ಅಥವಾ

ಒಟ್ಟು 76 ಕಡೆಗಳಲ್ಲಿ , 26 ವಚನಕಾರರು , 70 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉದಯಕ್ಕೆ ತನುವೆಂಬ ಹಸ್ತದಲ್ಲಿ ಇಷ್ಟಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ಮಧ್ಯಾಹ್ನಕ್ಕೆ ಮನವೆಂಬ ಹಸ್ತದಲ್ಲಿ ಪ್ರಾಣಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ಅಸ್ತಮಾನಕ್ಕೆ ಧನವೆಂಬ ಹಸ್ತದಲ್ಲಿ ಭಾವಲಿಂಗವ ಮೂರ್ತಿಗೊಳಿಸಿ ಪೂಜಿಸಬಲ್ಲರೆ ಶರಣನೆಂಬೆ. ತನು ಮುಟ್ಟದ ಮುನ್ನ, ಮನ ಮುಟ್ಟದ ಮುನ್ನ, ಭಾವ ಮುಟ್ಟದ ಮುನ್ನ, ಲಿಂಗಕ್ಕೆ ದ್ರವ್ಯವ ಸಲಿಸಬಲ್ಲರೆ ಶರಣನೆಂಬೆ. ಕಾಲು ತಾಗದ ಮುನ್ನ, ಕೈ ಮುಟ್ಟದ ಮುನ್ನ ಉದಕವ ತಂದು ಲಿಂಗಕ್ಕೆ ಮಜ್ಜನವ ನೀಡಬಲ್ಲರೆ ಶರಣನೆಂಬೆ. ಹೂವು ನೋಡದ ಮುನ್ನ, ಹಸ್ತದಿಂದ ಮುಟ್ಟದ ಮುನ್ನ, ಹೂವಕೊಯಿದು ಧರಿಸಬಲ್ಲರೆ ಶರಣನೆಂಬೆ. ಈ ಭೇದವ ತಿಳಿಯಬಲ್ಲರೆ ಶಿವಜ್ಞಾನಿಶರಣ ಲಿಂಗಾಂಗಸಂಬಂದ್ಥಿ. ಇಂತೀ ನಿರ್ಣಯವ ತಿಳಿಯದೆ ಶರಣಸತಿ ಲಿಂಗಪತಿ ಎಂಬಾತನ ಲಿಂಗ ಪ್ರೇತಲಿಂಗ, ಅವ ಭೂತಪ್ರಾಣಿ ಎಂದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕ್ಷುತ್ಪಿಪಾಸೆ ಶೋಕ ಮೋಹ ಜನನ ಮರಣ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳಂ ಬಿಟ್ಟು ಅಷ್ಟವಿಧಾರ್ಚನೆ, ಷೋಡಶೋಪಚಾರವಿಲ್ಲದಿರುವ ಕ್ಷೀರದೊಳಗಣ ಘೃತದಂತೆ, ತಿಲದೊಳಗಣ ತೈಲದಂತೆ, ಪುಷ್ಪದೊಳಗಣ ಪರಿಮಳದಂತೆ, ಉಪ್ಪು ಉದಕವ ಕೂಡಿದಂತೆ, ವಾರಿಕಲ್ಲು ವಾರಿಯ ಕೂಡಿದಂತೆ, ಕರ್ಪುರವು ಜ್ಯೋತಿಯ ಕೂಡಿದಂತೆ, ಮನ ಲಿಂಗದಲ್ಲಿ ಲೀಯವಾಗಿಹುದೀಗ ಐಕ್ಯಸ್ಥಲ ನೋಡಾ, ಇದಕ್ಕೆ ಈಶ್ವರ್ದೋವಾಚ : ``ಷಡೂರ್ಮಯಶ್ಚ ಷಡ್ವರ್ಗೋ ನಾಸ್ತಿ ಅಷ್ಟವಿಧಾರ್ಚನಂ | ನಿರ್ಭಾವಂ ಶಿವಲಿಂಗೈಕ್ಯಂ ಶಿಖಿಕರ್ಪೂರಯೋಗವತ್ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪಾದಪೂಜೆಯ ಮಾಡಿ ಪಾದತೀರ್ಥವ ಪಡೆದುಕೊಂಬ ಕ್ರಮವು ಎಂತೆಂದಡೆ : 'ದೇಶಿಕಸ್ಯ ಪದಾಂಗುಷ್ಠೇ ಲಿಖಿತಾ ಪ್ರಣವಂ ತತಃ | ಪಾದಪೂಜಾವಿಧಿಂ ಕೃತ್ವಾ ವಿಶೇಷಂ ಶೃಣು ಪಾರ್ವತಿ ||' ಎಂದುದಾಗಿ, ಭಯಭಕ್ತಿ ಕಿಂಕುರ್ವಾಣದಿಂದೆ ಜಂಗಮಕ್ಕೆ ಪಾದಾರ್ಚನೆಯಂ ಮಾಡಿ ಗದ್ದುಗೆಯನಿಕ್ಕಿ ಮೂರ್ತವ ಮಾಡಿಸಿ ತನ್ನ ಕರಕಮಲವಂ ಮುಗಿದು ಅಯ್ಯಾ, ಹಸಾದ ಮಹಾಪ್ರಸಾದ ಪೂರ್ವಜನ್ಮ ನಿವಾರಣಂ ದೀಕ್ಷಾಗುರು ಶಿಕ್ಷಾಗುರು ಮೋಕ್ಷಗುರು ಗುರುವಿನಗುರು ಪರಮಗುರು ಪರಮಾರಾಧ್ಯ ಶ್ರೀಪಾದಗಳಿಗೆ ಶರಣು ಶರಣಾರ್ಥಿಯೆಂದು 'ಪ್ರಣಮ್ಯ ದಂಡವದ್ಭೂಮೌ ಇಷ್ಟಮಂತ್ರಂ [ಸದಾಜಪೇತ್] ಶ್ರೀ ಗುರೋಃ ಪಾದಪದ್ಮಂ ಚ ಗಂಧಪುಷ್ಪಾsಕ್ಷತಾದಿಭಿಃ ||' ಎಂದುದಾಗಿ, ದೀರ್ಘದಂಡ ನಮಸ್ಕಾರವಂ ಮಾಡಿ ಪಾದಪೂಜೆಗೆ ಅಪ್ಪಣೆಯಂ ತಕ್ಕೊಂಡು ಮೂರ್ತವಂ ಮಾಡಿ ಲಿಂಗವ ನಿರೀಕ್ಷಿಸಿ ತನ್ನ ಅಂಗೈಯಲ್ಲಿ ಓಂಕಾರ ಪ್ರಣವಮಂ ವಿಭೂತಿಯಲ್ಲಿ ಬರೆದು ಆ ಜಂಗಮದ ಎರಡು ಪಾದಗಳ ತನ್ನ ಕರಕಮಲದಲ್ಲಿ ಲಿಂಗೋಪಾದಿಯಲ್ಲಿ ಪಿಡಿದುಕೊಂಡು ಎರಡು ಅಂಗುಷ್ಠಗಳಲ್ಲಿ ಪ್ರಣವಮಂ ಬರೆದು, ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಿ ನಮಸ್ಕರಿಸಿ, ಆ ಪೂಜೆಯಂ ಇಳುಹಿ ಬಟ್ಟಲೊಳಗೆ ಪ್ರಣವಮಂ ಬರೆದು ಬ್ರಹ್ಮರಂಧ್ರದಲ್ಲಿರ್ದ ಸತ್ಯೋದಕವೆಂದು ಭಾವಿಸಿ, ಆ ಉದಕದ ಬಲದಂಗುಷ್ಠದ ಮೇಲೆ ನೀಡುವಾಗ ಆಱುವೇಳೆ ಷಡಕ್ಷರವ ನುಡಿದು ಇಷ್ಟಲಿಂಗವೆಂದು ಭಾವಿಸಿ, ಎಡದಂಗುಷ್ಠದ ಮೇಲೆ ನೀಡುವಾಗ ಐದುವೇಳೆ ಪಂಚಾಕ್ಷರವ ನುಡಿದು ಪ್ರಾಣಲಿಂಗವೆಂದು ಭಾವಿಸಿ, ಎರಡಂಗುಷ್ಠದ ಮಧ್ಯದಲ್ಲಿ ಉದಕವ ನೀಡುವಾಗ ಒಂದು ವೇಳೆ 'ಓಂ ಬಸವಲಿಂಗಾಯನಮಃ' ಎಂದು ಸ್ಮರಿಸಿ, ಭಾವಲಿಂಗವೆಂದು ಭಾವಿಸಿ ದ್ರವನೆಲ್ಲವ ತೆಗೆದು ಮತ್ತೆ ಪೂಜೆಯ ಮಾಡಿ ನಮಸ್ಕರಿಸಿ ಶರಣಾರ್ಥಿಯೆಂದು ಆ ಜಂಗಮವು ಸಲ್ಲಿಸಿದ ಮೇಲೆ ತಾನು ಪಾದತೀರ್ಥವ ಸಲ್ಲಿಸುವುದು. ಪಂಚಾಂಗುಲಿ ಪಂಚಾಕ್ಷರಿಯಿಂದಲಿ ಲಿಂಗಕರ್ಪಿಸಿ ಆ ಪಂಚಾಂಗುಲಿಯುತ ಜಿಹ್ವೆಯಿಂದ ಸ್ವೀಕರಿಸುವುದು ಗುರುಪಾದೋದಕ. ಲಿಂಗವನೆತ್ತಿ ಅಂಗೈಯಲ್ಲಿರ್ದ ತೀರ್ಥವ ಸಲ್ಲಿಸಿದುದು ಲಿಂಗಪಾದೋದಕ. ಬಟ್ಟಲೊಳಗಿರ್ದ ತೀರ್ಥವ ಸಲಿಸಿದುದು ಜಂಗಮಪಾದೋದಕ. ಈ ತ್ರಿವಿಧ ಪಾದೋದಕ ಒಂದೇ ಎಂದರಿವುದು. ಹೀಗೆ ಕ್ರಮವರಿದು ಸಲಿಸುವರ್ಗೆ ಮುಕ್ತಿಯಾಗುವುದಕ್ಕೆ ತಡವಿಲ್ಲವೆಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಪರವನರಿದ ಸತ್ಪುರುಷರ ಸಂಗದಿಂದ ಶಿವಯೋಗದ ವಚನಾಮೃತವನು, ಸದ್ಭಕ್ತಿಯುಳ್ಳ ಮಹೇಶ್ವರನು ತನ್ನ ಶ್ರೋತ್ರಮುಖದಲ್ಲಿ ಕೇಳಿ, ಮನೋಮುಖದಲ್ಲಿ ಹಾರೈಸಿ, ತೃಪ್ತಿಮುಖದಲ್ಲಿ ಸಂತೋಷವನೆಯ್ದಬಲ್ಲಡೆ ಆ ಸುಖವು ಪರಿಣಾಮವನೊಡಗೂಡುವುದು ! ಹೀಂಗಲ್ಲದೆ, ಸಂಸಾರವಿಷಯರಸವ ತಮ್ಮ ಹೃದಯಕೂಪದಲ್ಲಿ ತುಂಬಿಕೊಂಡಿಪ್ಪ ಜೀವರು ಕಾಯದಲ್ಲಿ ವಚನಾಮೃತವ ತುಂಬಿದಡೆ, ಭಿನ್ನಘಟದಲ್ಲಿ ಉದಕವ ಹೊಯ್ದಂತೆ ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಘನಕ್ಕೆ ಮಹಾಘನಗಂಬ್ಥೀರ ಭಕ್ತ ಮಹೇಶ ಪ್ರಸಾದಿ ಪ್ರಾಣಲಿಂಗಿ ಶರಣ ಐಕ್ಯ ಸನ್ಮಾನಿತರು, ನಿರವಯವಸ್ತುವಿನ ಪ್ರತಿಬಿಂಬರಾಗಿ, ತಮ್ಮ ತಾವರಿದು. ಚತುರ್ವಿಧ ವಿಸರ್ಜನೆಯನರಿದಾಚರಿಸುವುದು. ಆ ವಿಸರ್ಜನೆಗಳಾವಾವೆಂದಡೆ : ಮಲಮೂತ್ರವೆರಡನು ವಿಸರ್ಜನೆಯಿಂದ ಬಿಡುವಂಥದೆ ಸ್ಥೂಲಾಚಮನವೆನಿಸುವುದು. ಕ್ರೀಡಾವಿಲಾಸದಿಂದ ತಮ್ಮರ್ಧಾಂಗವೆಂದು ಭಕ್ತಗಣಸಾಕ್ಷಿಯಾಗಿ ವಿರಾಜಿಸುವಂಥ ಕ್ರಿಯಾಂಗನೆಯಲ್ಲಿ ವೀರ್ಯವ ಬಿಡುವಂಥಾದ್ದೊಂದು ಸ್ತೂಲಾಚಮನವೆನಿಸುವುದು. ಈ ಸ್ಥೂಲಾಚಮನಗಳ ಮಾಡಿದ ವೇಳೆಯಲ್ಲಿ ದಂತಗಳ್ಮೂವತ್ತೆರಡನು ತೀಡಿ, ಲಿಂಗಾಂಗ ಮಜ್ಜನಂಗೈದು, ಸರ್ವೋಪಚಾರಂಗಳಿಂ ಕ್ರಿಯಾಜಪ ಜ್ಞಾನಜಪ ಮಹಾಜ್ಞಾನಜಪ ಪರಿಪೂರ್ಣಾನುಭಾವಜಪಂಗಳೊಳ್ ಲಿಂಗಜಂಗಮ ಜಂಗಮಲಿಂಗಾರ್ಪಣವ ಮಾಡುವುದು. ಶಿವಶರಣಗಣಾರಾಧ್ಯರು ಲಿಂಗಾಬ್ಥಿಷೇಕ ಅರ್ಚನಾದಿಗಳ ಮಾಡಿ, ಅರ್ಪಣ ಸಂದ್ಥಿನಲ್ಲಿ ಜಲತೋರಿಕೆಯಾಗಿ ವಿಸರ್ಜಿಸಿ, ಉದಕವ ಬಳಸಿದ ವೇಳೆಯೊಳು, ಲಿಂಗಬಾಹ್ಯರಸಂಗಡ ಪ್ರಸಂಗಿಸಿದರೂ ದೀಕ್ಷಾಜಲದಿಂದ ಆರುವೇಳೆ ಲಿಂಗಸ್ಪರಿಶನದಿಂದ ಜಿಹ್ವೆಯ ಪ್ರಕ್ಷಾಲಿಸಿ, ಮುಖ ಮಜ್ಜನವಮಾಡಿ, ಲಿಂಗಾರ್ಚನಾರ್ಪಣವನುಭಾವಗಳ ಮಾಡುವುದು, ಇದು ಸೂಕ್ಷ್ಮಾಚಮನವೆನಿಸುವುದು. ಪ್ರಮಾಣಗಳಾದರೂ ಅನುವಲ್ಲದೆ ವಿಪತ್ತಿನ ವೇಳೆಯಾಗಲಿ, ಜಲ ಪರಿಹರಿಸಿದಲ್ಲಿ ಪರಿಣಾಮಜಲದಿಂದ ಆ ಸ್ಥಾನವ ಪ್ರಕ್ಷಾಲಿಸಿ, ಹಸ್ತಪಾದವ ತೊಳೆದು ಉದಕವ ಶೋದ್ಥಿಸಿ, ಲಿಂಗಸ್ಪರಿಶನವಗೈದು, ಆರುವೇಳೆ ಜಿಹ್ವೆಯ ಪ್ರಕ್ಷಾಲಿಸಿ, ಸತ್ಯೋದಕದ ಪರಮಾನಂದಜಲ ಮಹಾಜ್ಞಾನಪ್ರಣಮಪ್ರಸಾದಂಗಳ ಗುಟುಕ ಲಿಂಗಮಂತ್ರ ನೆನಹಿನೊಡನೆ ಸೇವಿಸುವುದು. ಲಿಂಗಬಾಹ್ಯರ ಸಂಗಡಪ್ರಸಂಗಿಸಿದೊಡೆ ಇದೇ ರೀತಿಯಲ್ಲಿ ಮುಖಪ್ರಕ್ಷಾಲನಂಗೈದು ಆಚರಿಸುವುದು. ಇದಕೂ ಮೀರಿದರೆ ಜಲಬಿಟ್ಟು, ಭವಿಗಳಸಂಗಡ ಪ್ರಸಂಗವ ಮಾಡಿದರೆ ಆ ಸಮಯದಲ್ಲಿ ಪ್ರಮಾದವಶದಿಂದ ಉದಕವು ದೊರೆಯದಿದ್ದರೆ ಅಲ್ಲಿ ವಿಸರ್ಜನಸ್ಥಾನವ ದ್ರವವಾರುವಂತೆ ಶುಚಿಯುಳ್ಳ ಮೃತ್ತಿಕೆ ಪಾಷಾಣ ಕಾಷ್ಠ ಕಾಡುಕುರುಳು ಪರ್ಣಗಳಿಂದ ಪ್ರಕ್ಷಾಲನಂಗೈದು, ಜಿಹ್ವಾಗ್ರದಲ್ಲಿ ಸಂಬಂಧವಾದ ಗುರುಲಿಂಗೋದಕದಿಂದ ಮತ್ತಾ ಜಿಹ್ವೆಯ ಪ್ರಕ್ಷಾಲಿಸಿ, ಆರುವೇಳೆ ತೂವರಂಗೈದು, ಹರಹರ ಶಿವಶಿವ ಜಯಜಯ ಕರುಣಾಕರ ಮತ್ಪ್ರಾಣನಾಥ ಶ್ರೀಗುರುಬಸವಲಿಂಗಾಯೆಂದು ಘನಮನವ ಚಿದ್ಘನಲಿಂಗಪ್ರಸನ್ನಧ್ಯಾನದಿಂದ ನವನಾಳವೆಂಬ ಕವಾಟಬಂಧನಂಗೈದು, ಪ್ರದಕ್ಷಣವಮಾಡಿ, ಪರಿಪೂರ್ಣ ಚಿದ್ಬೆಳಗಿನೊಳು ಮತ್ತೆಂದಿನಂತೆ ಅತಿಜಾಗ್ರವೆಂಬ ಮಹಾದರುವಿನೊಳ್ ಸತ್ಕøತ್ಯ ಸದ್ಧರ್ಮರಾಗಿರ್ಪುದು. ಮುಂದೆ ಲಿಂಗಾರ್ಚನಾರ್ಪಣಗಳ ಮಾಡಬೇಕಾದರೆ, ಶುದ್ಧೋದಕದಿಂದ ಲಿಂಗಾಬ್ಥಿಷೇಕಸ್ನಾನಂಗೈದು, ಪಾವುಡಗಳ ಮಡಿಮಾಡಿ ಪರಿಣಾಮಾರ್ಪಣ ತೃಪ್ತರಾಗಿರ್ಪುದು. ಇದಕೂ ಮೀರಿದರೆ, ಜಲವ ಬಿಡುವುದು, ಭವಿಗಳಸಂಗಡ ಪ್ರಸಂಗಿಸಿದರೆ ಸ್ನಾನಮಾಡುವ ಪರಿಯಂತರ ಜಿಹ್ವಾಗ್ರದಲ್ಲಿ ಸ್ಥಾಪ್ಯವಾದ ಸತ್ಯಶುದ್ಧ ಗುರುಲಿಂಗೋದಕ ಮಹಾಪ್ರಣಮಪ್ರಸಾದವೆ ಮೊದಲು ಕ್ರಿಯಾಘನ ಗುರುಲಿಂಗಜಂಗಮಾರ್ಚನೆ ತೀರ್ಥಪ್ರಸಾದಸೇವನೆಗಳಂ ಮಾಡಲಾಗದು. ಇದಕೂ ಮೀರಿದರೆ, ತನ್ನ ದೀಕ್ಷಾಗುರು ಶಿಕ್ಷಾಗುರು ಮೋಕ್ಷಾಗುರು ಪರಿಪೂರ್ಣಗುರುಸ್ಮರಣೆ ಧ್ಯಾನದಿಂದ ಸರ್ವಾವಸ್ಥೆಗಳ ನೀಗಿ, ಮಹಾಬಯಲ ಬೆರೆವುದು. ಇದಕೂ ಮೀರಿದರೆ, ತನುವಿಗೆ ಆಯಸದೋರಿ, ಆಪ್ತರಾರೂ ಇಲ್ಲದಂತೆ, ಪರಿಣಾಮಜಲ ದೊರೆಯದ ವೇಳೆಯೊಳು ಮಲಮೂತ್ರಗಳೆರಡೂ ತೋರಿಕೆಯಾದರೆ, ಎಲ್ಲಿ ಪರಿಯಂತರ ಸಂಶಯಗಳುಂಟೊ ಅಲ್ಲಿ ಪರಿಯಂತರವು ಎರಡನೂ ವಿಸರ್ಜಿಸುವುದು. ಆ ಸಂಶಯ ತೀರಿದಲ್ಲಿ ಉದಕವಿದ್ದಲ್ಲಿಗೆ ಹೋಗಿ, ಪೂರ್ವದಂತೆ ಮೃತ್ತಿಕಾಶೌಚಗಳ ಬಳಸಿ, ನಿರ್ಮಲವಾಗಿ ತೊಳೆದು, ಹಸ್ತಪಾದಗಳ ಪ್ರಕ್ಷಾಲಿಸಿ, ಆ ಸಮಯದಲ್ಲಿ ಕ್ರಿಯಾಭಸಿತವಿದ್ದರೂ ರಸಯುಕ್ತವಾದ ಪದಾರ್ಥವಾದರೂ ಪುಷ್ಪಪತ್ರಿಗಳಾದರೂ ಇದ್ದರೆ ಸತ್ಕ್ರಿಯಾಲಿಂಗಾರ್ಚನಾರ್ಪಣಗಳಿಗೆ ಬಾರವು. ಆದ್ದರಿಂದ ಅವು ಇದ್ದವು ನಿಕ್ಷೇಪವ ಮಾಡುವುದು. ಕ್ರಿಯಾಗುರು ಲಿಂಗಜಂಗಮಮುಖದಿಂದ ಶುದ್ಧೋದಕವ ಮಾಡಿ, ತ್ರಿವಿಧ ಸ್ನಾನಂಗೈದು, ಪುರಾತನೋಕ್ತಿಯಿಂದ ಜಂಗಮಲಿಂಗದಲ್ಲಿ ಚಿದ್ಭಸಿತವ ಬೆಸಗೊಂಡು, ಸತ್ಕ್ರಿಯಾರ್ಪಣಗಳನಾಚರಿಸಿ, ನಿತ್ಯಮುಕ್ತರಾಗಿರ್ಪವರೆ ಪೂರ್ವಾಚಾರ್ಯಸಗುಣಾನಂದಮೂರ್ತಿಗಳೆಂಬೆ ಕಾಣಾ ನಿರವಯಪ್ರಭು ಮಹಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಜಲನಿಧಿ ತಟಾಕದಲ್ಲಿ ಕನ್ನವನಿಕ್ಕಿ ಉದಕವ ತಂದು ಮಜ್ಜನಕ್ಕೆರೆವರೆಲ್ಲ ಶೀಲವಂತರೆ ? ಭವಿಪಾಕವನೊಲ್ಲೆವೆಂದು ಭುಂಜಿಸುವ ಉದರಪೋಷಕರೆಲ್ಲ ಶೀಲವಂತರೆ? ವರಲ್ಲ, ನಿಲ್ಲು ಮಾಣು. ಅಶನವರತು ವ್ಯಸನ ಬೆಂದು ವ್ಯಾಪ್ತಿಗಳು ಅಲ್ಲಿಯೆ ಲೀಯವಾಗಿ ಅಷ್ಟಮದ ಬೆಂದು ನಷ್ಟವಾಗಿ, ತನುಗುಣ ಸಮಾಧಾನವಾದಡೆ ಕೂಡಲಚೆನ್ನಸಂಗಯ್ಯನಲ್ಲಿ ಅಚ್ಚಶೀಲವೆಂಬೆ
--------------
ಚನ್ನಬಸವಣ್ಣ
ಧರಣಿಯ ಪಸರಿಸಿ, ಉರಗನನಡಿಯಿಟ್ಟು ಶರದ್ಥಿಯೇಳಕ್ಕೆ ಎರದನೊಕ್ಕುಡಿತೆ ಉದಕವ ಹರಿಯಜ ಸುರರಿಗೆ ಪರಿಪರಿಯ ಲೋಕವ ಕೊಟ್ಟು ಅರಿದಂತಿರ್ದ ಕಾಣಾ! ರಾಮನಾಥ
--------------
ಜೇಡರ ದಾಸಿಮಯ್ಯ
ಊರೊಳಗೆ ಉದಕತುಂಬಿ ಬಾಗಿಲೆಲ್ಲ ಕೆಸರಾದವು ನೋಡಾ. ಮನೆಯೊಳಗೆ ಕಸ ಹೆಚ್ಚಿ, ಶಶಿಯ ನೆಳಲೀಯದು ನೋಡಿರೆ. ಊರೊಳಗಣ ಉದಕವ ಹೊರಡಿಸಿ, ಬಾಗಿಲೊಳಗಣ ಕೆಸರ ಸುಟ್ಟು, ಮನೆಯೊಳಗಣ ಕಸವ ತೆಗೆದು, ಶಶಿಯ ಸಲಹಿಕೊಂಬುದ ನೀನೊಲಿದು ಕರುಣಿಸಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಶ್ರೀಗುರು ಸಾಹಿತ್ಯಸಂಬಂಧವ ಮಾಡುವಲ್ಲಿ; ಲಿಂಗವೆ ಜಂಗಮ, ಜಂಗಮವೆ ಲಿಂಗವೆಂದು, ಹೇಳಿಕೊಟ್ಟ ವಿವರವನರಿಯದೆ, ಲಿಂಗದೊಳಗೆ ಜಂಗಮವುಂಟೆಂದು ಗಳಹುತಿಪ್ಪಿರಿ. ರಾಸಿಗಿಕ್ಕದ ಲಚ್ಚಣ ರಾಸಿಯ ಕೊಳಬಲ್ಲುದೆ, ರಾಸಿಯ ಒಡೆಯನಲ್ಲದೆ ?_ ಆ ಪರಿಯಲ್ಲಿ ಲಿಂಗವು ಜಂಗಮದ ಮುದ್ರೆ, ಅದಕ್ಕೆ ಜಂಗಮವೆ ಮುದ್ರಾಧಿಪತಿಯಾದ ಕಾರಣ, ಜಂಗಮದೊಳಗೆ ಲಿಂಗವುಂಟೆಂಬುದು ಸತ್ಯವಲ್ಲದೆ ಲಿಂಗದೊಳಗೆ ಜಂಗಮವುಂಟೆಂಬುದು ಅಸತ್ಯವು. ವೃಕ್ಷದ ಕೊನೆಗಳಿಗೆ ಉದಕವ ನೀಡಿದಡೆ ಫಲವಹುದೆ ?ಬೇರಿಂಗೆ ನೀಡಬೇಕಲ್ಲದೆ. ವೃಕ್ಷದ ಆಧಾರವೆ ಪೃಥ್ವಿ, ಪೃಥ್ವಿಯೆ ಜಂಗಮ, ಶಾಖೆಯೆ ಲಿಂಗವು. ದೇಹದ ಮೇಲೆ ಸಕಲಪದಾರ್ಥಂಗಳ ತಂದಿರಿಸಿದಡೆ ತೃಪ್ತಿಯಹುದೆ ? ಮುಖವ ನೋಡಿ ಒಳಯಿಂಕೆ ನೀಡಬೇಕಲ್ಲದೆ. ಅದು ಕಾರಣವಾಗಿ_ಅವಯವಂಗಳು ಕಾಣಲ್ಪಟ್ಟ ಮುಖವುಳ್ಳುದೆ ಜಂಗಮ ದೇಹವೆ ಲಿಂಗ. ಲಿಂಗವೆಂಬುದು ಜಂಗಮದೊಂದಂಗ ಕಾಣಾ ಕೂಡಲಚೆನ್ನಸಂಗಮದೇವಯ್ಯಾ.
--------------
ಚನ್ನಬಸವಣ್ಣ
ಒಡಲಾಸೆಗೆ ಅನ್ಯರ ಸೇವೆಯ ಮಾಡುವ ಕಡುಪಾಪಿಮನವೆ ಕೇಳು. ದದ್ಥಿಯ ಮಥನವ ಮಾಡೆ ಪಂಚಾಮೃತವ ಕೊಡುವುದಲ್ಲದೆ, ಉದಕವ ಕಡೆಯಲೇನ ಕೊಡದ ತೆರದಲ್ಲಿ ಅನ್ಯರನಾಸೆಗೈದರೆ- ಪರುಷ ಮನೆಯೊಳಿರೆ ಪರರ ಹಣವ ಬೇಡಿ ಚಾಲಿವರಿವ ಮರುಳುಮಾನವನಂತೆ, ವರ ಅಮೃತಬಾವಿ ಗೃಹದೊಳಿರೆ ಸವುಳು ನೀರಿಂಗೆ ಚಾಲಿವರಿವ ಹೆಡ್ಡಮನುಜನಂತೆ, ಸರ್ವರ ಮನ ಧರ್ಮ ಕರ್ಮವನರಿವ ಪರಮಾತ್ಮ ನಿನ್ನ ಅಂಗೈಕರದೊಳಿರೆ ಪರರಾಸೆಗೈಯದಿರು, ಆಸೆಗೈಯದಿರು. ಆಸೆಗೈ ಆಸೆಗೈ ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವನಾಸೆಗೈದರೆ ನಿನಗೆ ಮುಕ್ತಿಯುಂಟು ಕೇಳಲೆ ಮನುಜ.
--------------
ಹೇಮಗಲ್ಲ ಹಂಪ
ಕುಂಡಲಿಯೆಂಬ ಆಧಾರದಲ್ಲಿ ಜಲ ತೇಜ ವಾಯುವೆಂಬ ತ್ರಿವಿಧ ಕೂಡಿ ಕಮಂಡಲ ಹುಟ್ಟಿತ್ತು. ಅದಕ್ಕೆ ಬಾಯಿ ಮೂರು ಹೆಡೆಯಾರು. ಜೂಳಿಯೊಂದರಲ್ಲಿ ಉದಕವ ಕೊಳುತಿರಲಾಗಿ ಆ ಹಸುವಿನ ತೃಷೆಯಡಗಿ ಬಯಕೆ ಸಲೆ ಬತ್ತಿದಲ್ಲಿ ಮಹಾಗಣನಾಥನ ಐವತ್ತೆರಡು ಸರ ಹರಿದವು. ಮೂವತ್ತಾರು ಮಣಿ ಕೆಟ್ಟವು; ಇಪ್ಪತ್ತೈದು ಮಣಿ ಪುಂಜವಾಯಿತ್ತು. ಆರು ನಾಯಕರತ್ನ ಎಲ್ಲಿ ಅಡಗಿತ್ತೆಂದರಿಯೆ. ಮೂರು ರತ್ನವ ಕಂಡೆ: ಒಂದು ಉಲಿವುದು, ಒಂದು ಉರಿವುದು, ಒಂದು ಬೆಳಗು ನಂದಿಹುದು. ಇಂತೀ ತ್ರಿವಿಧಂಗವ ಕಂಡು ಈ ಅಂಗದ ಮಣಿಯ ಒಂದೊಂದ ಪೋಣಿಸಲಾರದೆ ಈ ದಿನಮಣಿಯ ವಿರಳವ ತೋರಿಸಾ ಗೋರಕ್ಷಪಾಲಕ ಮಹಾಪ್ರಭು ಸಿದ್ಧಸೋಮನಾಥಲಿಂಗವೆ.
--------------
ಗೋರಕ್ಷ / ಗೋರಖನಾಥ
ಮುತ್ತುಂಡ ಉದಕವ ತಂದು ಕಾಣಲುಂಟೆ ? ಉರಿಯುಂಡ ಕರ್ಪುರವ ತಂದು ಕಾಣಲುಂಟೆ ? ಗುರುನಿರಂಜನ ಚನ್ನಬಸವಲಿಂಗಾ ನೀನುಂಡ ಶರಣನ ತಂದು ಕಾಣಲುಂಟೆ ಮೂರು ಲೋಕದೊಳಗೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ಪೃಥ್ವಿಯಲ್ಲಿ ಹುಟ್ಟಿದ ಶಿಲೆಯ ತಂದು ಕಲ್ಲುಕುಟಿಕನಿಂದ ಕಟಿಸಿ, ಕರಿಯ ಕೆಸರ ಮೆತ್ತಿ, ಪಾತಕಗುರುವಿನ ಕೈಯಲ್ಲಿ ಪ್ರೇತಲಿಂಗವ ಕೊಟ್ಟು, ಭೂತದೇಹಿಗಳು ಪಡಕೊಂಡು ಅಂಗೈಯಲ್ಲಿ ಆ ಲಿಂಗವ ಕುಳ್ಳಿರಿಸಿ, ಕರುವಿಲ್ಲದ ಎಮ್ಮಿಗೆ ಮುರುವು ಹಾಕಿದಹಾಗೆ, ಅಡವಿಯೊಳಗಣ ಕಾಡುಮರದ ಹಸರು ತಪ್ಪಲು ತಂದು ಆ ಲಿಂಗಕ್ಕೆ ಹಾಕಿದರೆ ಸಾಕೆನ್ನದು ಬೇಕೆನ್ನದು. ಅನ್ನ ನೀರು ತೊರೆದರೆ ಒಂದಗುಳನ್ನ ಸೇವಿಸದು. ಒಂದು ಹನಿ ಉದಕವ ಮುಟ್ಟದು. ಇಂತಪ್ಪ ಲಿಂಗವ ಪೂಜಿಸಿ ಮರಣಕ್ಕೆ ಒಳಗಾಗಿ ಹೋಹಲ್ಲಿ ಪ್ರಾಣಕ್ಕೆ ಲಿಂಗವಾವುದು ಎಂದರಿಯದೆ ತ್ರಿಲೋಕವೆಲ್ಲ ಪ್ರಳಯವಾಗಿ ಹೋಗುತಿರ್ಪುದು ನೋಡಾ. ಅದೇನು ಕಾರಣವೆಂದಡೆ : ತಮ್ಮ ನಿಜವ ಮರೆದ ಕಾರಣ. ಲಿಂಗದ ಗೊತ್ತು ತಮಗಿಲ್ಲ, ತಮ್ಮ ಗೊತ್ತು ಲಿಂಗಕ್ಕಿಲ್ಲ. ಇಂತಪ್ಪ ಆಚಾರವೆಲ್ಲ ಶೈವಮಾರ್ಗವಲ್ಲದೆ ವೀರಶೈವಮಾರ್ಗ ಮುನ್ನವೇ ಅಲ್ಲ. ಅದೆಂತೆಂದೊಡೆ : ಆದಿ ಅನಾದಿಯಿಂದತ್ತತ್ತಲಾದ ನಿಃಕಲಚಿದ್ರೂಪಲಿಂಗವನು ನಿಃಕಲಸದ್ರೂಪಾಚಾರ್ಯನಲ್ಲಿ ಪಡಕೊಂಡು ಆತ್ಮನೆಂಬ ಅಂಗದ ಮೇಲೆ ಅರುಹೆಂಬ ಲಿಂಗವ ಧರಿಸಿಕೊಂಡು, ಸದ್ಭಾವವೆಂಬ ಹಸ್ತದಲ್ಲಿ ಸುಜ್ಞಾನವೆಂಬ ಲಿಂಗವ ಮೂರ್ತಗೊಳಿಸಿ, ಪರಮಾನಂದವೆಂಬ ಜಂಗಮದ ಜಲದಿಂ ಮಜ್ಜನಕ್ಕೆರದು, ಮಹಾಜ್ಞಾನ ಕುಸುಮದಿಂ ಪುಷ್ಪವ ಧರಿಸಿ, ಪೂಜಿಸಬಲ್ಲರೆ ಭವಹಿಂಗುವದು. ಮುಕ್ತಿಯೆಂಬುವದು ಕರತಳಾಮಳಕವಾಗಿ ತೋರುವದು ಎಂದನಯ್ಯ ನಿಮ್ಮ ಶರಣ, ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಬಾವಿಯ ಉದಕವ ಕುಡಿವರ ಕಂಡೆ; ಬಾನಿನಲ್ಲಿಪ್ಪ ಉದಕವ ತರುವರ ಕಾಣೆ. ಹರವಿಯ ಅಗ್ಘವಣಿಯ ಕುಡಿವವರನಲ್ಲದೆ ಅಮುಗೇಶ್ವರನೆಂಬ ಲಿಂಗವನರಿವವರ ಕಾಣೆ.
--------------
ಅಮುಗೆ ರಾಯಮ್ಮ
ಅಗ್ನಿಯ ಸುಡುವಲ್ಲಿ ಉದಕವ ತೊಳೆವಲ್ಲಿ ವಾಯುವ ಮೆಟ್ಟಿ ಆಕಾಶವ ಹಿಡಿವಲ್ಲಿ ಯೋಗದ ಹೊಲಬ ನೀನೆತ್ತ ಬಲ್ಲೆ? ಕದಳಿಯ ಬನವ ನಿನ್ನಲ್ಲಿ ನೀನು ತಿಳಿದು ನೋಡು, ಮದ ಮತ್ಸರ ಬೇಡ. ಹೊದಕುಳಿಗೊಳಬೇಡ. ಗುಹೇಶ್ವರನೆಂಬ ಲಿಂಗವು ಕಲ್ಪಿತವಲ್ಲ ನಿಲ್ಲೊ.
--------------
ಅಲ್ಲಮಪ್ರಭುದೇವರು
ಇನ್ನಷ್ಟು ... -->