್ರಾಣಮಾತ್ರೆಯಪ್ರಣವಕ್ಕೆ ಅಖಂಡ ಜ್ಯೋತಿರ್ಮಯಲಿಂಗವೆ ಆಧಾರ. ಆದಿ ಮ ಎಂದರೆ ಆದಿ ಕಲಾಪ್ರಣವ. ಆದಿ ಅ ಎಂದರೆ ಆದಿ ನಾದಪ್ರಣವ. ಆದಿ ಉ ಎಂಬ ಆದಿ ಬಿಂದುಪ್ರಣವದಲ್ಲಿ ಬಿಂದು ಸಂಯುಕ್ತವಾಗಿ, ಆದಿ `ಮ' ಎಂಬ ಆದಿ ಮ ನ ಸ ರ ಪ್ರಣವದಲ್ಲಿ ಬಂದು ಕೂಡಲು ಮಹದೋಂಕಾರವಾಯಿತ್ತು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಮತ್ತೆಯುಮೂಧ್ರ್ವಪಟ್ಟಿಕೆಯೆಂಬ ಕಂಠವೆ ವಿಶುದ್ಧಿಚಕ್ರಮೆನಿಸುಗು- ಮಲ್ಲಿಯ ಷೋಡಶ ಕೋಷ*ಂಗಳೆ ಷೋಡಶ ದಳಂಗಳೆನಿಕ್ಕು. ಮವರಲ್ಲಿ ಅ ಆ ಇ ಈ ಉ ಊ ಋ Iೂ ಒ ಓ ಏ ಐ ಓ ಔ ಅಂ ಅಃ ಎಂಬ ಪದಿನಾರಕ್ಕರಂಗಳ್ನೆಲಸಿರ್ಕುಮೆಂದು ಬೋಧಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಮತ್ತೆಯುಮೀ ಶಿವಬೀಜಂ ಸ್ಥೂಲ ಸೂಕ್ಷ ್ಮಪರಂಗಳೆಂದು ಮೂದೆರನಾಗಿರ್ಪುದಿದಕ್ಕೆ ವಿವರಂ- ಸ್ಥೂಲಮೆನೆಯಕ್ಕರಂ. ಸೂಕ್ಷ ್ಮಮೆನೆಯಾಯಕ್ಷರದ ದನಿ. ಪರಮೆನೆ ಆಕಾರಾದಿ ಕ್ಷಕಾರಾಂತವಾದೈವತ್ತಕ್ಕರಂಗಳೊಳಗೆ ಪತ್ತು ಪತ್ತುಗಳು ವಿಭಾಗಿಸಿ, ಭೂಮ್ಯಾದಿ ಪಂಚಭೂತಂಗಳೊಡನೆ ಕಲಸುವುದೆಂತೆನೆ ತರದಿಂ ಅ ಆ ಇ ಈ ಉ ಊ ಋ Iೂ ಒ ಓ ಈ ಹತ್ತು ಪೃಥ್ವಿ. ಏ ಐ ಓ ಔ ಅಂ ಅಃ ಕ ಖ ಗ ಘ ಈ ಹತ್ತು ಅಪ್ಪು. ಙ ಚ ಛ ಜ ರುsು ಞ ಟ ಠ ಡ ಢ ಈ ಹತ್ತು ತೇಜಸ್ಸು. ಣ ತ ಥ ದ ಧ ನ ಪ ಫ ಬ ಭ ಈ ಹತ್ತು ವಾಯು. ಮ ಯ ರ ಲ ವ ಶ ಷ ಸ ಹ ಳ ಯೀ ಹತ್ತು ಆಕಾಶಂ. ಇಂತೈವತ್ತಕ್ಕರಂಗಳೈದು ಪೃತ್ವ ್ಯಪ್ತೇಜೋವಾಯ್ವಾಕಾಶಂಗಳಲ್ಲಿ ನ್ಯಸ್ತಂಗಳಾದವಿನ್ನುಳಿದೈದನೆಯ ಭೂತಸಂಜ್ಞಿತದಿಂ ಪಂಚಮವೆನಿಸಿದ ಪರಿಪೂರ್ಣವಾದ ಸಾಂತವೆ ಪರಮಿಂತು ಸ್ಥೂಲ ಸೂಕ್ಷ ್ಮ ಪರ ಸಂಜ್ಞೆಯ ನಿರೂಪಿಸಿದೆಯಯ್ಯಾ, ಪರಮ ಶಿವಲಿಂಗ ಪಾರ್ವತೀ ಸಮುತ್ಸಂಗ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಇನ್ನು ಸೃಷ್ಟಿವರ್ಗನಿರೂಪಣಾನಂತರದಲ್ಲಿ ಸಂಹಾರವರ್ಗಮಂ ಪೇಳ್ವೆನೆಂತೆನೆ- ಕ್ಷಕಾರಾದ್ಯಕಾರಾಂತಮಾದಕ್ಷರಮಾಲಿಕೆಯೆ ಸಂಹಾರವರ್ಗಮೆನಿಕುಂ. ಅದರಲ್ಲಿ ಕ್ಷ ಳ ಹ ಸ ಷ ಶ ವ ಲ ರ ಯಂ ಗಳೆಂಬೀ ಪತ್ತೆ ಸಂಹಾರವರ್ಗದಲ್ಲಿ ಮೊದಲವರ್ಗಮಿದು ಪೃಥ್ವಿ. ಮ ಭ ಬ ಫ ಪ ನ ಧ ದ ಥ ತಂಗಳೆಂಬೀ ಪತ್ತೆ ಸಂಹಾರಿವರ್ಗದೊಳೆರಡನೆಯ ವರ್ಗಮಿದಪ್ಪು. ಣ ಢ ಡ ಠ ಟ ಞ ರುsು ಜ ಛ ಚಂಗಳೆಂಬೀ ಪತ್ತೆ ಸಂಹಾರವರ್ಗದಲ್ಲಿ ಮೂರನೆಯ ವರ್ಗಮಿದಗ್ನಿ. ಙ ಘ ಗ ಖ ಕಂಗಳೆಂಬೀವೈದುಂ ಸಂಹಾರವರ್ಗದಲ್ಲಿ ನಾಲ್ಕನೆಯ ವರ್ಗಮಿದು ವಾಯು, ಅಃ ಆಂ ಔ ಓ ಐ ಏ ಒ ಓ Iೂ ಋ ಊ ಉ ಈ ಇ ಆ ಅ ಎಂಬೀ ಪದಿನಾರೆ ಸಂಹಾರವರ್ಗದಲ್ಲಿಯೈದನೆಯ ವರ್ಗಮಿದಾಕಾಶ- ಮಿವೈದು ವರ್ಗಂಗಳನೊಳಕೊಂಡು ಸಂಹಾರವರ್ಗ ಮಿರ್ಪುದಿದಲ್ಲಿಯೆ ಸಮಸ್ತವಾದ ರುದ್ರಮಂತ್ರಗಳನುದ್ಧರಿಪುದಿದೀಗ ಸಂಹಾರವರ್ಗಂ. ಇಂತು ಸ್ಥಿತಿ ಸಂಹಾರ ತಾಮಸವರ್ಗ ವರ್ಗತ್ರಯಂಗಳಂ ನಿರವಿಸಿದೆಯಯ್ಯಾ, ನಿರಾಳ ನಿಶ್ಚಿಂತ ಪರಮ ಶಿವಲಿಂಗೇಶ್ವರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಇಂತೀ ಮಹಾಲಿಂಗದ ಶಿವಶಕ್ತ್ಯಾತ್ಮಕ ಚಕ್ರನ್ಯಾಸ ನಿರೂಪಣಾನಂತರದಲ್ಲಿ, ಮೂರ್ತಮಂತ್ರಮಂ ಪೇಳ್ವೆನೆಂತೆನೆ- ನಾದ ಸಂಜ್ಞಿತವಾದ ಹಕಾರಮನಾಜ್ಯಪ್ರಧಾರಿಕೆ ಮೇಲಣ ಪಂತಿಯ ಮೇಲೆ ಚತುಷ್ಕೋಷ* ಮಧ್ಯದಲ್ಲಿ ನ್ಯಾಸಂಗೆಯ್ವುದು. ಬಿಂದು ಸಂಜ್ಞಿತವಾದೋಕಾರಮನಾದ್ಯಪ್ರದಾರಿಕೆಯಲ್ಲಿರಿಸೂದು. ಮಕಾರಮಂ ಊಧ್ರ್ವಪಟ್ಟಿಕಾದಿಯಾಗಿ ಊಧ್ರ್ವಕಂಜಪರ್ಯಂತದಲ್ಲಿ ಮಡಗುವುದು. ವೃತ್ತದಲ್ಲಿ ಉಕಾರಮನಿರಿಸೂದು. ಅಕಾರಮನಧಃಕಂಜಾಧಃ ಪಟ್ಟಿಕೆಗಳಲ್ಲಿಡುವುದಿಂತು ಹ ಒ ಮ ಉ ಅ ಎಂಬೀ ಸೂಕ್ಷ ್ಮ ಪಂಚಾಕ್ಷರ ನ್ಯಾಸಮಂ ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಇನ್ನಷ್ಟು ... -->