ಅಥವಾ

ಒಟ್ಟು 97 ಕಡೆಗಳಲ್ಲಿ , 27 ವಚನಕಾರರು , 79 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿರಾಳದಿಂದ ಸಹಜವಾಯಿತ್ತು. ಸಹಜದಿಂದ ಸೃಷ್ಟಿಯಾಯಿತ್ತು. ಸೃಷ್ಟಿಯಿಂದ ಸಂಸಾರವಾಯಿತ್ತು. ಸಂಸಾರದಿಂದ ಅಜಾÕನವಾಯಿತ್ತು. ಆಜಾÕನದಿಂದ ಬಳಲುವ ಜೀವರ, ಬಳಲಿಕೆಯ ತೊಲಗಿಸಲು ಜಾÕನವಾಯಿತ್ತು. ಜಾÕನದಿಂದಲಾಯಿತ್ತು ಗುರುಕರುಣ. ಗುರುಕರುಣದಿಂದಲಾಯಿತ್ತು ಸುಮನ. ಸುಮನದಿಂದಲಾಯಿತ್ತು ಶಿವಧ್ಯಾನ. ಶಿವಧ್ಯಾನದಿಂದಲಾಯಿತ್ತು ನಿರ್ದೇಹ ನಿರ್ದೇಹದಿಂದಲಾಯಿತ್ತು ಸಾಯುಜ್ಯ. ಸಾಯುಜ್ಯದಿಂದಲಾಯಿತ್ತು ಸರ್ವಶೂನ್ಯ. ಆ ಸರ್ವಶೂನ್ಯದಲ್ಲೊಡಗೂಡಿ ನಿಂದಾತಂಗೆ, ಮರಳಿ ಜನ್ಮ ಉಂಟೆ ಹೇಳಾ?, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ದ್ರವ್ಯ ನೀನು ದ್ರವ್ಯಾರ್ಥ ನೀನು; ಪದ ನೀನು, ಪದಾರ್ಥ ನೀನು. ಸಕಲ ನೀನು ನಿಷ್ಕಲ ನೀನು. ಸಕಲ ನಿಷ್ಕಲಾತ್ಮಕ ಪರಿಪೂರ್ಣ ಶಿವನಲ್ಲದೆ ಅನ್ಯ ಭಿನ್ನಭಾವ ಉಂಟೆ ? ಸಕಲ ನಿಷ್ಕಲ ತತ್ವಂಗಳು; ನಿಮ್ಮೊಳಗೆ ಸಮಾಸವನೆಯ್ದುವೆವೆಂದು ತಮ್ಮ ತಮ್ಮ ಅಂಗದ ಮೇಲೆ ಸರ್ವಪದಾರ್ಥಂಗಳ ಹೆಸರಿಟ್ಟು ಹೊತ್ತುಕೊಂಡೈದಾವೆ ನೋಡಾ ! ಅದೆಂತೆಂದಡೆ: ``ದ್ರವ್ಯಾರ್ಥಂ ಚ ಮಹಾದೇವೋ ದ್ರವ್ಯರೂಪೋ ಮಹೇಶ್ವರಃ ಇತಿ ಮೇ ಭೇದನಂ ನಾಸ್ತಿ ಸರ್ವರೂಪಸ್ಸದಾಶಿವಃ'' _ ಇಂತೆಂದುದಾಗಿ_ನಾದ ನೀನು, ಬಿಂದು ನೀನು, ಕಳೆ ನೀನು, ಕಳಾತೀತ ನೀನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ನೋಡುವಲ್ಲಿ ನೆರೆ ಶೃಂಗಾರವಲ್ಲದೆ, ಕೂಡುವಲ್ಲಿ ಉಂಟೆ ? ನುಡಿವಲ್ಲಿ ಮಾತಿನ ಬಲುಮೆಯಲ್ಲದೆ, ಸಂಸಾರವ ಸಾಧನವ ಮಾಡುವಲ್ಲಿ ಮುಟ್ಟದಿಪ್ಪುದುಂಟೆ ? ನಡೆ ನುಡಿ ಸಿದ್ಧಾಂತವಾದ ಶರಣಂಗೆ ಪಡಿಪುಚ್ಚವಿಲ್ಲ, ಗುಡಿಯೊಡೆಯ ಗುಮ್ಮಟನಾಥನ ಅಗಮ್ಯೇಶ್ವರಲಿಂಗದಲ್ಲಿ ಐಕ್ಯವಾದ ಶರಣಂಗೆ.
--------------
ಮನುಮುನಿ ಗುಮ್ಮಟದೇವ
ಅಂಗಕ್ಕಾಚಾರ ಮನಕ್ಕೆ ಜ್ಞಾನ ಸಮರಸಾದ್ವೈತವಾದ ಮತ್ತೆ ಪುನರಪಿ ಪುನರ್ದೀಕ್ಷೆಯುಂಟೆ ? ಗರುಡಿಯಲ್ಲಿ ಕೋಲಲ್ಲದೆ, ಕಾಳಗದಲ್ಲಿ ಉಂಟೆ ಕೋಲು ? ಭವಿಗೆ ಮೇಲುವ್ರತ ಪುನರ್ದೀಕ್ಷೆಯಲ್ಲದೆ, ಭಕ್ತರಿಗುಂಟೆ ? ವ್ರತತಪ್ಪಿ ಅನುಗ್ರಹವಿಡಿದ ನರಕಿಗಳಿಗೆ ಮುಕ್ತಿ ಇಲ್ಲ ಎಂದೆ ಅಮುಗೇಶ್ವರಲಿಂಗದಲ್ಲಿ.
--------------
ಅಮುಗೆ ರಾಯಮ್ಮ
ಸದ್ಭಕ್ತನ ಆಚರಣೆಯ ಕ್ರೀಯೆಂತುಂಟೆಂದಡೆ: ಜಂಗಮದ ಪಾದೋದಕ ಲಿಂಗಕ್ಕೆ ಮಜ್ಜನವ ಮಾಡುವಲ್ಲಿ ಜಂಗಮದ ಕುಂದು ನಿಂದೆಯ ಕೇಳಬಾರದು. ಜಂಗಮಪ್ರಸಾದವ ಲಿಂಗಕ್ಕೆ ಕೊಡುವಲ್ಲಿ ಅರ್ಥ ಪ್ರಾಣ ಅಬ್ಥಿಮಾನವ ಮುಟ್ಟಿದಲ್ಲಿ ಚಿತ್ತದಲ್ಲಿ ಹೆಚ್ಚು ಕುಂದು ತೋರಿದಾಗಲೆ ಪ್ರಸಾದಕ್ಕೆ ದೂರ. ಇದು ಕಾರಣ, ದೇಹಭಾವವಳಿದವಂಗಲ್ಲದೆ ಪಾದೋದಕ ಪ್ರಸಾದವಿಲ್ಲಾ ಎಂದೆ. ವಿಶ್ವಾಸವುಂಟಾದಲ್ಲಿ ಕುರುಹಿನ ಮುದ್ರೆಯ ಬಯಕೆ ಉಂಟೆ ಅಯ್ಯಾ? ಅವಿಶ್ವಾಸವುಳ್ಳವಂಗೆ ಗುರುಚರದ ಮಾರ್ಗವಿಲ್ಲಾಯೆಂದೆ. ಸದಾಶಿವಮೂರ್ತಿಲಿಂಗವ ಹೀಗರಿವುದಕ್ಕೆಠಾವ ಕಾಣೆ.
--------------
ಅರಿವಿನ ಮಾರಿತಂದೆ
ಏರಿಯಕೆಳಗೆ ಬಿದ್ದ ನೀರು ಪೂರ್ವದ ತಟಾಕಕ್ಕೆ ಏರಬಲ್ಲುದೆ ? ವ್ರತಾಚಾರವ ಮೀರಿ ಕೆಟ್ಟ ಅನಾಚಾರಿ ಸದ್ಭಕ್ತರ ಕೂಡಬಲ್ಲನೆ ? ದೇವಾಲಯದಲ್ಲಿ ಸತ್ತಡೆ ಸಂಪ್ರೋಕ್ಷಣವಲ್ಲದೆ ದೇವರು ಸತ್ತಲ್ಲಿ ಉಂಟೆ ಸಂಪ್ರೋಕ್ಷಣ ? ಅಂಗದಲ್ಲಿ ಮರವೆಗೆ ಹಿಂಗುವ ಠಾವಲ್ಲದೆ, ಮನವರಿದು ತಾಕು ಸೋಂಕಿಗೆ ಹೆದರದೆ ಕೂಡಿದ ದುರ್ಗಣಕ್ಕುಂಟೆ ಪ್ರಾಯಶ್ಚಿತ್ತ ? ಇಂತಿವ ಕಂಡಲ್ಲಿ ಗುರುವಾದಡೂ ಬಿಡಬೇಕು, ಲಿಂಗವಾದಡೂ ಬಿಡಬೇಕು, ಜಂಗಮವಾದಡೂ ಬಿಡಬೇಕು ; ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವಾದಡೂ ಬಿಡಬೇಕು.
--------------
ಅಕ್ಕಮ್ಮ
ವ್ರತಾಚಾರವೆಂಬುದು ತನಗೊ, ತನ್ನ ಸತಿಗೊ, ಇದಿರ ಭೂತಹಿತಕೊ ? ತಾನರಿಯದೆ ತನಗೆ ವ್ರತ ಉಂಟೆ ? ವ್ರತಾಚಾರಿಗಳ ಗರ್ಭದಿಂದ ಬಂದ ಶಿಶುವ ಅನ್ಯರಿಗೆ ಕೊಡಬಹುದೆ ? ವ್ರತಾಚಾರವಿಲ್ಲದವರಲ್ಲಿ ತಂದು ವ್ರತವ ಮಾಡಬಹುದೆ ? ಇಂತೀ ತಮ್ಮ ಕ್ರೀವಂತರಲ್ಲಿಯೆ ತಂದು ಕ್ರೀವಂತರಲ್ಲಿಯೆ ಕೊಟ್ಟು ಉಭಯ ಬ್ಥಿನ್ನವಿಲ್ಲದೆ ಇಪ್ಪುದೆ ಸಜ್ಜನವ್ರತ, ಸದಾತ್ಮ ಯುಕ್ತಿ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ಮುಕ್ತಿ.
--------------
ಅಕ್ಕಮ್ಮ
ಗತಿಗೆಟ್ಟೆ ಧೃತಿಗೆಟ್ಟೆ ಮತಿಗೆಟ್ಟೆ ನಾನಯ್ಯಾ. ನಡೆವಡೆ ಶಕ್ತಿಯಿಲ್ಲ ನುಡಿವಡೆ ಜಿಹ್ವೆಯಿಲ್ಲ. ಇದಿರಲೊಬ್ಬರ ಉಪಚಾರ ಸೇರದು ನೋಡಾ ಎಮಗೆ. ಬಂದ ಬರವನರಿದು ನಿಂದ ನಿಲವನರಿದು ಕೂಡಬಲ್ಲ ಶರಣಂಗೆ, ಬೇರೊಂದು ಏಕಾಂತವೆಂಬ ಸಂದೇಹ ಉಂಟೆ ? ತೆರಹಿಲ್ಲದ ಘನವನೊಳಕೊಂಡ ಬಳಿಕ ಬರಲೆಡೆಯುಂಟೆ ನಮ್ಮ ಗುಹೇಶ್ವರಲಿಂಗಕ್ಕೆ ?
--------------
ಅಲ್ಲಮಪ್ರಭುದೇವರು
ಉತ್ತಮ ಮಧ್ಯಮ ಕನಿಷ್ಟವೆಂದು, ಬಂದ ಜಂಗಮವನೆಂದೆನಾದಡೆ ನೊಂದೆನಯ್ಯಾ, ಬೆಂದೆಯಯ್ಯಾ, ಎನ್ನ ಕಿಚ್ಚು ಎನ್ನ ಸುಟ್ಟಿತ್ತು. ಸುಖಿಜಂಗಮ, ಸಾಮಾನ್ಯಜಂಗಮ ಉಂಟೆ, ಕೂಡಲಸಂಗಮದೇವಾ 401
--------------
ಬಸವಣ್ಣ
ಆಹ್ವಾನ ವಿಸರ್ಜನೆಗಳ ಮಾಡಲೇಕಯ್ಯ ಶರಣಂಗೆ ? ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯನೆಂದೆನಿಸಿದ ಬಳಿಕ ಉಂಟೆ ಲೌಕಿಕರ ಉಪಚಾರಂಗಳು ? ನಿತ್ಯನಿರಂಜನನೈಕ್ಯನೆಂಬ ನಿರೂಪದಲ್ಲಿ ಸ್ವರೂಪ ತಾನಾದ ಬಳಿಕ ಉಂಟೆ ಲೌಕಿಕರ ತನುವಿನಂತೆ ತನುಗುಣ ? ತನುಗುಣ ನಾಸ್ತಿಯಾದ ಬಳಿಕ, ಉಂಟೆ ತಾಮಸಕ್ಕೆ ಎಡೆ ? ಇಲ್ಲ. ಅದು ಹೇಗೆಂದಡೆ_ ಗುರುಕೃಪಾದೃಷ್ಟಿಯಿಂದ ತಾನೆಯಾದ ಬಳಿಕ ಇಲ್ಲಿಲ್ಲ ದೇಹಾದಿ ವಿಕಾರಂಗಳು, ಇಲ್ಲಿಲ್ಲ ಕರಣೇಂದ್ರಿಯಾದಿ ವಿಕಾರಂಗಳು. ಅದ್ವೈತವ ಮೀರಿದೆ, ಬೊಮ್ಮವ ಸಾರಿದೆ, ಸಾಕಾರವ ಹರಿದೆನು. [ಇದರಿಂದ] ನೂನೈಶ್ವರ್ಯವದುಂಟೆ ? ವಾಜ್ಮಾನಸಜಿಹ್ವೆಗೆ ಅಗೋಚರವಾಗುತಿದ್ದಂತಹ ವಸ್ತುವ ಕಂಡೆ. ಸಕಲ ಶೂನ್ಯಾತೀತವ ಎಯ್ದಿದೆ, ಸ್ವಾನುಭಾವವನೊಡಗೂಡಿದೆ. ಮಹಾಲಿಂಗದ ಬಾಧೆ ಬಂದಡೆ ಉಣ್ಣೆನು, ಉಂಡಡೆ ಕಾಣೆ, ಕಂಡಡೆ ಮುಗಿಲ ಮುಟ್ಟಿದುದರುದ್ದವ ನೋಡಾ. ಎಂದು ದೀಕ್ಷೆ ಶಿಕ್ಷೆ ಸ್ವಾನುಭಾವವ ಸಂಬಂದ್ಥಿಸಿ ಶುದ್ಧ ನಿಷ್ಕಲವಾದ ಬಳಿಕ ಮರಳಿ ಪ್ರಪಂಚಿನ ಹಂಗುಂಟೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ?
--------------
ಉರಿಲಿಂಗಪೆದ್ದಿ
ಜಗದಗಲ ಮುಗಿಲಗಲ ಮಿಗೆಯಗಲ ನಿಮ್ಮಗಲ ವಾಙõïಮಾನಸಾಗೋಚರವೆಂದು ಹೇಳುತ್ತೈದಾವೆ ವಾಕ್ಯಂಗಳು. ಅದಂತಿರಲಿ, ಐತಿಹಾಸಿಕರು ಪೌರಾಣಿಕರು ಆಗಮಿಕರು ಅರಿದರಾದಡೆ ದೃಶ್ಯನೆಂಬರೆ ಶಿವನನು? ಅದೃಶ್ಯನೆಂಬರೆ ಶಿವನನು? ವಾಙõïಮಾನಸಾಗೋಚರನೆಂಬರೆ ಶಿವನನು? `ಅತ್ಯತಿಷ್ಠದ್ದಶಾಂಗುಲಂ `ಏಕ ಏವ ಪುರುಷಃ ಎಂಬ ಶ್ರುತಿಯಿರಲು ಮತ್ತಚಿತ್ತನೆ ಶರಣನು? ಅಣುವಿನೊಳಗಣುವಾಗಿ, ಮಹತ್ತಿನೊಳಗೆ ಮಹತ್ತಾಗಿ, ಇಹಪರವೆಂಬ ಸಂದ ಹರಿದು, ಅಧ್ಯಕ್ಷತನಕ್ಕೆ ಕಾರಣಿಕನಾಗಿ ಇಹಲೋಕವೆ ಪರ, ಪರವೆ ಇಹಲೋಕ. ಅದು ಹೇಗೆಂದಡೆ: ನಿತ್ಯಂ ಲಿಂಗಾರ್ಚನಂ ಯಸ್ಯ ನಿತ್ಯಂ ಜಂಗಮಪೂಜನಂ ನಿತ್ಯಂ ಗುರುಪದಧ್ಯಾನಂ ನಿತ್ಯಂ [ನಿತ್ಯಂ]ನ ಸಂಶಯಃ ಎಂಬ ಆಗಮವಾಕ್ಯವನರಿದು, ಗುರುವಿಂಗೆ ತನುಮುಟ್ಟಿ, ತ್ರಿವಿಧಲಿಂಗಕ್ಕೆ ಮನಮುಟ್ಟಿ, ತ್ರಿವಿಧಜಂಗಮಕ್ಕೆ ಧನಮುಟ್ಟಿ, ತ್ರಿವಿಧ ನಿವೇದಿಸಿ, ಆ ಗುರುವಿಂ ಶುದ್ಧ[ಪ್ರಸಾದವ] ಆ ಲಿಂಗದಿಂ ಸಿದ್ಧನಪ್ರಸಾದವಫ ಅ ಜಂಗಮದಿಂ ಪ್ರಸಿದ್ಧ[ಪ್ರಸಾದವ]ನವಗ್ರಹಿಸಿ ಈ ಲಿಂಗಾರ್ಚನೆಯ ಸ್ವಾನುಭಾವದಿಂದೇಕವ ಮಾಡಿ ಅರ್ಚಿಸಲಲ್ಲಿ ಶರಣರು ಸ್ವತಂತ್ರರು. ಅಂಗದಾಸೆಯಲ್ಲಿ ಹರಿವುದ ಬಿಟ್ಟ ನಿಸ್ಸಂಗಿಗಳು. ಶ್ರೋತ್ರ ನೇತ್ರ ತ್ವಕ್ಕು ಜಿಹ್ವೆ ಘ್ರಾಣ ಪಂಚೇಂದ್ರಿಯಂಗಳ ಶಿವನ ಮುಖವೆಂದರಿದು ಅನ್ಯಸಂಗಂಗಳಿಗೆ ಎಳಸಿ ಬಳಸಿ ಬಣ್ಣಕರಪ್ಪರೆ ಶರಣರು? ಲಿಂಗಾರ್ಚನವಿಹೀನಸ್ತು ದ್ವಿಜೋ[s]ಪಿ ಶ್ವಪಚಾಧಮಃ ಲಿಂಗಾರ್ಚನಪರೋ ನಿತ್ಯಂ ಶ್ವಪಚೋ[s]ಪಿ ದ್ವಿಜೋತ್ತಮಃ ಎಂದುದಾಗಿ, ಅಮ್ಮ ಶರಣರಿಗೆ ಸರಿ ಉಂಟೆ ಲೋಕದೊಳಗೆ? ಶೂನ್ಯವೆನಿಸುವ ವಸ್ತುವ ರೂಹಿಂಗೆ ತಂದು ನೆರೆದು ತಾನೆ ರೂಪಾಗಬಲ್ಲ ಶರಣನು. ಆತನ ಮಹಾಮಹಿಮೆಗೆ ನಮೋ ನಮೋ ಎಂಬೆನು ಕಾಣಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಎಲೆ ಬಸವಣ್ಣ ನಾವು ಬಹುದಕ್ಕೆ ಮುನ್ನವೆ ಬಂದಹರೆಂದು ಶುಭಸೂಚನೆ ತೋರಿತ್ತೆಂದೆ. ಮನೆಯ ಮೀರಿ ಮಂದದ ದೈವ ಉಂಟೆ ಎಂಬುದ ತಿಳಿ, ಗುಹೇಶ್ವರಲಿಂಗದಲ್ಲಿ ಸಂಗನಬಸವಣಾ
--------------
ಅಲ್ಲಮಪ್ರಭುದೇವರು
ಮನ ಉಂಟೆ ಮರುಳೆ ಶಿವಯೋಗಿಗೆ ? ಮತ್ತೊಂದು ಮನಮಗ್ನ ಉಂಟೆ ಶಿವಯೋಗಿಗೆ ? ಇಲ್ಲದ ಮನವ ಉಂಟೆಂದು ನುಡಿದು, ಅಡಗಿಸಿದೆನೆಂಬ ಮಾತು ಮನವ ನೆಲೆಮಾಡಿ ತೋರುತ್ತದೆ. ಗುಹೇಶ್ವರನ ಅರಿದ ಶರಣಂಗೆ ತೋರಲಿಲ್ಲ ಅಡಗಲಿಲ್ಲ ಕೇಳಾ.
--------------
ಅಲ್ಲಮಪ್ರಭುದೇವರು
ಪ್ರಾಣಲಿಂಗಿಗೆ ಪದಾರ್ಥಪ್ರೇಮವುಂಟೆ ? ಪ್ರಾಣಲಿಂಗಿಗೆ ಪ್ರಪಂಚದ ಮೋಹವುಂಟೆ ? ಪ್ರಾಣಲಿಂಗಿಗೆ ಸ್ಥಲಕುಲದ ಅಭಿಮಾನ, ಕುಲಗೋತ್ರದ ಹಂಗು ಉಂಟೆ ? ಪ್ರಾಣಲಿಂಗಿಗೆ ಮಾತಾ-ಪಿತಾ, ಸತಿ-ಸುತ ಬಂಧುಗಳ ಸ್ನೇಹಿತರ ಮೋಹವುಂಟೆ ? ಇಂತೀ ಸರ್ವರಲ್ಲಿ ಮಮಕಾರ ಉಳ್ಳಾತ ಅಂಗಪ್ರಾಣಿಯಲ್ಲದೆ ಲಿಂಗಪ್ರಾಣಿ ಆಗಲರಿಯನು ನೋಡಾ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕುರುಹಿನ ಪತಾಕೆಯ ಹಿಡಿದವಂಗೆ, ಕೊರತೆ ಉಂಟೆ, ಆಳ್ದಂಗಲ್ಲದೆ ? ಎಚ್ಚವನಿದ್ದಂತೆ ಅಂಬಿಗೆ ಮುನಿವರೆ ? ಎನ್ನ ಮರವೆ ನಿನ್ನ ಕೇಡಾದ ಕಾರಣ, ನೀ ನಾನೆಂಬುದಕ್ಕೆ ಮೊದಲೆ, ಮನಸಂದಿತ್ತು ಮಾರೇಶ್ವರಾ.
--------------
ಮನಸಂದ ಮಾರಿತಂದೆ
ಇನ್ನಷ್ಟು ... -->